ಪ್ರೀತಿ–ಸಲುಗೆಯಿಂದ ಮಕ್ಕಳ ಪ್ರತಿಭೆ ಹೊರತನ್ನಿ: ನಟ ಅರವಿಂದ ರಮೇಶ್
ಮಕ್ಕಳನ್ನು ಬೆದರಿಸಿ, ಹೆದರಿಸಿ ಕಲಿಸುವ ಬದಲು ಪ್ರೀತಿ ಹಾಗೂ ಸಲುಗೆಯಿಂದ ಅವರಲ್ಲಿನ ಪ್ರತಿಭೆ ಯನ್ನು ಗುರುತಿಸಿ ಹೊರತರುವ ಪ್ರಯತ್ನ ಮಾಡಬೇಕು. ಶಿಕ್ಷಕರು ಮನಸ್ಸು ಮಾಡಿದರೆ ಮಕ್ಕಳನ್ನು ಸುಂದರ ಮೂರ್ತಿಯಂತೆ ರೂಪಿಸಬಹುದು. ಶಿಕ್ಷಕರ ನಿರಂತರ ಬೆಂಬಲ ದೊರೆತರೆ ಮಕ್ಕಳು ಇತಿಹಾಸ ಸೃಷ್ಟಿಸುವ ಸಾಮರ್ಥ್ಯ ಹೊಂದಿದ್ದಾರೆ