ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಂಡ್ಯ

Mandya Student Death: ಶಾಲೆಯಲ್ಲಿ ಬಿಸಿಯೂಟ ಸೇವಿಸುತ್ತಿದ್ದಾಗಲೇ ಹೃದಯಾಘಾತವಾಗಿ ವಿದ್ಯಾರ್ಥಿ ಸಾವು!

ಬಿಸಿಯೂಟ ಸೇವಿಸುತ್ತಿದ್ದಾಗಲೇ ಹೃದಯಾಘಾತವಾಗಿ ವಿದ್ಯಾರ್ಥಿ ಸಾವು!

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿ ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಇತರ ಮಕ್ಕಳೊಂದಿಗೆ ಬಿಸಿಯೂಟ ಮಾಡುತ್ತಿದ್ದಾಗ ಏಕಾಏಕಿ ಮೂರ್ಛೆಹೋಗಿದ್ದಾನೆ. ಆತನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗಿಲ್ಲ. ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಮಂಡ್ಯ ಕಾರಾಗೃಹದಲ್ಲಿ ಕೈದಿಗೆ ರಾಜಾತಿಥ್ಯ ಕೇಸ್‌: ಜೈಲು ಅಧೀಕ್ಷಕಿ ಶಾಂತಮ್ಮ ವರ್ಗಾವಣೆ

ಕೈದಿಗೆ ರಾಜಾತಿಥ್ಯ ಕೇಸ್‌: ಜೈಲು ಅಧೀಕ್ಷಕಿ ಶಾಂತಮ್ಮ ವರ್ಗಾವಣೆ

ವಿಚಾರಣಾಧೀನ ಕೈದಿಯೊಬ್ಬನಿಗೆ ಆಸ್ಪತ್ರೆಯಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಶಾಂತಮ್ಮ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಡಿಜಿಪಿ ಅಲೋಕ್ ಕುಮಾರ್ ಈ ಕ್ರಮ ಕೈಗೊಂಡಿದ್ದಾರೆ.

Mandya Beggar woman: ಮಂಡ್ಯದಲ್ಲಿ ಮತ್ತೊಬ್ಬ ಶ್ರೀಮಂತ ಭಿಕ್ಷುಕಿ ಪತ್ತೆ; ಮನೆಯಲ್ಲಿ ರಾಶಿ ರಾಶಿ ಹಣ!

ಮಂಡ್ಯದಲ್ಲಿ ಮತ್ತೊಬ್ಬ ಶ್ರೀಮಂತ ಭಿಕ್ಷುಕಿ; ಮನೆಯಲ್ಲಿ ಮೂಟೆಗಟ್ಟಲೆ ಹಣ!

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪೂರ್ಣಯ್ಯ ಬೀದಿಯ ಮನೆಯೊಂದರಲ್ಲಿ ರಾಶಿ ರಾಶಿ ಹಣ ಪತ್ತೆಯಾಗಿದೆ. ವೃದ್ಧೆಯೊಬ್ಬರು ಹಲವು ವರ್ಷಗಳಿಂದ ಒಂಟಿಯಾಗಿ ಮನೆಯಲ್ಲಿ ವಾಸವಾಗಿದ್ದರು. ಆದರೆ, ಅವರು ಹೊರಗೆ ಬಾರದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ದೊಡ್ಡ ಮೊತ್ತದ ಹಣ ಪತ್ತೆಯಾಗಿದೆ.

ಬಂಧಿತ ಸರ್ಕಾರಿ ಅಧಿಕಾರಿ ಜೈಲಿನಲ್ಲಿರಬೇಕಾದ ಬದಲು ಗೆಳತಿಯೊಂದಿಗೆ ಆಸ್ಪತ್ರೆಯಲ್ಲಿ ಪತ್ತೆ: ನ್ಯಾಯಾಧೀಶರು ಗರಂ

ಬಂಧಿತ ಅಧಿಕಾರಿ ಗೆಳತಿಯೊಂದಿಗೆ ಆಸ್ಪತ್ರೆಯಲ್ಲಿ ಕಳ್ಳಾಟ

Government officer in hospital: ಕರ್ನಾಟಕ ಲೋಕಾಯುಕ್ತರಿಂದ ಬಂಧನಕ್ಕೊಳಗಾಗಿದ್ದ ಸರ್ಕಾರಿ ಅಧಿಕಾರಿಯೊಬ್ಬರಿಗೆ ಮಂಡ್ಯ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ವಿಐಪಿ ಸೌಲಭ್ಯ ನೀಡಲಾಗುತ್ತಿರುವುದು ಪತ್ತೆಯಾಗಿದೆ. ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ. ಚಂದ್ರಶೇಖರ್ ಹಠಾತ್ ತಪಾಸಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಹೈಕೋರ್ಟ್ ಹೇಳಿದೆ ಜಾಹೀರಾತಲ್ಲಿದೆ: ಎಚ್.ಡಿ.ಕುಮಾರಸ್ವಾಮಿ ನೈಸ್‌ ಉವಾಚ

ಹೈಕೋರ್ಟ್ ಹೇಳಿದೆ ಜಾಹೀರಾತಲ್ಲಿದೆ: ಎಚ್.ಡಿ.ಕುಮಾರಸ್ವಾಮಿ ನೈಸ್‌ ಉವಾಚ

ಮಂಡ್ಯದ ಮೇಲುಕೋಟೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಾಹೀರಾತನ್ನು ಯಾರು ಕೂಡ ಕಲ್ಪನೆ ಮಾಡಿ ಕೊಟ್ಟಿಲ್ಲ. ಇತ್ತೀಚೆಗೆ ಹೈಕೋರ್ಟ್‌ʼನ ದ್ವಿಸದಸ್ಯ ಪೀಠ ನೈಸ್ ಯೋಜನೆ ಬಗ್ಗೆ ಕಟುವಾದ ಅಭಿಪ್ರಾಯಗಳನ್ನು ದಾಖಲಿಸಿದೆ. ಅದೇ ಇವತ್ತು ಜಾಹೀರಾತು ರೂಪದಲ್ಲಿ ಪ್ರಕಟವಾಗಿದೆ. ಈ ಸರಕಾರ ನೈಸ್ ಯೋಜನೆಯ ಹೆಸರಿನಲ್ಲಿ ಆ ಕಂಪನಿ ಜತೆ ಶಾಮೀಲಾಗಿದೆ ಎಂದಿದ್ದಾರೆ.

Mandya News: ಮಂಡ್ಯದಲ್ಲಿ ಮೃತಪಟ್ಟ ಭಿಕ್ಷುಕಿ ಮನೆಯಲ್ಲಿ ಮೂಟೆಗಟ್ಟಲೆ ಹಣ; ಸಂಬಂಧಿಕರು ಶಾಕ್!

ಮಂಡ್ಯದಲ್ಲಿ ಮೃತಪಟ್ಟ ಭಿಕ್ಷುಕಿ ಮನೆಯಲ್ಲಿ ಮೂಟೆಗಟ್ಟಲೆ ಹಣ!

Beggar Woman Dies in Mandya: ವೃದ್ಧೆಯ ಸಾವಿನ ನಂತರ ಸಂಬಂಧಿಕರು ಹಾಗೂ ಸ್ಥಳೀಯರು ಸೇರಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ನಂತರ, ಅವರ ಮನೆಗೆ ತೆರಳಿ ಪರಿಶೀಲಿಸಿದಾಗ ಲಕ್ಷಾಂತರ ರೂಪಾಯಿ ಹಣ ಇರುವುದು ಕಂಡು ಅಲ್ಲಿನ ಜನ ಶಾಕ್‌ ಆಗಿದ್ದಾರೆ.

NICE Road toll row: ನೈಸ್ ಟೋಲ್ ವಿಷಯದಲ್ಲಿ ನಾನು ಪ್ರಚೋದಿಸುತ್ತಿಲ್ಲ, ಇಷ್ಟೊತ್ತಿಗೆ ಜನರೇ ನುಗ್ಗಬೇಕಿತ್ತು: ಎಚ್‍.ಡಿ.ಕುಮಾರಸ್ವಾಮಿ ಕಿಡಿ

ನೈಸ್ ರೋಡ್‌ ಟೋಲ್‌ಗೆ ಇಷ್ಟೊತ್ತಿಗೆ ಜನರೇ ನುಗ್ಗಬೇಕಿತ್ತು: ಎಚ್‍ಡಿಕೆ ಕಿಡಿ

ನೈಸ್ ಯೋಜನೆ ರಾಜ್ಯದಲಿಯೇ ಅತಿದೊಡ್ಡ ಹಗರಣ ಎಂದರೆ ತಪ್ಪಲ್ಲ. ಈ ಸರ್ಕಾರ ನೈಸ್ ಯೋಜನೆಯ ಹೆಸರಿನಲ್ಲಿ ಆ ಕಂಪನಿ ಜತೆ ಶಾಮೀಲಾಗಿದೆ. ಇದೊಂದೇ ಅಲ್ಲ, ಹಿಂದಿನ ಸರ್ಕಾರಗಳು ಹಾಗೂ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಪಲ್ಟಿ;  ಇಬ್ಬರು ಸಾವು, 20 ಜನರಿಗೆ ಗಾಯ

ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಪಲ್ಟಿ

Bus Accident: ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ಹೈವೇಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Mandya News: ಕಾರು ಅಪಘಾತದಲ್ಲಿ ಯುವತಿ ಅನುಮಾನಾಸ್ಪದ ಸಾವು; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಆರೋಪ!

ಯುವತಿ ಅನುಮಾನಾಸ್ಪದ ಸಾವು; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಆರೋಪ!

ಹುಟ್ಟುಹಬ್ಬ ಆಚರಣೆ ನೆಪದಲ್ಲಿ ಮಗಳನ್ನು ಕರೆದೊಯ್ದ ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮಗಳು ಅದಕ್ಕೆ ಒಪ್ಪದಿದ್ದಾಗ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Karnataka Drought: ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಎಚ್.ಡಿ.ಕುಮಾರಸ್ವಾಮಿ ಆರೋಪ

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಎಚ್‌ಡಿಕೆ

ರಾಜ್ಯದಲ್ಲಿ ಮತ್ತೆ ರೈತರ ಆತ್ಮಹತ್ಯೆ ಸರಣಿ ಆರಂಭವಾಗಿದೆ. ನೂರಾರು ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. ಸಾಕಷ್ಟು ಕಡೆ ಸಂಪೂರ್ಣ ಬೆಳೆ ಹಾನಿಯಾಗಿದೆ. ಈ ಸರ್ಕಾರದವರು ನೋಡಿದರೆ ರೈತರ ನೆರವಿಗೆ ಹೋಗುವುದನ್ನು ಬಿಟ್ಟು ಹೊಲದಲ್ಲಿ ನಿಂತು ಫೋಟೋಗೆ ಪೋಸ್ ಕೊಟ್ಟು ಬರುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ದೊಂಬರಾಟ ಬಿಡಿ, ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಿ: ಸಿಎಂಗೆ ಡಿಕೆಶಿಗೆ ಯಡಿಯೂರಪ್ಪ ಆಗ್ರಹ

ದೊಂಬರಾಟ ಬಿಡಿ, ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಿ: ಬಿಎಸ್‌ವೈ

BS Yediyurappa: ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಾಮಾಣಿಕರಾಗಿದ್ದರೆ ಹನಿ ನೀರನ್ನೂ ಕೆಆರ್‌ಎಸ್‍ನಿಂದ ಬಿಡಲ್ಲ; ಅಗತ್ಯ ಬಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುತ್ತಿದ್ದರು. ಆದರೆ ಅವರು ಅದನ್ನು ಹೇಳದೆ ರಾಜಕೀಯ ದೊಂಬರಾಟ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

Cauvery water Dispute: ಕಾವೇರಿ ಕಿಚ್ಚು; CWRC ಆದೇಶದ ವಿರುದ್ಧ ಭುಗಿಲೆದ್ದ ರೈತರು, ಕನ್ನಡಪರ ಸಂಘಟನೆಗಳ ಆಕ್ರೋಶ

ಕಾವೇರಿ ಕಿಚ್ಚು; ಭುಗಿಲೆದ್ದ ರೈತರು, ಕನ್ನಡಪರ ಸಂಘಟನೆಗಳ ಆಕ್ರೋಶ

ತಮಿಳುನಾಡಿನ ಸಿಎಂ ಕರ್ನಾಟಕಕ್ಕೆ ಬಂದು ನಮ್ಮ ಜಲಾಶಯಗಳ ಸ್ಥಿತಿ ನೋಡಲಿ. ಮಳೆ ಇಲ್ಲದ ಕಾರಣ ನಮ್ಮ ಜಲಾಶಯಗಳಲ್ಲೂ ನೀರಿಲ್ಲ. ಕುಡಿಯುವ ನೀರಿಗೂ ಆಹಾಕಾರ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ನೀರು ಕೊಡಲು ಆಗಲ್ಲ ಎಂದು ಕರವೇ ಅಧ್ಯಕ್ಷ ಟಿ.ಎ ನಾರಾಯಣ ಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Siddaramaiah: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆಯಲ್ಲಿ‌ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಅವರು ಘೋಷಿಸಿದರು.

ಮಂಡ್ಯ ನಗರ ಸಾರಿಗೆ ಇಲ್ಲದೇ ಜನತೆ ಹೈರಾಣ !

ಮಂಡ್ಯ ನಗರ ಸಾರಿಗೆ ಇಲ್ಲದೇ ಜನತೆ ಹೈರಾಣ !

ನಗರದಲ್ಲಿನ ಬಡ ಕಾಲೇಜು ವಿದ್ಯಾರ್ಥಿಗಳು, ನಾಗರೀಕರು, ವೃದ್ಧರು ಖಾಸಗಿ ವ್ಯವಸ್ಥೆಯನ್ನೇ ಅವಲಂಬಿ ಸುವಂತೆ ಪರಿಸ್ಥಿತಿ ನಿರ್ಮಿಸಲಾಗಿದೆ. ಇದಕ್ಕೆ ನಗರದಲ್ಲಿದ್ದ “ಮಿಡಿ ಬಸ್" ವ್ಯವಸ್ಥೆಯನ್ನು ಸ್ಥಗಿತ ಗೊಳಿಸಿರುವುದೇ ಕಾರಣ. ಕೋವಿಡ್ ಸಂದರ್ಭಕ್ಕೂ ಮೊದಲು ನಗರದ ಬಡವಾಸಿಗಳಿಗೆ ಅನುಕೂಲ ವಾಗುವಂತೆ ಸಾಮಾನ್ಯ ಗಾತ್ರಕ್ಕಿಂತ ಸಣ್ಣ ಗಾತ್ರದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

Cauvery River Tragedy: ಫೋಟೊ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೊ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಮುಳುಗಿ ಐವರ ಸಾವು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಬುಧವಾರ ಸಂಜೆ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಇಳಿದು ಫೋಟೋಗೆ ಪೋಸ್ ನೀಡುತ್ತಿದ್ದ ವೇಳೆ ನೀರಿನ ಸೆಳೆತ ಹೆಚ್ಚಾಗಿ, ಒಬ್ಬರ ರಕ್ಷಣೆಗೆ ಮತ್ತೊಬ್ಬರು ಮುಂದಾದ ಪರಿಣಾಮ ಐವರು ನೀರಿನಲ್ಲಿ ಮುಳುಗಿ ದುರಂತ ಸಂಭವಿಸಿದೆ.

ಪದ್ಮಶ್ರೀ ಪುರಸ್ಕೃತ ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಸೂಕ್ತ ಜಾಗ, ಕಟ್ಟಡ ವ್ಯವಸ್ಥೆಗೆ ಸಿಎಂ ಸೂಚನೆ

ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಸೂಕ್ತ ಜಾಗ, ಕಟ್ಟಡ ವ್ಯವಸ್ಥೆ: ಸಿಎಂ

Ankegowda M: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಸೋಮವಾರ ಭೇಟಿ ಮಾಡಿದ ಅಂಕೇಗೌಡ ಅವರು ಪುಸ್ತಕಗಳಿಗೆ ಸೂಕ್ತ ವ್ಯವಸ್ಥೆಗೆ ಮನವಿ ಮಾಡಿದ್ದಾರೆ. ಈ ವೇಳೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಅಂಕೇಗೌಡರ ಪುಸ್ತಕ ಮನೆಗೆ ಸೂಕ್ತ ಜಾಗ ಹುಡುಕಿ, ಸುಸಜ್ಜಿತ ಕಟ್ಟಡ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Bidadi Township: ನನ್ನ ಹೋರಾಟ ರೈತರ ಪರ, ಯಾರೋ ಒಬ್ಬರ ವಿರುದ್ಧವಲ್ಲ: ಎಚ್.ಡಿ.ಕುಮಾರಸ್ವಾಮಿ

ನಾನು ರೈತರ ಭೂಮಿ ಉಳಿಸಿದ್ದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ

ಕಾಂಗ್ರೆಸ್‌ ಪಕ್ಷದ ಕೆಲವರು ನಾನು ರೆಡ್ ಜೂನ್ ಮಾಡಿದ್ದರಿಂದಲೇ ಬಿಡದಿ ಭಾಗದಲ್ಲಿ ರೈತರ ಭೂಮಿ ಉಳಿದುಕೊಂಡಿದೆ, ಇಲ್ಲವಾಗಿದ್ದಿದ್ದರೆ ಈ ವೇಳೆಗೆ ಇಡೀ ಭೂಮಿಯಲ್ಲ ರಿಯಲ್ ಎಸ್ಟೇಟ್ ಕುಳಗಳ ಪಾಲಾಗುತ್ತಿತ್ತು ಎಂದು ಹೇಳಿದ್ದಾರೆ. ಇದರಲ್ಲಿ ಯಾವುದು ಸತ್ಯ ಎಂಬುದನ್ನು ಜನರೇ ಅರ್ಥ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Mekedatu Dam Project: ಮೇಕೆದಾಟು ಎರಡು ರಾಜ್ಯಗಳಿಗೂ ಅನುಕೂಲಕರ; ತಮಿಳುನಾಡು ರಾಜಕೀಯ ನಾಯಕರ ವಿರುದ್ಧ ಎಚ್‌ಡಿಕೆ ಕಿಡಿ

ಮೇಕೆದಾಟು ಎರಡು ರಾಜ್ಯಗಳಿಗೂ ಅನುಕೂಲಕರ: ಎಚ್‌ಡಿಕೆ

ತಮಿಳುನಾಡು ಕ್ಯಾತೆ ತೆಗೆಯುತ್ತಿರುವುದು ಇದೇ ಮೊದಲಲ್ಲ. ಕಳೆದ 50 ವರ್ಷದಿಂದಲೂ ಕಾವೇರಿ ವಿಚಾರದಲ್ಲಿ ಸಮಸ್ಯೆ ಸೃಷ್ಟಿ ಮಾಡುತ್ತಿದೆ. ತಮಿಳುನಾಡು ರಾಜ್ಯಕ್ಕೆ ನಿಗದಿಗಿಂತ ಎರಡು ಪಟ್ಟು ನೀರು ಕೊಟ್ಟಿದ್ದು ಇದೆ. ಅವರು ಅದನ್ನು ನೆನಪು ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

1999ರಲ್ಲಿ ಕೇವಲ 3 ಎಕರೆ ಪಿತ್ರಾರ್ಜಿತ ಆಸ್ತಿ 2018ಕ್ಕೆ 1400 ಕೋಟಿ ಹೇಗಾಯ್ತು?: ಸಿಎಂ ಡಿಕೆಶಿಗೆ ಎಚ್‌ಡಿಕೆ ಪ್ರಶ್ನೆ

1999ರಲ್ಲಿ 3 ಎಕರೆ ಆಸ್ತಿ 2018ಕ್ಕೆ 1400 ಕೋಟಿ ಹೇಗಾಯ್ತು?: ಎಚ್‌ಡಿಕೆ

ಬಿಡದಿ ಟೌನ್‌ಶೀಪ್‌ ಹೆಸರಲ್ಲಿ ನೇರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವೇ ಜನರ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ನೇರವಾಗಿ ಮುಖ್ಯಮಂತ್ರಿಗಳೇ ರಿಯಲ್ ಎಸ್ಟೇಟ್ ಮಾಫಿಯಾ ದೊರೆಗಳ ಜೊತೆ ಕೈ ಜೋಡಿಸಿ ಈ ದಂಧೆ ನಡಿಸುತ್ತಿದ್ದಾರೆ. ಬಹುಪಾಲು ರೈತರು ಭೂಮಿ ಕೊಡಲು ತಯಾರಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

Mandya News: ಮಂಡ್ಯದಲ್ಲಿ ಘೋರ ಘಟನೆ; ನೀರಿನ ಸಂಪ್‌ಗೆ ಬಿದ್ದು 2 ವರ್ಷದ ಮಗು ಸಾವು

ಮಂಡ್ಯದಲ್ಲಿ ಘೋರ ಘಟನೆ; ನೀರಿನ ಸಂಪ್‌ಗೆ ಬಿದ್ದು 2 ವರ್ಷದ ಮಗು ಸಾವು

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್‌ಗೆ ಬಿದ್ದು ಮೃತಪಟ್ಟಿದೆ. ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ಮೃತಪಟ್ಟಿದ್ದು, ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯಸಭೆಗೆ ಹೋಗಲು ದೇವೇಗೌಡರು ಅರ್ಜಿ ಹಾಕಿರಲಿಲ್ಲ; ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಎಂದ ಎಚ್‌ಡಿಕೆ

ರಾಜ್ಯಸಭೆಗೆ ಹೋಗಲು ದೇವೇಗೌಡರು ಅರ್ಜಿ ಹಾಕಿಲ್ಲ: ಎಚ್‌ಡಿಕೆ ಸ್ಪಷ್ಟನೆ

HD Kumaraswamy: ರಾಜ್ಯಸಭೆ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಮಾತನಾಡುತ್ತಿದ್ದಾರೆ. ದೇವೇಗೌಡರ ಬಗ್ಗೆ ಎಲ್ಲಿಲ್ಲದ ಅನುಕಂಪ ಬಂದಿದೆ. ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಬಿರುಕು ತರಲು ಕಾಂಗ್ರೆಸ್ ವಿಫಲ ಪ್ರಯತ್ನ ನಡೆಸುತ್ತಿದೆ. ರಾಜ್ಯಸಭೆ ಟಿಕೆಟ್‌‌ಗೆ ದೇವೇಗೌಡರು ಅರ್ಜಿಯೇ ಹಾಕಿಲ್ಲ ಎಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಟ್ಟೆ ವ್ಯಾಪಾರದಲ್ಲಿ ನಷ್ಟ; ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು

ಮಂಡ್ಯದ ನೆಹರು ನಗರದಲ್ಲಿ ಘಟನೆ ನಡೆದಿದೆ. ವ್ಯಾಪಾರದಲ್ಲಿ ನಷ್ಟದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವ್ಯಾಪಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಮಂಡ್ಯ ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವು

ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವು

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ. ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಸಾವನಪ್ಪಿದ ಯುವಕರು.

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ; ನ್ಯಾ. ಬಿ. ವೀರಪ್ಪ

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ

ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

Loading...