ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB announces Rs 10 lakh: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಗಾಯಗೊಂಡವರ ಚಿಕಿತ್ಸೆಗೆ 'ಆರ್‌ಸಿಬಿ ಕೇರ್ಸ್' ಎಂಬ ನಿಧಿಯನ್ನು ಸ್ಥಾಪಿಸುವುದಾಗಿ ಗುರುವಾರ ತಿಳಿಸಿದೆ.

ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

Profile Abhilash BC Jun 5, 2025 4:11 PM

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ(RCB victory parade stampede) ಮೃತಪಟ್ಟವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು(RCB announces Rs 10 lakh), ಗಾಯಗೊಂಡವರಿಗೆ ಸಹಾಯ ನಿಧಿಯನ್ನು ಸ್ಥಾಪಿಸುವುದಾಗಿ ತಿಳಿಸಿದೆ. ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದರು.

"ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆ ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವನ್ನುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಮೃತರ ಹನ್ನೊಂದು ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ಆರ್‌ಸಿಬಿ ಘೋಷಿಸಿದೆ. ಇದಲ್ಲದೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು 'ಆರ್‌ಸಿಬಿ ಕೇರ್ಸ್' ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ. ನಮ್ಮ ಅಭಿಮಾನಿಗಳು ನಾವು ಮಾಡುವ ಎಲ್ಲದರಲ್ಲೂ ಯಾವಾಗಲೂ ಹೃದಯಭಾಗದಲ್ಲಿ ಇರುತ್ತಾರೆ. ನಾವು ದುಃಖದಲ್ಲಿ ಒಗ್ಗಟ್ಟಿನಿಂದ ಇರುತ್ತೇವೆ" ಎಂದು ಆರ್‌ಸಿಬಿ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.



ಸಿಎಂ ಸಿದ್ದರಾಮಯ್ಯ ಕೂಡ ಬುಧವಾರ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಸರ್ಕಾರದಿಂದ ಗೌರವ ಸ್ವೀಕರಿಸಿದ ನಂತರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದು ವಿಜಯೋತ್ಸವ ಆಚರಣೆ ಮಾಡಬೇಕಿತ್ತು. ಆದರೆ, ಅಭಿಮಾನಿಗಳಿಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪ್ರವೇಶ ಅವಕಾಶವನ್ನು ನೀಡುವಲ್ಲಿ ಗೊಂದಲ ಉಂಟಾಯಿತು. ಜತೆಗೆ ನಿರೀಕ್ಷೆಗೂ ಮೀರಿ ಸಾವಿರಾರು ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿ ಈ ಭೀಕರ ಘಟನೆ ಸಂಭವಿಸಿತ್ತು.

ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು. ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿತು.