ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಪ್ರಕರಣದಲ್ಲಿ ನಟ ದರ್ಶನ್ ಸಹಚರರಾದ ಐವರು ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪ ಪ್ರಕಟಗೊಂಡಿದೆ. ನಟ ದರ್ಶನ್ ಗ್ಯಾಂಗ್ನ ಪವನ್, ರಾಘವೇಂದ್ರ, ನಂದೀಶ್, ವಿನಯ್ ಹಾಗೂ ಧನರಾಜ್ ಜಾಮೀನು ರದ್ದು ಕೋರಿದ್ದ ಪ್ರಾಸಿಕ್ಯೂಷನ್ ಅರ್ಜಿಯನ್ನು ಹೈಕೋರ್ಟ್ (High Court) ವಜಾಗೊಳಿಸಿದೆ. ಸದ್ಯ ಜಾಮೀನಿನ ಮೇಲೆ ಹೊರಗಿರುವ ಈ ಐವರು ಆರೋಪಿಗಳು ನಿರಾಳವಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳಿದ್ದರು. ಒಟ್ಟು 7 ಮಂದಿ ಆರೋಪಿಗಳ ಜಾಮೀನು ರದ್ದತಿಗೆ ಹೈಕೋರ್ಟ್ ಮೊರೆ ಹೋಗಿತ್ತು. ಈಗ ಐವರು ಆರೋಪಿಗಳಿಗೆ ಹೈಕೋರ್ಟ್ನಲ್ಲಿ ಜಯ ಸಿಕ್ಕಂತಾಗಿದ್ದು, ತನಿಖಾ ಸಂಸ್ಥೆಗೆ ಕಾನೂನಾತ್ಮಕವಾಗಿ ಹಿನ್ನಡೆಯಾದಂತಾಗಿದೆ.
ಇದನ್ನೂ ಓದಿ: Kiccha Sudeep: ಮುಂದಿನ ಯೋಜನೆಗಳ ಬಗ್ಗೆ ಕಿಚ್ಚ ಸುದೀಪ್ ಮಹತ್ವದ ಘೋಷಣೆ; ಫ್ಯಾನ್ಸ್ ಖುಷ್!
ಈ ಆರೋಪಿಗಳು ಹೊರಬಂದಲ್ಲಿ ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದು ವಾದಿಸಲಾಗಿತ್ತು. ಇಂದು ಪ್ರಾಸಿಕ್ಯೂಷನ್ ಅರ್ಜಿಯನ್ನು ವಜಾಗೊಳಿಸಿದ್ದು, ಆರೋಪಿಗಳ ಜಾಮೀನನ್ನು ಎತ್ತಿ ಹಿಡಿದಿದೆ.
ಸುಪ್ರೀಂ ಕೋರ್ಟ್ ಇತ್ತೀಚೆಗಷ್ಟೇ ದರ್ಶನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದರಿಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭಾವುಕರಾಗಿದ್ದರು. ಕಳೆದ ದಿನಗಳಿಂದ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಭಾವುಕ ಪೋಸ್ಟ್ಗಳನ್ನ ಹಂಚಿಕೊಳ್ಳುವ ಮೂಲಕ ವಿಜಯಲಕ್ಷ್ಮೀ ದರ್ಶನ್ ಅವರು ತಮ್ಮ ನೋವು, ಅಸಮಾಧಾನ, ಬೇಸರವನ್ನ ಹೊರಹಾಕಿದ್ದರು. .ಡಾಟಕ್ಕೆ ಬ್ರೇಕ್ ಹಾಕಲು ಪ್ರಾಸಿಕ್ಯೂಷನ್ ಈ ಕಾನೂನು ಹೋರಾಟವನ್ನು ಆರಂಭಿಸಿತ್ತು.
ಮೊದಲ ಬಾರಿ 2024 ಜೂನ್ 11 ರಂದು ಮೈಸೂರಿನಲ್ಲಿ ಬಂಧನಕ್ಕೆ ಒಳಗಾಗಿದ್ದ ದರ್ಶನ್ 2024 ಅಕ್ಟೋಬರ್ 30ರ ತನಕ ಅಂದರೆ 131 ದಿನಗಳ ಕಾಲ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲೇ ಇದ್ದರು. ಇದಾದ ಬಳಿಕ ಜಾಮೀನು ಪಡೆದು ಹೊರ ಬಂದಿದ್ದರು.
ಇದನ್ನೂ ಓದಿ: Alia Bhatt: ʻಆಲ್ಫಾʼ ಟೀಸರ್ ಬಿಡುಗಡೆ; ಆಲಿಯಾ ಭಟ್ ಬಗ್ಗೆ ಅಮಿತಾಭ್ ಮೆಚ್ಚುಗೆ
ಆದರೆ ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ರದ್ದು ಆಗಿದ್ದಕ್ಕೆ ಮತ್ತೆ ಆರೋಪಿ ದರ್ಶನ್ನ ಬಂಧನವಾಗಿತ್ತು.