ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actress Ranjani Raghavan: ಕಮಲ್ ಹಾಸನ್‌ಗೆ ಕನ್ನಡ ಪುಸ್ತಕ ನೀಡಿದ ನಟಿ ರಂಜನಿ ರಾಘವನ್

ಕಮಲ್‌ ಹಾಸನ್‌ ಅವರ ʼಥಗ್‌ ಲೈಫ್‌ʼ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರಚಾರದಲ್ಲಿ ಕಮಲ್‌ ಹಾಸನ್ ತೊಡಗಿಕೊಂಡಿದ್ದಾರೆ. ಈ ವೇಳೆ ಕಮಲ್‌ ಹಾಸನ್‌ ಕನ್ನಡ ಭಾಷೆಯ ಬಗ್ಗೆ ವಿವಾದದ ಹೇಳಿಕೆ ನೀಡಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಲೇಖಕಿ, ನಟಿ ರಂಜನಿ ರಾಘವನ್ ತಾವು ಬರೆದ ʼಸ್ವೈಪ್‌ ರೈಟ್‌ ಕತೆ ಡಬ್ಬಿʼ ಪುಸ್ತಕವನ್ನು ನೀಡಿದ್ದಾರೆ.

ಕಮಲ್ ಹಾಸನ್‌ಗೆ ಕನ್ನಡ ಪುಸ್ತಕ ನೀಡಿದ ಕಿರುತೆರೆ ನಟಿ

Actress Ranjani Raghavan

Profile Pushpa Kumari Jun 2, 2025 6:22 PM

ಬೆಂಗಳೂರು: ನಟ ಕಮಲ್ ಹಾಸನ್ (Kamal Haasan) ಸದ್ಯ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ʼʼಕನ್ನಡ ತಮಿಳಿನಿಂದ ಹುಟ್ಟಿದ್ದುʼʼ ಎಂದು ಹೇಳಿರುವುದು ಅನೇಕ ಕನ್ನಡಿಗರ ಕೋಪಕ್ಕೆ ಕಾರನವಾಗಿದೆ. ಹಲವಾರು ಕನ್ನಡಪರ ಸಂಘಟನೆಗಳು, ನಟ-ನಟಿಯರು, ಕಮಲ್‌ ಹಾಸನ್‌ ಅವರ ಹೇಳಿಕೆಗಳನ್ನು ಕಟುವಾಗಿ ಖಂಡಿಸಿದ್ದಾರೆ. ಇನ್ನೂ ಯಾವುದೇ ಕಾರಣಕ್ಕೂ ಕಮಲ್‌ ಹಾಸನ್‌ ಚಿತ್ರಗಳು ರಾಜ್ಯದಲ್ಲಿ ಪ್ರದರ್ಶನ ಮಾಡಬಾರದು ಎಂದು ಕೆಲವರು ಒತ್ತಾಯಿಸಿದ್ದಾರೆ. ಈ‌ ನಡುವೆ ʼಕನ್ನಡತಿ' ಧಾರಾವಾಹಿ ಖ್ಯಾತಿಯ ನಟಿ ರಂಜನಿ ರಾಘವನ್‌ (Ranjani Raghavan) ಕಮಲ್ ಹಾಸನ್‌ಗೆ ಕನ್ನಡ ಪುಸ್ತಕ ಕೊಟ್ಟು ಬಂದಿದ್ದಾರೆ. ಆ ಫೋಟೊಗಳನ್ನು ರಂಜನಿ ರಾಘವನ್ ಸ್ವತಃ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು‌ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಕಮಲ್‌ ಹಾಸನ್‌ ಅವರ ʼಥಗ್‌ ಲೈಫ್‌ʼ ಸಿನಿಮಾ ರಿಲೀಸ್‌ಗೆ ಸಿದ್ದವಾಗಿದೆ. ಈ ಸಿನಿಮಾದ ಪ್ರಚಾರದಲ್ಲಿ ಕಮಲ್‌ ಹಾಸನ್ ತೊಡಗಿ ಕೊಂಡಿದ್ದಾರೆ. ಸಿನಿಮಾದ ಪ್ರಚಾರದ ವೇಳೆ ಕಮಲ್‌ ಹಾಸನ್‌ ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ನಡುವೆ ರಂಜನಿ ರಾಘವನ್ ತಾವು ಬರೆದ ʼಸ್ವೈಪ್‌ ರೈಟ್‌ ಕತೆ ಡಬ್ಬಿʼ ಪುಸ್ತಕವನ್ನು ನೀಡಿದ್ದಾರೆ. ಇದಕ್ಕೆ ʼʼಕಮಲ್ ಸರ್​ಗೆ ಕನ್ನಡ ಪುಸ್ತಕʼʼ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಈ ಫೋಟೊಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗಿದ್ದು ಕನ್ನಡಿಗರ ಮನ ಗೆದ್ದಿವೆ.‌ ಈ ಬಗ್ಗೆ ನೆಟ್ಟಿಗರು ನಾನಾ ಬಗೆಯ ಕಾಮೆಂಟ್ ಮಾಡಿದ್ದಾರೆ. ಬಳಕೆದಾರರೊಬ್ಬರು ʼʼನಮ್ಮ ಕನ್ನಡತಿ ಸರಿಯಾದ ಸಮಯದಲ್ಲಿ ಕನ್ನಡ ಪುಸ್ತಕ ಕೊಟ್ಟಿದ್ದಾರೆʼʼ ಎಂದು ತಿಳಿಸಿದ್ದಾರೆ. ರಂಜನಿ ರಾಘವನ್ ಅವರ ಈ ನಡೆ ಬಗ್ಗೆ ಅಭಿಮಾನಿಗಳು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಕಮಲ್ ಹಾಸನ್ ಆಡಿರುವ ಮಾತಿಗೆ ಕ್ಷಮೆ ಕೇಳಬೇಕು ಎಂದು ಕನ್ನಡಿಗರು ಪಟ್ಟು ಹಿಡಿದಿದ್ದಾರೆ. ಅತ್ತ ಕಮಲ್ ಹಾಸನ್ ಕ್ಷಮೆ ಕೇಳುವ ಮಾತೇ ಇಲ್ಲ ಎಂದಿದ್ದಾರೆ. ಈ ನಡುವೆ ನಟಿ ರಂಜನಿ ರಾಘವನ್ ಅವರು ತಮ್ಮ ಕನ್ನಡ ಪುಸ್ತಕವನ್ನು ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನು ಓದಿ: Kamal Hassan controversy: ಕಮ‌ಲ್ ಹಾಸನ್‌ ವಿವಾದ: 'ಕತ್ತೆಗೆ ಹೆಚ್ಚಿನ ಬೆಲೆ ನೀಡಬಾರದುʼ ಎಂದ ರಮ್ಯಾ

ʼಕನ್ನಡತಿ' ಧಾರಾವಾಹಿಯಿಂದ ಜನಪ್ರಿಯತೆ ಪಡೆದುಕೊಂಡ ರಂಜಿನಿ ರಾಘವನ್ ಬರಹಗಾರ್ತಿಯಾಗಿಯೂ ಖ್ಯಾತಿ ಗಳಿಸಿದ್ದಾರೆ‌. ಸದ್ಯ ರಂಜನಿ ರಾಘವನ್ ಚಿತ್ರವೊಂದರ ನಿರ್ದೇಶನಕ್ಕೆ ಇಳಿದಿದ್ದಾರೆ. ʼನೆನಪಿರಲಿ' ಪ್ರೇಮ್ ಮತ್ತು ಗಣೇಶ್ ಪುತ್ರ ವಿಹಾನ್ ಗಣೇಶ್‌ ನಟಿಸುತ್ತಿರುವ  ʼಡಿ ಡಿ ಢಿಕ್ಕಿ’ ಹೆಸರಿನ ಚಿತ್ರವನ್ನು ನಿರ್ದೇಶನ ಮಾಡಿಡುತ್ತಿದ್ದಾರೆ. ಸದ್ಯ ಈ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ.