ಸಿಬಿಐ ವಿಚಾರಣೆಗೆ ಹಾಜರಾದ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್
Karur Stampede: ಕರೂರು ಕಾಲ್ತುಳಿತ ಪ್ರಕರಣದಲ್ಲಿ 41 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ನಟ–ರಾಜಕಾರಣಿ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ದೆಹಲಿಯಲ್ಲಿ ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಸಿಬಿಐ ತನಿಖೆ ನಡೆಸುತ್ತಿದ್ದು, ಕಾರ್ಯಕ್ರಮ ಆರಂಭ ಸಮಯ ಮತ್ತು ವಿಜಯ್ ಆಗಮನದ ನಡುವೆ ಸಂಭವಿಸಿದ ಏಳು ಗಂಟೆಗಳ ವಿಳಂಬವೇ ಜನಸಂದಣಿ ನಿಯಂತ್ರಣ ತಪ್ಪಲು ಕಾರಣವಾಯಿತೇ ಎಂಬುದನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.