ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮಂಡ್ಯ

Viral Video:  ದೀಪ ಬೆಳಗಿಸಿ, ರಸ್ತೆ ಗುಂಡಿಗಳಿಗೆ ಹೂವಿನ ಅಲಂಕಾರ ; ವಿನೂತನ ಪ್ರತಿಭಟನೆಯ ವಿಡಿಯೋ ವೈರಲ್‌

ರಸ್ತೆ ಗುಂಡಿಗಳನ್ನು ಹೂವುಗಳಿಂದ ಅಲಂಕರಿಸಿ ಪ್ರತಿಭಟನೆ

People Decorate Potholes: ಮಂಡ್ಯ ಜಿಲ್ಲೆಯ ಜನರು ರಸ್ತೆ ಗುಂಡಿ ವಿರುದ್ಧ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಈ ದೀಪಾವಳಿಯಲ್ಲಿ, ಮನೆಯಲ್ಲಿ ದೀಪಗಳನ್ನು ಬೆಳಗಿಸುವ ಬದಲು, ನಿವಾಸಿಗಳು ಗುಂಡಿಗಳ ಒಳಗೆ ದೀಪಗಳನ್ನು ಬೆಳಗಿಸಿದರು. ಗುಂಡಿಗಳನ್ನು ಹೂವುಗಳು ಮತ್ತು ಮೇಣದಬತ್ತಿಗಳನ್ನು ಅಲಂಕರಿಸಿದರು. ಇದರ ವಿಡಿಯೊ ವೈರಲ್ ಆಗಿದೆ.

KRS dam: ವಿಶಿಷ್ಟ ದಾಖಲೆ ಬರೆದ ಕೃಷ್ಣರಾಜಸಾಗರ ಜಲಾಶಯ

ವಿಶಿಷ್ಟ ದಾಖಲೆ ಬರೆದ ಕೃಷ್ಣರಾಜಸಾಗರ ಜಲಾಶಯ

Mandya: ಕಳೆದ ಹಲವಾರು ವರ್ಷಗಳಲ್ಲಿ ಸರಿಯಾದ ಅವಧಿಗೆ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗದೇ ಸಾಕಷ್ಟು ಸಮಸ್ಯೆ ನಿರ್ಮಾಣವಾಗ್ತಿತ್ತು. ಅಣೆಕಟ್ಟು ಭರ್ತಿಯಾಗದ ಸಂದರ್ಭಗಳಲ್ಲಿ ತಮಿಳುನಾಡು (Tamilnadu) ನೀರಿಗಾಗಿ ಕ್ಯಾತೆ ತೆಗೆದು ವಿವಾದ ಉಲ್ಬಣಿಸುತ್ತಿತ್ತು. ಈ ವರ್ಷ ಹಾಗೆ ಆಗುವ ಪರಿಸ್ಥಿತಿ ಸೃಷ್ಟಿಯಾಗಿಲ್ಲ.

ಜಿಟಿ ಮಾಲ್‌ನ ಮೂರನೇ ಮಹಡಿಯಿಂದ ಕೆಳಬಿದ್ದು ಯುವಕ ಸಾವು

ಜಿಟಿ ಮಾಲ್‌ನ ಮೂರನೇ ಮಹಡಿಯಿಂದ ಕೆಳಬಿದ್ದು ಯುವಕ ಸಾವು

Bengaluru: ಮಾಲ್​ ಮಧ್ಯದಲ್ಲಿ ಮೃತದೇಹ ಬಿದ್ದಿದ್ದು, ಸ್ಥಳಕ್ಕೆ ಸೋಕೋ ಟೀಮ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಲ್​ಗೆ ಬಂದಿದ್ದ ವ್ಯಕ್ತಿ ಆಯ ತಪ್ಪಿ ಬಿದ್ದರೇ ಅಥವಾ ತಾನೇ ಕೆಳಗೆ ಜಿಗಿದು ಆತ್ಮಹತ್ಯೆಗೆ ಶರಣಾದರೇ ಎಂಬುದು ಪೊಲೀಸ್​ ತನಿಖೆಯಿಂದ ಗೊತ್ತಾಗಬೇಕಿದೆ.

Road accident: ಮೂರು ಬಸ್ಸುಗಳ ನಡುವೆ ಭೀಕರ ಅಪಘಾತ, ಮೂವರು ಸಾವು, 30 ಮಂದಿಗೆ ಗಾಯ

ಮೂರು ಬಸ್ಸುಗಳ ನಡುವೆ ಭೀಕರ ಅಪಘಾತ, ಮೂವರು ಸಾವು, 30 ಮಂದಿಗೆ ಗಾಯ

Mandya News: ಮಳವಳ್ಳಿ ಮಾರ್ಗವಾಗಿ ಮಹದೇಶ್ವರನ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕೊಳ್ಳೆಗಾಲ ಕಡೆಯಿಂದ ಮಳವಳ್ಳಿಗೆ ಬರುತ್ತಿದ್ದ KSRTC ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೊದಲು ಎರಡು ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಡಿಕ್ಕಿಯಾಗಿ ನಿಂತಿದ್ದ ಸಂದರ್ಭದಲ್ಲಿಯೇ ಮತ್ತೊಂದು ಬಸ್ ಬಂದು ಡಿಕ್ಕಿ ಹೊಡೆದಿದೆ.

HD Kumaraswamy: HMT ಕಾರ್ಖಾನೆಗೆ ಮರುಜೀವ- ಡಿಪಿಆರ್‌ ಸಿದ್ಧವಾಗುತ್ತಿದೆ ಎಂದ ಎಚ್.ಡಿ. ಕುಮಾರಸ್ವಾಮಿ

ಎಚ್‌ಎಂಟಿ ಕಾರ್ಖಾನೆಗೆ ಮರುಜೀವ- ಡಿಪಿಆರ್‌ ಸಿದ್ಧವಾಗುತ್ತಿದೆ: ಎಚ್‌ಡಿಕೆ

HMT Factory: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎಚ್‌ಎಂಟಿ ಹಾಗೂ ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಪುನರುಜ್ಜೀವನ ಮಾಡುವ ಪ್ರಯತ್ನ ನಡೆಸಲಾಗಿದೆ. ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

HD Kumaraswamy: ಮೈಶುಗರ್ ಶಾಲೆ ಅಭಿವೃದ್ಧಿಗೆ 10 ಕೋಟಿ ರೂ. ಶೀಘ್ರ ರಿಲೀಸ್‌- HDK ಭರವಸೆ

ಮೈಶುಗರ್ ಶಾಲೆ ಅಭಿವೃದ್ಧಿಗೆ 10 ಕೋಟಿ ರೂ ಶೀಘ್ರ ಬಿಡುಗಡೆ!

MySugar School: ಮಂಡ್ಯ ಜಿಲ್ಲೆಯ ಹೆಗ್ಗುರುತುಗಳಲ್ಲಿ ಒಂದಾಗಿರುವ ಮೈಶುಗರ್ ಶಾಲೆಯ ಅಭಿವೃದ್ಧಿಗೆ ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

HD Kumaraswamy: ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ದೋಖಾ! HDK ಆರೋಪ

ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ದೋಖಾ! HDK ಆರೋಪ

State Congress Government: ಬೆಂಗಳೂರು ನಗರ ಜನರಿಗೆ ದೀಪಾವಳಿ ಕೊಡುಗೆ ನೀಡಲು ಶಾಕ್ ಕೊಡ್ತಿದ್ದಾರೆ. ಅದು ಹೇಗಿದೆ ಎಂದರೆ, ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಅರ್ಜಿಗೆ 500 ರೂಪಾಯಿ ಶುಲ್ಕ ತುಂಬಬೇಕು. ಆ ಶುಲ್ಕದ ಹೆಸರಿನಲ್ಲಿಯೇ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದೆ ರಾಜ್ಯ ಸರ್ಕಾರ. 30/40 ನಿವೇಶನಕ್ಕೆ 4ರಿಂದ 8 ಲಕ್ಷ ರೂಪಾಯಿವರೆಗೂ ಕಿತ್ತುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.

Basangouda Patil Yatnal: ಡಿಕೆಶಿಯನ್ನು ಬಿಜೆಪಿಗೆ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ: ಶಾಸಕ ಯತ್ನಾಳ್‌

ಡಿಕೆಶಿಯನ್ನು ಬಿಜೆಪಿಗೆ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ

Karnataka Politics: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಏನು ಅಂತ ಗೊತ್ತಿಲ್ಲ. ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಆಗಬಹುದು. ಶಾಸಕರಲ್ಲಿ ಅಸಮಾಧಾನ ಇದೆ. ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ, ಅಸಮಾಧಾನ ಇದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯೇ ಕ್ರಾಂತಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ.

Cauvery Aarti: ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಡಿ.ಕೆ. ಶಿವಕುಮಾರ್

ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಡಿ.ಕೆ. ಶಿವಕುಮಾರ್

DK Shivakumar: ʼಕಾವೇರಿ ಆರತಿಯನ್ನು ನಿಲ್ಲಿಸುವುದಿಲ್ಲ,‌ ಮುಂದುವರಿಸುತ್ತೇವೆ.‌ ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ.‌ ನಾವೆಲ್ಲರೂ ‌ಸೇರಿ ಪ್ರಾರ್ಥನೆ ಸಲ್ಲಿಸೋಣ.‌ ಆರತಿಗಾಗಿ ಸ್ಟೇಡಿಯಂ ಮಾದರಿ ಮಂಟಪ ನಿರ್ಮಾಣ‌‌ ಮಾಡೋಣ‌ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Cauvery Aarti: ಕೆಆರ್‌ಎಸ್‌ ಅಣೆಕಟ್ಟಿನಲ್ಲಿ ಐದು ದಿನಗಳ ಕಾವೇರಿ ಆರತಿಗೆ ತೆರೆ

ಕೆಆರ್‌ಎಸ್‌ ಅಣೆಕಟ್ಟಿನಲ್ಲಿ ಐದು ದಿನಗಳ ಕಾವೇರಿ ಆರತಿಗೆ ತೆರೆ

KRS dam: ಶ್ರೀರಂಗಪಟ್ಟಣದ ಕೆಆರ್‌ಎಸ್ ಡ್ಯಾಂನ ಬೃಂದಾವನದಲ್ಲಿ ಸಾಂಕೇತಿಕವಾಗಿ ಕಳೆದ ಐದು ದಿನಗಳ ಕಾಲ ಕಾವೇರಿ ಆರತಿ ಕಾಲ ಜರುಗಿತು. ಈ ಆರತಿಗೆ ಕಳೆದ ಶುಕ್ರವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಗೋಧೂಳಿ ಸಮಯದಲ್ಲಿ ಚಾಲನೆ ನೀಡುವ ಮೂಲಕ ಹೊಸ ಆಚರಣೆಗೆ ಮುನ್ನುಡಿ ಬರೆದಿದ್ದರು.

Bus Ticket Price: ದಸರಾ ದುಬಾರಿ: ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ, ಖಾಸಗಿ ಬಸ್ಸುಗಳಲ್ಲೂ ಏರಿಕೆ

ದಸರಾ ದುಬಾರಿ: ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ, ಖಾಸಗಿಯೂ ಏರಿಕೆ

ಕೆಎಸ್ಆರ್ಟಿಸಿ ನಿಗಮವು ದಸರಾ ಸಂದರ್ಭದಲ್ಲಿ ಬೇರೆ ಡಿಪೋಗಳಿಂದ ಹೆಚ್ಚುವರಿ ಬಸ್ಸುಗಳನ್ನು ಪಡೆದು ಪ್ರಯಾಣಿಕರಿಗೆ ಸೇವೆ ನೀಡುತ್ತದೆ. ಬೆಂಗಳೂರು ಟು ಮೈಸೂರು ಹೋಗುವಾಗ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಇರುತ್ತದೆ. ಮೈಸೂರಿನಿಂದ ವಾಪಸ್ಸು ಬರುವಾಗ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುತ್ತದೆ. ಈ ನಷ್ಟವನ್ನು ಸರಿದೂಗಿಸಲು ಈ ದರ ಏರಿಕೆ ಮಾಡಲಾಗಿದೆ.

Madduru Stone Pelting: ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯವೇ? ಬಯಲಾಯ್ತು ಸ್ಫೋಟಕ ಸಂಗತಿ

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯವೇ?

ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯವೆಂಬುದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ 32 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಪೊಲೀಸರ ತನಿಖೆಯಲ್ಲಿ ಕಲ್ಲುತೂರಾಟ ಪೂರ್ವ ನಿಯೋಜಿತ ಎನ್ನುವ ಸ್ಫೋಟಕ ಅಂಶ ಬಯಲಾಗಿದೆ

SL Bhyrappa: ಎಸ್‌ಎಲ್‌ ಭೈರಪ್ಪನವರ ಚಿತಾಭಸ್ಮ ಕಾವೇರಿ ನದಿಯಲ್ಲಿ ವಿಸರ್ಜನೆ

ಎಸ್‌ಎಲ್‌ ಭೈರಪ್ಪನವರ ಚಿತಾಭಸ್ಮ ಕಾವೇರಿ ನದಿಯಲ್ಲಿ ವಿಸರ್ಜನೆ

SL Bhyrappa: ಶ್ರೀರಂಗಪಟ್ಟಣದಲ್ಲಿರುವ ಸ್ನಾನಘಟ್ಟದಲ್ಲಿ ಕಾವೇರಿ ನದಿಯಲ್ಲಿ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು. ಭೈರಪ್ಪನವರ ಮಕ್ಕಳಾದ ಉದಯಶಂಕರ್‌, ರವಿಶಂಕರ್‌ ಅಸ್ಥಿ ವಿಸರ್ಜನೆ ನೆರವೇರಿಸಿದರು. ಕಾವೇರಿ ನದಿ ಭೈರಪ್ಪನವರ ಕಾದಂಬರಿಗಳಲ್ಲಿ ಅವಿಭಾಜ್ಯ ಅಂಗವಾಗಿದೆ.

Cauvery Aarti: ಕಾವೇರಿ ಆರತಿ ಜ್ಯೋತಿ ಇಡೀ ರಾಜ್ಯವನ್ನು ಶಾಶ್ವತವಾಗಿ ಬೆಳಗುತ್ತದೆ: ಡಿಕೆಶಿ

ಕಾವೇರಿ ಆರತಿ ಜ್ಯೋತಿ ಇಡೀ ರಾಜ್ಯವನ್ನು ಶಾಶ್ವತವಾಗಿ ಬೆಳಗುತ್ತದೆ: ಡಿಕೆಶಿ

DK Shivakumar: ಸೂರ್ಯ, ಚಂದ್ರ, ಗಾಳಿಯಿಲ್ಲದೇ ನಾವುಗಳು ಬದುಕಲು ಸಾಧ್ಯವಿಲ್ಲ. ಪಂಚಭೂತಗಳಿಗೆ ಪ್ರತಿದಿನ ನಾವು ಪೂಜೆ ಮಾಡುತ್ತೇವೆ. ಅದೇ ರೀತಿ ರಾಜ್ಯದ ಹಳೇ ಮೈಸೂರು ಭಾಗದ ಜೀವನದಿಯಾಗಿ ಮೂರುವರೆ ಕೋಟಿ ಜನರು ಸೇರಿದಂತೆ ಪಕ್ಕದ ತಮಿಳುನಾಡು,‌ ಪಾಂಡಿಚೇರಿಯ ಜನರಿಗೆ ಜೀವನಾಧಾರವಾದ ಕಾವೇರಿಗೆ ನಾವು ಪೂಜೆ ಸಲ್ಲಿಸುತ್ತಿದ್ದೇವೆ.‌ ಇಂದು ಬೆಳಗಿರುವ ಜ್ಯೋತಿ ಇಡೀ ರಾಜ್ಯವನ್ನು ಶಾಶ್ವತವಾಗಿ ಬೆಳಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Cauvery Aarti: ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಜತೆಗೆ ಸಾಹಸ ಹಾಗೂ ಜಲ ಕ್ರೀಡೆ ಆಯೋಜನೆ

ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಜತೆಗೆ ಸಾಹಸ ಹಾಗೂ ಜಲ ಕ್ರೀಡೆ ಆಯೋಜನೆ

DK Shivakumar: ಗಂಗಾರತಿ ಮಾದರಿಯಲ್ಲಿ ತಾಯಿ ಕಾವೇರಿಗೆ ಪೂಜೆ ಸಲ್ಲಿಸುವ ವರ್ಣರಂಜಿತ ಧಾರ್ಮಿಕ ಕಾರ್ಯಕ್ರಮದ ಜತೆಗೆ ಕರ್ನಾಟಕ ಸರ್ಕಾರವು ಪ್ರವಾಸಿಗರಿಗಾಗಿ ಕೆಆರ್‌ಎಸ್ ಅಣೆಕಟ್ಟಿನಲ್ಲಿ ಕ್ರೀಡಾ ಉತ್ಸವಗಳನ್ನು ಆಯೋಜಿಸುತ್ತಿದೆ. ಹೀಗಾಗಿ ಪ್ರವಾಸಿಗರು ಹಾಗೂ ರಾಜ್ಯದ ಜನ ಈ ವಾರಾಂತ್ಯದಲ್ಲಿ ಕೆಆರ್‌ಎಸ್‌ಗೆ ಆಗಮಿಸಿ ಈ ಆಕರ್ಷಕ ಕಣ್ತುಂಬಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

Cauvery Aarti: ಸೆಪ್ಟೆಂಬರ್‌ 26ರಿಂದ ಗಂಗಾ ಆರತಿ ಮಾದರಿಯಲ್ಲಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ

ಕಾವೇರಿ ಆರತಿ: ಪ್ರತಿ ದಿನ ಉಚಿತ ಲಾಡು ವಿತರಣೆ

ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ ಕಾವೇರಿ ಆರತಿ ಮಾಡುವ ಕಾರ್ಯಕ್ರಮವು ಸೆ. 26ರಿಂದ ಐದು ದಿನಗಳ ಕಾಲ‌ ಮಂಡ್ಯದ ಕೆಆರ್‌ಎಸ್‌ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಕಾವೇರಿ ಆರತಿ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಿಸಲಾಗುತ್ತದೆ.

Dinesh Gundu Rao: ಭ್ರೂಣ ಹತ್ಯೆ ವಿರುದ್ಧ ಹೊರ ರಾಜ್ಯಗಳಲ್ಲೂ ರಾಜ್ಯದ ಆರೋಗ್ಯ ಇಲಾಖೆ ಯಶಸ್ವಿ ರಹಸ್ಯ ಕಾರ್ಯಾಚರಣೆ: ದಿನೇಶ್ ಗುಂಡೂರಾವ್ ಮೆಚ್ಚುಗೆ

ಭ್ರೂಣ ಹತ್ಯೆ ವಿರುದ್ಧ ರಾಜ್ಯದ ಆರೋಗ್ಯ ಇಲಾಖೆ ಯಶಸ್ವಿ ರಹಸ್ಯ ಕಾರ್ಯಾಚರಣೆ

Dinesh Gundu Rao: ಹೆಣ್ಣು ಭ್ರೂಣ ಹತ್ಯೆ ತಡೆಯುವಲ್ಲಿ ಸರ್ಕಾರ, ಇಲಾಖೆಯಿಂದ ಏನೆಲ್ಲ ಪ್ರಯತ್ನಗಳನ್ನು ಮಾಡಲು ಸಾಧ್ಯ ಅದನ್ನು ಪ್ರಮಾಣಿಕವಾಗಿ ಮಾಡಲಾಗುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಒಂದು ಸಾಮಾಜಿಕ ಪಿಡುಗು. ನಮ್ಮ ಸಮಾಜ ಈ ಬಗ್ಗೆ ಜಾಗೃತರಾಗುವುದು ಮುಖ್ಯ. ಸಂಪೂರ್ಣವಾಗಿ ಹೆಣ್ಣು ಭ್ರೂಣ ಹತ್ಯೆ ತೊಡೆದುಹಾಕಲು ಸಾಮಾಜಿಕ ಬದಲಾವಣೆ ಆಗುವುದು ಮುಖ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

GST 2.0: ಜಿಎಸ್‌ಟಿ 2.0- ಮಂಡ್ಯದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ

ಜಿಎಸ್‌ಟಿ 2.0: ಮಂಡ್ಯದಲ್ಲಿ ಬಿಜೆಪಿಯಿಂದ ಸಂಭ್ರಮಾಚರಣೆ

GST 2.0: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರವು ಸರಳೀಕೃತ ಜಿ.ಎಸ್.ಟಿ. 2.0 ರ ವ್ಯವಸ್ಥೆಯನ್ನು ಜಾರಿ ಮಾಡಿರುವುದನ್ನು ಸ್ವಾಗತಿಸಿ, ಸೋಮವಾರ ಮಂಡ್ಯದ ಕಾಮನಗುಡಿ ಸರ್ಕಲ್, ಪೇಟೆ ಬೀದಿಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

Mandya News: ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆಶಿ

ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆಶಿ

DK Shivakumar: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಭಾನುವಾರ ನಡೆದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದ್ದಾರೆ. "ಅನುದಾನದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೇ ವಿರೋಧ ಪಕ್ಷದವರು ಚರ್ಚೆ ಮಾಡಬಹುದು. ಜಿಲ್ಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು.

CM Siddaramaiah: ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

Mekedatu Project: ಮೇಕೆದಾಟು ಯೋಜನೆಗೆ ಅನಗತ್ಯವಾಗಿ ತಕರಾರು ಮಾಡಬೇಡಿ. ಮೇಕೆದಾಟು ವಿಚಾರವಾಗಿ ತಮಿಳುನಾಡು ಹಾಗೂ ಕೇಂದ್ರ ಸರ್ಕಾರ ರಾಜಕೀಯ ಮಾಡಬಾರದು. ಯೋಜನೆ ನಿರ್ಮಾಣವಾದರೆ ತಮಿಳುನಾಡು ಹಾಗೂ ಕರ್ನಾಟಕ ಎರಡು ರಾಜ್ಯಗಳಿಗೂ ಅನುಕೂಲವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

Madduru unrest: ಮದ್ದೂರು ಗಣೇಶ ವಿಸರ್ಜನೆ ಗಲಭೆ: ಎಸ್‌ಐ ಶಿವಕುಮಾರ್‌ ಅಮಾನತು, ಎಸ್‌ಪಿ ವರ್ಗಾವಣೆ

ಮದ್ದೂರು ಗಣೇಶ ವಿಸರ್ಜನೆ ಗಲಭೆ: ಎಸ್‌ಐ ಶಿವಕುಮಾರ್‌ ಅಮಾನತು, ಎಸ್‌ಪಿ ವರ್ಗ

Stone Pelting: ಮದ್ದೂರು ಟೌನ್ ಇನ್‌ಸ್ಪೆಕ್ಟರ್ ಶಿವಕುಮಾರ್ ಸಸ್ಪೆಂಡ್ ಮಾಡಲಾಗಿದೆ. ಘಟನೆ ನಡೆದಾಗ ಸ್ಥಳದಲ್ಲಿ ಇಲ್ಲದ ಕಾರಣಕ್ಕೆ ಇನ್‌ಸ್ಪೆಕ್ಟರ್ ಸಸ್ಪೆಂಡ್ ಮಾಡಲಾಗಿದೆೆ ಎಂದು ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಜೊತೆಗೆ ಅಡಿಷನಲ್ ಎಸ್ಪಿ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ.

Basangouda Patil Yatnal: ಮದ್ದೂರಿನಲ್ಲಿ ಹಿಂದೂ ಫೈರ್‌ ಬ್ರ್ಯಾಂಡ್‌ ಯತ್ನಾಳ್‌ ಗರ್ಜನೆ; ಹೊಸ ಪಕ್ಷ ಘೋಷಣೆ

ಮದ್ದೂರಿನಲ್ಲಿ ಹೊಸ ಪಕ್ಷ ಘೋಷಿಸಿದ ಯತ್ನಾಳ್‌

ಮಂಡ್ಯ ಜಿಲ್ಲೆಯ ಮದ್ದೂರಿಗೆ ಭೇಟಿ ನೀಡಿದ ಹಿಂದೂ ಫೈರ್ ಬ್ರ್ಯಾಂಡ್, ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪಕ್ಷ ಘೋಷಿಸಿದ್ದಾರೆ. ʼʼನಾನು ಪ್ರತಾಪ್‌ ಸಿಂಹ ಸೇರಿ ಕರ್ನಾಟಕ ಹಿಂದೂ ಪಾರ್ಟಿ ಕಟ್ಟುತ್ತೇವೆ. ಜೆಸಿಬಿ ನಮ್ಮ ಪಕ್ಷದ ಗುರುತುʼʼ ಎಂದು ಅವರು ಹೇಳಿದ್ದಾರೆ.

Maddur Stone Pelting: ಮದ್ದೂರು ಕಲ್ಲು ತೂರಾಟ ಪ್ರಕರಣ; 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಮದ್ದೂರು ಕಲ್ಲು ತೂರಾಟ; 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Maddur Stone Pelting: ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಸೆ.7ರಂದು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿತ್ತು. ಘಟನೆಯಲ್ಲಿ ನಾಲ್ವರು ಹೋಮ್‌ಗಾರ್ಡ್​​ಗಳು ಸೇರಿ 8 ಜನರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 22 ಆರೋಪಿಗಳನ್ನು ಬಂಧಿಸಲಾಗಿದೆ.

Pralhad Joshi: ಮದ್ದೂರು ಕಲ್ಲು ತೂರಾಟ ಪ್ರಕರಣ; ಗಲಭೆ ತಡೆಗಟ್ಟುವ ಯೋಗ್ಯತೆಯೇ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕಿಲ್ಲ: ಜೋಶಿ ಕಿಡಿ

ಗಲಭೆ ತಡೆಗಟ್ಟುವ ಯೋಗ್ಯತೆಯೇ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ ಕಿಡಿ

Pralhad Joshi: ಹಿಂದೂ ವಿರೋಧಿಗಳ ಮೇಲೆ ಕ್ರಮ ಕೈಗೊಳ್ಳುವ ಹಾಗೂ ಗಲಭೆ ತಡೆಯಲು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಯೋಗ್ಯತೆ ಇಲ್ಲದ ಈ ಸರ್ಕಾರ ಅಮಾಯಕರ ಮೇಲೆ, ಗಣೇಶ ಭಕ್ತರ ಮೇಲೆ ಲಾಠಿ ಪ್ರಹಾರ ಮಾಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Loading...