ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India-Pak Tensions Live Updates: ಇಂದು ರಾತ್ರಿ 8ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ

Operation Sindoor: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಇದೀಗ ಕೊಂಚ ಮಟ್ಟಿಗೆ ಕಡಿಮೆ ಆಗಿದೆ. ಗಡಿಯಲ್ಲಿ ಕಳೆದ ರಾತ್ರಿಯಿಂದ ಶಾಂತಿ ಸುವ್ಯವಸ್ಥೆ ನಿಧಾನವಾಗಿ ಮರಳುತ್ತಿದೆ. ಉಭಯ ರಾಷ್ಟ್ರಗಳು ಇದೀಗ ಮತ್ತೆ ಕದನ ವಿರಾಮದತ್ತ ಮುಖ ಮಾಡಿದೆ. ಈ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

India-Pak Tensions Live Updates: ಇಂದು ರಾತ್ರಿ 8ಗಂಟೆಗೆ ಪ್ರಧಾನಿ ಭಾಷಣ

Profile Rakshita Karkera May 12, 2025 1:24 PM

ನವದೆಹಲಿ: ಆಪರೇಷನ್‌ ಸಿಂದೂರ್‌(Operation Sindoor) ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಭುಗಿಲೆದ್ದಿದ್ದ ಯುದ್ಧದ ವಾತಾವರಣ ಕೊಂಚ ಮಟ್ಟಿಗೆ ತಿಳಿಗೊಂಡಿದ್ದು, ನಿನ್ನೆ ತಡರಾತ್ರಿಯಿಂದ ಗಡಿ ಪ್ರದೇಶದಲ್ಲಿ ಗುಂಡಿನ ಚಕಮಕಿ ನಿಂತಿದ್ದು, ಶಾಂತಿ ಸುವ್ಯವಸ್ಥೆ ಮರಳಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಮೂರು ಸೇನೆಗಳ ಮುಖ್ಯಸ್ಥರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ಭಾರತದ DGMO ನೇತೃತ್ವದಲ್ಲೂ ಸಭೆ ನಡೆಯುತ್ತಿದೆ ಇಂದು ಸಂಜೆ ಭಾರತ-ಪಾಕ್‌ DGMOಗಳ ನಡುವೆ ಮಹತ್ವದ ಮಾತುಕತೆ ನಡೆಸುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ ಮಾಡಲಿದ್ದಾರೆ.

Live News
May 12, 2025, 4:22 p.m.

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಆಪರೇಷನ್‌ ಸಿಂದೂರ್‌ ಬಳಿಕ ಇದು ಅವರ ಮೊದಲ ಭಾಷಣವಾಗಿದೆ.

May 12, 2025, 2:53 p.m.

ರಾಜಸ್ಥಾನದಲ್ಲಿ ಸ್ಫೋಟಕ ಪತ್ತೆ

ಸಜೀವ ಸ್ಫೋಟಕ ಸಾಧನ ರಾಜಸ್ತಾನದಲ್ಲಿ ಪತ್ತೆಯಾಗಿದ್ದು, ಭದ್ರತಾ ಸಿಬ್ಬಂದಿ ನಿಷ್ಕ್ರಿಯಗೊಳಿಸಿದ್ದಾರೆ. ಸ್ಫೋಟಕವನ್ನು ಪಾಕಿಸ್ತಾನ ಹಾರಿಸಿದೆ ಎಂದು ವರದಿಯಾಗಿದೆ.

May 12, 2025, 2:48 p.m.

ಭೂಸೇನೆ, ವಾಯುಪಡೆ, ನೌಕಾಪಡೆಯ ಜಂಟೀ ಸುದ್ದಿಗೋಷ್ಠಿ

ಏರ್ ಮಾರ್ಷಲ್ ಎ.ಕೆ. ಭಾರ್ತಿ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಾ, ಭಾರತೀಯ ಸಶಸ್ತ್ರ ಪಡೆಗಳು ಹೊಡೆದುರುಳಿಸಿದ ಪಾಕಿಸ್ತಾನದ ಮಾನವರಹಿತ ವೈಮಾನಿಕ ವ್ಯವಸ್ಥೆಗಳ ಚಿತ್ರಗಳನ್ನು ಹಂಚಿಕೊಂಡರು.

May 12, 2025, 2:47 p.m.

ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಹತ್ವದ ಸಭೆ

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಆಪರೇಷನ್‌ ಸಿಂದೂರ್‌ ಬಗ್ಗೆ ಮಹತ್ವದಚರ್ಚೆ ನಡೆಸಲಾಗುತ್ತಿದೆ.

May 12, 2025, 1:35 p.m.

ಸಂಜೆ 5 ಗಂಟೆಗೆ ಭಾರತ-ಪಾಕ್‌ DGMOಗಳ ಸಭೆ ಮುಂದೂಡಿಕೆ

ಇಂದು ಸಂಜೆ ಭಾರತ-ಪಾಕ್‌ DGMOಗಳ ನಡುವೆ ಇಂದು ಸಂಜೆ 5ಗಂಟೆಗೆ ಮಹತ್ವದ ಮಾತುಕತೆ ನಡೆಸುವ ಸಾಧ್ಯತೆ ಇದೆ. ಇದಾದ ಬಳಿಕ ಭಾರತದ DGMO ನೇತೃತ್ವದಲ್ಲೂ ಸುದ್ದಿಗೋಷ್ಠಿ ನಡೆಸಿ ಮಹತ್ವದ ವಿಚಾರಗಳನ್ನು ಹಂಚಿಕೊಳ್ಳಲಿದೆ. ಆರಂಭದಲ್ಲಿ ಇಂದು ಮಧ್ಯಾಹ್ನ 12ಕ್ಕೆ ಸಭೆ ನಿಗದಿ ಆಗಿತ್ತು. ಕಾರಣಾಂತರಗಳಿಂದ ಅದನ್ನು ಮುಂದೂಡಲಾಯಿತು

May 12, 2025, 1:29 p.m.

ಪ್ರಧಾನಿ, ಅಜಿತ್ ದೋವಲ್ ಮತ್ತು ವಾಯುಪಡೆ ಮುಖ್ಯಸ್ಥರ ನಡುವಿನ ಸಭೆ ಅಂತ್ಯ

ಪ್ರಧಾನಿ ಮೋದಿ, ವಾಯುಪಡೆ ಮುಖ್ಯಸ್ಥ ಎಪಿ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಡುವಿನ ಸಭೆ ಮುಕ್ತಾಯಗೊಂಡಿದೆ. ಸಭೆ ಸುಮಾರು 30 ನಿಮಿಷಗಳ ಕಾಲ ನಡೆಯಿತು. ಇದು ಪ್ರಧಾನಿ ಮೋದಿ ಅವರು ಉನ್ನತ ರಕ್ಷಣಾ ಅಧಿಕಾರಿಗಳೊಂದಿಗೆ ನಡೆಸಿದ ಎರಡನೇ ಪ್ರಮುಖ ಸಭೆಯಾಗಿದೆ.

May 12, 2025, 1:28 p.m.

ಮೇ.15 ವರೆಗೆ ಬಂದ್‌ ಆಗಿದ್ದ 32 ಏರ್‌ಪೋರ್ಟ್‌ಗಳು ರೀ ಓಪನ್‌

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ(India-Pakistan Tensions) ಬೆನ್ನಲ್ಲೇ ದೇಶದ ಪ್ರಮುಖ 32ವಿಮಾನ ನಿಲ್ದಾಣಗಳನ್ನು ಬಂದ್‌ (32 Airports)ಮಾಡಲಾಗಿತ್ತು. ಇದೀಗ ಉಭಯ ರಾಷ್ಟ್ರಗಳು ಮತ್ತೆ ಕದನ ವಿರಾಮದತ್ತ ಮುಖ ಮಾಡಿದ್ದು, ಶಾಂತಿ ಸುವ್ಯವಸ್ಥೆ ನಿಧಾನವಾಗಿ ಮರಳುತ್ತಿದೆ. ಹೀಗಾಗಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದ 32ವಿಮಾನ ನಿಲ್ದಾಣಗಳನ್ನು ಮತ್ತೆ ತೆರೆಯಲಾಗಿದೆ. ಉತ್ತರ ಮತ್ತು ಪಶ್ಚಿಮ ಭಾಗದಲ್ಲಿ ನಾಗರಿಕ ವಿಮಾನಯಾನ ಪುನರಾರಂಭಗೊಂಡಿದೆ.

May 12, 2025, 1:27 p.m.

ಮಿಲಿಟರಿ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಸಭೆ

ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಪ್ರಮುಖ ಭದ್ರತಾ ಸಭೆ ನಡೆದ ನಂತರ ಭಾರತ ಮತ್ತು ಪಾಕಿಸ್ತಾನದ ಉನ್ನತ ಮಿಲಿಟರಿ ಅಧಿಕಾರಿಗಳು ಕದನ ವಿರಾಮದ ಕುರಿತು ಮಾತುಕತೆ ನಡೆಸಿದರು. ಪ್ರಧಾನಿಯವರ ಮನೆಯಲ್ಲಿ ನಡೆದ ಸಭೆಯಲ್ಲಿ ಮೂರು ಸೇನಾ ಮುಖ್ಯಸ್ಥರು, ವಿದೇಶಾಂಗ ಸಚಿವ ಎಸ್ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು.

May 12, 2025, 1:27 p.m.

ಅಜಿತ್ ದೋವಲ್ ಜೊತೆ ಪ್ರಧಾನಿ ಮೋದಿ ಪ್ರತ್ಯೇಕ ಸಭೆ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಪ್ರಮುಖ ಭದ್ರತಾ ಸಭೆ ನಡೆಸಿದ ಸ್ವಲ್ಪ ಸಮಯದ ನಂತರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಾಯುಪಡೆಯ ಮುಖ್ಯಸ್ಥ ಎಪಿ ಸಿಂಗ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಮೂರೂ ಸೇನಾ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

May 12, 2025, 1:24 p.m.

ಸಹಜ ಸ್ಥಿತಿಯತ್ತ ಕಣಿವೆ ರಾಜ್ಯ

ಕಳೆದೊಂದು ವಾರದಿಂದ ನಡೆಯುತ್ತಿದ್ದ ಗುಂಡಿನ ದಾಳಿ, ಡ್ರೋನ್‌ ಅಟ್ಯಾಕ್‌ ಮತ್ತು ಕ್ಷಿಪಣಿ ದಾಳಿಗಳು ನಿಂತಿದ್ದು, ಶ್ರೀನಗರ ಮತ್ತು ಕಾಶ್ಮೀರ ಕಣಿವೆಯ ಇತರ ಭಾಗಗಳಲ್ಲಿ ಇಂದು ಬೆಳಿಗ್ಗೆ ಪರಿಸ್ಥಿತಿ ಸಾಮಾನ್ಯವಾಗಿದ್ದಂತೆ ಕಾಣುತ್ತಿದೆ.