ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮನರಂಜನೆ

Second Case Of Seetharam Review: ಸರಣಿ ಕೊಲೆಗಳ ಕೇಸ್‌ನಲ್ಲಿ ಆದಿಯಿಂದ ಅಂತ್ಯದವರೆಗೂ ರೋಚಕವಾಗಿ ಸಾಗುವ ಸೀತಾರಾಮ್‌ನ ತನಿಖೆ!

ʻಸೆಕೆಂಡ್‌ ಕೇಸ್‌ ಆಫ್‌ ಸೀತಾರಾಮ್‌ʼ ಸಿನಿಮಾ ಹೇಗಿದೆ? ರೇಟಿಂಗ್‌ ಎಷ್ಟು?

ʻಸೆಕೆಂಡ್‌ ಕೇಸ್‌ ಆಫ್‌ ಸೀತಾರಾಮ್‌ʼ ಚಿತ್ರವು ಈ ಹಿಂದೆ ಬಂದಿದ್ದ ʻಸೀತಾರಾಮ್ ಬಿನೋಯ್ʼ ಸರಣಿಯ ಎರಡನೇ ಭಾಗವಾಗಿದ್ದು, ಮೊದಲ ಭಾಗಕ್ಕಿಂತಲೂ ಹೆಚ್ಚು ರೋಚಕವಾಗಿದೆ. ಮಲೆನಾಡಿನ ಹಿನ್ನೆಲೆಯಲ್ಲಿ ನಡೆಯುವ ಸರಣಿ ಕೊಲೆಗಳ ತನಿಖೆಯನ್ನು ಇನ್ಸ್‌ಪೆಕ್ಟರ್ ಸೀತಾರಾಮ್ ಹೇಗೆ ಮಾಡುತ್ತಾರೆ ಎಂಬುದು ಸಿನಿಮಾದ ಸಾರಾಂಶ.

Kichcha Sudeep: ರಾಜಮೌಳಿಯ ‘ವಾರಣಾಸಿ’ ಸಿನಿಮಾದಲ್ಲಿ ಸುದೀಪ್? ಪಾತ್ರ ಏನು?

ರಾಜಮೌಳಿಯ ‘ವಾರಣಾಸಿ’ ಸಿನಿಮಾದಲ್ಲಿ ಸುದೀಪ್? ಪಾತ್ರ ಏನು?

Sudeep: ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಮುಂಬರುವ ಚಿತ್ರ 'ವಾರಣಾಸಿ'ಯ ತಾರಾಗಣ ಮತ್ತು ಚಿತ್ರೀಕರಣದ ಸುತ್ತ ಭಾರಿ ಚರ್ಚೆ ನಡೆಯುತ್ತಿರುವಂತೆಯೇ, ಹೊಸ ಮಾಹಿತಿಯೊಂದು ಹೊರಬೀಳುತ್ತಿದೆ. ನಟ ಕಿಚ್ಚ ಸುದೀಪ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ವರದಿಗಳು ನಿಜವೇ ಎಂಬುದನ್ನು ತಯಾರಕರು ಇನ್ನೂ ದೃಢಪಡಿಸಿಲ್ಲ. 'ಬಾಹುಬಲಿ; ದಿ ಬಿಗಿನಿಂಗ್" ಚಿತ್ರದಲ್ಲಿ ಅಸ್ಲಾಂ ಖಾನ್ ಆಗಿ ಸುದೀಪ್ ಮಿಂಚಿದ್ದರು. ಇಡೀ 'ಬಾಹುಬಲಿ' ಸರಣಿ ಸಿನಿಮಾ ಶುರುವಾಗುವುದೇ ಕಟ್ಟಪ್ಪ ಹಾಗೂ ಅಸ್ಲಾಂ ಖಾನ್ ಭೇಟಿ ಸನ್ನಿವೇಶದಿಂದ.

Shiva Rajkumar:  ಶಿವರಾಜ್‌ ಕುಮಾರ್‌ಗೆ 40 ವರ್ಷಗಳ ಸಿನಿ ಪಯಣದ ಸಂಭ್ರಮ! ಗೀತಾ ಪಿಕ್ಚರ್ಸ್ ಸ್ಪೆಷಲ್‌ ಪೋಸ್ಟ್‌

ಶಿವರಾಜ್‌ ಕುಮಾರ್‌ಗೆ 40 ವರ್ಷಗಳ ಸಿನಿ ಪಯಣದ ಸಂಭ್ರಮ!

Shivaraj Kumar: ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ಅವರು ಚಿತ್ರರಂಗಕ್ಕೆ ಪ್ರವೇಶಿಸಿ 40 ವರ್ಷಗಳು ಭರ್ತಿಯಾಗಿವೆ. 1986ರಲ್ಲಿ 'ಆನಂದ್' ಸಿನಿಮಾ ಮೂಲ ಶಿವಣ್ಣ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದರು. ಅಲ್ಲಿಂದ 'ರಥಸಪ್ತಮಿ', 'ಮನಮೆಚ್ಚಿದ ಹುಡುಗಿ' ಸೇರಿ ಮೂರು ಬ್ಯಾಕ್‌ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ಕೊಟ್ಟು ಹ್ಯಾಟ್ರಿಕ್ ಹೀರೋ ಆದರು. ಇಲ್ಲಿಂದ ಶಿವಣ್ಣ ತಿರುಗಿ ನೋಡಿದ್ದೇ ಇಲ್ಲ. 'ಜೋಗಯ್ಯ' ಸಿನಿಮಾ ಮೂಲಕ ಸೆಂಚುರಿ ಸ್ಟಾರ್ ಆದರು. ಇನ್ನು 150 ಸಿನಿಮಾಗಳ ಕಡೆಗೆ ಇವರ ಪಯಣ ಮುನ್ನುಗ್ಗುತ್ತಿದೆ.

Kannada Serial TRP: ಟಿಆರ್‌ಪಿ ಜಿದ್ದಾಜಿದ್ದಿನಲ್ಲಿ ಗೆದ್ದ ಸೀರಿಯಲ್ ಯಾವುದು?

ಟಿಆರ್‌ಪಿ ಜಿದ್ದಾಜಿದ್ದಿನಲ್ಲಿ ಗೆದ್ದ ಸೀರಿಯಲ್ ಯಾವುದು?

Kannada serial: ಕನ್ನಡ ಕಿರುತರೆಯಲ್ಲಿ ಧಾರಾವಾಹಿಗಳಿಗಿರುವ ಕ್ರೇಜ್‌ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ.'ಗಿಚ್ಚಿ ಗಿಲಿಗಿಲಿ ಜೂನಿಯರ್ಸ್' ಆರಂಭಗೊಂಡಿದೆ. ಹಾಗೇ, ಹೊಸ ಹೊಸ ಸೀರಿಯಲ್‌ಗಳು ಶುರುವಾಗಿವೆ. ಈ ವಾರ ಕೂಡ ಜೀ ಕನ್ನಡ ನಂ 1 ಸ್ಥಾನದಲ್ಲಿದೆ. ಆದರೆ, ಒಟ್ಟು ಟಿಆರ್‌ಪಿಯಲ್ಲಿ ಕುಸಿತ ಕಂಡಿದೆ ಸ್ಟಾರ್ ಸುವರ್ಣ, ಕಲರ್ಸ್ ಕನ್ನಡ ಎಲ್ಲವೂ ಮನರಂಜನಾ ವಾಹಿನಿಗಳು ಕುಸಿತ ಕಂಡಿವೆ. ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌.

Kamal Haasan: ಕಮಲ್ ಹಾಸನ್-ಶಿವಕಾರ್ತಿಕೇಯನ್ ಜೋಡಿಯ ಹೊಸ ಸಿನಿಮಾಗೆ ಟೈಟಲ್‌ ಫಿಕ್ಸ್‌!

ಕಮಲ್ -ಶಿವಕಾರ್ತಿಕೇಯನ್ ಜೋಡಿಯ ಹೊಸ ಸಿನಿಮಾಗೆ ಟೈಟಲ್‌ ಫಿಕ್ಸ್‌!

Seyon: ರಾಜ್ ಕಮಲ್ ಇಂಟರ್ನ್ಯಾಷನಲ್ ಹಾಗೂ ಟರ್ಮಿರಿಕ್ ಮೀಡಿಯಾ ಬ್ಯಾನರ್ ನಡಿ ಕಮಲ್ ಹಾಸನ್ ಹಾಗೂ ಆರ್ ಮಹೇಂದ್ರನ್ ನಿರ್ಮಾಣದಲ್ಲಿ ಸಿಯೋನ್ ಸಿನಿಮಾ ಮೂಡಿ ಬರ್ತಿದೆ. ಶಿವಕಾರ್ತಿಕೇಯನ್ ಹುಟ್ಟುಹಬ್ಬದ ವಿಶೇಷವಾಗಿ ಗ್ಲಿಂಪ್ಸ್ ಬಿಡುಗಡೆ ಮಾಡಲಾಗಿದೆ. ಹಣೆಯಲ್ಲಿ ವಿಭೂತಿ ಧರಿಸಿ, ಕೈಯಲ್ಲಿ ಕತ್ತಿ ಹಿಡಿದು ಶಿವಕಾರ್ತಿಕೇಯನ್ ಮಾಸ್ ಅವತಾರ ತಾಳಿದ್ದಾರೆ.

'ದಿ ಕೇರಳ ಸ್ಟೋರಿ 2'  ಚಿತ್ರತಂಡದ ವಿರುದ್ಧ ಪಿಣರಾಯಿ ವಿಜಯನ್ ಕೆಂಡ; ʻಸಿನಿಮಾ ಅಲ್ಲ, ಸುಳ್ಳು ಪ್ರಚಾರʼ ಎಂದ ಸಿಎಂ!

ʻದಿ ಕೇರಳ ಸ್ಟೋರಿ 2ʼ ಸಿನಿಮಾ ಮೇಲೆ ಸಿಎಂ ಪಿಣರಾಯಿ ವಿಜಯನ್ ಗರಂ!

ದಿ ಕೇರಳ ಸ್ಟೋರಿ 2 ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಈ ಸಿನಿಮಾವು ರಾಜ್ಯದ ಜಾತ್ಯತೀತ ಸಂಪ್ರದಾಯವನ್ನು ದುರ್ಬಲಗೊಳಿಸುವ ಮತ್ತು ಕೋಮು ದ್ವೇಷ ಹರಡುವ ಉದ್ದೇಶಪೂರ್ವಕ ಸಂಚು" ಎಂದು ಅವರು ಕರೆದಿದ್ದಾರೆ.

Sathish Ninasam: ಸದ್ದು ಮಾಡಿದ ʻದಿ ರೈಸ್‌ ಆಫ್‌ ಅಶೋಕʼ ಟ್ರೇಲರ್;‌ ಸಿನಿಪ್ರೇಮಿಗಳಿಗೆ ರವಿಚಂದ್ರನ್‌ ಕೊಟ್ರು ನೋಡಿ ಬೊಂಬಾಟ್‌ ಸಲಹೆ

The Rise Of Ashoka Trailer: ನೀನಾಸಂ ಸತೀಶ್‌ಗೆ ರವಿಮಾಮ ಹೇಳಿದ್ದೇನು?

The Rise of Ashoka: ಸತೀಶ್‌ ನೀನಾಸಂ ಅವರ ದಿ ರೈಸ್‌ ಆಫ್‌ ಅಶೋಕ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಸ್ಯಾಂಡಲ್‌ವುಡ್‌ನ ತಾರಾಬಳಗವೇ ಒಂದಾಗಿತ್ತು. ಸತೀಶ್ ನೀನಾಸಂ ಅವರ ಶ್ರಮವನ್ನು ಕೊಂಡಾಡಿದ ರವಿಚಂದ್ರನ್ ಅವರು, ವಿಮರ್ಶಕರ ದೃಷ್ಟಿಯಿಂದ ಸಿನಿಮಾ ನೋಡುವ ಬದಲು ಪ್ರೇಕ್ಷಕರಾಗಿ ಮೈಮರೆಯಲು ಸಲಹೆ ನೀಡಿದರು. ಫೆಬ್ರವರಿ 27ರಂದು ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಈ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ.

ʻಬಿಗ್‌ ಬಾಸ್‌ʼ ಗೆದ್ದ ಮೇಲೆ ಗಿಲ್ಲಿ ನಟನಿಗೆ ಸಿಕ್ಕಿತ್ತು ʻಕಾಟೇರʼ ಡೈರೆಕ್ಟರ್‌ ತರುಣ್‌ ಸುಧೀರ್‌ ಕಡೆಯಿಂದ ಅತ್ಯಮೂಲ್ಯ ಸಲಹೆ

ʻಬಿಗ್ ಬಾಸ್ʼ ವಿನ್ನರ್ ಗಿಲ್ಲಿ ನಟನಿಗೆ ತರುಣ್ ಸುಧೀರ್ ಹೇಳಿದ ಕಿವಿಮಾತೇನು?

ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ಗೆಲುವಿನ ನಂತರ ಸಖತ್ ಬ್ಯುಸಿಯಾಗಿದ್ದಾರೆ. ನಿರ್ದೇಶಕ ತರುಣ್ ಸುಧೀರ್ ಅವರು ಗಿಲ್ಲಿ ನಟನಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದು, ನಟನೆಗಿಂತ ಹೆಚ್ಚಾಗಿ ಬರವಣಿಗೆ ಮತ್ತು ನಿರ್ದೇಶನದತ್ತ ಗಮನ ಹರಿಸಲು ಸೂಚಿಸಿದ್ದಾರೆ. ಬಿಗ್ ಬಾಸ್ ಯಶಸ್ಸಿನ ನಂತರ ಉಂಟಾಗುತ್ತಿರುವ ಒತ್ತಡವನ್ನು ಸಂಭ್ರಮದ ಭಾಗವಾಗಿ ಸ್ವೀಕರಿಸುವಂತೆ ಗಿಲ್ಲಿಗೆ ತರುಣ್ ಕಿವಿಮಾತು ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ - ವಿಜಯ್‌ ದೇವರಕೊಂಡ ಮದುವೆಗೆ ಆಹ್ವಾನದ ಜೊತೆ ಉಡುಗೊರೆ; ಏನಿದೆ ವೆಡ್ಡಿಂಗ್‌ ಕಾರ್ಡ್‌ ಬಾಕ್ಸ್‌ನಲ್ಲಿ? ವಿಡಿಯೋ ವೈರಲ್‌

ರಶ್ಮಿಕಾ - ವಿಜಯ್ ಮದುವೆ ಆಹ್ವಾನದ ಜೊತೆ‌ ಗಿಫ್ಟ್‌ ಹ್ಯಾಂಪರ್ ಬಾಕ್ಸ್‌!

ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ಮದುವೆ ಆಮಂತ್ರಣ ಪತ್ರಿಕೆ ಮತ್ತು ಗಿಫ್ಟ್ ಹ್ಯಾಂಪರ್ ಬಾಕ್ಸ್ ಈಗ ಇಂಟರ್ನೆಟ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯ್‌ಪುರದಲ್ಲಿ ವಿಜಯ್ ದೇವರಕೊಂಡ ಜೊತೆ ಮದುವೆಯಾಗಲಿರುವ ರಶ್ಮಿಕಾ, ಆಹ್ವಾನಿತರಿಗೆ 'ನ್ಯಾಷನಲ್ ಕ್ರಶ್' ಪರ್ಫ್ಯೂಮ್ ಮತ್ತು 'ರೌಡಿ' ಬ್ರ್ಯಾಂಡ್ ಟಿ-ಶರ್ಟ್ ಇರುವ ವಿಶೇಷ ಬಾಕ್ಸ್ ಕಳುಹಿಸಿದ್ದಾರೆ.

ಫೆ.20 ರಂದು ಶಿರಸಿಯಲ್ಲಿ ಸರಿಗಮಪ ಲಿಟಲ್ ಚಾಂಪ್ಸ್ ಆಡಿಷನ್

ಫೆ.20 ರಂದು ಶಿರಸಿಯಲ್ಲಿ ಸರಿಗಮಪ ಲಿಟಲ್ ಚಾಂಪ್ಸ್ ಆಡಿಷನ್

ಸ ರಿ ಗ ಮ ಪ ಲಿಟಲ್ ಚಾಂಪ್ಸ್ ಆಡಿಷನ್ ಗಳು ಕರ್ನಾಟಕದ 31 ಜಿಲ್ಲೆಗಳಲ್ಲಿ ನಡೆಯಲಿದೆ. ಚೆನ್ನಾಗಿ ಹಾಡುವ ಮಕ್ಕಳು 3 ರಿಂದ 15 ವರ್ಷದ ಒಳಗಿದ್ದರೆ 3 ವಿಭಿನವಾದ ಹಾಡುಗಳನ್ನು ಕಲಿತು ಆಡಿಷನ್ ನಲ್ಲಿ ಭಾಗವಹಿಸಬಹುದಾಗಿದೆ. ಹಾಗೆಯೇ ಈ ಆಡಿಷನ್ ನಲ್ಲಿ ಭಾಗವ ಹಿಸಲು ಪಾಸ್ಪೋರ್ಟ್ ಸೈಜ್ ಫೋಟೋ, ಅಡ್ರೆಸ್ ಪ್ರೂಫ್ ಜೆರಾಕ್ಸ್ ಕಡ್ಡಾಯ.

ಉದಯೋನ್ಮುಖ ಕಲಾವಿದರಿಗಾಗಿ 'ಪರಮ್ ವಿಹಾರ': ಫೆಬ್ರವರಿ 22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

ಫೆಬ್ರವರಿ 22ರಂದು ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

Param Foundation: ಪರಮ್ ಫೌಂಡೇಶನ್ ವತಿಯಿಂದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 'ಪರಮ್ ಕಲ್ಚರ್' ಅಡಿಯಲ್ಲಿ 'ಪರಮ್ ವಿಹಾರ' ಎಂಬ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮವನ್ನು ಫೆಬ್ರವರಿ 22ರಂದು ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಪ್ರತಿಷ್ಠಿತ 'ಅಬಲಾಶ್ರಮ'ದಲ್ಲಿ ಸಂಜೆ 6 ಗಂಟೆಗೆ ಆಯೋಜಿಸಲಾಗಿದೆ.

Photos: ʻಗಿಚ್ಚಿ ಗಿಲಿಗಿಲಿʼ ಖ್ಯಾತಿಯ ಚಿಲ್ಲರ್‌ ಮಂಜು ಮದುವೆ ಫಿಕ್ಸ್;‌ ಹುಡುಗಿ ಯಾರು? ಎಂಗೇಜ್‌ಮೆಂಟ್‌ ಆಗಿದ್ದೆಲ್ಲಿ?

ಚಿಲ್ಲರ್ ಮಂಜು ಬದುಕಿಗೆ ಕಾರುಣ್ಯ ಎಂಟ್ರಿ: ಸದ್ದಿಲ್ಲದೆ ನಡೆದ ನಿಶ್ಚಿತಾರ್ಥ

ಕಲರ್ಸ್‌ ಕನ್ನಡ ವಾಹಿನಿಯ ʻಗಿಚ್ಚಿ ಗಿಲಿಗಿಲಿʼ ಮತ್ತು ʻಮಜಾಭಾರತʼ ರಿಯಾಲಿಟಿ ಶೋಗಳ ಮೂಲಕ ಫೇಮಸ್‌ ಆಗಿರುವ ನಟ ಚಿಲ್ಲರ್‌ ಮಂಜು (ಮಂಜುನಾಥ್‌). ತಮ್ಮ ಕಾಮಿಡಿ ಟೈಮಿಂಗ್‌ ಹಾಗೂ ಎಕ್ಸ್‌ಪ್ರೆಶನ್‌ಗಳಿಂದ ಕಿರುತೆರೆ ವೀಕ್ಷಕರ ಮನಸ್ಸು ಗೆದ್ದಿರುವ ಮಂಜ, ಒಂದು ಗುಡ್‌ ನ್ಯೂಸ್‌ ನೀಡಿದ್ದಾರೆ. ಅದೇನಪ್ಪ ಅಂದ್ರೆ, ಅವರು ಸದ್ದಿಲ್ಲದೇ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದಾರೆ. ಕಾರುಣ್ಯಾ ಎಂಬುವವರ ಜೊತೆಗೆ ಚಿಲ್ಲರ್ ಮಂಜ ಎಂಗೇಜ್‌ ಆಗಿದ್ದು, ಈಚೆಗೆ ಸಿಂಪಲ್‌ ಆಗಿ ಅವರ ಎಂಗೇಜ್‌ಮೆಂಟ್‌ ನಡೆದಿದೆ. ಇದೇ ಶೋನ ಕಲಾವಿದರಾದ ಹಾಸ್ಯ ನಟ ಶಿವು ಹಾಗೂ ಮಾನಸ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಚಿಲ್ಲರ್ ಮಂಜು ಕೂಡ ಎಂಗೇಜ್‌ ಆಗಿದ್ದಾರೆ. ಈಚೆಗೆ ಬೆಂಗಳೂರಿನಲ್ಲಿ ಈ ಎಂಗೇಜ್‌ಮೆಂಟ್‌ ನಡೆದಿದೆ ಎಂದು ಹೇಳಲಾಗಿದೆ. ಇಲ್ಲಿವೆ ನೋಡಿ ಚಿಲ್ಲರ್‌ ಮಂಜು ಮತ್ತು ಕಾರುಣ್ಯಾ ಅವರ ಎಂಗೇಜ್‌ಮೆಂಟ್‌ ಫೋಟೋಗಳು.

Toxic Teaser: ದಿಢೀರ್‌ ಅಂತ ಸರ್ಪ್ರೈಸ್‌ ನೀಡಿದ ‌ʻರಾಕಿಂಗ್‌ ಸ್ಟಾರ್‌ʼ ಯಶ್; ರಾಯನ ಮತ್ತೊಂದು ಝಲಕ್‌ ನೋಡಲು ನೀವು ರೆಡಿನಾ?

ರಕ್ತಸಿಕ್ತ ರಣರಂಗದಲ್ಲಿ 'ರಾಯ'ನ ಅಬ್ಬರ; ಬರ್ತಿದೆ ʻಟಾಕ್ಸಿಕ್‌‌ʼ ಟೀಸರ್‌

Toxic Teaser Release Date: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಟೀಸರ್‌ ರಿಲೀಸ್‌ ಡೇಟ್‌ ಅನ್ನು ದಿಢೀರ್‌ ಎಂದು ಘೋಷಣೆ ಮಾಡಲಾಗಿದೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರದಲ್ಲಿ 'ರಾಯ' ಎಂಬ ರಗಡ್ ಪಾತ್ರದಲ್ಲಿ ಯಶ್ ಕಾಣಿಸಿಕೊಂಡಿದ್ದು, ಈಗ ರಿಲೀಸ್‌ ಆಗಿರುವ ಹೊಸ ಪೋಸ್ಟರ್ ಭೀಕರ ಹಿಂಸಾಚಾರದ ಸುಳಿವು ನೀಡಿದೆ.

Raakshasa Web Series: ನಿರೂಪಕಿ ಅನುಶ್ರೀ ಮದುವೆಯಲ್ಲಿ ಆಗಿದ್ದೇನು? ವಿಜಯ್‌ ರಾಘವೇಂದ್ರ - ತರುಣ್‌ ಸುಧೀರ್‌ ಥ್ಯಾಂಕ್ಸ್‌ ಹೇಳಿದ್ದೇಕೆ? ಇಲ್ಲಿದೆ ಇಂಟರೆಸ್ಟಿಂಗ್‌ ಕಥೆ

ಅನುಶ್ರೀ ಮದುವೆಯಲ್ಲಿ ಫಿಕ್ಸ್ ಆಗಿತ್ತು ವಿಜಯ್ ರಾಘವೇಂದ್ರ ವೆಬ್‌ ಸೀರೀಸ್!

ನಿರ್ಮಾಪಕ ತರುಣ್ ಸುಧೀರ್ ಮತ್ತು ನಟ ವಿಜಯ್ ರಾಘವೇಂದ್ರ ಅವರ ಈ ಬಹುನಿರೀಕ್ಷಿತ ರಾಕ್ಷಸ ವೆಬ್ ಸರಣಿ ಫೆಬ್ರವರಿ 20ರಿಂದ ಜೀ5ನಲ್ಲಿ ಸ್ಟ್ರೀಮಿಂಗ್‌ ಆಗಲಿದೆ. ಈ ಪ್ರಾಜೆಕ್ಟ್‌ಗೆ ವಿಜಯ್‌ ರಾಘವೇಂದ್ರ ಆಯ್ಕೆ ಆಗಿದ್ದು ನಿರೂಪಕಿ ಅನುಶ್ರೀ ಮದುವೆಯಲ್ಲಿ ಅನ್ನೋದು ವಿಶೇಷ. ಉತ್ತರ ಕರ್ನಾಟಕದ ಸೊಗಡಿನ ಕಥೆಯನ್ನು ಹೊಂದಿರುವ ಈ ಸರಣಿಯಲ್ಲಿ ಮಯೂರಿ ಕ್ಯಾತರಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

Suhana Syed: ʻಸವದತ್ತಿ ಯಲ್ಲಮ್ಮʼ ಅಂತ ಹೆಸರು ಬದಲಿಸಿಕೊಳ್ಳಿ ಅಂದವರಿಗೆ ಸುಹಾನಾ ಗರಂ ರಿಯಾಕ್ಷನ್‌

Suhana Syed: ಹೆಸರು ಬದಲಿಸಿಕೊಳ್ಳಿ ಅಂದವರಿಗೆ ಸುಹಾನಾ ಗರಂ ರಿಯಾಕ್ಷನ್‌

Suhana Syed singer: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಮೂಲಕ ಖ್ಯಾತಿ ಪಡೆದ ಗಾಯಕಿ ಸುಹಾನಾ ಸೈಯದ್‌ . ಇತ್ತೀಚೆಗಷ್ಟೇ ನಿತಿನ್‌ ಶಿವಾಂಶ್‌ ಅವರನ್ನು ಮದುವೆಯಾಗಿದ್ದರು. ಇವರಿಬ್ಬರ ಧರ್ಮ ಬೇರೆ ಬೇರೆ ಆಗಿದ್ದ ಕಾರಣ ಈ ಸುದ್ದಿ ದೊಡ್ಡ ಮಟ್ಟದಲ್ಲಿ ವೈರಲ್ ಆಗಿತ್ತು. ಇವರ ಧರ್ಮ ಬೇರೆಯಾದ ಕಾರಣ ಕುಟುಂಬಸ್ಥರ ವಿರೋಧದ ನಡುವೆಯು ಅವರನ್ನು ಒಪ್ಪಿಸಿ ಮದುವೆಯಾಗೋದು ಸುಲಭ ಮಾತಾಗಿರಲಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಸುಹಾನಾ ಸಖತ್ ಆಕ್ಟೀವ್ ಆಗಿದ್ದಾರೆ.

Vijay Deverakonda: ವಿಜಯ್‌ ದೇವರಕೊಂಡ ಮನೆ ಈಗ ಝಗಮಗ! ಮದುವೆ ತಯಾರಿ ಹೇಗಿದೆ?

ವಿಜಯ್‌ ದೇವರಕೊಂಡ ಮನೆ ಈಗ ಝಗಮಗ! ಮದುವೆ ತಯಾರಿ ಹೇಗಿದೆ?

Rashmika Mandanna: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಈ ತಿಂಗಳು ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಈ ಜೋಡಿ ಇನ್ನೂ ಮೌನವಾಗಿದ್ದು, ಇತ್ತೀಚೆಗೆ ಒಟ್ಟಿಗೆ ಕಾಣಿಸಿಕೊಂಡಿರುವ ಮತ್ತು ಸೋರಿಕೆಯಾದ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಮದುವೆ ಆಗುತ್ತಿರೋದು ಫಿಕ್ಸ್‌ ಎನ್ನಲಾಗುತ್ತಿದೆ. ಹೂವಿನ ಅಲಂಕಾರ ಮತ್ತು ದೀಪಗಳಿಂದ ಅಲಂಕರಿಸಲ್ಪಟ್ಟ ವಿಜಯ್ ದೇವರಕೊಂಡ ಅವರ ಮನೆಯ ವಿಡಿಯೋ ಇದೀಗ ವೈರಲ್‌ ಆಗಿದೆ.

Amruthadhaare serial: ಗೌತಮ್‌ ಮುಂದೆ ಸುನಿ ಡ್ರಾಮ ಬಲು ಜೋರು! ಜೈದೇವ್‌ ಪ್ಲ್ಯಾನ್‌ ಸಕ್ಸೆಸ್‌?

Amruthadhaare serial: ಗೌತಮ್‌ ಮುಂದೆ ಸುನಿ ಡ್ರಾಮ ಬಲು ಜೋರು!

Amruthadhaare Kannada serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ಮಲ್ಲಿ ಮೇಲೆಯೇ ಕಥೆ ಸಾಗುತ್ತಿದ್ದು, ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಕೊಡ್ತಾ ಇದೆ. ಜೈದೇವ್‌ ಆಸ್ತಿ ಸಿಕ್ಕರೂ ಮಲ್ಲಿ ನೆಮ್ಮದಿ ಹಾಳು ಮಾಡದೇ ಇರೋನೇ ಅಲ್ಲ ಅಂತ ನಿರ್ಧಾರ ಮಾಡಿದ್ದಾಗಿದೆ. ಸಿಂಪಲ್‌ ಸುನಿಯನ್ನ ಸದ್ಯಕ್ಕಂತೂ ಮಲ್ಲಿ ವಿರುದ್ಧ ಛೂ ಬಿಟ್ಟಿದ್ದಾನೆ.

Bhagyalakshmi Kannada Serial: ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಅಂತ್ಯ ಆಗತ್ತಾ? ಕ್ಲಾರಿಟಿ ಕೊಟ್ಟ ನಟ ಸುದರ್ಶನ್!

‘ಭಾಗ್ಯಲಕ್ಷ್ಮೀ’ ಧಾರಾವಾಹಿ ಅಂತ್ಯ ಆಗತ್ತಾ? ಕ್ಲಾರಿಟಿ ಕೊಟ್ಟ ಸುದರ್ಶನ್!

Actor Sudharshan: ಕಲರ್ಸ್ ಕನ್ನಡದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಕೊನೆ ಆಗುತ್ತಿದೆ ಎಂಬ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಟಿ ಸುಷ್ಮಾ ರಾವ್‌ ಕೂಡ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದರು. ಈಗ ತಾಂಡವ್ ಪಾತ್ರ ಮಾಡ್ತಿರೋ ಸುದರ್ಶನ್ ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ತುಳುನಾಡಿನ ʻವೀರ ಕಂಬಳʼ ಸಿನಿಮಾದ ಟ್ರೇಲರ್‌ ರಿಲೀಸ್ ಮಾಡಿದ ಹಂಸಲೇಖ;‌ ಪಾತ್ರದ ಗುಟ್ಟನ್ನು ರಿವೀಲ್‌ ಮಾಡಲಿಲ್ಲ ನಟ ಆದಿತ್ಯ

ʻವೀರ ಕಂಬಳʼ ಸಿನಿಮಾದಲ್ಲಿ ನಟ ಆದಿತ್ಯಗೆ ಏನು ಪಾತ್ರ?

Veera Kambala Movie: ಹಂಸಲೇಖ ಅವರು ವೀರ ಕಂಬಳ ಸಿನಿಮಾದ ಟ್ರೇಲರ್‌ ಅನ್ನು ಬಿಡುಗಡೆಗೊಳಿಸಿದ್ದಾರೆ. ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರ 50 ವರ್ಷಗಳ ಸಿನಿಮಾ ಪಯಣದ ಸ್ಮರಣೀಯ ಚಿತ್ರವಿದು. ತುಳುನಾಡಿನ ಸಾಂಪ್ರದಾಯಿಕ ಕಂಬಳ ಮತ್ತು ಮುಂಬೈ ಅಂಡರ್‌ವರ್ಲ್ಡ್ ನಡುವಿನ ರೋಚಕ ಕಥೆ ಹೊಂದಿರುವ ಈ ಚಿತ್ರ ಫೆಬ್ರವರಿ 27 ರಂದು ತೆರೆಕಾಣಲಿದೆ.

Nanda Gokula Serial: ʻನಂದಗೋಕುಲ’ದ ಬಗ್ಗೆ ವೀಕ್ಷಕರಿಗೆ ಅಸಮಾಧಾನ ಏಕೆ?

Nanda Gokula Serial: ʻನಂದಗೋಕುಲ’ದ ಬಗ್ಗೆ ವೀಕ್ಷಕರಿಗೆ ಅಸಮಾಧಾನ ಏಕೆ?

Nanda Gokula Kannada Serial: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ನಂದ ಗೋಕುಲ' ಧಾರಾವಾಹಿ ಈಗ ಕುತೂಹಲಕಾರಿ ಘಟ್ಟ ತಲುಪಿದೆ. ನಂದಕುಮಾರ್ ಮತ್ತು ಗಿರಿಜಾರ ಮುದ್ದಿನ ಸಂಸಾರದ ಕಥೆಯನ್ನು ವೀಕ್ಷಕರು ಸಿಕ್ಕಾಪಟ್ಟೆ ಇಷ್ಟಪಟ್ಟಿದ್ದರು. ಸದ್ಯ ಬಿಡುಗಡೆಯಾಗಿರುವ ಹೊಸ ಪ್ರೋಮೊ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಜೊತೆಗೆ ಸೀರಿಯಲ್‌ ಬಗ್ಗೆ ವೀಕ್ಷಕರಲ್ಲಿ ಅಸಮಾಧಾನ ವ್ಯಕ್ತವಾಗಿದೆ.

Pramod Shetty: ಮದುವೆಗೆ ರಶ್ಮಿಕಾ ನಮ್ಮನ್ನೆಲ್ಲಾ ಕರೆಯಲ್ಲ; ಪ್ರಮೋದ್ ಶೆಟ್ಟಿ

ಮದುವೆಗೆ ರಶ್ಮಿಕಾ ನಮ್ಮನ್ನೆಲ್ಲಾ ಕರೆಯಲ್ಲ; ಪ್ರಮೋದ್ ಶೆಟ್ಟಿ

Rashmika : ಪ್ರಮೋದ್ ಶೆಟ್ಟಿ ‘ಶೇಷ 2016’ ಸಿನಿಮಾದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಾರ್ಚ್ 6ಕ್ಕೆ ಈ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕೂ ಮುನ್ನವೇ ಈ ಸಿನಿಮಾದ ಒಟಿಟಿ ಪ್ರಸಾರ ಹಕ್ಕುಗಳು ಮಾರಾಟ ಆಗಿವೆ. ಇದೀಗ ಸಿನಿಮಾ ವಿಚಾರವಾಗಿ ಪ್ರಚಾರ ಕಾರ್ಯಗಳು ಆರಂಭವಾಗಿವೆ. ರಶ್ಮಿಕಾ ಮಂದಣ್ಣ ಮತ್ತು ಶೆಟ್ಟಿ ಆಂಡ್ ಕಂಪನಿ ನಡುವೆ ಆಗಾಗ ಕಿರಿಕ್ ನಡೆಯುತ್ತೆ.

Photos: ʻನಾನಿಂದು ಏನಾಗಿದ್ದೇನೋ ಅದಕ್ಕೆ ನೀನೇ ಕಾರಣʼ; ಪತ್ನಿ ಹುಟ್ಟುಹಬ್ಬಕ್ಕೆ ಸ್ಪೆಷಲ್‌ ಆಗಿ ವಿಶ್‌ ಮಾಡಿದ ನಟ ಚಿರಂಜೀವಿ

Photos: ಪತ್ನಿ ಸುರೇಖಾ ಬರ್ತ್‌ಡೇಗೆ ನಟ ಚಿರಂಜೀವಿ ಭಾವುಕ ಪೋಸ್ಟ್

ಮೆಗಾ ಸ್ಟಾರ್‌ ಚಿರಂಜೀವಿ ಅವರ ಪತ್ನಿ ಸುರೇಖಾ ಅವರಿಗೆ ಇಂದು (ಫೆ.18) ಹುಟ್ಟುಹಬ್ಬ. ಆ ಹಿನ್ನೆಲೆಯಲ್ಲಿ ತಮ್ಮ 46 ವರ್ಷಗಳ ಸಂಗಾತಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ ನಟ ಚಿರಂಜೀವಿ. "ಇಂದು ನಿನ್ನ ಹುಟ್ಟುಹಬ್ಬದ ಸಂಭ್ರಮದಲ್ಲಿ, ನನ್ನ ಹೃದಯಾಳದ ಮಾತು ಇಷ್ಟೇ, ʻನಾನಿಂದು ಏನಾಗಿದ್ದೇನೋ, ಅದಕ್ಕೆ ನೀನೇ ಕಾರಣʼ.. ಅಪಾರ ಪ್ರೀತಿಯೊಂದಿಗೆ, ಎಂದೆಂದಿಗೂ ನಿನ್ನವ.." ಎಂದು ಚಿರಂಜೀವಿ ಪ್ರೀತಿಯಿಂದ ಪತ್ನಿ ಸುರೇಖಾಗೆ ವಿಶ್‌ ಮಾಡಿದ್ದಾರೆ. ಇದೇ ವೇಳೆ ತಮ್ಮ ಬದುಕಿನ ಕೆಲವು ಅತ್ಯಮೂಲ್ಯವಾದ ಅಪರೂಪದ ಫೋಟೋಗಳನ್ನು ಹಂಚಿಕೊಳ್ಳುವುದರ ಜೊತೆಗೆ ತಮ್ಮ ಮನದಾಳದ ಕೆಲವು ಮಾತುಗಳನ್ನು ಚಿರಂಜೀವಿ ಹೇಳಿಕೊಂಡಿದ್ದಾರೆ.

Rana Daggubati: ಯಾವುದೇ ಸಿನಿಮಾಗಳಲ್ಲಿಯೂ ನಟಿಸಲಿಲ್ಲ, ಅಡ್ವಾನ್ಸ್ ಹಣವನ್ನು ಸಹ ವಾಪಸ್ ಮಾಡಿದ್ರು; ರಾಣಾ ದಗ್ಗುಬಾಟಿಗೆ ಆಗಿದ್ದೇನು?

ಸಿನಿಮಾ ಅಡ್ವಾನ್ಸ್ ಹಣವನ್ನು ಸಹ ವಾಪಸ್ ಮಾಡಿದ್ರು ರಾಣಾ; ಆಗಿದ್ದೇನು?

Rhea Chakraborty's podcast: ನಟ ರಾಣಾ ದಗ್ಗುಬಾಟಿ ತಮ್ಮ ಆರೋಗ್ಯದ ಸವಾಲುಗಳು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಮೇಲೆ ಬೀರಿದ ಪರಿಣಾಮದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಇತ್ತೀಚೆಗೆ ರಿಯಾ ಚಕ್ರವರ್ತಿ ಅವರ ಪಾಡ್‌ಕ್ಯಾಸ್ಟ್, ಅಧ್ಯಾಯ 2 ನಲ್ಲಿ ಕಾಣಿಸಿಕೊಂಡ ನಟ, ಮೂತ್ರಪಿಂಡ ವೈಫಲ್ಯ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಒಳಗಾಗಿದ್ದೆ ಎಂದು ಹೇಳಿಕೊಂಡಿದ್ದಾರೆ. ನಟನೆಯಿಂದ ವಿರಾಮ ತೆಗೆದುಕೊಂಡು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಅಂಗಾಂಗ ಕಸಿ ಮಾಡಿಸಿಕೊಳ್ಳಬೇಕಾಯಿತು ಎಂದೂ ಹೇಳಿಕೊಂಡಿದ್ದಾರೆ.

"ಅಪ್ಪು ಅಂದ್ರೆ ದೇವರು, ಶಿವಣ್ಣ ನನ್ನನ್ನು ಕ್ಷಮಿಸಿಬಿಡಿ"; ವಿವಾದಾತ್ಮಕ ಹೇಳಿಕೆ ನೀಡಿ ಬಹಿರಂಗವಾಗಿ ಕ್ಷಮೆ ಕೇಳಿದ ಕನಕಪುರ ಶ್ರೀನಿವಾಸ್

ಫಿಲ್ಮ್ ಚೇಂಬರ್‌ನಲ್ಲಿ ಕೈಮುಗಿದು ಕ್ಷಮೆ ಕೇಳಿದ ಕನಕಪುರ ಶ್ರೀನಿವಾಸ್!

ಪುನೀತ್ ರಾಜ್‌ಕುಮಾರ್, ಶಿವರಾಜ್‌ಕುಮಾರ್, ದರ್ಶನ್ ಸೇರಿದಂತೆ ಹಲವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್, ಇಂದು (ಫೆ.18) ವಾಣಿಜ್ಯ ಮಂಡಳಿಯಲ್ಲಿ ಬಹಿರಂಗವಾಗಿ ಕ್ಷಮೆ ಕೋರಿದ್ದಾರೆ. "ಆರ್ಥಿಕ ಸಂಕಷ್ಟ ಮತ್ತು ಸಿನಿಮಾದ ಬಿಡುಗಡೆಯ ಒತ್ತಡದಲ್ಲಿ ತಿಳಿಯದೆ ಮಾತನಾಡಿದ್ದೇನೆ, ಏಳು ಕೋಟಿ ಕನ್ನಡಿಗರು ನನ್ನನ್ನು ಕ್ಷಮಿಸಿ" ಎಂದಿದ್ದಾರೆ.

Loading...