Actor Darshan: ವಿದೇಶಕ್ಕೆ ಹೋಗಲು ದರ್ಶನ್ಗೆ ಕೋರ್ಟ್ ಅನುಮತಿ; ಶೀಘ್ರದಲ್ಲೇ ತೆರೆಗೆ ಬರಲಿದೆಯಾ ಡೆವಿಲ್?
ರೇಣುಕಾಸ್ವಾಮಿ (Renukaswami) ಕೊಲೆ ಪ್ರಕರಣದಲ್ಲಿ ಆರೋಪಿ ಆದ ಬಳಿಕ ನಟ ದರ್ಶನ್ (Darshan) ಅವರಿಗೆ ಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿತ್ತು. ) ಅವರಿಗೆ ವಿದೇಶಕ್ಕೆ ಹೋಗಲು ಅನುಮತಿ ಇರಲಿಲ್ಲ. ಈಗ ಅವರಿಗೆ ಸಿಹಿ ಸುದ್ದಿಯೊಂದು ದೊರಕಿದೆ. ವಿದೇಶಕ್ಕೆ ತೆರಳಿ ಶೂಂಟಿಂಗ್ ಮಾಡಲು ಇದೀಗ ಕೋರ್ಟ್ ಅನುಮತಿ ನೀಡಿದೆ.


ಬೆಂಗಳೂರು: ರೇಣುಕಾಸ್ವಾಮಿ (Renukaswami) ಕೊಲೆ ಪ್ರಕರಣದಲ್ಲಿ ಆರೋಪಿ ಆದ ಬಳಿಕ ನಟ ದರ್ಶನ್ (Darshan) ಅವರಿಗೆ ಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿತ್ತು. ) ಅವರಿಗೆ ವಿದೇಶಕ್ಕೆ ಹೋಗಲು ಅನುಮತಿ ಇರಲಿಲ್ಲ. ಈಗ ಅವರಿಗೆ ಸಿಹಿ ಸುದ್ದಿಯೊಂದು ದೊರಕಿದೆ. ವಿದೇಶಕ್ಕೆ ತೆರಳಿ ಶೂಂಟಿಂಗ್ ಮಾಡಲು ಇದೀಗ ಕೋರ್ಟ್ ಅನುಮತಿ ನೀಡಿದೆ. ಜುಲೈ 1ರಿಂದ ಜುಲೈ 27ರವರೆಗೆ ವಿದೇಶದಲ್ಲಿ ಸಿನಿಮಾ ಶೂಟಿಂಗ್ ಮಾಡಲು ಅವಕಾಶ ನೀಡಲಾಗಿದೆ. ಕೆಲವು ಷರತ್ತುಗಳನ್ನು ವಿಧಿಸುವ ಮೂಲಕ ದರ್ಶನ್ ಅವರಿಗೆ ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ಅನುಮತಿ ಕೊಟ್ಟಿದೆ.
ಸದ್ಯ ಡೆವಿಲ್ ಚಿತ್ರದಲ್ಲಿ ಬ್ಯುಸಿಯಾಗಿರುವ ದರ್ಶನ್. ಇನ್ನು ಮುಂದೆ ವಿದೇಶಕ್ಕೆ ತೆರಳಿ ಚಿತ್ರದ ಶೂಟಿಂಗ್ನಲ್ಲಿ ಭಾಗವಹಿಸಬಹುದಾಗಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ 2 ನೇ ಆರೋಪಿಯಾಗಿರುವ ದರ್ಶನ್ಗೆ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ಬಾಕಿ ಇದೆ. ಅದರ ಮಧ್ಯದಲ್ಲಿಯೇ ಕೋರ್ಟ್ ದರ್ಶನ್ ಅವರಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದೆ. ರೇಣುಕಾಸ್ವಾಮಿ ಹತ್ಯೆ ಬಳಿಕ ದರ್ಶನ್ ನಟನೆಯ ಡೆವಿಲ್ ಚಿತ್ರದ ಚಿತ್ರೀಕರಣ ಅರ್ಧಕ್ಕೆ ನಿಂತಿತ್ತು. ಜಾಮೀನು ಸಿಕ್ಕ ಬಳಿಕ ಮತ್ತೆ ಶೂಟಿಂಗ್ ಆರಂಭಿಸಲಾಯಿತು. ವಿದೇಶದಲ್ಲಿ ಕೂಡ ‘ಡೆವಿಲ್: ದಿ ಹೀರೋ’ ಸಿನಿಮಾದ ಚಿತ್ರೀಕರಣ ನಡೆಯಬೇಕಿದೆ. ಆ ಸಲುವಾಗಿ ಅನುಮತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ದರ್ಶನ್ ಅರ್ಜಿ ಸಲ್ಲಿಸಿದ್ದರು. ದರ್ಶನ್ ಅವರ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ.
ಮುಗಿಯದ ಕಾನೂನು ಸಂಕಷ್ಟ
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಆರೋಪಿಯಾಗಿರುವ ದರ್ಶನ್ಗೆ ಕಾನೂನು ಸಂಕಷ್ಟ ತಪ್ಪಿಲ್ಲ. ಹಳೇ ಪ್ರಕರಣದಲ್ಲಿ ಇದೀಗ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿಯಾಗಿದೆ. ಅಪರೂಪದ ಪಕ್ಷಿಗಳನ್ನು ಸಾಕಿದ್ದಕ್ಕಾಗಿ ನಟ ದರ್ಶನ್, ಪತ್ನಿ ವಿಜಯ ಲಕ್ಷ್ಮಿ ಹಾಗೂ ಫಾರ್ಮ್ಹೌಸ್ ವ್ಯವಸ್ಥಾಪಕ ನಾಗರಾಜ್ ವಿರುದ್ಧ ಎರಡು ವರ್ಷದ ಹಿಂದೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಡಬ್ಲ್ಯುಪಿಎನ ಶೆಡ್ಯೂಲ್ 2ರ ಅಡಿಯಲ್ಲಿ ಬರುವ 4 ಬಾರ್ ಹೆಡೆಡ್ ಬಾತುಗಳನ್ನು ದರ್ಶನ್ ತಮ್ಮ ಫಾರ್ಮ್ಹೌಸ್ನಲ್ಲಿ ಸಾಕುತ್ತಿದ್ದರು. ಇದೀಗ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ಗೆ ನೋಟೀಸ್ ನೀಡಲಾಗಿದೆ.
ಈ ಸುದ್ದಿಯನ್ನೂ ಓದಿ: Actor Darshan: ವಿದೇಶಕ್ಕೆ ಹೋಗಲು ಮುಂದಾದ ನಟ ದರ್ಶನ್, ಷರತ್ತು ಸಡಿಲಿಕೆ ಕೋರಿ ಅರ್ಜಿ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇದೀಗ ನ್ಯಾಯಾಲಯ ನಟ ದರ್ಶನ್, ಪತ್ನಿ ವಿಜಯ ಲಕ್ಷ್ಮಿ ಹಾಗೂ ಫಾರ್ಮ್ಹೌಸ್ ವ್ಯವಸ್ಥಾಪಕ ನಾಗರಾಜ್ಗೆ ನೋಟಿಸ್ ನೀಡಿದೆ. ಈ ಬಾತುಕೋಳಿಗಳನ್ನು ಸ್ನೇಹಿತರು ಉಡುಗೊರೆ ನೀಡಿದ್ದಾಗಿ ದರ್ಶನ್ ಸ್ಪಷ್ಟನೆ ನೀಡಿದ್ದರು. ಇನ್ನು ಟಿ. ನರಸೀಪುರದ ಸಿವಿಲ್ ಕೋರ್ಟ್ನಲ್ಲಿ ದೂರು ದಾಖಲಾಗಿತ್ತು. ಇದೀಗ ಜುಲೈ 4ಕ್ಕೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ.