ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Kapati Movie: ಸೈಕಲಾಜಿಕಲ್ ಥ್ರಿಲ್ಲರ್ ʼಕಪಟಿʼ ಚಿತ್ರದ ಟ್ರೈಲರ್‌ ಔಟ್‌

ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ʼಕಪಟಿʼ ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕರಾದ ಕೆ. ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್ ಯು. ಶೆಟ್ಟಿ ಟ್ರೈಲರ್‌ ಅನಾವರಣಗೊಳಿಸಿದರು.

ಸೈಕಲಾಜಿಕಲ್ ಥ್ರಿಲ್ಲರ್ ʼಕಪಟಿʼ ಚಿತ್ರದ  ಟ್ರೈಲರ್‌ ಔಟ್‌

-

Profile
Siddalinga Swamy Feb 28, 2025 2:53 PM

ಬೆಂಗಳೂರು: ʼಹಗ್ಗದ ಕೊನೆʼ, ʼಆ ಕಾರಾಳ ರಾತ್ರಿʼ ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ದಯಾಳ್ ಪದ್ಮನಾಭನ್ ಅವರು ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿರುವ, ರವಿಕಿರಣ್ - ಚೇತನ್ ಎಸ್.ಪಿ. ನಿರ್ದೇಶಿಸಿರುವ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ʼಕಪಟಿʼ ಚಿತ್ರದ (Kapati Movie) ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕರಾದ ಕೆ. ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್ ಯು. ಶೆಟ್ಟಿ ಟ್ರೈಲರ್‌ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.



ನಮ್ಮ ಚಿತ್ರಕ್ಕೆ ನೀವೆಲ್ಲಾ ನೀಡುತ್ತಿರುವ ಪ್ರೋತ್ಸಾಹಕ್ಕೆ ಧನ್ಯವಾದ ಎಂದು ಮಾತನಾಡಿದ ಚಿತ್ರದ ನಿರ್ಮಾಪಕ‌ ದಯಾಳ್ ಪದ್ಮನಾಭನ್, ʼʼಮೂಲತಃ ಸಾಫ್ಟ್‌ವೇರ್ ಉದ್ಯೋಗಿಗಳಾಗಿರುವ ಚಿತ್ರದ ನಿರ್ದೇಶಕರೂ ಆಗಿರುವ ರವಿಕಿರಣ್ ಹಾಗೂ ಚೇತನ್ ಎಸ್.ಪಿ. ಮೊದಲು ಈ ಚಿತ್ರದ ನಿರ್ಮಾಣ‌ ಆರಂಭಿಸಿದ್ದರು. ನಂತರ ನನ್ನ ಬಳಿ ಬಂದು ಈ ಚಿತ್ರದ ಬಗ್ಗೆ ಹೇಳಿದರು. ನಾನು ಸಹ ಚಿತ್ರವನ್ನು ನೋಡಿದೆ. ನನಗೆ ಚಿತ್ರ ಇಷ್ಟವಾಯಿತು. ಆನಂತರ ನಾನು ಅವರ ಬಳಿ ಚಿತ್ರಕ್ಕೆ ಸಂಬಂಧಿಸಿದ ಹಾಗೆ ಕೆಲವು ಕಂಡೀಶನ್‌ಗಳನ್ನು ಹೇಳಿದೆ. ನನ್ನ ಎಲ್ಲ ಕಂಡೀಶನ್‌ಗಳಿಗೆ ಅವರು ಒಪ್ಪಿದರು. ಅನಂತರ ಚಿತ್ರದ ಪೂರ್ಣ ನಿರ್ಮಾಣದ ಜವಾಬ್ದಾರಿಯನ್ನು ನಾನು ತೆಗೆದುಕೊಂಡೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಡಾರ್ಕ್ ವೆಬ್ ಜಾನರ್‌ನ ಚಿತ್ರವಿದು. ಇಂದು ಟ್ರೈಲರ್‌ ಬಿಡುಗಡೆಯಾಗಿದೆ‌‌. ಮಾ. 7ರಂದು ʼಕಪಟಿʼ ಅದ್ದೂರಿಯಾಗಿ ಬಿಡುಗಡೆಯಾಗಲಿದೆʼʼ ಎಂದರು.

ʼʼಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಸಾಮಾನ್ಯ ಜನರಿಗೆ ಮೊಬೈಲ್ ಮಾತ್ರ ಗೊತ್ತು. ಆದರೆ ಅದೇ ಮೊಬೈಲ್‌ನಿಂದ ನಾವು ಹೇಗೆ ಮೋಸ ಹೋಗುತ್ತೇವೆ ಎಂಬ ತಿಳಿವಳಿಕೆ ನಮಗೆ ಕಡಿಮೆ. ನಮ್ಮ ಚಿತ್ರದಲ್ಲಿ ಕ್ಯಾಬ್ ಡ್ರೈವರ್, ಮೆಡಿಕಲ್ ವಿದ್ಯಾರ್ಥಿ ಹಾಗೂ ಫ್ಯಾಷನ್ ಡಿಸೈನರ್ ಮೂರು ಮುಖ್ಯಪಾತ್ರಗಳಿದ್ದು, ಆ ಪಾತ್ರಗಳನ್ನು ಸಾತ್ವಿಕ್ ಕೃಷ್ಣನ್, ದೇವ್ ದೇವಯ್ಯ ಹಾಗೂ ಸುಕೃತ ವಾಗ್ಲೆ ಮಾಡಿದ್ದಾರೆ. ಇದೊಂದು ಜನಸಾಮಾನ್ಯರ ಕಥೆ. ಆನ್‌ಲೈನ್ ಶೋಷಣೆಯ ಪರಿಣಾಮಗಳು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಜನರಿಗೆ ಹೇಗೆ ಮೋಸ ಮಾಡಬಹುದು ಎಂಬುದನ್ನು ಸಹ ಚಿತ್ರದಲ್ಲಿ ತೋರಿಸಲಾಗಿದೆ. ಇದೊಂದು ತಾಂತ್ರಿಕತೆಯಲ್ಲೂ ಶ್ರೀಮಂತಿಕೆಯಿಂದ ಕೂಡಿರುವ ಚಿತ್ರ.‌ ನೋಡುಗನಿಗೆ ಬೇಕಾದ ಎಲ್ಲ ಅಂಶಗಳನ್ನು ನಮ್ಮ ಚಿತ್ರ ಒಳಗೊಂಡಿದೆ.‌‌ ಪ್ರೇಕ್ಷಕರು ಕೊಟ್ಟ ದುಡ್ಡಿಗೆ ಬೇಸರ ಮೂಡಿಸದೆ, ಸಂಪೂರ್ಣ ಮನೋರಂಜನೆ ನೀಡುವ ಚಿತ್ರವಿದುʼʼ ಎಂದು ನಿರ್ದೇಶಕ ರವಿಕಿರಣ್ ಹಾಗೂ ಚೇತನ್ ಎಸ್.ಪಿ. ತಿಳಿಸಿದರು. ‌

ʼʼದಯಾಳ್ ಅವರ ನಿರ್ಮಾಣದ ಚಿತ್ರಗಳೆಂದರೆ ಅದು ಕಂಟೆಂಟ್ ಓರಿಯಂಟೆಡ್ ಆಗಿರುತ್ತದೆ. ಒಂದು ಸೂಕ್ಷ್ಮವಾದ ಕಥೆಯನ್ನು ನಿರ್ದೇಶಕದ್ವಯರು ತುಂಬಾ ಚೆನ್ನಾಗಿ ನಿರೂಪಣೆ ಮಾಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆʼʼ ಎಂದು ನಾಯಕಿ ಸುಕೃತ ವಾಗ್ಲೆ ತಿಳಿಸಿದರು.

ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್, ನಟ ಶಂಕರ್ ನಾರಾಯಣ್ ಹಾಗೂ ಛಾಯಾಗ್ರಾಹಕರಾದ ವಿಕ್ರಮ್ ಮತ್ತು ಸತೀಶ್ ರಾಜೇಂದ್ರನ್ ʼಕಪಟಿʼ ಚಿತ್ರದ ಕುರಿತು ಮಾತನಾಡಿದರು.

ಈ ಸುದ್ದಿಯನ್ನೂ ಓದಿ | BESCOM: ಬೆಸ್ಕಾಂನಿಂದ ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್‌ ಲೋಕಾರ್ಪಣೆ

ಸತೀಶ್ ಎಚ್.ಎನ್. ಅವರು ವೇದಿಕೆಗೆ ಆಗಮಿಸಿ, ನಮ್ಮನ್ನು ಕೆಲವರು ಆಧುನಿಕ ತಂತ್ರಜ್ಞಾನದ ಮೂಲಕ ಹೇಗೆಲ್ಲಾ ಮೋಸ ಮಾಡುತ್ತಾರೆ ಎಂಬುದನ್ನು ಪರದೆಯ ಮೇಲೆ ತೋರಿಸುತ್ತ ವಿವರಿಸಿದರು.