ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಯುನಿಫಾರಂ ಧರಿಸದಿದ್ದರೆ ಶಿಕ್ಷಕರು ಬೈತಾರೆ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ

Self Harming: ಶಾಲಾ ಶಿಕ್ಷಕರು ವಿದ್ಯಾರ್ಥಿನಿಗೆ ಯುನಿಫಾರಂ ಬಟ್ಟೆಯನ್ನು ನೀಡಿ, ಸೋಮವಾರದಿಂದ ಯೂನಿಫಾರಂ ಧರಿಸಿ ಶಾಲೆಗೆ ಬರುವಂತೆ ಸೂಚನೆ ನೀಡಿದ್ದರು. ಪೋಷಕರು ಸಮವಸ್ತ್ರ ಹೊಲಿಯಲು ಟೈಲರ್‌ಗೆ ನೀಡಿದ್ದಾರೆ. ಆದರೆ ಯೂನಿಫಾರಂ ರೆಡಿಯಾಗಿರಲಿಲ್ಲ. ಇದರಿಂದ ವಿದ್ಯಾರ್ಥಿನಿ ಭಯಭೀತಳಾಗಿದ್ದಳು.

ಯುನಿಫಾರಂ ಧರಿಸದಿದ್ದರೆ ಶಿಕ್ಷಕರು ಬೈತಾರೆ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ

ಮೃತ ನಿವೇದಿತಾ

ಹರೀಶ್‌ ಕೇರ ಹರೀಶ್‌ ಕೇರ Jun 25, 2025 7:59 AM

ಚಿಕ್ಕಮಗಳೂರು: ಇಂದಿನ ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿದ್ದು, ಮೊಬೈಲ್‌ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಕ್ಕಳಿದ್ದಾರೆ. ಹಾಗೇ, ಶಾಲೆಗೆ ಯೂನಿಫಾರಂ ಧರಿಸದೆ ಹೋದರೆ ಶಿಕ್ಷಕರು ಬೈತಾರೆ ಎಂದು ಬೆದರಿ ವಿಷ ಸೇವಿಸಿ ಬಾಲಕಿಯೊಬ್ಬಳು (Student) ಆತ್ಮಹತ್ಯೆಗೆ (Self Hraming) ಶರಣಾಗಿದ್ದಾಳೆ. ಚಿಕ್ಕಮಗಳೂರಿನ (Chikkamagaluru) ತರೀಕೆರೆಯ ಲಿಂಗದಹಳ್ಳಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ನಿವೇದಿತಾ (13) ಆತ್ಮಹತ್ಯೆಗೆ ಶರಣಾಗಿರುವ ಬಾಲಕಿ.

ಶಾಲಾ ಶಿಕ್ಷಕರು ವಿದ್ಯಾರ್ಥಿನಿಗೆ ಯುನಿಫಾರಂ ಅನ್ನು ನೀಡಿದ್ದರು. ಸೋಮವಾರದಿಂದ ಯೂನಿಫಾರಂ ಧರಿಸಿ ಶಾಲೆಗೆ ಬರುವಂತೆ ಶಿಕ್ಷಕರು ಸೂಚನೆ ನೀಡಿದ್ದರು. ಪೋಷಕರು ಸಮವಸ್ತ್ರ ಹೊಲಿಯಲು ಟೈಲರ್‌ಗೆ ನೀಡಿದ್ದಾರೆ. ಆದರೆ ಯೂನಿಫಾರಂ ರೆಡಿಯಾಗಿರಲಿಲ್ಲ. ಯುನಿಫಾರಂ ಧರಿಸದೆ ಹೋದರೆ ಶಿಕ್ಷಕರು ಹೊಡೆಯುತ್ತಾರೆ ಎಂದು ಮನೆಯಲ್ಲಿಯೇ ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೋಮವಾರ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಸಾವು

ಬೆಳಗಾವಿ: ಹೃದಯಾಘಾತ ಚಿಕ್ಕ ಮಕ್ಕಳನ್ನು ಬಲಿ ಪಡೆಯುತ್ತಿರುವ ಪ್ರಮಾಣ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಒಂದು ದುರಂತ ಸಂಭವಿಸಿದೆ. ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ.

ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ, ಅಸ್ವಸ್ಥಳಾಗಿ ಕುಸಿದುಬಿದ್ದಳು. ಹೃದಯಾಘಾತದ ಲಕ್ಷಣಗಳು ಕಾಣುತ್ತಿದ್ದಂತೆ ಶಿಕ್ಷಕರು ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಮುಂದಾದರು.

ಪೋಷಕರನ್ನು ಕರೆಸಿ ಕೂಡಲೇ ಅಥಣಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತು. ಆದರೆ ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ಘಟನೆ ಕುರಿತಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case: ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್‌ ಎಸ್ಟೇಟ್‌ ಉದ್ಯಮಿಯ ಕೊಲೆ, ಕೊಲೆ ಹಿಂದೆ ಲವ್‌ ಸ್ಟೋರಿ