ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Dinesh Gundu Rao: ಟ್ಯಾಟೂದಿಂದ ಎಚ್‌ಐವಿ, ಚರ್ಮದ ಕ್ಯಾನ್ಸರ್: ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಟ್ಯಾಟೂನಿಂದ ಆರೋಗ್ಯ ಸಮಸ್ಯೆಗಳ ಸಾಧ್ಯತೆ ವಿಚಾರವಾಗಿ ಕೇಂದ್ರ ಸರ್ಕಾರ ನಿಯಮ ರೂಪಿಸಲು ಅವಕಾಶ ಇದೆ. ಟ್ಯಾಟೂ ಇಂಕ್ ಅನ್ನು ಕಾಂತಿ ವರ್ಧಕಗಳ ಅಡಿಯಲ್ಲಿ ತರಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ನಂತರ ಟ್ಯಾಟೂ ಪಾರ್ಲರ್‌ಗಳನ್ನು ನಿಯಂತ್ರಿಸಲು ಕಾನೂನು ರೂಪಿಸಲಾಗುವುದು ಎಂದು ತಿಳಿಸಿದರು.

ಟ್ಯಾಟೂದಿಂದ ಎಚ್‌ಐವಿ, ಚರ್ಮದ ಕ್ಯಾನ್ಸರ್: ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 1, 2025 8:18 AM

ಬೆಂಗಳೂರು: ಸೌಂದರ್ಯಕ್ಕಾಗಿ ನೀವು ಮೈತುಂಬ ಟ್ಯಾಟೂ (‌Tattoo) ಹಾಕಿಸಿಕೊಳ್ಳುವವರಾದರೆ ಹುಷಾರು. ಈಗಾಗಲೇ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆ ಬಳಕೆ ಆರೋಗ್ಯಕ್ಕೆ ಹಾನಿಕರ ಎನ್ನುವುದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ದೃಢಪಟ್ಟಿದೆ. ಇದರ ಬೆನ್ನಲ್ಲೇ‌, ಟ್ಯಾಟೂನಿಂದ ಎಚ್​ಐವಿ (HIV) ಹಾಗೂ ಚರ್ಮದ ಕ್ಯಾನ್ಸರ್ (Skin Cancer) ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Health Minister) ಅವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಆಯುಕ್ತ ಶ್ರೀನಿವಾಸ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವರು, ಟ್ಯಾಟೂನಿಂದ ಆರೋಗ್ಯ ಸಮಸ್ಯೆಗಳ ಸಾಧ್ಯತೆ ವಿಚಾರವಾಗಿ ಕೇಂದ್ರ ಸರ್ಕಾರ ನಿಯಮ ರೂಪಿಸಲು ಅವಕಾಶ ಇದೆ. ಟ್ಯಾಟೂ ಇಂಕ್ ಅನ್ನು ಕಾಂತಿ ವರ್ಧಕಗಳ ಅಡಿಯಲ್ಲಿ ತರಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ನಂತರ ಟ್ಯಾಟೂ ಪಾರ್ಲರ್‌ಗಳನ್ನು ನಿಯಂತ್ರಿಸಲು ಕಾನೂನು ರೂಪಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಚರ್ಮದ ಕ್ಯಾನ್ಸರ್, ಹೆಚ್​ಐವಿ ಹಾಗೂ ಚರ್ಮ ರೋಗ, ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿಯಂತಹ ಮಾರಣಾಂತಿಕ ಸೋಂಕುಗಳು ಜನರಲ್ಲಿ ಹೆಚ್ಚಾಗುತ್ತಿವೆ. ಇಂತಹ ಸೋಂಕುಗಳು ಹೆಚ್ಚಾಗಲು ಟ್ಯಾಟೂ ಹಾಕಿಸುವುದು ಕೂಡ ಒಂದು ಕಾರಣ ಎಂಬುದು ಆರೋಗ್ಯ ಇಲಾಖೆ ನಡೆಸಿರುವ ತಪಾಸಣೆಯಿಂದ ತಿಳಿದುಬಂದಿದೆ. ಅಷ್ಟೆ ಅಲ್ಲದೆ ಟ್ಯಾಟೂವನ್ನು ಹಾಕುವಾಗ ಬಳಸುವ ಬಣ್ಣದಲ್ಲಿ ಅಪಾಯಕಾರಿ ಮೆಟಲ್ ಬಳಕೆಯಾಗುತ್ತಿರುವುದು ಕಂಡುಬಂದಿದೆ. ಇದು ಸಹ ಮನುಷ್ಯನ ದೇಹಕ್ಕೆ ಅಪಾಯಕಾರಿಯಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಟ್ಯಾಟೂ ನಿಯಂತ್ರಿಸಲು ಹೊಸ ಕಾನೂನು ಜಾರಿಗೆ ಮುಂದಾಗಿದೆ.

ಇನ್ನು ಜನವರಿಯಿಂದ ಒಟ್ಟು 3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 26 ಮಾದರಿಗಳು ಅಸುರಕ್ಷಿತವಾಗಿವೆ ಎಂಬುದು ತಿಳಿದುಬಂದಿದೆ. 28 ಕಳಪೆಯಾಗಿವೆ. ಇದೇ ಜನವರಿಯಲ್ಲಿ 681 ರಷ್ಟು ಇಡ್ಲಿ ಸ್ಯಾಂಪಲ್ಸ್ ಪಡೆಯಲಾಗಿದೆ. ಇಡ್ಲಿ ಮಾಡುವಾಗ ಪ್ಲಾಸ್ಟಿಕ್ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಘಟನೆ ಸಂಬಂಧ 52 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದೆ. ಪ್ಲಾಸ್ಟಿಕ್ ಬಳಕೆ ಮಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ ಎಂದು ಗುಂಡೂರಾವ್ ತಿಳಿಸಿದರು.

ಔಷಧಗಳ ಗುಣಮಟ್ಟದ ಬಗ್ಗೆಯೂ ಮಾಹಿತಿ ನೀಡಿದ ಅವರು, 1133 ಔಷಧ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ, 938 ಔಷಧಗಳು ಗುಣಮಟ್ಟ ಹೊಂದಿವೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: shocking news: ಬೆಂಗಳೂರಿಗರೇ ಹುಷಾರ್‌, ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್!