ʻನಂಬಿದವರೇ ಸ್ವಾರ್ಥಕ್ಕೆ ಬಳಸಿಕೊಂಡ್ರುʼ ಎಂದು ಚೈತ್ರಾ ಹೇಳಿದ್ದೇಕೆ?
'ಬಿಗ್ ಬಾಸ್' ಖ್ಯಾತಿಯ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಕುಂದಾಪುರ ಅವರಿಗೆ 9 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಗಂಗಾವತಿ ನ್ಯಾಯಾಲಯದಲ್ಲಿ ಭಾರಿ ಜಯ ಸಿಕ್ಕಿದೆ. 2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಮತ್ತು ದ್ವೇಷ ಭಾಷಣದ 5 ಪ್ರಕರಣಗಳಲ್ಲಿ ಅಪರಾಧ ಸಾಬೀತಾಗದ ಹಿನ್ನೆಲೆಯಲ್ಲಿ ಕೋರ್ಟ್ ಅವರನ್ನು ನಿರ್ದೋಷಿ ಎಂದು ಖುಲಾಸೆಗೊಳಿಸಿದೆ.