‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ
Kannada New Movie: ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ (ಆಗಸ್ಟ್ 5) ಅಂಗವಾಗಿ, ಅವರು ನಟಿಸಿ, ನಿರ್ದೇಶಿಸಿದ್ದ ‘ಬೆಂಟ್ಲಿ’ ಸಿನಿಮಾದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ. ಕಳೆದ ವರ್ಷದ ಆಗಸ್ಟ್ನಲ್ಲಿ ಅಕಾಲಿಕ ಮರಣ ಹೊಂದಿದ್ದ ಸಂತೋಷ್ ಅವರ ಅಗಲಿಕೆ ಚಂದನವನಕ್ಕೆ ದೊಡ್ಡ ಆಘಾತವನ್ನುಂಟು ಮಾಡಿತ್ತು. ಸಿನಿ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಶ್ವೇತಾ ಬಾಲರಾಜು ಅವರು ಈ ಚಿತ್ರವನ್ನು ನಿರ್ಮಿಸಿದ್ದು, ಸಂತೋಷ್ ಬಾಲರಾಜು ಅವರೊಂದಿಗೆ ಸಿಮ್ರಾನ್ ನಾಟೇಕರ್, ಶ್ರುತಿ, ಚರಣ್ರಾಜ್, ರಾಜಾ ಬಲವಾಡಿ ಮುಂತಾದವರು ನಟಿಸಿದ್ದಾರೆ.