ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Honey Trap Case: ಕಿಸ್‌ ಕೊಟ್ಟು ‌ಹನಿಟ್ರ್ಯಾಪ್‌ ಮಾಡಿದ ‌ಪ್ರಿಸ್ಕೂಲ್ ಮಿಸ್! ಬ್ಲ್ಯಾಕ್‌ಮೇಲ್‌ ಗ್ಯಾಂಗ್‌ ಸೆರೆ

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ ಹನಿಟ್ರ್ಯಾಪ್ ಎಸಗಿದ ಶಿಕ್ಷಕಿ. ಈಕೆ ಪ್ರಿಸ್ಕೂಲ್​ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, ಬೆದರಿಕೆ ಒಡ್ಡಿ ಒಂದೂವರೆ ಲಕ್ಷಕ್ಕೂ ಅಧಿಕ ಹಣ ವಸೂಲಿ ಮಾಡಿದ್ದಾಳೆ.

ಕಿಸ್‌ ಕೊಟ್ಟು ‌ಹನಿಟ್ರ್ಯಾಪ್‌ ಮಾಡಿದ ಮಿಸ್! ಬ್ಲ್ಯಾಕ್‌ಮೇಲ್‌ ತಂಡ ಸೆರೆ

ಆರೋಪಿಗಳಾದ ಶ್ರೀದೇವಿ, ಗಣೇಶ್‌, ಸಾಗರ್

ಹರೀಶ್‌ ಕೇರ ಹರೀಶ್‌ ಕೇರ Apr 1, 2025 11:22 AM

ಬೆಂಗಳೂರು: ‌ಇದೊಂದು ವಿಚಿತ್ರ ಪ್ರಕರಣ. ಪ್ರಿಸ್ಕೂಲ್‌ (Pre School) ನಡೆಸುತ್ತಿದ್ದ ಟೀಚರ್‌ ಒಬ್ಬಳು, ಪೋಷಕರನ್ನೇ ಹನಿಟ್ರ್ಯಾಪ್‌ (Honey Trap) ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ. ಪೋಷಕನಿಗೆ ಒಂದು ಕಿಸ್‌ ನೀಡಿ ಅದರ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ (Blackmail) ಮಾಡಿ 50,000ಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದಾಳೆ. ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ (Bengaluru news) ಮಹಾಲಕ್ಷ್ಮಿ ಲೇಔಟ್​ನಲ್ಲಿ ಘಟನೆ ನಡೆದಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ ಹನಿಟ್ರ್ಯಾಪ್ ಎಸಗಿದ ಶಿಕ್ಷಕಿ. ಈಕೆ ಪ್ರಿಸ್ಕೂಲ್​ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದಾಗ ಟೀಚರ್ ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ.

ಆರೋಪಿ ಶ್ರೀದೇವಿ ರುಡಿಗಿ 2023ರಲ್ಲಿ ರಾಕೇಶ್ ಎಂಬ ಪೋಷಕನನ್ನು ಪರಿಚಯಿಸಿಕೊಂಡಿದ್ದಳು. ರಾಕೇಶ್​​ನಿಂದ ಶಾಲೆ ನಿರ್ವಹಣೆ, ತಂದೆಯ ಚಿಕಿತ್ಸೆಗೆಂದು ಶ್ರೀದೇವಿ 4 ಲಕ್ಷ ರೂ. ಸಾಲ ಪಡೆದಿದ್ದಳು. 2024ರ ಮಾರ್ಚ್​ನಲ್ಲಿ ವಾಪಸ್ ಕೊಡುವುದಾಗಿ ತಿಳಿಸಿದ್ದಳು. ಆದರೆ, ಹಣ ವಾಪಸ್ ಕೇಳಿದಾಗ ಕೊಟ್ಟಿರಲಿಲ್ಲ. ‘ತುಂಬಾ ಕಷ್ಟವಿದೆ. ಹಣ ಈಗ ಕೊಡಲು ಆಗುವುದಿಲ್ಲ. ನೀವು ಶಾಲೆಯ ಪಾರ್ಟನರ್ ಆಗಿ’ ಎಂದಿದ್ದಳು. ನಂತರ ಇಬ್ಬರ ನಡುವೆ ಸಲುಗೆ ಬೆಳೆದಿದೆ. ಇಬ್ಬರೂ ಹಲವೆಡೆ ಜತೆಯಾಗಿ ಸುತ್ತಾಟ ನಡೆಸಿದ್ದಾರೆ. ಶ್ರೀದೇವಿ‌ ಜೊತೆ ಮಾತನಾಡಲೆಂದೇ ರಾಕೇಶ್ ಹೊಸ ಸಿಮ್ ಹಾಗೂ ಪೋನ್ ಖರೀದಿಸಿದ್ದರು. ಆದರೆ, ನಂತರ ಜನವರಿ ಮೊದಲ ವಾರದಲ್ಲಿ ಹಣ ವಾಪಸ್ ಕೇಳಿದ್ದರು. ಹಣ ವಾಪಸ್ ಕೇಳಿದ್ದ ರಾಕೇಶ್​ಗೆ, ‘ನಿನ್ನ ಜೊತೆ ರಿಲೇಶನ್ ಶಿಪ್​​ನಲ್ಲಿ ಇರುತ್ತೇನೆ’ ಎಂದು ಹೇಳಿದ್ದ ಶ್ರೀದೇವಿ 15 ಲಕ್ಷ ರೂ. ಹಣ ಕೇಳಿದ್ದಳು. ಇದಕ್ಕೆ ರಾಕೇಶ್ ಒಪ್ಪಿರಲಿಲ್ಲ.

ನಂತರ ಶ್ರೀದೇವಿ ಪೋಷಕ ರಾಕೇಶ್ ಮನೆಗೆ ತೆರಳಿ ಆತನಿಗೆ ಮುತ್ತುಕೊಟ್ಟಿದ್ದಳು. ಬಳಿಕ ಬ್ಲ್ಯಾಕ್​ಮೇಲ್ ಮಾಡಿ 50 ಸಾವಿರ ರೂ. ಪಡೆದಿದ್ದಳು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆ ಬಳಿಕ, ಪದೇ ಪದೆ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಆಕೆ ಜತೆ ಸಂಪರ್ಕಕ್ಕೆ ಇಟ್ಟುಕೊಂಡಿದ್ದ ಸಿಮ್ ಕಾರ್ಡ್ ಅನ್ನು ರಾಕೇಶ್ ಮುರಿದು ಬಿಸಾಡಿದ್ದರು.

ಮಾರ್ಚ್ 12ರಂದು ರಾಕೇಶ್ ಪತ್ನಿಗೆ ಕರೆ ಮಾಡಿದ್ದ ಶ್ರೀದೇವಿ, ಮಕ್ಕಳ ಸ್ಕೂಲ್ ಟಿಸಿ ಕಳುಹಿಸಿಕೊಡುತ್ತೇನೆ, ನಿಮ್ಮ ಪತಿಯನ್ನು ಕಳುಹಿಸಿ ಎಂದಿದ್ದಳು. ಅದರಂತೆ ಶ್ರೀದೇವಿಯ ಪ್ರೀಸ್ಕೂಲ್​​ಗೆ ರಾಕೇಶ್ ತೆರಳಿದ್ದರು. ಆಗ ಅಲ್ಲಿ ಶ್ರೀದೇವಿ ಜೊತೆ ಹಾಜರಿದ್ದ ಇತರೆ ಆರೋಪಿಗಳಾದ ಸಾಗರ್ ಹಾಗೂ ಗಣೇಶ್ ಬೆದರಿಕೆ ಹಾಕಿದ್ದರು. ‘‘ಸಾಗರ್ ಜೊತೆ ಶ್ರೀದೇವಿಗೆ ನಿಶ್ಚಿತಾರ್ಥ ಆಗಿದೆ. ಆದರೆ ನೀನು ಆಕೆ ಜೊತೆ ಮಜಾ ಮಾಡುತ್ತಿದ್ದಿ’’ ಎಂದು ಆರೋಪಿ ಗಣೇಶ್ ಬೆದರಿಕೆ ಹಾಕಿದ್ದ. ಬಳಿಕ ಕಾರಿನಲ್ಲಿ‌ ಕೂರಿಸಿಕೊಂಡು, ‘‘ಯಾರಿಗೂ ವಿಚಾರ ಹೇಳಬಾರದು ಎಂದರೆ 1 ಕೋಟಿ‌ ರೂ. ಕೊಡು’’ ಎಂದು ಬ್ಲ್ಯಾಕ್​ಮೇಲ್ ಮಾಡಿದ್ದ. ಕೊನೆಯದಾಗಿ ಆರೋಪಿಗಳು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. 1.90 ಲಕ್ಷ ರೂ. ಹಣ ಪಡೆದು ಬಿಟ್ಟು ಕಳುಹಿಸಿದ್ದರು. ಆದರೆ, ಉಳಿದ ಹಣ ನೀಡುವಂತೆ ಪ್ರಾಣ ಬೆದರಿಕೆ ಹಾಕಿದ್ದರು ಎಂದು ರಾಕೇಶ್ ಆರೋಪಿಸಿದ್ದಾರೆ.

ಹೀಗಾಗಿ ರಾಕೇಶ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಶ್ರೀದೇವಿ, ಅರುಣ್ ಮತ್ತು ಸಾಗರ್​ರನ್ನು ಬಂಧಿಸಲಾಗಿದೆ. ಸದ್ಯ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಮೂವರು ಆರೋಪಿಗಳು ಕೂಡ ವಿಜಯಪುರ ಮೂಲದವರಾಗಿದ್ದಾರೆ.

ಇದನ್ನೂ ಓದಿ: MLC Rajendra Rajanna: ಹನಿ ಟ್ರ್ಯಾಪ್ ಇಲ್ಲ, ಕೊಲೆ ಯತ್ನ ನಡೆದಿದೆ: ಎಂಎಲ್‌ಸಿ ರಾಜೇಂದ್ರ ರಾಜಣ್ಣ