Operation Sindoor: ಭಾರತ ಪಾಕಿಸ್ತಾನ ಘರ್ಷಣೆ; ಕಾನ್ಸರ್ಟ್ ರದ್ದು ಮಾಡಿದ ಅರಿಜಿತ್ ಸಿಂಗ್
ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಕವಿದಿದೆ. ಭಾರತ ಪಾಕಿಸ್ತಾನದ ನಟ ನಟಿಯರ ಇನ್ಸ್ಟಾಗ್ರಾಂ ಅಕೌಂಟ್ ಬ್ಯಾನ್ ಮಾಡಿದೆ. ಪಾಕಿಸ್ತಾನ ಕೂಡ ಗಾಯಕ ಅರಿಜಿತ್ ಸಿಂಗ್ ಅವರ ಖಾತೆಯನ್ನು ಪಾಕಿಸ್ತಾನದಲ್ಲಿ ಬ್ಯಾನ್ ಮಾಡಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗಾಯಕ ಅರ್ಜಿತ್ ಸಿಂಗ್ (Arijit Singh) ಅವರ ಅಬುಧಾಬಿಯಲ್ಲಿ ನಡೆಯಬೇಕಿದ್ದ ಶೋ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.


ಮುಂಬೈ: ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಕವಿದಿದೆ. ಭಾರತ ಪಾಕಿಸ್ತಾನದ ನಟ ನಟಿಯರ ಇನ್ಸ್ಟಾಗ್ರಾಂ ಅಕೌಂಟ್ ಬ್ಯಾನ್ ಮಾಡಿದೆ. ಪಾಕಿಸ್ತಾನ ಕೂಡ ಗಾಯಕ ಅರಿಜಿತ್ ಸಿಂಗ್ (Arijit Singh) ಅವರ ಖಾತೆಯನ್ನು ಪಾಕಿಸ್ತಾನದಲ್ಲಿ ಬ್ಯಾನ್ ಮಾಡಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗಾಯಕ ಅರಿಜಿತ್ ಸಿಂಗ್ ಅವರ ಅಬುಧಾಬಿಯಲ್ಲಿ ನಡೆಯಬೇಕಿದ್ದ ಶೋ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ. ಖ್ಯಾತ ಗಾಯಕ ಅರಿಜಿತ್ ಸಿಂಗ್ ರವರ ಮೇ 9ರಂದು ಅಬುಧಾಬಿಯ ಎತಿಹಾದ್ ಅರೀನಾದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ಮುಂದೂಡುವ ನಿರ್ಧಾರ ತೆಗೆದುಕೊಂಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿಮಾಹಿತಿ ಹಂಚಿಕೊಳ್ಳಲಾಗಿದೆ.
ಇನ್ಸ್ಟಾಗ್ರಾಂನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಗಾಯಕ, . ಪ್ರಿಯ ಅಭಿಮಾನಿಗಳೇ, ಪ್ರಸಕ್ತ ಘಟನೆಗಳನ್ನ ಅನುಸರಿಸಿ ಮೇ 9ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು. ಎಂದು ತಿಳಿಸಿದ್ದಾರೆ.ಈಗಾಗಲೇ ಖರೀದಿಸಿದ ಟಿಕೆಟ್ಗಳು ಮುಂದಿನ ದಿನಾಂಕಕ್ಕೂ ಮಾನ್ಯವಾಗಿರುವುದಲ್ಲದೆ, ಹಣ ಹಿಂಪಡೆಯಲು ಬಯಸುವವರು ಮೇ 12 ರಿಂದ ಏಳುದಿನಗಳ ಒಳಗೆ ಸಂಪೂರ್ಣ ಹಣ ಮರುಗಳಿಕೆಗೆ ಅರ್ಜಿ ಹಾಕಬಹುದಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಭಾರತದ ಆಪರೇಷನ್ ಸಿಂದೂರ್ (Operation Sindoor) ನಂತರ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಭಾರತದ ಸೇನಾ ನೆಲೆ ಹಾಗೂ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲು ಪ್ರಯತ್ನಿಸಿತ್ತು. ಆದರೆ ಭಾರತ ತನ್ನ ಮೇಲಿನ ದಾಳಿಯನ್ನು ತಡೆ ಹಿಡಿದಿದೆ. ಪ್ರತಿದಾಳಿಯಲ್ಲಿ ಭಾರತ ಪಾಕಿಸ್ತಾನದ ಪ್ರಮುಖ 16 ನಗರಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿತ್ತು. LoC ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದೀಗ ಜಮ್ಮುವಿನ ಸಾಂಬಾ ಜಿಲ್ಲೆಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಂತರರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ ಎಂದು ತಿಳಿದು ಬಂದಿದೆ.
ಈ ಸುದ್ದಿಯನ್ನೂ ಓದಿ: Operation Sindoor 2.0: ತಾಳ್ಮೆ ಪರೀಕ್ಷಿಸಬೇಡಿ... ಆಪರೇಷನ್ ಸಿಂದೂರ್ ಮುಂದುವರಿದಿದೆ- ಕುತಂತ್ರಿ ಪಾಕ್ಗೆ ರಾಜನಾಥ್ ಸಿಂಗ್ ವಾರ್ನಿಂಗ್
ಅಖ್ನೂರ್, ಸಾಂಬಾ, ಬಾರಾಮುಲ್ಲಾ, ಕುಪ್ವಾರಾ ಮತ್ತು ಇತರ ಹಲವಾರು ಸ್ಥಳಗಳಲ್ಲಿ ಭಾರತೀಯ ಸೇನೆಯು ಪಾಕಿಸ್ತಾನದ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದೆ. ರಾಜಸ್ಥಾನದ ಕೆಲ ನಗರ ಹಾಗೂ ಜಮ್ಮುವಿನಲ್ಲಿ ಬ್ಲಾಕ್ಔಟ್ ಜಾರಿ ಮಾಡಲಾಗಿದೆ. ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ ಮತ್ತು ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾದರು.