ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kannada New Movie: ವಿಭಿನ್ನ ಶೀರ್ಷಿಕೆ ಮೂಲಕ ಕುತೂಹಲ ಮೂಡಿಸಿದ ‘ದಿ’ ಚಿತ್ರದ ಟ್ರೈಲರ್‌ ಔಟ್‌

Kannada New Movie: ವಿನಯ್ ವಾಸುದೇವ್ ನಿರ್ದೇಶನದ ಜತೆಗೆ ನಾಯಕನಾಗೂ ನಟಿಸಿರುವ ʼದಿʼ ಕನ್ನಡ ಚಿತ್ರದ ಟ್ರೈಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ‌. ಟ್ರೈಲರ್‌ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಮೇ 16ರಂದು ತೆರೆಗೆ ಬರಲಿದೆ.

ವಿನಯ್ ವಾಸುದೇವ್ ನಿರ್ದೇಶಿಸಿ, ನಟಿಸಿರುವ ‘ದಿ’ ಚಿತ್ರದ ಟ್ರೈಲರ್‌ ರಿಲೀಸ್‌

Profile Siddalinga Swamy May 12, 2025 9:16 PM

ಬೆಂಗಳೂರು: ವಿ.ಡಿ.ಕೆ. ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವಿನಯ್ ವಾಸುದೇವ್ ನಿರ್ದೇಶನದ ಜತೆಗೆ ನಾಯಕನಾಗೂ ನಟಿಸಿರುವ ʼದಿʼ ಚಿತ್ರದ (Kannada New Movie) ಟ್ರೈಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ‌. ಟ್ರೈಲರ್‌ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಮೇ 16ರಂದು ತೆರೆಗೆ ಬರಲಿದೆ. ಹಿರಿಯ ನಟ ಮಂಡ್ಯ ರಮೇಶ್ ʼದಿʼ ಚಿತ್ರದಟ್ರೈಲರ್‌ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ವಿಜಯ್ ಸಿನಿಮಾಸ್ ಅವರು ವಿಶಾಲ ಕರ್ನಾಟಕಕ್ಕೆ ಈ ಸಿನಿಮಾವನ್ನು ಹಂಚಿಕೆ ಮಾಡಲಿದ್ದಾರೆ. ಅಲೆನ್ ಭರತ್ ಛಾಯಾಗ್ರಹಣ, ಯು.ಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನವಿದೆ.



ನಮ್ಮ ಚಿತ್ರಕ್ಕೆ ʼದಿʼ ಎಂದು ಹೆಸರಿಡಲು ಮೂರು ಜನ ಮುಖ್ಯ ಕಾರಣ. ಒಂದು ನಟ ಕಿಚ್ಚ ಸುದೀಪ್. ಇನ್ನಿಬ್ಬರು ನನ್ನ ಗುರುಗಳು. ನಾನು ಸುದೀಪ್ ಅವರ ಅಭಿಮಾನಿ ಹಾಗೂ ಇನ್ನಿಬ್ಬರು ನಮ್ಮ ಗುರುಗಳ ಹೆಸರಿನಲ್ಲೂ ದಿ ಅಕ್ಷರವಿದೆ ಮತ್ತು ಚಿತ್ರದಲ್ಲೂ ನಾಯಕನ ಹೆಸರು ದೀಪು. ನಮ್ಮ ʼದಿʼ ಚಿತ್ರದ ನಾಯಕಿ ಹೆಸರು ದಿಶಾ ರಮೇಶ್. ಈ ಎಲ್ಲ ಕಾರಣಗಳಿಂದ ನಮ್ಮ ಚಿತ್ರಕ್ಕೆ ʼದಿʼ ಎಂದು ಶೀರ್ಷಿಕೆ ಇಡಲಾಗಿದೆ‌. ಹಾಗಾಗಿ ಇದು ಇಂಗ್ಲೀಷ್ ʼದಿʼ ಅಲ್ಲ‌. ಕನ್ನಡದ ʼದಿʼ. ಇನ್ನೂ ಈ ಚಿತ್ರದ ಶೇಕಡಾ 80ರಷ್ಟು ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆದಿದೆ. ದೇವರಾಯನ ದುರ್ಗ, ದೇವರಮನೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ‌. ಚಿತ್ರೀಕರಣವಾದ ಸ್ಥಳಗಳ ಹೆಸರಿನಲ್ಲೂ ದ ಅಕ್ಷರವಿದೆ. ಹೀಗೆ ಹಲವು ವಿಶೇಷಗಳಿರುವ ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದೇನೆ. ಜತೆಗೆ ನಾಯಕನಾಗೂ ನಟಿಸಿದ್ದೇನೆ. ಚಿತ್ರತಂಡದ ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಮೇ 16ರಂದು ತೆರೆ ಕಾಣಲಿದೆ‌ ಎಂದರು ನಾಯಕ ಹಾಗೂ ನಿರ್ದೇಶಕ ವಿನಯ್ ವಾಸುದೇವ್.

ನನಗೆ ವಿನಯ್ ಅವರು ಕಥೆ ಹೇಳಿದಾಗ ಕಥೆ ಕೇಳಿ ಬಹಳ ಇಷ್ಟವಾಯಿತು. ನಂತರ ಟೀಸರ್ ನೋಡಿದ ಮೇಲಂತೂ ಅವರು ಹೇಳಿದಕ್ಕಿಂತ ಇನ್ನೂ ಚೆನ್ನಾಗಿ ಮೂಡಿಬಂದಿತ್ತು. ಒಳ್ಳೆಯ ತಂಡದ ಜತೆಗೆ ಕೆಲಸ ಮಾಡಿದ್ದು ಖುಷಿಯಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ದಿಶಾ ರಮೇಶ್ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Summer Fashion: ಸಮ್ಮರ್‌ ಗ್ಲಾಮರಸ್‌ ಲುಕ್‌ಗಾಗಿ ಬಾರ್ಡಟ್‌ ಸ್ಟೈಲಿಂಗ್‌ಗೆ ಸೈ ಎಂದ ಯುವತಿಯರು!

ನಟಿ ಹರಿಣಿ ಶ್ರೀಕಾಂತ್, ನಟರಾದ ನಾಗೇಂದ್ರ ಅರಸ್, ಡಾಲಾ ಶರಣ್, ಕಲಾರತಿ ಮಹಾದೇವ್, ಛಾಯಾಗ್ರಾಹಕ ಅಲೆನ್ ಭರತ್, ಸಂಕಲನಕಾರ ಸಿದ್ದಾರ್ಥ್ ಆರ್. ನಾಯಕ್ ಮತ್ತು ಸಂಗೀತ ನಿರ್ದೇಶಕ ಯು.ಎಂ. ಸ್ಟೀವನ್ ಸತೀಶ್ ಮುಂತಾದವರು ʼದಿʼ ಚಿತ್ರದ ಕುರಿತು ಮಾತನಾಡಿದರು. ಮೇ 16ರಂದು ಬಿಡುಗಡೆಯಾಗಲಿರುವ ಈ ಚಿತ್ರವನ್ನು ವಿಶಾಲ ಕರ್ನಾಟಕಕ್ಕೆ ವಿಜಯ್ ಫಿಲಂಸ್ ಹಂಚಿಕೆ ಮಾಡಲಿದ್ದಾರೆ.