ಬಿಸಿಯೂಟ ಸೇವಿಸುತ್ತಿದ್ದಾಗಲೇ ಹೃದಯಾಘಾತವಾಗಿ ವಿದ್ಯಾರ್ಥಿ ಸಾವು!
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿ ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಇತರ ಮಕ್ಕಳೊಂದಿಗೆ ಬಿಸಿಯೂಟ ಮಾಡುತ್ತಿದ್ದಾಗ ಏಕಾಏಕಿ ಮೂರ್ಛೆಹೋಗಿದ್ದಾನೆ. ಆತನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗಿಲ್ಲ. ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.