ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಮಂಡ್ಯ
BY Vijayendra: ಅಗತ್ಯ ವಸ್ತುಗಳ ಬೆಲೆ ಏರಿಸಿದ ಸಿಎಂಗೆ ಕಪಾಳಮೋಕ್ಷ ಮಾಡಲು ಜನತೆ ಚರ್ಚೆ ಮಾಡುತ್ತಿದ್ದಾರೆ-ವಿಜಯೇಂದ್ರ

ಜನಹಿತವನ್ನೇ ಮರೆತ ಪಕ್ಷ ಕಾಂಗ್ರೆಸ್- ವಿಜಯೇಂದ್ರ

BY Vijayendra: ಅಹಿಂದ ಹೆಸರು ಹೇಳಿಕೊಂಡು ಮತ ಪಡೆದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎಲ್ಲ ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ಇವರು ಅಲ್ಪಸಂಖ್ಯಾತರು, ಮುಸಲ್ಮಾನರ ಜಪ ಮಾಡುತ್ತಿದ್ದು, ರಾಜ್ಯದ ಎಲ್ಲ ಹಿಂದುಳಿದ ಸಮಾಜಗಳನ್ನು ಸಂಪೂರ್ಣವಾಗಿ ಮರೆತಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

BJP Janakrosh Yatra: ಇಂದು ಮಂಡ್ಯದಲ್ಲಿ ಎರಡನೇ ದಿನದ ಬಿಜೆಪಿ ಜನಾಕ್ರೋಶ ಯಾತ್ರೆ

ಇಂದು ಮಂಡ್ಯದಲ್ಲಿ ಎರಡನೇ ದಿನದ ಬಿಜೆಪಿ ಜನಾಕ್ರೋಶ ಯಾತ್ರೆ

ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್ ಅಶೋಕ, ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಸಿಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಸಹ ಇಂದು ಮಂಡ್ಯದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ.

Mandya News: ಮಂಡ್ಯದ ವಿಸಿ ನಾಲೆಗೆ ಈಜಲು ಹೋಗಿದ್ದ ಒಂದೇ ಕುಟುಂಬದ ಮೂವರು ಮಕ್ಕಳು ನೀರುಪಾಲು

ವಿಸಿ ನಾಲೆಗೆ ಈಜಲು ಹೋಗಿದ್ದ ಒಂದೇ ಕುಟುಂಬದ ಮೂವರು ಮಕ್ಕಳು ನೀರುಪಾಲು

Mandya News: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಾರ್ತ್ ಬ್ಯಾಂಕ್ ಬಳಿ ಘಟನೆ ನಡೆದಿದೆ. ಮೈಸೂರಿನ ಗೌಸಿಯಾನಗರದ ಮೂವರು ಮಕ್ಕಳು, ಜಾತ್ರೆಗೆ ತೆರಳಿದ್ದಾಗ ನಾಲೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Road Accident: ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರ ಸಾವು

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರ ಸಾವು

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಯಲ್ಲಿ ಐರಾವತ ಬಸ್ ಮತ್ತು ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಎಕ್ಸಿಟ್​ನಲ್ಲಿ ಈ ಅಪಘಾತ ನಡೆದಿದೆ.

Drinking Water: ಕೆಆರ್‌ಎಸ್‌ನಲ್ಲಿ 27 ಟಿಎಂಸಿ ಅಡಿ ನೀರು, ಈ ಬೇಸಿಗೆಯಲ್ಲಿ ಬೆಂಗಳೂರಿಗೆ ಜಲಕ್ಷಾಮ ಇಲ್ಲ

ಕೆಆರ್‌ಎಸ್‌ನಲ್ಲಿ 27 ಟಿಎಂಸಿ ನೀರು, ಈ ಸಲ ಬೆಂಗಳೂರಿಗೆ ಜಲಕ್ಷಾಮ ಇಲ್ಲ

ಬೆಂಗಳೂರಿಗೆ (Bengaluru) ಮುಖ್ಯ ನೀರಿನ ಮೂಲವಾದ ಕೆಆರ್‌ಎಸ್ ಅಣೆಕಟ್ಟಿನಲ್ಲಿ 6 ಟಿಎಂಸಿ ಅಡಿ ನೀರಿನ ಅವಶ್ಯಕತೆಗೂ ಹೆಚ್ಚಾಗಿ 27 ಟಿಎಂಸಿ ಅಡಿ ನೀರು ಲಭ್ಯವಿದೆ. ಹೀಗಾಗಿ ಈ ಬಾರಿಯ ಬೇಸಿಗೆಯಲ್ಲಿ ನಗರದಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ.

ನಾಮ ಹಾಕಿದ ಮಾತ್ರಕ್ಕೆ ಹಿಂದು ಆಗಲ್ಲ: ಯತ್ನಾಳ್ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಕಿಡಿ

ನಾಮ ಹಾಕಿದ ಮಾತ್ರಕ್ಕೆ ಹಿಂದು ಆಗಲ್ಲ: ಕಲ್ಲಡ್ಕ ಪ್ರಭಾಕರ್ ಭಟ್ ಕಿಡಿ

kalladka Prabhakar Bhat: ವಿಜಯಪುರ ಶಾಸಕ ಹಾಗೂ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್‌ ಅವರು ಸಮರ್ಥಿಸಿಕೊಂಡಿದ್ದಾರೆ.

Assault Case: ಸೊಸೈಟಿ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ಗೆ ವೋಟು ಹಾಕಿಸಿದ್ದಕ್ಕೆ ಯುವತಿ ಮೇಲೆ ಮಾರಣಾಂತಿಕ ಹಲ್ಲೆ!

ಕಾಂಗ್ರೆಸ್‌ಗೆ ವೋಟು ಹಾಕಿಸಿದ್ದಕ್ಕೆ ಯುವತಿ ಮೇಲೆ ಮಾರಣಾಂತಿಕ ಹಲ್ಲೆ!

Assault Case: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಚೋಳೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವೋಟ್ ಹಾಕಿಸಿದ ಹಿನ್ನೆಲೆಯಲ್ಲಿ ಯುವತಿ ಮೇಲೆ ಜೆಡಿಎಸ್‌ ಕಾರ್ಯಕರ್ತರ ಗ್ಯಾಂಗ್‌ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

KRS Dam: ನಿಗೂಢವಾಗಿ ತೆರೆದ ಕೆಆರ್‌ಎಸ್‌ ಡ್ಯಾಂ ಗೇಟ್‌, 2000 ಕ್ಯೂಸೆಕ್‌ ನೀರು ಪೋಲು

ನಿಗೂಢವಾಗಿ ತೆರೆದ ಕೆಆರ್‌ಎಸ್‌ ಡ್ಯಾಂ ಗೇಟ್‌, 2000 ಕ್ಯೂಸೆಕ್‌ ನೀರು ಪೋಲು

ಎರಡು ಕಾರಣಗಳಿಂದ ಡ್ಯಾಂನ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಡ್ಯಾಂನ ಗೇಟ್​ನ ಮೋಟಾರ್​ ರಿವರ್ಸ್​ ಆಗಿದ್ದರಿಂದ ಗೇಟ್​ ತೆರೆದಿರಬಹುದು, ಅಥವಾ ನಮ್ಮದೇ ಸಿಬ್ಬಂದಿ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಗೇಟ್​ ಯಾವ ಕಾರಣಕ್ಕೆ ತೆರೆದಿದೆ ಎಂಬುವುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.

Self Harming: ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಎಎಸ್‌ಐ ಪುತ್ರಿ ಆತ್ಮಹತ್ಯೆ

ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಎಎಸ್‌ಐ ಪುತ್ರಿ ಆತ್ಮಹತ್ಯೆ

ಸುಹಾನಾ ಮೈಸೂರಿನಲ್ಲಿ ಪ್ರಥಮ ವರ್ಷದ ಬಿಎ ವ್ಯಾಸಂಗ ಓದುತ್ತಿದ್ದು, ಕಾಲೇಜು ಮುಗಿಸಿಕೊಂಡು ಮನೆಗೆ ಬಂದು ಬಂದೀಗೌಡ ಬಡಾವಣೆ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸುಹಾನಾ ಅವರ ಕುಟುಂಬಿಕರು ಹಾಗೂ ಸಹಪಾಠಿಗಳನ್ನು ವಿಚಾರಿಸಲಾಗುತ್ತಿದೆ.

Food Poison: ಮಳವಳ್ಳಿಯಲ್ಲಿ ವಿಷಾಹಾರಕ್ಕೆ ಮತ್ತೊಬ್ಬ ವಿದ್ಯಾರ್ಥಿ ಬಲಿ, ಸಾವಿನ ಸಂಖ್ಯೆ 2ಕ್ಕೆ

ಮಳವಳ್ಳಿಯಲ್ಲಿ ವಿಷಾಹಾರಕ್ಕೆ ಎರಡನೇ ವಿದ್ಯಾರ್ಥಿ ಬಲಿ

ಮಂಡ್ಯ (Mandya news) ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಘಟನೆ ನಡೆದಿತ್ತು. ಮಳವಳ್ಳಿಯಲ್ಲಿ ಉದ್ಯಮಿಯೊಬ್ಬರು ಹೋಳಿ ಹಬ್ಬ ಆಚರಿಸಿದ್ದರು. ಈ ವೇಳೆ ಉಳಿದ ಊಟವನ್ನು ಅನಾಥಾಶ್ರಮಕ್ಕೆ ನೀಡಿದ್ದರು. ಈ ಊಟ ಸೇವಿಸಿ ಫುಡ್ ಪಾಯ್ಸನ್ ಆಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ.

Murder Case: ಕ್ರಿಕೆಟ್‌ ಮ್ಯಾಚ್‌ ಗೆಲ್ಲಿಸಿದ್ದಕ್ಕೆ ಯುವಕನ ಕೊಲೆ, ದೂರು ದಾಖಲು

ಕ್ರಿಕೆಟ್‌ ಮ್ಯಾಚ್‌ ಗೆಲ್ಲಿಸಿದ್ದಕ್ಕೆ ಯುವಕನ ಕೊಲೆ, ದೂರು ದಾಖಲು

ಮ್ಯಾಚ್‌ ಗೆದ್ದ ಬಳಿಕ ಟೀಮ್‌ನ ಸದಸ್ಯರು ಪಾರ್ಟಿ ಮಾಡಿದ್ದಾರೆ. ಪಾರ್ಟಿ ಮುಗಿಸಿ ದಿವ್ಯ ಕುಮಾರ್‌ ಬೈಕ್‌ನಲ್ಲಿ ತೆರಳಿದ್ದ. ಇದಾದ ಬಳಿಕ ಅಪಘಾತಗೊಂಡ ಸ್ಥಿತಿಯಲ್ಲಿ ಪೊದೆಯೊಂದರಲ್ಲಿ ದಿವ್ಯ ಕುಮಾರ್ ಕೋಮಾ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲು ಮಾಡಲಾಗಿತ್ತು.

Food Poison: ಹೋಳಿ ಹಬ್ಬದ ಪಾರ್ಟಿಯಲ್ಲಿ ಕಲುಷಿತ ಆಹಾರ ಸೇವನೆ, ವಿದ್ಯಾರ್ಥಿ ಸಾವು, 6 ಮಂದಿ ಮೇಲೆ ಎಫ್‌ಐಆರ್

ಹೋಳಿ ಪಾರ್ಟಿಯಲ್ಲಿ ವಿಷಾಹಾರ, ವಿದ್ಯಾರ್ಥಿ ಸಾವು, 6 ಮಂದಿ ಮೇಲೆ ಎಫ್‌ಐಆರ್

ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.‌ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ಚಸ್ಥಗೊಂಡಿದ್ದರು.

Self Harming: ಪ್ರೇಮಿಯಿಂದ ವಂಚನೆ, ಪುತ್ರಿ ಸೂಸೈಡ್, ನೊಂದ ತಾಯಿ ನೇಣಿಗೆ ಶರಣು

ಪ್ರೇಮಿಯಿಂದ ವಂಚನೆ, ಪುತ್ರಿ ಸೂಸೈಡ್, ನೊಂದ ತಾಯಿ ನೇಣಿಗೆ ಶರಣು

ನ್ಯಾಯ ಕೇಳಲು ಹೋದವರ ವಿರುದ್ಧವೇ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ವ್ಯಕ್ತವಾಗಿತ್ತು. ಮಗಳ ಸಾವಿಗೆ ನ್ಯಾಯ ಸಿಕ್ಕಿಲ್ಲವೆಂದು ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷ್ಮಿ ಶವ ಸಾಗಿಸಲು ಬಿಡದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

DK Shivakumar: ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ: ಡಿಸಿಎಂ ಡಿಕೆಶಿ

ಶಿಕ್ಷಣ ಸಂಸ್ಥೆಗಳಿಗೆ ರಾಜಕೀಯದವರನ್ನು ಬಿಟ್ಟುಕೊಳ್ಳಬೇಡಿ: ಡಿಕೆಶಿ

DK Shivakumar: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಿಎಂ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣವಾಗಿರುವ ಬಿಎಂ ಪಬ್ಲಿಕ್ ಶಾಲಾ ಕಟ್ಟಡ, ಆಡಳಿತ ಕಟ್ಟಡ ಹಾಗೂ ಸಾಯಿಬಾಬಾ ಮಂದಿರವನ್ನು ಭಾನುವಾರದಂದು ಲೋಕಾರ್ಪಣೆ ಮಾಡಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿದ್ದಾರೆ.

Police Firing: ಮಂಡ್ಯದಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡು ಹಾರಿಸಿ ಸೆರೆ

ಮಂಡ್ಯದಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡು ಹಾರಿಸಿ ಸೆರೆ

ಐದಕ್ಕೂ ಅಧಿಕ ಪ್ರಕರಣಗಳಲ್ಲಿ ಆರೋಪಿ ಸುಭಾಷ್‌ ಭಾಗಿಯಾಗಿದ್ದ. ಬಿ. ಹೊಸೂರು ಸಮೀಪ ಆತ ತಲೆಮರೆಸಿಕೊಂಡಿರುವ ಮಾಹಿತಿ ಗೊತ್ತಾಗಿ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ.

ಪಿಎಂ ಕಿಸಾನ್ ಸಮ್ಮಾನ್; ಮಂಡ್ಯ ಜಿಲ್ಲೆಯ 2,24,634 ರೈತರಿಗೆ ₹44.93 ಕೋಟಿ ಜಮೆ

ಮಂಡ್ಯ ವಿಸಿಫಾರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಅವರು, ಬಿಹಾರದ ಬಾಗಲ್ಪುರದಿಂದ ಪಿಎಂ ಕಿಸಾನ್ ಸಮ್ಮಾ ನ್ ಯೋಜನೆ 19ನೇ ಕಂತಿನ ಹಣ ಬಿಡುಗಡೆ ಮಾಡಿದ ಕಾರ್ಯಕ್ರಮದಲ್ಲಿ ಮಂಡ್ಯದ ವಿಸಿ ಫಾರಂ ನಿಂದ ಆನ್ಲೈನ್ ವೇದಿಕೆಯಿಂದ ಪಾಲ್ಗೊಂಡು ಕೇಂದ್ರ ಸಚಿವರು ಮಾತನಾಡಿ ದರು

Micro Finance harassment: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೆ ಮೂವರ ಬಲಿ, ನಾಲೆಗೆ ಹಾರಿ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೆ ಮೂವರ ಬಲಿ, ನಾಲೆಗೆ ಹಾರಿ ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಂಡವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿವಾಸಿಗಳು ಎಂದು ಬಂದಿದೆ. ಮಂಡ್ಯ ತಾಲೂಕಿನ ವಿಸಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಾಸ್ತಪ್ಪ (65) ಪತ್ನಿ ರತ್ನಮ್ಮ (45) ಮಗಳು ಲಕ್ಷ್ಮಿ (18) ಎಂದು ಗುರುತಿಸಲಾಗಿದೆ.

Road Accident: ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದವರ ಮೇಲೆ ಹರಿದ ಬಸ್‌, ಇಬ್ಬರು ಬಲಿ

ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದವರ ಮೇಲೆ ಹರಿದ ಬಸ್‌, ಇಬ್ಬರು ಬಲಿ

ಮೂವರು ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಖಾಸಗಿ ಬಸ್ ಪಾದಯಾತ್ರಿಗಳ ಮೇಲೆ ಹರಿದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಂಡ್ಯ (Mandya news) ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು.

Mandya News: ನಾಡಬಾಂಬ್ ಸ್ಫೋಟಗೊಂಡು ವಿದ್ಯಾರ್ಥಿ ಅಂಗೈ ಛಿದ್ರ, ಮತ್ತೊಬ್ಬನಿಗೆ ಗಂಭೀರ ಗಾಯ

ನಾಡಬಾಂಬ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Mandya News: ನಾಗಮಂಗಲ ತಾಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯ ಬೆಟ್ಟದಲ್ಲಿ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಒಬ್ಬ ವಿದ್ಯಾರ್ಥಿಯ ಅಂಗೈ ಛಿದ್ರಗೊಂಡಿದೆ. ಮತ್ತೊಬ್ಬನ ಮುಖದ ಭಾಗಕ್ಕೆ ಗಾಯವಾಗಿದೆ. ಕಾಡು ಹಂದಿ ಬೇಟೆಗೆ ನಾಡ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.

Gruha Lakshmi Scheme: ಗೃಹಲಕ್ಷ್ಮಿ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆ ನೀಡಿದ ಗೃಹಿಣಿ

ಗೃಹಲಕ್ಷ್ಮಿ ಹಣದಲ್ಲಿ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆ ನೀಡಿದ ಗೃಹಿಣಿ

Gruha Lakshmi Scheme: ಮಂಡ್ಯ ಜಿಲ್ಲೆಯ ಗೃಹಿಣಿಯೊಬ್ಬರು, ಗೃಹ ಲಕ್ಷ್ಮಿ ಯೋಜನೆಯಲ್ಲಿ ಬಂದ ಹಣ ಕೂಡಿಟ್ಟು, ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿರುವುದು ಕಂಡುಬಂದಿದೆ. ಇವರ ಸಮಾಜ ಸೇವೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಆಕಸ್ಮಿಕವಾಗಿ ಸಿಡಿದ ಗುಂಡು; 3 ವರ್ಷದ ಬಾಲಕ ಸಾವು

ಆಕಸ್ಮಿಕವಾಗಿ ಗುಂಡು ಸಿಡಿದು 3 ವರ್ಷದ ಬಾಲಕ ಸಾವು

ಮಕ್ಕಳು ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದು 3 ವರ್ಷದ ಮಗು ಮೃತಪಟ್ಟ ಘಟನೆ ನಾಗಮಂಗಲ ತಾಲೂಕಿನ ದೊಂದೆಮಾದಿಹಳ್ಳಿಯ ಕೋಳಿ ಫಾರಂ ಒಂದರಲ್ಲಿ ಭಾನುವಾರ (ಫೆ. 16) ನಡೆದಿದೆ. ಮೃತ ಬಾಲಕನ್ನನ್ನು ಪಶ್ಚಿಮ ಬಂಗಾಳ ಮೂಲಕ ಅಭಿಷೇಕ್‌ (3) ಎಂದು ಗುರುತಿಸಲಾಗಿದೆ.

Self Harming: ಗಂಡನಿಗೆ ಅನೈತಿಕ ಸಂಬಂಧ; ಜಿಮ್‌ನಲ್ಲೇ ನೇಣು ಬಿಗಿದುಕೊಂಡ ಪತ್ನಿ

ಗಂಡನಿಗೆ ಅನೈತಿಕ ಸಂಬಂಧ; ಜಿಮ್‌ನಲ್ಲೇ ನೇಣು ಬಿಗಿದುಕೊಂಡ ಪತ್ನಿ

Mandya News: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಘಟನೆ ನಡೆದಿದೆ. ಪತಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯಿಂದ ಗಂಡ ನಡೆಸುತ್ತಿದ್ದ ಜಿಮ್‌ನಲ್ಲಿಯೇ ಮಹಿಳೆ ನೇಣಿಗೆ ಶರಣಾಗಿದ್ದಾರೆ. ಆದರೆ, ಅಳಿಯನೇ ಮಗಳನ್ನು ಹೊಡೆದು ಕೊಂದಿದ್ದಾನೆ ಎಂದು ಗೃಹಿಣಿಯ ಪೋಷಕರು ಆರೋಪಿಸಿದ್ದಾರೆ.

Hit And Run: ಮಂಡ್ಯದಲ್ಲಿ ಹಿಟ್‌ ಆ್ಯಂಡ್‌ ರನ್‌, ಇಬ್ಬರು ಪಾದಚಾರಿಗಳ ಬಲಿ

ಮಂಡ್ಯದಲ್ಲಿ ಹಿಟ್‌ ಆ್ಯಂಡ್‌ ರನ್‌, ಇಬ್ಬರು ಪಾದಚಾರಿಗಳ ಬಲಿ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಣಿಗೆರೆ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇವರಿಬ್ಬರ ಮೇಲೆ ಕಾರು ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕ ಪಾನಮತ್ತನಾಗಿದ್ದಿರಬಹುದು ಎಂದು ಶಂಕಿಸಲಾಗಿದೆ.

Kumbh Mela: ಇಂದಿನಿಂದ ಕರ್ನಾಟಕದಲ್ಲಿ ಕುಂಭಮೇಳ; ಏನೆಲ್ಲ ವ್ಯವಸ್ಥೆಯಿದೆ ನೋಡಿ

ಇಂದಿನಿಂದ ಕರ್ನಾಟಕದಲ್ಲಿ ವೈಭವದ ಕುಂಭಮೇಳ; ಏನೆಲ್ಲ ವ್ಯವಸ್ಥೆಯಿದೆ ನೋಡಿ

1989 ರಿಂದ ಪ್ರತಿ 3 ವರ್ಷಗಳಿಗೊಮ್ಮೆ ಇಲ್ಲಿ ಕುಂಭಮೇಳ ನಡೆಸಿಕೊಂಡು ಬರಲಾಗುತ್ತಿದೆ. 2022ರಲ್ಲಿ ಕೋವಿಡ್ ಕಾರಣದಿಂದ ಕುಂಭಮೇಳ ನಡೆದಿರಲಿಲ್ಲ. ಇದೀಗ 6 ವರ್ಷದ ಬಳಿಕ ಕುಂಭಮೇಳ ನಡೆಯುತ್ತಿದೆ. ಈ ಬಾರಿಯ ಕುಂಭಮೇಳಕ್ಕೆ ಟಿ.ನರಸೀಪುರ ಸಜ್ಜಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.