#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Chikkaballapur News: ಟೆಂಟ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ನಮ್ಮ ಮೊದಲ ಆದ್ಯತಾ ಗುರಿಯಾಗಿದೆ

ಕೆಲವೆಡೆ ಅಲೆಮಾರಿ ಜನಾಂಗದವರು ವಾಸಿಸುವಲ್ಲಿ ಅಂಗನವಾಡಿ, ಬಸ್ ನಿಲ್ದಾಣದ ವ್ಯವಸ್ಥೆಗೆ ಬೇಡಿಕೆ ಸಲ್ಲಿಸಿದ್ದಾರೆ. ಗಂಜಿಕುಂಟೆ ಗ್ರಾಮದಲ್ಲಿ ವಾಸಿಸುವ ಹಕ್ಕಿಪಿಕ್ಕಿ ಜನಾಂಗದವರು ತಾವು ಉಳುಮೆ ಮಾಡುತ್ತಿರುವ 414 ಎಕರೆ ಭೂಮಿಯನ್ನು ಹದ್ದುಬಸ್ತು ಮಾಡಿಸಿ ಕೊಡಲು ಕೋರಿದ್ದಾರೆ.

ಟೆಂಟ್ ಮುಕ್ತ ಕರ್ನಾಟಕ ನಮ್ಮ ಗುರಿ: ಜಿ.ಪಲ್ಲವಿ

ಟೆಂಟ್ ಮುಕ್ತ ಕರ್ನಾಟಕ ನಮ್ಮ ಗುರಿ: ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.

Profile Ashok Nayak Feb 11, 2025 12:11 AM

ಚಿಕ್ಕಬಳ್ಳಾಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಜನಾಂಗದವರ ಎಲ್ಲರಿ ಗೂ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಟೆಂಟ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ನಮ್ಮ ಮೊದಲ ಆದ್ಯತಾ ಗುರಿಯಾಗಿದೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಅಧೀನದ ನಿಗಮಗಳಡಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಿಗಮದ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಂಡು ಅಲೆಮಾರಿ ಸಮುದಾಯದವರು ಎಲ್ಲೆಲ್ಲಿ ವಾಸಿಸುತ್ತಿದ್ದಾರೆ ಅವರ ಸಮಸ್ಯೆಗಳೇನು? ಎಂಬುದನ್ನು ಅವರ ಬಳಿಗೆ ಬಂದು ಆಲಿಸಿ ಪರಿಹರಿಸುವ ಯತ್ನ ಮಾಡುತ್ತಿದ್ದೇನೆ. ಅದೇ ರೀತಿ ಸೋಮವಾರವಾದ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ 53 ಅಲೆಮಾರಿ ಜನಾಂಗಗಳು ಹಾಗೂ ಪರಿಶಿಷ್ಟ ಪಂಗಡದ 23 ಅಲೆಮಾರಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿದ್ದೇನೆ ಎಂದರು.

ಇದನ್ನೂ ಓದಿ: Chikkaballapur News: ಅನೈತಿಕ ಸಂಬಂಧ ಭಾವನನ್ನೇ ಕೊಂದ ಭಾಮೈದ : ಸಿನಿಮೀಯ ಶೈಲಿಯಲ್ಲಿ ಕೊಲೆ

ಶಿಡ್ಲಘಟ್ಟ ತಾಲ್ಲೂಕಿನ ಹೆಚ್.ಕ್ರಾಸ್ ಸುತ್ತಮುತ್ತಲ ಹಾರಡಿ, ಲಕ್ಷ್ಮೀಪುರ ಇತರೆಡೆ ವಾಸಿಸುವ ಚನ್ನದಾಸರು ಹಾಗೂ ಹಂದಿಜೋಗಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿದ್ದೇನೆ. ಬಿದುರಿನ ಸಲಕರಣೆಗಳನ್ನು ತಯಾರು ಮಾಡಿ ಜೀವನ ಸಾಗಿಸುವ ಜನಾಂಗದವರು ಬಿದುರು ಉತ್ಪನ್ನ ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿಲ್ಲದ ಕಾರಣ ಬಹಳ ತೊಂದರೆಗೆ ಸಿಲುಕಿದ್ದು, ಮಹಾರಾಷ್ಟ್ರದಿಂದ ಬಿದುರನ್ನು ಆಮದು ಮಾಡಿಕೊಂಡು ಬಹಳ ಕಷ್ಟದಿಂದ ವೃತ್ತಿ ಸಾಗಿಸುತ್ತಿದ್ದಾರೆ. ಆ ಸಮುದಾ ಯವರು ಬಿದುರು ಉತ್ಪನ್ನವು ಜಿಲ್ಲೆಯಲ್ಲಿ ಸುಗಮವಾಗಿ ದೊರಕುವ ವ್ಯವಸ್ಥೆ ಆಗುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಿದ್ದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದರು.

ಕೆಲವೆಡೆ ಅಲೆಮಾರಿ ಜನಾಂಗದವರು ವಾಸಿಸುವಲ್ಲಿ ಅಂಗನವಾಡಿ, ಬಸ್ ನಿಲ್ದಾಣದ ವ್ಯವಸ್ಥೆಗೆ ಬೇಡಿಕೆ ಸಲ್ಲಿಸಿದ್ದಾರೆ. ಗಂಜಿಕುಂಟೆ ಗ್ರಾಮದಲ್ಲಿ ವಾಸಿಸುವ ಹಕ್ಕಿಪಿಕ್ಕಿ ಜನಾಂಗದವರು ತಾವು ಉಳುಮೆ ಮಾಡುತ್ತಿರುವ 414 ಎಕರೆ ಭೂಮಿಯನ್ನು ಹದ್ದುಬಸ್ತು ಮಾಡಿಸಿ ಕೊಡಲು ಕೋರಿದ್ದಾರೆ.

ಪೆರೇಸಂದ್ರದ ಬಳಿಯ ದೊಂಬರಪಾಳ್ಯದ ಅಲೆಮಾರಿ ಜನಾಂಗದವರು ಉಳುಮೆ ಮಾಡುತ್ತಿರುವ ಕೃಷಿ ಭೂಮಿಗೆ ದಾಖಲೆಗಳನ್ನು ಕೊಡಿಸಿಕೊಡುವಂತೆ ಮನವಿ ಮಾಡಿದ್ದಾರೆ. ಈ ಎಲ್ಲಾ ಮನವಿ, ಅಹವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಸಹ ಪೂರಕವಾಗಿ ಸ್ಪಂದಿಸಿದೆ. ಸ್ಥಳದಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪರಿಹಾರ ಕ್ರಮಕ್ಕೆ ಸ್ಥಳೀ ಯಾಧಿಕಾರಿಗಳಿಗೆ ಆದೇಶಿಸಿದ್ದಾರೆ.

ಎಲ್ಲಾ ಸಮಸ್ಯೆಗಳನ್ನು ಒಮ್ಮೆಲೆ ಬಗೆಹರಿಸಲು ಸಾಧ್ಯವಿಲ್ಲ, ಹಂತಹAತವಾಗಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಒಟ್ಟಾರೆ ಅಲೆಮಾರಿ ಜನಾಂಗದವರು ನಿವೇಶನ ರಹಿತರಾಗಿ ಇರದಂತೆ ಕ್ರಮವಹಿಸಿ ಪ್ರತಿಯೊಬ್ಬರಿಗೂ ನಿವೇಶನ ದೊರಕಿಸಿಕೊಡುವ ಮಹೋನ್ನತ ಉದ್ದೇಶವನ್ನು ನಿಗಮ ಮಾಡಲಿದೆ ಎಂದು ಭರವಸೆ ನೀಡಿದರು.

ಅಕ್ರಮ ಕರೆಂಟ್ ಬೇಡ

ಸರ್ಕಾರ ಗೃಹಜ್ಯೋತಿ ಯೋಜನೆಯಡಿ ಪ್ರತಿಯೊಬ್ಬರಿಗೂ ೨೦೦ ಯುನಿಟ್ ಉಚಿತ ವಿದ್ಯುತನ್ನು ನೀಡುತ್ತಿದೆ. ಆದರೆ ಅಲೆಮಾರಿ ಸಮುದಾಯದವರು ವಾಸಿಸುವ ಕೆಲವೆಡೆ ವಿದ್ಯುತ್ ಕಂಬಗಳ ತಂತಿಗಳಿಗೆ ಅಕ್ರಮವಾಗಿ ವೈರ್ ಮೂಲಕ ಸಂಪರ್ಕ ಪಡೆದು ವಿದ್ಯುತ್ ಉಪಯೋಗಿಸುತ್ತಿರುವುದು ಒಳ್ಳೆಯದಲ್ಲ, ಕೆಲವೊಮ್ಮೆ ಪ್ರಾಣ ಅಪಾಯಕ್ಕೆ ಕಾರಣವಾಗಲಿದೆ. ಸಮುದಾಯದವರು ಸಹ ಈ ನಿಟ್ಟಿನಲ್ಲಿ ಜಾಗೃತಿ ಹೊಂದಿ ವಿದ್ಯುತ್ ಸಂಪರ್ಕವನ್ನು ಪಡೆದು ಉಚಿತ ವಿದ್ಯುತ್ ಸೇವೆಯನ್ನು ಉಪಯೋಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಲೀಡ್ ಬ್ಯಾಂಕ್ ಮುಖ್ಯಸ್ಥರಿಗೆ ತಾಕೀತು
ಸರ್ಕಾರದ ವಿವಿಧ ಯೋಜನೆಗಳಡಿ ಇಲಾಖೆಗಳಿಂದ ಸಾಲ ಸೌಲಭ್ಯ ಮಂಜೂರಾಗಿ ಕೆಲವು ಪ್ರಕರಣ ಗಳಲ್ಲಿ ವರ್ಷ ಕಳೆದರೂ ಸಹ ಸಾಲ ಸೌಲಭ್ಯ ಫಲಾನುಭವಿಗಳಿಗೆ ಪಾವತಿಸದಿರುವುದು ತಮ್ಮ ದಿವ್ಯ ನಿರ್ಲಕ್ಷ್ಯವಾಗಿದೆ. ಮುಂದಿನ ಒಂದು ವಾರದ ಒಳಗೆ ಫಲಾನುಭವಿಗಳಿಗೆ ಸಾಲ ಪಾವತಿಯಾಗಬೇಕು ಎಂದು ಜಿಲ್ಲಾ ಲೀಡ್ ಬ್ಯಾಂಕ್ ಅಧಿಕಾರಿಗೆ ತಾಕೀತು ಮಾಡಿದರು.

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಜನಾಂಗದವರನ್ನು ಮುಖ್ಯ ವಾಹಿನಿಗೆ ತರಲು ಹಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ ಆದರೆ ಅವುಗಳನ್ನು ಅನುಷ್ಠಾನಗೊಳಿಸುವಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಹಾಗೂ ವಿವಿಧ ಬ್ಯಾಂಕ್ ಗಳ ವ್ಯವಸ್ಥಾ ಪಕರ ಇಚ್ಚಾಶಕ್ತಿಯ ಕೊರತೆಯಿಂದ ಜನರಿಗೆ ತಲುಪುತ್ತಿಲ್ಲ. ಈ ಧೋರಣೆಯನ್ನು ನಿಗಮವು ಸಹಿಸುವುದಿಲ್ಲ. ಲೀಡ್ ಬ್ಯಾಂಕ್ ನ ಮುಖ್ಯಸ್ಥರು ಸಾಲ ಪಾವತಿಸಲು ವಿಳಂಬವಾಗಿರುವ ೧೪ ಪ್ರಕರಣಗಳ ಪಟ್ಟಿಯನ್ನು ತೆಗೆದುಕೊಂಡು ಸಂಬಂಧಪಟ್ಟ 14 ಬ್ಯಾಂಕುಗಳ ವ್ಯವಸ್ಥಾಪ ಕರೊಂದಿಗೆ ತುರ್ತು ಸಭೆ ನಡೆಸಬೇಕು. ಈ ಪ್ರಕರಣಗಳಲ್ಲಿ ಫಲಾನುಭವಿಗಳ ಖಾತೆಗೆ ಸಾಲ ಪಾವತಿಸುವ ಮೂಲಕ ಒಂದು ವಾರದ ಮಿತಿಯಲ್ಲಿ ಯೋಜನೆಗಳ ಅನುಷ್ಠಾನ ಆಗಬೇಕು. ಇಲ್ಲವಾದಲ್ಲಿ ತಕ್ಕ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಕಿಡಿಕಾರಿದರು.

ಸಮಿತಿಯ ಸದಸ್ಯರಿಗೂ ಕ್ಲಾಸ್
ಜಿಲ್ಲೆಯಲ್ಲಿ 681 ಕುಟುಂಬಗಳು ಇಂದು ಸಹ ನಿವೇಶನ ರಹಿತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡುತ್ತಿದ್ದಾರೆ. “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಮತ್ತು ಬುಡಕಟ್ಟು ಸಮುದಾಯ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ” ಸದಸ್ಯರು ಯಾವ ಕ್ರಮ ತೆಗೆದು ಕೊಂಡಿದ್ದೀರಿ. ಸರ್ಕಾರಿ ಜಮೀನನ್ನು ಗುರ್ತಿಸಿ ನಿವೇಶನ ರಹಿತ ಅಲೆಮಾರಿ ಜನರಿಗೆ ನಿವೇಶನ ನೀಡಬೇಕು. ಸರ್ಕಾರಿ ಜಮೀನು ಸ್ಥಳೀಯವಾಗಿ ಲಭ್ಯವಿಲ್ಲದಿದ್ದಲ್ಲಿ ಖಾಸಗಿ ಜಮೀನನ್ನು ಖರೀದಿಸಿ ಈ ಸಮುದಾಯದವರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಸರ್ಕಾರ ಕಾನೂನು ಮಾಡಿದೆ. ಈ ಬಗ್ಗೆ ಯಾವ ಸದಸ್ಯರು ಎಷ್ಟು ಬಾರಿ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದೀರಿ, ಹೋರಾ ಟ ಮಾಡಿದ್ದೀರಿ ಇನ್ನಾದರೂ ಅಧಿಕಾರಿಗಳನ್ನು ಸಂಪರ್ಕಿಸಿ ಈ ದಿಸೆಯಲ್ಲಿ ಪರಿಣಾಮಕಾರಿಯಾಗಿ ಹೋರಾಟ ಮಾಡಿ. ಅದು ಬಿಟ್ಟು ಗುರಿ ನಿಗದಿಯನ್ನು ಹೆಚ್ಚಿಸಬೇಕು ಎಂದು ಹೋರಾಟ ಮಾಡು ವುದು ಔಚಿತ್ಯವಲ್ಲ ಎಂದು ಸಲಹೆ ನೀಡಿದರು.

ನಿವೇಶನ ರಹಿತ ಅಲೆಮಾರಿ ಜನಾಂಗದವರಿಗೆ ನಿವೇಶನ ಹಂಚಿಕೆಯ ಉದ್ದೇಶಕ್ಕೆ ಜಮೀನನ್ನು ಮೀಸಲಿಡಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳು ತ್ತಿದ್ದಾರೆ. ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಉದ್ದೇಶಕ್ಕಾಗಿ ಸ್ಪಷ್ಟವಾಗಿ ನಮೂದಿಸಿ ಜಿಲ್ಲಾಧಿ ಕಾರಿಗಳಿಗೆ ವರದಿ/ಪ್ರಸ್ತಾವನೆ ಸಲ್ಲಿಸಬೇಕು. ಈ ವೇಳೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಅಲೆಮಾರಿ ಜನಾಂಗದವರ ನಿವೇಶನಕ್ಕಾಗಿ ಭೂಮಿಯನ್ನು ಮೀಸಲಿಡುವ ಕಡತಗಳನ್ನು ಅತೀ ತುರ್ತಾಗಿ ವಿಲೇವಾರಿ ಮಾಡಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಸಹಾಯಕ ನಿರ್ದೇಶಕ ಶೇಷಾದ್ರಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.