Road Rage: ಬೆಂಗಳೂರಿನಲ್ಲಿ ಯುವಕನ ಮೇಲೆ ಹಲ್ಲೆ ಮಾಡಿದ ವಿಂಗ್ ಕಮಾಂಡರ್ ಕೋಲ್ಕತ್ತಾಗೆ ಪರಾರಿ
ಬೆಂಗಳೂರಿನಲ್ಲಿ ಕನ್ನಡಿಗರಿಂದ ತನ್ನ ಮೇಲೆ ಹಲ್ಲೆಯಾಗಿದೆ (Road Rage) ಎಂದು ಗಳುಹಿದ ಉತ್ತರ ಭಾರತದ ವಿಂಗ್ ಕಮಾಂಡರ್ನ ಸುಳ್ಳು ಸಿಸಿಟಿವಿಯಿಂದ ಬಯಲಾಗಿದೆ. ಈತನೇ ಯುವಕನನ್ನು ನೆಲಕ್ಕೆ ಬೀಳಿಸಿ ಕಾಲಿನಿಂದ ಒದ್ದು, ಮುಖಕ್ಕೆ ಗುದ್ದಿದ್ದಾನೆ. ಇದು ಗೊತ್ತಾಗುತ್ತಿದ್ದಂತೆ ಪತ್ನಿ ಜೊತೆ ವಿಂಗ್ ಕಮಾಂಡರ್ ಆದಿತ್ಯ ಬೋಸ್ ಕೊಲ್ಕತ್ತಾಗೆ ಎಸ್ಕೇಪ್ ಆಗಿದ್ದಾನೆ ಅಂತ ಹೇಳಲಾಗ್ತಿದೆ.


ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಮೇಲಿನ (Wing Commander) ದಾಳಿ ಪ್ರಕರಣಕ್ಕೆ (Road Rage) ಹೊಸ ತಿರುವು ಸಿಕ್ಕಿದೆ. ಯುವಕನ ಮೇಲೆ ಮೊದಲು ದಾಳಿ ಮಾಡಿದ್ದು ಕಮಾಂಡರ್ ಎಂಬುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ. ಸಿಸಿಟಿವಿ ದೃಶ್ಯಗಳಿಂದ ವಿಂಗ್ ಕಮಾಂಡರ್ ಕ್ರೌರ್ಯ (crime news) ಬಯಲಾಗಿದೆ. ಕನ್ನಡಿಗನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ, ನಂತರ ಸುಳ್ಳು ಹೇಳಿಕೊಂಡು ವಿಡಿಯೋ ಮಾಡಿರುವ ವಿಂಗ್ ಕಮಾಂಡರ್ ಬೋಸ್ ಇದೀಗ ಕೋಲ್ಕತಾಗೆ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.
ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಆದಿತ್ಯ ಬೋಸ್ ಮತ್ತು ಅವರ ಪತ್ನಿ ಸ್ಕ್ವಾಡ್ರನ್ ಲೀಡರ್ ಮಧುಮಿತಾ ತಮ್ಮ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಳಲು ತೋಡಿಕೊಂಡಿದ್ದರು. ಆದರೆ ಸಿಸಿಟಿವಿಯಿಂದ ಅಸಲಿ ಕೃತ್ಯ ಬಯಲಾಗಿದೆ. ಈತನೇ ಯುವಕನನ್ನು ನೆಲಕ್ಕೆ ಬೀಳಿಸಿ ಕಾಲಿನಿಂದ ಒದ್ದು, ಮುಖಕ್ಕೆ ಗುದ್ದಿದ್ದಾನೆ. ಇದು ಗೊತ್ತಾಗುತ್ತಿದ್ದಂತೆ ಪತ್ನಿ ಜೊತೆ ವಿಂಗ್ ಕಮಾಂಡರ್ ಆದಿತ್ಯ ಬೋಸ್ ಕೊಲ್ಕತ್ತಾಗೆ ಎಸ್ಕೇಪ್ ಆಗಿದ್ದಾನೆ ಅಂತ ಹೇಳಲಾಗ್ತಿದೆ.
ಪೊಲೀಸರು ವಿಂಗ್ ಕಮಾಂಡರ್ ವಿರುದ್ಧ ಆರೆಸ್ಟ್ ವಾರೆಂಟ್ ಜಾರಿ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಆರೆಸ್ಟ್ ವಾರೆಂಟ್ ಜಾರಿಯಾದರೆ ಕೋಲ್ಕತ್ತಾಗೆ ಹೋಗಿ ಪೊಲೀಸರು ವಿಂಗ್ ಕಮಾಂಡರ್ನ ಆರೆಸ್ಟ್ ಮಾಡಿ ಕರೆತರಬಹುದು. ನಿನ್ನೆ ಬೆಳಗ್ಗೆಯಿಂದ ರಾಜ್ಯದಲ್ಲಿ ವಿಂಗ್ ಕಮಾಂಡರ್ಗೆ ಬೆಂಗಳೂರಿನಲ್ಲಿ ಕನ್ನಡಿಗನಿಂದ ಹಲ್ಲೆ ನಡೆದಿತ್ತು ಎಂದು ಭಾರೀ ಸುದ್ದಿಯಾಗಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಸಿಟಿವಿಯಲ್ಲಿ ವಿಂಗ್ ಕಮಾಂಡರ್ ಕನ್ನಡಿಗನ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸೆರೆಯಾಗಿದೆ.
ಯುವಕನೊಬ್ಬನಿಂದ ವಿಂಗ್ ಕಮಾಂಡರ್ ಮೇಲೆ ಹಲ್ಲೆ ನಡೆದಿದೆ ಎಂದು ಪೊಲೀಸರು ಕೂಡಾ ಪತ್ನಿಯಿಂದ ದೂರು ಪಡೆದಿದ್ದರು. ವಿಂಗ್ ಕಮಾಂಡರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಯ್ಯಪ್ಪನಹಳ್ಳಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದರು. ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕನ್ನಡ ಮಾತನಾಡು ಅಂತ ನಾವು ಹೇಳಿಲ್ಲ. ಬೈಕ್ ಕಾರಿಗೆ ಟಚ್ ಆಗಿದ್ದಕ್ಕೆ ಗಲಾಟೆ ಆಯ್ತು. ಅದು ಬಿಟ್ಟರೆ ಬೇರೆ ಏನೂ ಇಲ್ಲ ಎಂದು ಆರೋಪಿಗಳು ತಿಳಿಸಿದ್ದಾರೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.