ʻಪವಿತ್ರಾ ಗೌಡ ಮಾನಸಿಕವಾಗಿ ನೊಂದಿದ್ದಾರೆ' ಎಂದ ಮಹಿಳಾ ಆಯೋಗದ ಅಧ್ಯಕ್ಷೆ
ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಚಾರಣಾಧೀನ ಕೈದಿ ಪವಿತ್ರಾ ಗೌಡ ತಮಗೆ ಮಗಳಿದ್ದಂತೆ ಎಂದಿರುವ ಅವರು, ಜೈಲಿನಲ್ಲಿರುವ ಎಲ್ಲಾ ಮಹಿಳೆಯರಿಗೂ ಕಾನೂನು ನೆರವು ಹಾಗೂ ಸಾಂತ್ವನ ಅಗತ್ಯ ಎಂದಿದ್ದಾರೆ.