ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shocking News: ಹುಡುಗಿಯರ ಅಕ್ರಮ ಸಾಗಾಟ ಜಾಲ ಪತ್ತೆ ಹಚ್ಚಿದ ಯುವಕ, ಕೇಡಿಗಳಿಂದ ಬೆದರಿಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ

Shocking News: ಹುಡುಗಿಯರನ್ನು ಮರುಳು ಮಾಡಿ ದುರ್ಬಳಕೆ ಮಾಡಿಕೊಳ್ಳುವ ಜಾಲವನ್ನು ಪತ್ತೆ ಹಚ್ಚಿದ ಹಿನ್ನೆಲೆ ಬೆದರಿಕೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿದ್ಧಾಪುರದ ಕಾನೆಹಳ್ಳಿ ಬಳಿ ದೂಪದಕಾನು ಅರಣ್ಯದಲ್ಲಿ ಅಕೇಶಿಯಾ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹುಡುಗಿಯರ ಅಕ್ರಮ ಸಾಗಾಟ ಜಾಲ ಪತ್ತೆ ಹಚ್ಚಿದ ಯುವಕ ಬೆದರಿಕೆಯಿಂದ ಆತ್ಮಹತ್ಯೆ

ಮೃತ ಸಂತೋಷ್ ಗಣಪತಿ ನಾಯ್ಕ

ಹರೀಶ್‌ ಕೇರ ಹರೀಶ್‌ ಕೇರ Jun 12, 2025 11:05 AM

ಕಾರವಾರ: ಉತ್ತರ ಕನ್ನಡದಲ್ಲಿ ಹುಡುಗಿಯರನ್ನು ಅಕ್ರಮವಾಗಿ ಬಲೆಗೆ ಬೀಳಿಸಿಕೊಂಡು ಸಾಗಾಟ ಮಾಡುವ ಹಾಗೂ ದುರ್ಬಳಕೆ ಮಾಡಿಕೊಳ್ಳುವ ಜಾಲವನ್ನು ಯುವಕನೊಬ್ಬ ಏಕಾಂಗಿ ಸಾಹಸದಿಂದ ಪತೆತಹಚ್ಚಿದ್ದು, ಈ ಕೇಡಿಗಳ ಜಾಲದಿಂದ ಕೊಲೆ ಬೆದರಿಕೆಗೆ ತುತ್ತಾಗಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಶಾಕಿಂಗ್‌ (Shocking News) ವಿಚಾರ ಬೆಳಕಿಗೆ ಬಂದಿದೆ.

ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಘಟನೆ ನಡೆದಿದ್ದು, ಸಂತೋಷ್ ಗಣಪತಿ ನಾಯ್ಕ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶಿವಮೊಗ್ಗ ಜಿಲ್ಲೆಯ ಸೊರಬಾ ಬೆನ್ನೂರು ಚಿಕ್ಕತೌಡತ್ತಿ ನಿವಾಸಿಯಾಗಿರುವ ಸಂತೋಷ್ ಖಾಸಗಿ ಬ್ಯಾಂಕ್ ನಲ್ಲಿ ನೌಕರನಾಗಿದ್ದ. ಹುಡುಗಿಯರ ಮಿಸ್‌ಯೂಸ್ ಮಾಡುವ ಜಾಲವನ್ನು ಪತ್ತೆ ಹಚ್ಚಿದ ಹಿನ್ನೆಲೆ ಬೆದರಿಕೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿದ್ಧಾಪುರದ ಕಾನೆಹಳ್ಳಿ ಬಳಿ ದೂಪದಕಾನು ಅರಣ್ಯದಲ್ಲಿ ಅಕೇಶಿಯಾ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದಕ್ಕೂ ಮುನ್ನ ಆತ ಆತ್ಮಹತ್ಯೆ ಸಂದೇಶವನ್ನು ವಿಡಿಯೋ ಮಾಡಿದ್ದಾನೆ. ತಾನು ಪ್ರೀತಿಸಿದ ಯುವತಿ ಕೂಡಾ ಈ ಜಾಲಕ್ಕೆ ಬೆಂಬಲ ನೀಡ್ತಿರುವುದಾಗಿ ಆಡಿಯೋದಲ್ಲಿ ಹೇಳಿದ್ದಾನೆ. ಜಾಲದ ಬಗ್ಗೆ ಆಡಿಯೋ ಹಾಗೂ ಪೋಟೋ ಎಡಿಟ್ ಮಾಡಿದ ವಿಡಿಯೋ ಹಂಚಿಕೊಂಡಿದ್ದಾನೆ. ವಿಡಿಯೋದಲ್ಲಿ ಹುಡುಗಿಯರನ್ನು ಮಿಸ್‌ಯೂಸ್ ಮಾಡೋ ಜಾಲದ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾನೆ.



ಜೊತೆಗೆ, ಸಿದ್ಧಾಪುರದ ಕಾಂಗ್ರೆಸ್ ನಾಯಕರ ಬಗ್ಗೆಯೂ ಆರೋಪ ಮಾಡಿರುವ ಸಂತೋಷ್, ಆರೋಪಿಗಳಿಗೆ ಕಾಂಗ್ರೆಸ್ ನಾಯಕರು ಬೆಂಬಲವಾಗಿ ನಿಂತಿರುವ ಬಗ್ಗೆ ಆಡಿಯೋದಲ್ಲಿ ಹೇಳಿಕೆ ನೀಡಿದ್ದಾನೆ.

ಫೇಸ್‌ಬುಕ್‌ನಲ್ಲಿ ಯುವತಿಯ ಫೇಕ್ ಪ್ರೊಫೈಲ್ ಸೃಷ್ಟಿ ಮಾಡಿ ಈ ಜಾಲವನ್ನು ತನ್ನ ಬಲೆಗೆ ಬೀಳಿಸಿದ್ದ ಸಂತೋಷ್. ಹುಡುಗಿಯಂತೆ ಮಾತನಾಡಿ, ಅವರಿಂದ ಮಾಹಿತಿ ಪಡೆದು ಒಂದಷ್ಟು ಹಣ ಕೂಡಾ ಪಡೆದಿದ್ದ. ಆದರೆ, ಫೇಕ್ ಪ್ರೊಫೈಲ್ ಹುಡುಗಿಯದ್ದಲ್ಲ ಸಂತೋಷನದ್ದು ಎಂದು ತಿಳಿದು ಆತನಿಗೆ ಬೆದರಿಕೆ ಹಾಕಿದ್ದರು. ಅಲ್ಲದೇ, ಮನೆಗೆ ತೆರಳಿ ಗಲಾಟೆ ಮಾಡಿ ಆತನ ಟ್ಯಾಬ್‌ಗಳನ್ನು ಕೂಡಾ ತೆಗೆದುಕೊಂಡು ಹೋಗಿದ್ದರು.

ತಾನು ಪ್ರೀತಿಸಿದ ಯುವತಿಯನ್ನು ಜಾಲದಿಂದ ರಕ್ಷಣೆ ಮಾಡಲು ಇಷ್ಟೆಲ್ಲಾ ಮಾಡಿದ್ದೆ. ಆದರೆ, ಕೊನೆಗೆ ಪ್ರೀತಿಸಿದ ಯುವತಿಯೇ ಜಾಲಕ್ಕೆ ಬೆಂಬಲವಾಗಿ ನಿಂತಿದ್ದಾಳೆ. ಇನ್ನು ನನಗೇನೂ ಬೇಡ, ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಆಡಿಯೋ ಮಾಡಿ ನೇಣು ಹಾಕಿಕೊಂಡಿದ್ದಾನೆ.

ಪುತ್ರನ ಪ್ರೇಮ ಪ್ರಕರಣ ಸಂಬಂಧಿಸಿ ಪೊಲೀಸ್ ಠಾಣೆಗೆ ಮೃತ ಸಂತೋಷ್ ತಂದೆ ಗಣಪತಿ ನಾರಾಯಣ ನಾಯ್ಕ್ ದೂರು ನೀಡಿದ್ದಾರೆ. ಸಂತೋಷ್ ಸಿದ್ಧಾಪುರ ಕೋಲಸಿರ್ಸಿಯ ಅಪೇಕ್ಷಾ ಅನ್ನೋ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ, ಸಿದ್ಧಾಪುರ ಚನಮಾಂವದ ಚರಣ್, ಲೋಕೇಶ್, ಮನೋಜ್ ಹಾಗೂ ಇತರ 4 ಜನರು ಮನೆಗೆ ಬಂದು ಬೆದರಿಕೆ ಹಾಕಿದ್ದರು. ಹುಡುಗಿಯನ್ನು ಲವ್ ಮಾಡಿದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿ, ಬೇರೆಡೆ ಹೋಗಿ ಸಾಯಲು ದುಷ್ಪ್ರೇರಣೆ ನೀಡಿದ್ದಾರೆ. ಅಲ್ಲದೇ, ತನಗೂ ಆರೋಪಿಗಳು ಅವಾಚ್ಯವಾಗಿ ನಿಂದಿಸಿದ್ದರು. ಇದರಿಂದ ಭಯಭೀತನಾಗಿದ್ದ ಸಂತೋಷ್, ಊಟ ಕೂಡಾ ಮಾಡುತ್ತಿರಲಿಲ್ಲ. ನಿನ್ನೆ ಮಧ್ಯಾಹ್ನ ಜಮೀನಿಗೆ ಹೋಗಿ ಬರುತ್ತೇನೆಂದು ಸಿದ್ಧಾಪುರದ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಯುವಕನ ಆತ್ಮಹತ್ಯೆ ಹಾಗೂ ಆಡಿಯೋ ಬಗ್ಗೆ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Honeymoon Murder case: ಬಲಿ ಕೊಡುವ ಕಾಮಾಕ್ಯ ದೇವಾಲಯಕ್ಕೆ ಗಂಡನನ್ನು ಕರೆದುಕೊಂಡು ಹೋದದ್ದೇಕೆ ಸೋನಂ? ಕೊಲೆಯ ಪೂರ್ಣ ವಿವರ ಇಲ್ಲಿದೆ