ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮಂಡ್ಯ

Mandya Car Accident: ಮಂಡ್ಯದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಮಂಡ್ಯದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ಭಾನುವಾರ ಅಪಘಾತ ನಡೆದಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರು ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

HD Kumaraswamy: ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದ ಎಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಎಚ್‌ಡಿಕೆ

Karnataka Government: ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ, ಕುಮಾರಣ್ಣ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಜಿಲ್ಲೆಗೆ ಏನಾದರೂ ಕೈಗಾರಿಕೆ ತರಬಹುದು ಎಂಬ ನಿರೀಕ್ಷೆ ಜನರಲ್ಲಿದೆ. ಕನಿಷ್ಠ ಒಂದು ಕಾರ್ಖಾನೆಯನ್ನಾದರು ಮಂಡ್ಯಕ್ಕೆ ತರಲು ಒಂದು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಇನ್ನೂ ಸರ್ಕಾರ ನಮಗೆ ಜಾಗ ನೀಡಿಲ್ಲ ಎಂದು ಹೇಳಿದ್ದಾರೆ.

HD Kumaraswamy: ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ?; ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ತಿರುಗೇಟು

ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ?: ಎಚ್‌ಡಿಕೆ

ಕುಮಾರಸ್ವಾಮಿ ಮನುವಾದಿ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಹಾಗಾದರೆ, ಸಿದ್ದರಾಮಯ್ಯ ಅವರು ಮಕ್ಕಳಿಗೆ ಏನು ಬೋಧಿಸಲು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

HD Kumaraswamy: ನನ್ನ ಹೇಳಿಕೆಯಿಂದ ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಕ್ಷಮೆ ಕೇಳುವೆ: ಎಚ್.ಡಿ. ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ ಎಚ್.ಡಿ. ಕುಮಾರಸ್ವಾಮಿ

ರಾಜ್ಯದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ಕೂಗು ಜೋರಾದ ವೇಳೆ ಡಿ.ಕೆ.ಶಿವಕುಮಾರ್‌ ಪರ ಆದಿಚುಂಚನಗಿರಿ ಶ್ರೀಗಳು ಬೆಂಬಲ ಸೂಚಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ನಾನು ಎರಡು ಬಾರಿ ಸಿಎಂ ಆದೆ. ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿಲ್ಲ ಎಂದು ಹೇಳಿದ್ದರು. ಇದೀಗ ತಮ್ಮ ಹೇಳಿಕೆಯಿಂದ ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುವೆ ಎಂದು ತಿಳಿಸಿದ್ದಾರೆ.

HD Kumaraswamy: ಮೈಶುಗರ್‌ ಶಾಲೆ ಶಿಕ್ಷಕರಿಗೆ ನೆರವಾದ ಎಚ್.ಡಿ. ಕುಮಾರಸ್ವಾಮಿ; 19,94,200 ರೂ. ಚೆಕ್‌ ಹಸ್ತಾಂತರ

ಮೈಶುಗರ್‌ ಶಾಲೆ ಶಿಕ್ಷಕರಿಗೆ ವೇತನ ನೀಡಲು ಎಚ್.ಡಿ. ಕುಮಾರಸ್ವಾಮಿ ನೆರವು

Mandya Mysugar School: ಹದಿನೈದು ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ. ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಶನಿವಾರ 19,94,200 ಮೊತ್ತದ ಚೆಕ್‌ ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದ್ದಾರೆ.

Sriranagaptna: ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿ- ಹನುಮ ಮಂದಿರ ವಿವಾದ ಮತ್ತೆ ಮುನ್ನೆಲೆಗೆ, ಬಿಗಿ ಭದ್ರತೆ

ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿ- ಹನುಮ ಮಂದಿರ ವಿವಾದ ಮತ್ತೆ ಮುನ್ನೆಲೆಗೆ

Sriranagaptna Jamia Masjid: ಮಂಡ್ಯ, ಮೈಸೂರು, ಕೊಡಗು, ಹಾಸನ, ರಾಮನಗರ ಜಿಲ್ಲೆಗಳಿಂದಲೂ ಹನುಮ ಮಾಲಾಧಾರಿಗಳು ಬರುತ್ತಿದ್ದಾರೆ. ಬಿಜೆಪಿ-ಜೆಡಿಎಸ್‌ ನಾಯಕರೂ ಯಾತ್ರೆಯಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ, ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ದಾರಿ ಉದ್ದಕ್ಕೂ ಸಿಸಿ ಕ್ಯಾಮರಾ ಕಣ್ಗಾವಲು ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ 1,000ಕ್ಕೂ ಹೆಚ್ಚು ಪೊಲೀಸರು ಯಾತ್ರೆ ತೆರೆಳುವ ದಾರಿಯುದ್ದಕ್ಕೂ ಮಂಗಳವಾರ ಪಥಸಂಚಲನ ನಡೆಸಿದ್ದಾರೆ.

DK Shivakumar: ಸಿಎಂ ಜತೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಡಿಕೆಶಿ ಟೆಂಪಲ್‌ ರನ್‌; ಮಂಡ್ಯದ ಭೂವರಾಹಸ್ವಾಮಿ ದೇಗುಲಕ್ಕೆ ಭೇಟಿ

ಮಂಡ್ಯದ ಭೂವರಾಹಸ್ವಾಮಿ ದೇವಸ್ಥಾನಕ್ಕೆ ಡಿಕೆಶಿ ಭೇಟಿ, ವಿಶೇಷ ಪೂಜೆ

ಭೂವರಾಹಸ್ವಾಮಿ ದೇವಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಭೂವರಾಹಸ್ವಾಮಿ ದೇವರೆ ನನ್ನನ್ನು ಇಂದು ಇಲ್ಲಿಗೆ ಕರೆಸಿಕೊಂಡಿದ್ದಾರೆ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Mandya News: ಎಚ್‌.ಡಿ. ಕುಮಾರಸ್ವಾಮಿ ಅಭಿಮಾನಿ ಆತ್ಮಹತ್ಯೆ; ಕುಟುಂಬಸ್ಥರಿಗೆ ನಿಖಿಲ್ ಸಾಂತ್ವನ

ಎಚ್‌ಡಿಕೆ ಅಭಿಮಾನಿ ಆತ್ಮಹತ್ಯೆ; ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿಖಿಲ್

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ ಜೆಡಿಎಸ್ ಪಕ್ಷದ ಕಾರ್ಯಕರ್ತ, ಮಾಜಿ ಸಿಎಂ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಅಪ್ಪಟ ಅಭಿಮಾನಿ ಮಹದೇವು ಅವರ ನಿವಾಸಕ್ಕೆ ಸೋಮವಾರ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ, ಮೃತ ಮಹದೇವು ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆರ್ಥಿಕ ನೆರವು ನೀಡಿದ್ದಾರೆ.

ಗ್ಯಾರಂಟಿ, ಗ್ಯಾರಂಟಿ ಅಂತಾರೆ, ಅದನ್ನೂ ಸರಿಯಾಗಿ ಕೊಟ್ಟಿಲ್ಲ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಿಖಿಲ್ ವ್ಯಂಗ್ಯ

ಗ್ಯಾರಂಟಿ, ಗ್ಯಾರಂಟಿ ಅಂತಾರೆ, ಅದನ್ನೂ ಸರಿಯಾಗಿ ಕೊಟ್ಟಿಲ್ಲ: ನಿಖಿಲ್

Nikhil Kumaraswamy: ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲಬೇಕು. ಗ್ಯಾರಂಟಿ, ಗ್ಯಾರಂಟಿ ಅಂತಾರೆ ಅದನ್ನು ಕೂಡ ಸರಿಯಾಗಿ ಕೊಟ್ಟಿಲ್ಲ. ಯುವನಿಧಿ ಕೊಟ್ಟಿದ್ದಿರಾ? ಚುನಾವಣೆ ಸಂದರ್ಭದಲ್ಲಿ ಮಾತ್ರ ದುಡ್ಡು ಬಿಡುಗಡೆ ಮಾಡ್ತಾರೆ. ಈ ಸರ್ಕಾರದಲ್ಲಿ ಬಡವರು ಬದುಕಲು ಆಗುತ್ತಿಲ್ಲ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Karnataka Weather: ಹವಾಮಾನ ವರದಿ; ಇಂದು ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷೆ

ಇಂದು ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

HD Kumaraswamy: ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಸಿಎಂಗೆ ಪತ್ರ ಬರೆದ ಎಚ್.ಡಿ. ಕುಮಾರಸ್ವಾಮಿ

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಸಿಎಂಗೆ ಪತ್ರ ಬರೆದ ಎಚ್‌ಡಿಕೆ

Mandya News: ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆ ಇದೆ. ನಾನು ಸಂಸದನಾಗಿ ಒಂದೂವರೆ ವರ್ಷ ಆಯಿತು. ಕೈಗಾರಿಕೆಗೆ ಜಾಗ ಕೊಡಿ ಎಂದು ಡಿಸಿ ಅವರಿಗೆ ಪತ್ರ ಬರೆದಿದ್ದೇನೆ. ಪಾಪ.. ಅವರು ಜಾಗ ಹುಡುಕುತ್ತಲೇ ಇದ್ದಾರೆ ಎಂದು ತಿಳಿಸಿದ್ದಾರೆ.

Karnataka Weather: ನಾಳೆ ಶಿವಮೊಗ್ಗ, ಕೊಡಗು ಸೇರಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗುಡುಗು ಸಹಿತ ಮಳೆ ನಿರೀಕ್ಷೆ

ಹವಾಮಾನ ವರದಿ; ನಾಳೆ ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗು (Weather forecast) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

Karnataka Weather: ಇಂದಿನ ಹವಾಮಾನ; ಕೋಲಾರ, ರಾಮನಗರ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ: ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Karnataka Weather: ಹವಾಮಾನ ವರದಿ; ನಾಳೆ ಮೈಸೂರು, ಮಂಡ್ಯ ಸೇರಿ ಈ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ನಾಳೆ ಮೈಸೂರು, ಮಂಡ್ಯ ಸೇರಿ ಈ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ: ಭಾಗಶಃ ಮೋಡ ಕವಿದ ವಾತಾವರಣ (Weather Report) ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Road Accident: ಭೀಕರ ಅಪಘಾತ, ಮರಕ್ಕೆ ಗೂಡ್ಸ್‌ ಡಿಕ್ಕಿಯಾಗಿ ಮೂವರ ದುರ್ಮರಣ

ಭೀಕರ ಅಪಘಾತ, ಮರಕ್ಕೆ ಗೂಡ್ಸ್‌ ಡಿಕ್ಕಿಯಾಗಿ ಮೂವರ ದುರ್ಮರಣ

Shivamogga: ಗೂಡ್ಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಮೂವರೂ ಬಾಳೆಹೊನ್ನೂರಿನಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿ ಗೂಡ್ಸ್ ವಾಹನದಲ್ಲಿ ವಾಪಸ್ ಆಗುವ ವೇಳೆ ಈ ಭೀಕರವಾದ ಅಪಘಾತ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸಿ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಕೆಆರ್‌ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ; ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ

ಕೆಆರ್‌ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ

Krishna Raja Sagara Dam: ಈ ಬಾರಿ ಉತ್ತಮ ಮಳೆ ಸುರಿದಿದ್ದು, ಒಂದೇ ವರ್ಷದಲ್ಲಿ 3ನೇ ಬಾರಿ ಕೃಷ್ಣ ರಾಜ ಸಾಗರ ಜಲಾಶಯ ಭರ್ತಿಯಾಗಿದೆ. ಇದರಿಂದ ಬೆಂಗಳೂರಿಗೆ ಬೇಸಗೆಯ ನೀರಿನ ಕೊರತೆ ಕೂಡ ನೀಗಲಿದೆ. ಜತೆಗೆ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ ನೀರಿನ ಹಂಚಿಕೆಯ ಸಮಸ್ಯೆ ಕೂಡ ಬಗೆಹರಿದಂತಾಗಿದೆ.

Viral Video:  ದೀಪ ಬೆಳಗಿಸಿ, ರಸ್ತೆ ಗುಂಡಿಗಳಿಗೆ ಹೂವಿನ ಅಲಂಕಾರ ; ವಿನೂತನ ಪ್ರತಿಭಟನೆಯ ವಿಡಿಯೋ ವೈರಲ್‌

ರಸ್ತೆ ಗುಂಡಿಗಳನ್ನು ಹೂವುಗಳಿಂದ ಅಲಂಕರಿಸಿ ಪ್ರತಿಭಟನೆ

People Decorate Potholes: ಮಂಡ್ಯ ಜಿಲ್ಲೆಯ ಜನರು ರಸ್ತೆ ಗುಂಡಿ ವಿರುದ್ಧ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಈ ದೀಪಾವಳಿಯಲ್ಲಿ, ಮನೆಯಲ್ಲಿ ದೀಪಗಳನ್ನು ಬೆಳಗಿಸುವ ಬದಲು, ನಿವಾಸಿಗಳು ಗುಂಡಿಗಳ ಒಳಗೆ ದೀಪಗಳನ್ನು ಬೆಳಗಿಸಿದರು. ಗುಂಡಿಗಳನ್ನು ಹೂವುಗಳು ಮತ್ತು ಮೇಣದಬತ್ತಿಗಳನ್ನು ಅಲಂಕರಿಸಿದರು. ಇದರ ವಿಡಿಯೊ ವೈರಲ್ ಆಗಿದೆ.

KRS dam: ವಿಶಿಷ್ಟ ದಾಖಲೆ ಬರೆದ ಕೃಷ್ಣರಾಜಸಾಗರ ಜಲಾಶಯ

ವಿಶಿಷ್ಟ ದಾಖಲೆ ಬರೆದ ಕೃಷ್ಣರಾಜಸಾಗರ ಜಲಾಶಯ

Mandya: ಕಳೆದ ಹಲವಾರು ವರ್ಷಗಳಲ್ಲಿ ಸರಿಯಾದ ಅವಧಿಗೆ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗದೇ ಸಾಕಷ್ಟು ಸಮಸ್ಯೆ ನಿರ್ಮಾಣವಾಗ್ತಿತ್ತು. ಅಣೆಕಟ್ಟು ಭರ್ತಿಯಾಗದ ಸಂದರ್ಭಗಳಲ್ಲಿ ತಮಿಳುನಾಡು (Tamilnadu) ನೀರಿಗಾಗಿ ಕ್ಯಾತೆ ತೆಗೆದು ವಿವಾದ ಉಲ್ಬಣಿಸುತ್ತಿತ್ತು. ಈ ವರ್ಷ ಹಾಗೆ ಆಗುವ ಪರಿಸ್ಥಿತಿ ಸೃಷ್ಟಿಯಾಗಿಲ್ಲ.

ಜಿಟಿ ಮಾಲ್‌ನ ಮೂರನೇ ಮಹಡಿಯಿಂದ ಕೆಳಬಿದ್ದು ಯುವಕ ಸಾವು

ಜಿಟಿ ಮಾಲ್‌ನ ಮೂರನೇ ಮಹಡಿಯಿಂದ ಕೆಳಬಿದ್ದು ಯುವಕ ಸಾವು

Bengaluru: ಮಾಲ್​ ಮಧ್ಯದಲ್ಲಿ ಮೃತದೇಹ ಬಿದ್ದಿದ್ದು, ಸ್ಥಳಕ್ಕೆ ಸೋಕೋ ಟೀಮ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಲ್​ಗೆ ಬಂದಿದ್ದ ವ್ಯಕ್ತಿ ಆಯ ತಪ್ಪಿ ಬಿದ್ದರೇ ಅಥವಾ ತಾನೇ ಕೆಳಗೆ ಜಿಗಿದು ಆತ್ಮಹತ್ಯೆಗೆ ಶರಣಾದರೇ ಎಂಬುದು ಪೊಲೀಸ್​ ತನಿಖೆಯಿಂದ ಗೊತ್ತಾಗಬೇಕಿದೆ.

Road accident: ಮೂರು ಬಸ್ಸುಗಳ ನಡುವೆ ಭೀಕರ ಅಪಘಾತ, ಮೂವರು ಸಾವು, 30 ಮಂದಿಗೆ ಗಾಯ

ಮೂರು ಬಸ್ಸುಗಳ ನಡುವೆ ಭೀಕರ ಅಪಘಾತ, ಮೂವರು ಸಾವು, 30 ಮಂದಿಗೆ ಗಾಯ

Mandya News: ಮಳವಳ್ಳಿ ಮಾರ್ಗವಾಗಿ ಮಹದೇಶ್ವರನ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕೊಳ್ಳೆಗಾಲ ಕಡೆಯಿಂದ ಮಳವಳ್ಳಿಗೆ ಬರುತ್ತಿದ್ದ KSRTC ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೊದಲು ಎರಡು ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಡಿಕ್ಕಿಯಾಗಿ ನಿಂತಿದ್ದ ಸಂದರ್ಭದಲ್ಲಿಯೇ ಮತ್ತೊಂದು ಬಸ್ ಬಂದು ಡಿಕ್ಕಿ ಹೊಡೆದಿದೆ.

HD Kumaraswamy: HMT ಕಾರ್ಖಾನೆಗೆ ಮರುಜೀವ- ಡಿಪಿಆರ್‌ ಸಿದ್ಧವಾಗುತ್ತಿದೆ ಎಂದ ಎಚ್.ಡಿ. ಕುಮಾರಸ್ವಾಮಿ

ಎಚ್‌ಎಂಟಿ ಕಾರ್ಖಾನೆಗೆ ಮರುಜೀವ- ಡಿಪಿಆರ್‌ ಸಿದ್ಧವಾಗುತ್ತಿದೆ: ಎಚ್‌ಡಿಕೆ

HMT Factory: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎಚ್‌ಎಂಟಿ ಹಾಗೂ ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಪುನರುಜ್ಜೀವನ ಮಾಡುವ ಪ್ರಯತ್ನ ನಡೆಸಲಾಗಿದೆ. ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

HD Kumaraswamy: ಮೈಶುಗರ್ ಶಾಲೆ ಅಭಿವೃದ್ಧಿಗೆ 10 ಕೋಟಿ ರೂ. ಶೀಘ್ರ ರಿಲೀಸ್‌- HDK ಭರವಸೆ

ಮೈಶುಗರ್ ಶಾಲೆ ಅಭಿವೃದ್ಧಿಗೆ 10 ಕೋಟಿ ರೂ ಶೀಘ್ರ ಬಿಡುಗಡೆ!

MySugar School: ಮಂಡ್ಯ ಜಿಲ್ಲೆಯ ಹೆಗ್ಗುರುತುಗಳಲ್ಲಿ ಒಂದಾಗಿರುವ ಮೈಶುಗರ್ ಶಾಲೆಯ ಅಭಿವೃದ್ಧಿಗೆ ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

HD Kumaraswamy: ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ದೋಖಾ! HDK ಆರೋಪ

ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ದೋಖಾ! HDK ಆರೋಪ

State Congress Government: ಬೆಂಗಳೂರು ನಗರ ಜನರಿಗೆ ದೀಪಾವಳಿ ಕೊಡುಗೆ ನೀಡಲು ಶಾಕ್ ಕೊಡ್ತಿದ್ದಾರೆ. ಅದು ಹೇಗಿದೆ ಎಂದರೆ, ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಅರ್ಜಿಗೆ 500 ರೂಪಾಯಿ ಶುಲ್ಕ ತುಂಬಬೇಕು. ಆ ಶುಲ್ಕದ ಹೆಸರಿನಲ್ಲಿಯೇ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದೆ ರಾಜ್ಯ ಸರ್ಕಾರ. 30/40 ನಿವೇಶನಕ್ಕೆ 4ರಿಂದ 8 ಲಕ್ಷ ರೂಪಾಯಿವರೆಗೂ ಕಿತ್ತುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.

Basangouda Patil Yatnal: ಡಿಕೆಶಿಯನ್ನು ಬಿಜೆಪಿಗೆ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ: ಶಾಸಕ ಯತ್ನಾಳ್‌

ಡಿಕೆಶಿಯನ್ನು ಬಿಜೆಪಿಗೆ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ

Karnataka Politics: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಏನು ಅಂತ ಗೊತ್ತಿಲ್ಲ. ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಆಗಬಹುದು. ಶಾಸಕರಲ್ಲಿ ಅಸಮಾಧಾನ ಇದೆ. ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ, ಅಸಮಾಧಾನ ಇದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯೇ ಕ್ರಾಂತಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

Loading...