ಸ್ಪರ್ಧಿಗಳಿಗೆ ತೀರ್ಪುಗಾರರಿಂದ ಅವಮಾನ; ಸುದೀಪ್ ಹೇಳಿದ್ದೇನು
Bigg Boss Kannada 13: ಈ ವೀಶೇಷ ಶೋನಲ್ಲಿ ವಿನಯ್, ಚಂದನ್, ಸಂಗೀತ, ಶ್ರುತಿ ಅವರುಗಳು ಜಡ್ಜ್ಗಳಾಗಿದ್ದಾರೆ. ವಿನಯ್ ಗೌಡ ಮತ್ತು ಸಂಗೀತಾ ಶೃಂಗೇರಿ ಅವರ ಬಗ್ಗೆ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. ಜಾಲತಾಣಗಳಲ್ಲಿ ವಿನಯ್ ಗೌಡ (vinay Gowda) ಅವರು ಬಳಸಿದ ಭಾಷೆಗಳ ಬಗ್ಗೆ, ಸ್ಪರ್ಧಿಗಳಿಗೆ ಅವಮಾನ ಮಾಡಿದ್ದಾರೆ ಎನ್ನುವ ಬಗ್ಗೆ ನೆಟ್ಟಿಗರು ಗರಂ ಆಗುತ್ತಿದ್ದಾರೆ. ಇದೀಗ ಈ ಬಗ್ಗೆ ಸುದೀಪ್ ಅವರಿಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆ ಕೇಳಲಾಗಿದೆ. ಅವರು ಉತ್ತರ ಕೊಟ್ಟಿದ್ದು ಹೀಗೆ.