ತುಮಕೂರು: ಕರೋನಾದಿಂದ ಮೃತಪಟ್ಟವರಿಗೆ ಸರಕಾರದ ಮಾರ್ಗಸೂಚಿಯನ್ವಯ ಪರಿಹಾರ ನೀಡಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀ ಕರಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಜಿಲ್ಲಾ ಬಾಲ ಭವನದಲ್ಲಿ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಯಂತ್ರ ಚಾಲಿತ ತ್ರಿಚಕ್ರ ವಾಹನ ಮತ್ತು ಇಲಾಖೆಯ ವಿವಿಧ ಯೋಜನೆಯಡಿ ಇತರೆ ಸೌಲಭ್ಯಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪರಿಹಾರ ವಿತರಿಸಲು ಸರಕಾರ ಕೆಲವು ಮಾರ್ಗಸೂಚಿ ಪ್ರಕಟಿಸಿದೆ. ಬಿಪಿಎಲ್, ಎಪಿಎಲ್ ಕಾರ್ಡುದಾರರಿಗೆ ಪರಿಹಾರ ಧನ ನಿಗದಿಪಡಿಸಲಾಗಿದೆ. ಅದರಂತೆ ಮೃತಪಟ್ಟವರಿಗೆ ಪರಿಹಾರ ನೀಡಲಾಗುವುದು ಎಂದರು.
ದೇಹದ ಒಂದು ಅಂಗದ ನ್ಯೂನ್ಯತೆ ಇದ್ದರೆ ದೇವರು ಮತ್ತೊಂದು ಅಂಗದಲ್ಲಿ ಶಕ್ತಿ ಸಾಮರ್ಥ್ಯ ಕೊಟ್ಟಿರುತ್ತಾರೆ. ದೇಹಕ್ಕೆ ಊನ ವಾದರೂ ಮಾನಸಿಕವಾಗಿ ದೃಢವಾಗಿರುವುದು ತುಂಬಾ ಮುಖ್ಯ. ಮನುಷ್ಯ ತನ್ನ ಅಂಗವೈಕಲ್ಯವನ್ನು ಮೆಟ್ಟಿ ನಿಂತು ಸ್ವಾಭಿ ಮಾನದಿಂದ ಬದುಕು ಕಟ್ಟಿಕೊಳ್ಳಬೇಕು. ನಮ್ಮ ಸಾಮರ್ಥ್ಯವನ್ನು ನಾವೇ ಕಂಡುಕೊಳ್ಳುವ ಮೂಲಕ ಅವಲಂಬನೆಯನ್ನು ತ್ಯಜಿಸಬೇಕು. ಮಹಾನ್ ವ್ಯಕ್ತಿಗಳನ್ನು ಸ್ಮರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ವಿಕಲಚೇತನರಿಗೆ ಸೌಲಭ್ಯ ವಿತರಿಸುತ್ತಿರುವುದು ಬಹಳ ಖುಷಿ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಮಾಜಿ ರಾಜ್ಯ ಸಭಾ ಸದಸ್ಯೆ ಹಾಗೂ ಖ್ಯಾತ ಹಿರಿಯ ರಂಗ ಕಲಾವಿದೆ ಬಿ.ಜಯಶ್ರೀ ಮಾತನಾಡಿ, ಗುಬ್ಬಿ ನಾಟಕ ಕಂಪನಿಯಲ್ಲಿ ನಟನೆ ಮಾಡುವ ಮೂಲಕ ಜೀವನ ಕಟ್ಟಿಕೊಂಡ ನಮ್ಮ ತಾಯಿ ನಟನೆ ಮಾಡುವ ಸಂದರ್ಭದಲ್ಲಿ ವಿದ್ಯುತ್ ಅವಘಡದಿಂದ ಅಂಗ ವೈಫಲ್ಯಕ್ಕೆ ತುತ್ತಾದರು. ಆದರೂ ಛಲ ಬಿಡದೆ ವ್ಹೀಲ್ ಛೇರ್ ಮೇಲೆಯೇ ಯಾರೊಬ್ಬರ ಮೇಲೂ ಅವಲಂಬಿತರಾಗದೆ ನಾಟಕದಲ್ಲಿ ಪಾತ್ರ ಮಾಡುವ ಮೂಲಕ ತಮ್ಮ ಜೀವನವನ್ನು ಸವೆಸಿದರು. ಅವರಂತೆಯೇ ಪ್ರತಿಯೊಬ್ಬ ವಿಕಲಚೇತನರೂ ಆತ್ಮಸ್ಥೆöÊರ್ಯ ಕಳೆದುಕೊಳ್ಳದೆ ಸ್ವಾಭಿಮಾನಿಯಾಗಿ ಬದುಕುವ ಮೂಲಕ ಉಳಿದವರಿಗೂ ಮಾದರಿಯಾಗಬೇಕು. ಅಂತಹವ ರನ್ನು ನೋಡಿ ಇತರರೂ ಸ್ಫೂರ್ತಿಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ 15 ಹೊಲಿಗೆ ಯಂತ್ರ, 50 ಯಂತ್ರಚಾಲಿತ ತ್ರಿಚಕ್ರ ವಾಹನ, 15 ಬ್ರೆöÊಲ್ ಕಿಟ್ 8 ಟಾಕಿಂಗ್ ಲ್ಯಾಪ್ಟಾಪ್ ಸೇರಿದಂತೆ ಒಟ್ಟು 88 ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಶ್ರೀಧರ್, ಡಿಡಿಪಿಐ ಸಿ.ನಂಜಯ್ಯ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಅಪೌಷ್ಟಿಕ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಣೆಗೆ ಸೂಚನೆ: ನಂತರ ಜಿಲ್ಲೆಯಲ್ಲಿರುವ ಅಪೌಷ್ಟಿಕ ಮಕ್ಕಳ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ಪತ್ರಕತ್ರರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿ ಮಾತನಾಡಿದ ಸಚಿವ ಮಾಧುಸ್ವಾಮಿ ಜಿಲ್ಲೆಯಲ್ಲಿ ಸುಮಾರು 6000 ಮಕ್ಕಳನ್ನು ಅಪೌಷ್ಟಿಕ ಮಕ್ಕಳೆಂದು ಗುರುತಿಸಿದ್ದು, ಇವರಲ್ಲಿ ತೀವ್ರ ಅಪೌಷ್ಟಿಕತೆಯಿಂದ ಕೂಡಿರುವ 2000 ಮಕ್ಕಳಿಗೆ ಪೌಷ್ಠಿಕ ಆಹಾರ, ಸ್ಪಿರುಲಿನ ಚಿಕ್ಕಿ ವಿತರಣೆ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಸ್ಪಿರುಲಿನ ಚಿಕ್ಕಿ ಹಾಗೂ ಪೌಷ್ಟಿಕ ಆಹಾರವನ್ನು ಈಗಾಗಲೇ ಸರಬರಾಜು ಮಾಡಲಾಗಿದೆ. ಅಲ್ಲದೆ ಶಾಲೆಗಳಲ್ಲಿ ಮಕ್ಕಳಿಗೆ ವಿಶೇಷವಾಗಿ ಪೌಷ್ಟಿಕಯುಕ್ತ ಹಾಲಿನ ಪುಡಿಯನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ವಾತಾವರಣ ಬದಲಾವಣೆಯೂ ವೈರಲ್ ಫೀವರ್ ಹೆಚ್ಚಾಗಲು ಕಾರಣವಾಗಿದೆ. ಕೋವಿಡ್ ನಂತರ ಆರೋಗ್ಯ ಸೇವೆ ಉತ್ತಮ ವಾಗಿದೆ. ಎಲ್ಲ ರೀತಿಯ ವೈದ್ಯಕೀಯ ತಪಾಸಣೆಗಳನ್ನು ತಾಲೂಕು ಮಟ್ಟದಲ್ಲಿಯೂ ಮಾಡಲಾಗುತ್ತಿದೆ. ಈ ಮುಂಚೆ ಸಣ್ಣ ವೈರಲ್ ಪರೀಕ್ಷೆಗೂ ತುಮಕೂರಿಗೆ ಬರಬೇಕಾಗಿತ್ತು. ಪ್ರಸ್ತುತ ಎಲ್ಲ ತಾಲೂಕುಗಳಲ್ಲಿಯೂ ಆಮ್ಲಜನಿಕ ಸೇರಿದಂತೆ ವೈದ್ಯಕೀಯ ತಪಾಸಣೆಗೆ ಅವಕಾಶ ಕಲ್ಪಿಸಿರುವುದರಿಂದ ಇನ್ನು ಮುಂದೆ ಯಾವುದೇ ಆರೋಗ್ಯ ಸಮಸ್ಯೆ ಬಾಧಿಸುವುದಿಲ್ಲ ಎಂದರು.