ಬಿಗ್ ಬಾಸ್ ಸೀಸನ್ 12ರ (Bigg Boss Kannada 12) ಟ್ರೋಫಿ ಗಿಲ್ಲಿ ನಟನ (Gilli Nata) ಪಾಲಾಗಿದೆ. ಕಿಚ್ಚ ಸುದೀಪ್ ಅವರು ವೇದಿಕೆಯಲ್ಲಿ ಒಂದು ಪ್ರಶ್ನೆ ಕೇಳುತ್ತಾರೆ. ಎಷ್ಟನೇ ರಿಯಾಲಿಟಿ ಶೋ ಎಂದು. ಆಗ ಗಿಲ್ಲಿ 6 ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದೆ. ಆದರೆ ವಿನ್ ಆಗಿರಲಿಲ್ಲ ಎಂದು. ಈಗ ಬಿಗ್ ಬಾಸ್ ಟ್ರೋಫಿ (Trophy) ಗೆದ್ದು ಬೀಗಿದ್ದಾರೆ. ಇದೆ ವೇಳೆ ಗಿಲ್ಲಿ ನಟ ವೇದಿಕೆಯಲ್ಲಿ ತನ್ನ ಯಶಸ್ಸಿಗೆ ಕಾರಣರಾದವರಿಗೆ ಧನ್ಯವಾದವನ್ನೂ ಸೂಚಿಸಿದರು.
ಈ ನಾಲ್ವರಿಗೆ ಧನ್ಯವಾದ
ಗಿಲ್ಲಿ ನಟ ಮನೆಯಲ್ಲಿ ಕೆಲವರ ಜೊತೆ ಸಖತ್ ಕ್ಲೋಸ್ ಇದ್ದರು. ರಕ್ಷಿತಾ ಶೆಟ್ಟಿ, ರಜತ್, ರಘು ಹಾಗೂ ಕಾವ್ಯಾ . ಇವರಿಗೆ ವೇದಿಕೆ ಮೇಲೆಯೇ ಗಿಲ್ಲಿ ಧನ್ಯವಾದ ಹೇಳಿದ್ದಾರೆ. ‘ನನ್ನ ಜರ್ನಿಯಲ್ಲಿ ಹೊರಗೆ ಅಭಿಮಾನಿಗಳು ಹೇಗೆ ಬೆಂಬಲವಾಗಿ ನಿಂತರೋ ಮನೆ ಒಳಗೆ ರಘು ಅಣ್ಣ, ರಕ್ಷಿತಾ, ರಜತ್ ಹಾಗೂ ಕಾವ್ಯಾ ಬೆಂಬಲವಾಗಿ ನಿಂತರು. ಅವರಿಗೂ ಧನ್ಯವಾದ’ ಎಂದು ಗಿಲ್ಲಿ ಹೇಳಿದ್ದಾರೆ.
ಜೀ ವಾಹಿನಿ ವಿಶ್
ಇನ್ನು ಜೀ ವಾಹಿನಿ ಕೂಡ ಪೋಸ್ಟ್ ಹಂಚಿಕೊಂಡಿದೆ. ‘ತನ್ನ ಕಾಮಿಡಿ ಟೈಮಿಂಗ್, ಅಮೋಘ ಪ್ರತಿಭೆಯ ಮೂಲಕ ವಿಜೇತನಾಗಿ ಕರುನಾಡಿನ ಮನಗೆದ್ದ ನಮ್ಮ ಗಿಲ್ಲಿಗೆ ಅಭಿನಂದನೆ ಎಂದು ಬರೆದುಕೊಂಡಿದೆ. ಗಿಲ್ಲಿ ನಟನ ಪ್ರತಿಭೆ ಗುರುತಿಸಿದ್ದೆ ಮೊದಲಿಗೆ ಜೀ ವಾಹಿನಿ. ಹೀಗಾಗಿ ವಿಶ್ ಮಾಡಿದ್ದಾರೆ ಜೀ ಕನ್ನಡ. ವೇದಿಕೆಯಲ್ಲೇ ಕಚ್ಚ ಸುದೀಪ್ ಬಗ್ಗೆ ಗಿಲ್ಲಿ ಸಾಯೋವರೆಗೂ ನಿಮ್ಮನ್ನು ಮರೆಯಲ್ಲ ಎಂದಿದ್ದಾರೆ.
ತುಂಬಾ ಸಂತೋಷವಾಯ್ತು
ಗೆದ್ದ ಬಳಿಕ ಗಿಲ್ಲಿ ಮಾತನಾಡಿ, ಬಿಗ್ ಬಾಸ್ ಹೋಗಬೇಕಾದರೆ, ಕೆಲವು ಜನರ ಪ್ರೀತಿ ಸಂಪಾದಿಸಿದ್ದೆ, ಅವರಿಗೆ ಮೋಸ ಮಾಡಬಾರದು ಅಂದುಕೊಂಡಿದ್ದೆ. ಒಳಗಡೆ ವಿಡಿಯೊ ತೋರಿಸ್ತಾ ಇದ್ದರು. ಕಟೌಟ್ ಅದೆಲ್ಲ ಹಾಕಿರೋದು. ಅದೆಲ್ಲ ನೋಡಿ ನನಗೆ ತುಂಬಾ ಸಂತೋಷವಾಯ್ತು. ನನಗೆ ನಂಬಲೂ ಆಗ್ತಾ ಇರಲಿಲ್ಲ. ಹಾಳಾದ್ದು ಅಳೋಣ ಅಂದ್ರೆ ನಂಗೆ ಅಳುನೂ ಬರಲ್ಲ.ಅದೆಲ್ಲ ನೋಡಿ ಕೈ ಹಿಂಡಿಕೊಂಡು ನೋಡ್ತಾ ಇದ್ದೆ, ನಂಬಲೇ ಆಗ್ತಾ ಇರಲಿಲ್ಲ. ದೇವರ ಆಶೀರ್ವಾದ ತುಂಬಾ ಜಾಸ್ತಿ ಸಿಕ್ಕಿದೆ. ಇಷ್ಟು ಜನ ಪ್ರೀತಿ ತೋರಿಸ್ತಾ ಇದ್ದಾರೆ, ಆ ಯೋಗ್ಯತೆ, ಅರ್ಹತೆ ನನಗೆ ಇದ್ಯಾ ಅನ್ನೋದು ಅನ್ನಿಸುತ್ತೆ ಎಂದಿದ್ದಾರೆ ಗಿಲ್ಲಿ.
ಇದನ್ನೂ ಓದಿ: Bigg Boss Kannada 12: ಪ್ರೀತಿಯಿಂದ ಗಿಲ್ಲಿಗೆ ಕಿಚ್ಚ ಕೊಟ್ಟ ಉಡುಗೊರೆ ಏನು? ನಟನಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು?
ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss Kannada 12) ಗಿಲ್ಲಿ ನಟ ಚಾಂಪಿಯನ್ ಆಗಿದ್ದರಿಂದ ಅವರ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಗ್ರ್ಯಾಂಡ್ ಫಿನಾಲೆ ಹಿನ್ನೆಲೆಯಲ್ಲಿ ಬಿಡದಿ ಬಳಿಯ ಜಾಲಿವುಡ್ ಸ್ಟುಡಿಯೋದ ಬಿಗ್ಬಾಸ್ ಹೌಸ್ ಬಳಿ ಭಾನುವಾರ ರಾತ್ರಿ ಸಾವಿರಾರು ಅಭಿಮಾನಿಗಳು ಜಮಾಯಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದರು.