ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bhavya Gowda: "ತುಳಿದ ಜಾಗದಲ್ಲಿ ಬೆಳೆದು ತೋರಿಸು": ಕಿರುತೆರೆಯಲ್ಲಿ ಸಂಚಲನ ಸೃಷ್ಟಿಸಿದ ಭವ್ಯಾ ಗೌಡ ಇನ್​ಸ್ಟಾ ಸ್ಟೋರಿ

ಕಳೆದ ಎರಡು ದಿನಗಳಿಂದ ಭವ್ಯಾ ಗೌಡ ಇನ್ಸ್ಟಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಒಂದರ ಹಿಂದೆ ಒಂದರಂತೆ ಸ್ಟೋರಿ ಹಂಚಿಕೊಳ್ಳುತ್ತಿದ್ದಾರೆ. ಇದೀಗ ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್‌ನಲ್ಲಿ ಭವ್ಯಾ ಮತ್ತೊಂದು ಸ್ಟೋರಿ ಹಂಚಿಕೊಂಡಿದ್ದಾರೆ. ಇದು ಕಿರುತೆರೆಯಲ್ಲಿ ಸಂಚಲನ ಸೃಷ್ಟಿಸಿದೆ.

ಕಿರುತೆರೆಯಲ್ಲಿ ಸಂಚಲನ ಸೃಷ್ಟಿಸಿದ ಭವ್ಯಾ ಗೌಡ Insta ಸ್ಟೋರಿ

Bhavya Gowda

Profile Vinay Bhat Jun 27, 2025 3:39 PM

ಝೀ ಕನ್ನಡ ವಾಹಿನಿಯಲ್ಲಿ ಜೂನ್ 16 ರಂದು ರಾತ್ರಿ 8 ಗಂಟೆಗೆ ಪ್ರಸಾರ ಕಾಣಬೇಕಿದ್ದ ಬಹುನಿರೀಕ್ಷಿತ ಹೊಸ ಕರ್ಣ ಧಾರಾವಾಹಿಯ (Karna Kannada serial) ಪ್ರಸಾರವನ್ನು ಕೊನೇ ಕ್ಷಣದಲ್ಲಿ ಏಕಾಏಕಿ ರದ್ದು ಮಾಡಿದ್ದು ಗೊತ್ತೇ ಇದೆ. ಈ ಧಾರಾವಾಹಿ ಸದ್ಯಕ್ಕೆ ಟೆಲಿಕಾಸ್ಟ್ ಆಗುವುದಿಲ್ಲ ಎಂಬ ಮಾಹಿತಿಯನ್ನು ವಾಹಿನಿ ನೀಡಿತ್ತು, ಆದರೆ ಆದಷ್ಟು ಬೇಗ ಪುನಃ ನಿಮ್ಮ ಮುಂದೆ ಬರುತ್ತೇವೆ ಎಂದು ಹೇಳಿದೆ. ಮೂಲಗಳ ಪ್ರಕಾರ ಈ ಧಾರಾವಾಹಿ ಪ್ರಸಾರ ಕಾಣದಿರಲು ಕಾರಣ ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಭವ್ಯಾ ಗೌಡ ಎನ್ನಲಾಗುತ್ತಿದೆ.

ಈ ಧಾರಾವಾಹಿಯಲ್ಲಿ ಕಿರಣ್ ರಾಜ್, ಭವ್ಯಾ ಗೌಡ, ನಮ್ರತಾ ಗೌಡ ಮುಖ್ಯ ಭೂಮಿಕೆಯಲ್ಲಿ ನಟಿಸತ್ತಿದ್ದಾರೆ. ಮೂಲಗಳ ಪ್ರಕಾರ ಝೀ ಕನ್ನಡ ವಾಹಿನಿಯ ಪ್ರತಿಸ್ಪರ್ಧಿ ಚಾನೆಲ್‌ ಜೊತೆಗೆ ಭವ್ಯಾ ಗೌಡ ಅವರ ಅಗ್ರೀಮೆಂಟ್‌ ಆಗಿತ್ತು. ಅಗ್ರೀಮೆಂಟ್‌ ಪ್ರಕಾರ, ಕೆಲ ತಿಂಗಳ ಮಟ್ಟಿಗೆ ಭವ್ಯಾ ಗೌಡ ಬೇರೆ ಚಾನೆಲ್‌ಗಾಗಿ ಕೆಲಸ ಮಾಡುವಂತಿಲ್ಲ. ಆದರೆ, ಇವರು ಆ ಅಗ್ರೀಮೆಂಟ್ ಮುಗಿಯುವ ಮುನ್ನವೇ ಕರ್ಣ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೇ ಇಟ್ಟುಕೊಂಡು ಪ್ರತಿಸ್ಪರ್ಧಿ ಚಾನೆಲ್‌ ಕೋರ್ಟ್‌ ಮೆಟ್ಟಿಲೇರಿತು. ಹೀಗಾಗಿ ಕರ್ಣ ಧಾರಾವಾಹಿ ಪ್ರಸಾರಕ್ಕೆ ಸ್ಟೇ ತಂದಿದೆ.

ತನ್ನ ಪ್ರೊಮೋ ಮೂಲಕವೇ ದೊಡ್ಡ ಹೈಪ್ ಕ್ರಿಯೆಟ್ ಮಾಡಿದ್ದ ಕರ್ಣ ಧಾರಾವಾಹಿ ನೋಡಲು ವೀಕ್ಷಕರು ಕಾದು ಕುಳಿತಿದ್ದರು. ಆದರೆ ವೀಕ್ಷಕರು ಹಾಗೂ ಅಭಿಮಾನಿಗಳ ಆಸೆಗೆ ಈಗ ತಣ್ಣೀರು ಎರಚಿದಂತಾಯಿತು. ಈ ಧಾರಾವಾಹಿ ಪ್ರಸಾರ ಆಗುತ್ತಿಲ್ಲ ಎಂಬ ಸುದ್ದಿಯ ಜೊತೆಗೆ ಭವ್ಯಾ ಗೌಡ ಅವರು ತಮ್ಮ ಸೋಷಿಯಲ್ ಮೀಡಿಯಾದಿಂದ ಕರ್ಣ ಧಾರಾವಾಹಿಯ ಎಲ್ಲ ಪೋಸ್ಟರ್ ಹಾಗೂ ವಿಡಿಯೋಗಳನ್ನು ಡಿಲೀಟ್ ಮಾಡಿದರು.

Rakshak Bullet: ಕೊನೆಗೂ ರಮೋಲಗೆ ಪ್ರಪೋಸ್ ಮಾಡೇ ಬಿಟ್ಟ ರಕ್ಷಕ್ ಬುಲೆಟ್

ಈ ವಿವಾದದ ಬಳಿಕ ಭವ್ಯಾ ಅವರು ಸೈಲೆಂಟ್ ಆಗಿದ್ದರು. ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಯಾವುದೇ ಫೋಟೋ ಅಥವಾ ವಿಡಿಯೋವನ್ನು ಹಂಚಿಕೊಂಡಿರಲಿಲ್ಲ. ಆದರೆ, ಕಳೆದ ಎರಡು ದಿನಗಳಿಂದ ಭವ್ಯಾ ಇನ್​ಸ್ಟಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಒಂದರ ಹಿಂದೆ ಒಂದರಂತೆ ಸ್ಟೋರಿ ಹಂಚಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟಿದ್ದರು. ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಪುನೀತರಾದರು. ಅದಾದ್ಮೇಲೆ ತಮ್ಮ ಇನ್​ಸ್ಟಾಗ್ರಾಮ್ ಅಕೌಂಟ್‌ನಲ್ಲಿ ಭವ್ಯಾ ಗೌಡ ಒಂದು ಸ್ಟೋರಿ ಹಂಚಿಕೊಂಡಿದ್ದಾರೆ. ಇದು ಕಿರುತೆರೆಯಲ್ಲಿ ಸಂಚಲನ ಸೃಷ್ಟಿಸಿದೆ.

ಭವ್ಯಾ ಗೌಡ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ "ತುಳಿದ ಜಾಗದಲ್ಲಿ ಬೆಳೆದು ತೋರಿಸು" ಎಂದು ಬರೆದುಕೊಂಡಿದ್ದಾರೆ. ಹಾಗೇ ಮಣ್ಣಿನ ಮೇಲೆ ಇಟ್ಟ ಹೆಜ್ಜೆಯ ಗುರುತು, ಅದರ ಮೇಲೆ ಹುಟ್ಟಿದ ಸಸಿಯ ಫೋಟೊವನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಭವ್ಯಾ ಗೌಡ ಪರೋಕ್ಷವಾಗಿ ಯಾರಿಗೋ ಟಾಂಗ್ ಕೊಟ್ಟಿದ್ದಾರೆ, ಇದು ಯಾರಿಗೆ ಇರಬಹುದು ಎಂಬುದು ಕಿರುತೆರೆ ವಲಯದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.