ಸರ್ಜರಿಯಾದ ಎರಡೇ ದಿನಕ್ಕೆ ಟೆಂಪಲ್ ರನ್ ಆರಂಭಿಸಿದ ನಟ ರಾಮ್ ಚರಣ್
'ಪೆದ್ದಿ' ಚಿತ್ರೀಕರಣದ ವೇಳೆ ಮಣಿಕಟ್ಟಿನ ಗಾಯಕ್ಕೆ ಒಳಗಾಗಿದ್ದ ನಟ ರಾಮ್ ಚರಣ್ ಅವರಿಗೆ ಕೊಯಮತ್ತೂರಿನ ಗಂಗಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ತಕ್ಷಣವೇ ಪತ್ನಿ ಉಪಾಸನಾ ಜೊತೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.