ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಯುಗಾದಿ ಹಬ್ಬಕ್ಕೆ ಮಜಾ ಟಾಕೀಸ್ ಮಹಾ ಸಂಚಿಕೆ: ಮನದ ಕಡಲು-ಮುಂಗಾರು ಮಳೆ ಟೀಮ್​ನ ಸಮಾಗಮ

ಯೋಗರಾಜ್ ಭಟ್ಟರ ಹೊಸ ಸಿನೆಮಾ 'ಮನದ ಕಡಲು' ಜೊತೆ 'ಮುಂಗಾರು ಮಳೆ'ಯ ಫ್ಯಾಮಿಲಿ 'ಮಜಾ ಟಾಕೀಸ್' ಗೆ ಆಗಮಿಸಿದೆ. ಈ ಮನರಂಜನೆಯ ಮಹಾ ಸಮ್ಮಿಲನ ಯುಗಾದಿ ಹಬ್ಬದ ಸ್ಪೆಷಲ್ ಆಗಿದ್ದು, ಶನಿವಾರ ರಾತ್ರಿ 7:30 ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಮೂರು ಗಂಟೆಗಳ ಈ 'ಮಹಾ ಸಂಚಿಕೆ' ಮನೆಮಂದಿಗೆ ಮನರಂಜನೆಯ ಮಳೆಯನ್ನೇ ಹರಿಸಲಿದೆ.

ಮಜಾ ಟಾಕೀಸ್: ಮನದ ಕಡಲು-ಮುಂಗಾರು ಮಳೆ ಟೀಮ್​ನ ಸಮಾಗಮ

Maja Talkies

Profile Vinay Bhat Mar 27, 2025 6:58 AM

ಯೋಗರಾಜ್ ಭಟ್ ಅವರ 'ಮುಂಗಾರು ಮಳೆ' (Mungaru Male) ಸಿನಿಮಾ ಕನ್ನಡ ಚಿತ್ರರಂಗಕ್ಕೆ ಬಂಗಾರ ಬೆಳೆದು ಕೊಟ್ಟ ಚಿತ್ರ. ಬಿಡುಗಡೆಯಾಗಿ ದಶಕಗಳೇ ಕಳೆದು ಹೋಗಿದ್ದರೂ ಮಳೆಯ ಮೆಮೊರಿ ಅಳಿಸಿ ಹೋಗುವಂಥದ್ದಲ್ಲ. ಮತ್ತೆ ಮಳೆ ಹುಯ್ಯುತ್ತಿದೆ ಎಲ್ಲ ನೆನಪಾಗುತಿದೆ ಅನ್ನುವ ಹಾಗೆ ಮತ್ತೆ 'ಮುಂಗಾರು ಮಳೆ'ಯ ನೆನಪು ಅಪ್ಪಳಿಸಿ ಬರುತ್ತಿರೋದು ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಶೋ ಮಜಾ ಟಾಕೀಸ್​ನಲ್ಲಿ. ಹಾಗೆ ಅಪ್ಪಳಿಸೋದಕ್ಕೆ ಇನ್ನೊಂದು ಕಾರಣವೂ ಇದೆ ಅದೇ, ಭಟ್ಟರ ಹೊಸ ಸಿನೆಮಾ 'ಮನದ ಕಡಲು'.

ಹೌದು, ಭಟ್ಟರ ಹೊಸ ಸಿನೆಮಾ 'ಮನದ ಕಡಲು' ಜೊತೆ 'ಮುಂಗಾರು ಮಳೆ'ಯ ಫ್ಯಾಮಿಲಿ 'ಮಜಾ ಟಾಕೀಸ್' ಗೆ ಆಗಮಿಸಿದೆ. ಈ ಮನರಂಜನೆಯ ಮಹಾ ಸಮ್ಮಿಲನ ಯುಗಾದಿ ಹಬ್ಬದ ಸ್ಪೆಷಲ್ ಆಗಿದ್ದು, ಶನಿವಾರ ರಾತ್ರಿ 7:30 ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಮೂರು ಗಂಟೆಗಳ ಈ 'ಮಹಾ ಸಂಚಿಕೆ' ಮನೆಮಂದಿಗೆ ಮನರಂಜನೆಯ ಮಳೆಯನ್ನೇ ಹರಿಸಲಿದೆ.

'ಮನದ ಕಡಲು' ಚಿತ್ರದ ತಾರಾಬಳಗ - ಸುಮುಖ್, ಅಂಜಲಿ ಅನೀಶ್, ರಿಷಿಕಾ ಶೆಟ್ಟಿಯವರು 'ಮುಂಗಾರು ಮಳೆ'ಯ ಪೂಜಾ ಗಾಂಧಿ, ದಿಗಂತ್, ನೀನಾಸಂ ಅಶ್ವಥ್, ಸುಧಾ ಬೆಳವಾಡಿ, ಪದ್ಮಜಾ ರಾವ್, ಸಂಚಿತಾ ಶೆಟ್ಟಿಯವರು ಈ ಮಹಾ ಸಂಚಿಕೆಯಲ್ಲಿ ಭಾಗವಹಿಸಿದ್ದಾರೆ. ಎರಡೂ ಚಿತ್ರಗಳಲ್ಲಿ ತಮ್ಮ ಅಭಿನಯದ ಕಾಣಿಕೆ ನೀಡಿರುವ 'ರಸಮಯ ಚಕ್ರವರ್ತಿ' ರಂಗಾಯಣ ರಘು, ನಿರ್ಮಾಪಕ ಈ ಕೃಷ್ಣಪ್ಪ, ಎಕ್ಸೆಕ್ಯುಟಿವ್ ಪ್ರೊಡ್ಯೂಸರ್ ಗಂಗಾಧರ್ ಈ ಮಹಾ ಸಂಚಿಕೆಯಲ್ಲಿರುವುದು ವಿಶೇಷ.



ಎರಡೂ ಚಿತ್ರಗಳ ಸೂತ್ರಧಾರ ನಿರ್ದೇಶಕ ಯೋಗರಾಜ್ ಭಟ್ ತಮ್ಮ ಎಂದಿನ ಪಂಚ್ ರಂಗಿ ಮಾತುಗಳಿಂದ ಇಡೀ ಕಾರ್ಯಕ್ರಮ ಆನಂದದ ಕಡಲಾಗುವಂತೆ ನೋಡಿಕೊಂಡಿದ್ದಾರೆ. ಕನ್ನಡದ ಯೋಗ ಬದಲಾದದ್ದು ಮನದ ಕಡಲಾದದ್ದು ಕಂಡದ್ದು ಕಾಣದ್ದು ಎಲ್ಲವೂ ಇಲ್ಲಿ ಜೋಗದ ಜಲಪಾತದಂತೆ ಹರಿದು ಬಂದಿದೆ. 'ಏನು ನಿನ್ನ ಹನಿಗಳ ಲೀಲೆ' ಎಂದ ಕವಿ ಯೋಗರಾಜರಿಂದ 'ಹನಿ ಹನಿ ಪ್ರೇಮ್ ಕಹಾನಿ' ಇಲ್ಲಿ ತೆರೆದುಕೊಳ್ಳಲಿದೆ. ಅವರ ಯೋಗಾಯೋಗವನ್ನು ತಮ್ಮ ಸೃಜನಶೀಲತೆಯೊಂದಿಗೆ ಎಂದಿನಂತೆ ನಡೆಸಿಕೊಂಡು ಹೋಗಿರುವುದು 'ಮಜಾ ಟಾಕೀಸ್'ನ ರೂವಾರಿ ಸೃಜನ್.

'ರಸಮಯ ಚಕ್ರವರ್ತಿ' ರಂಗಾಯಣ ರಘು ಈ ಎರಡು ಚಿತ್ರಗಳ ರಸಮಯ ಕ್ಷಣಗಳನ್ನು ಹಂಚಿಕೊಂಡಿರುವುದು ಮಜಾ ಟಾಕೀಸ್ ನ ಮಹಾ ಸಂಚಿಕೆಯ ಹೈಲೈಟ್. ಒಬ್ಬ ಕಲಾವಿದನಾಗಿ ಅವರು ತಮ್ಮ ಸುತ್ತಮುತ್ತಲಿನ ಜಗತ್ತನ್ನು ಎಷ್ಟು ಸೂಕ್ಷ್ಮವಾಗಿ ಗಮನಿಸುತ್ತಾರೆ ಅನ್ನುವುದನ್ನು ಇಲ್ಲಿ ಯೋಗರಾಜ್ ಭಟ್ ರಸವತ್ತಾಗಿ ವಿವರಿಸಿದ್ದಾರೆ. ಹಾಗೆಯೇ ಮಿಮಿಕ್ರಿ ಗೋಪಿ ರಂಗಾಯಣ ರಘು ಅವರನ್ನು ಮಿಮಿಕ್ ಮಾಡಿ ಅವರಿಂದ ಶಭಾಷ್ ಗಿರಿ ಪಡೆದಿರುವುದು, ಗೋಪಿಯವರು ನಟ ದತ್ತಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ದನಿಯನ್ನು ಅನುಕರಣೆ ಮಾಡಿ ಹಾಸ್ಯದ ಹೊನಲನ್ನು ಹರಿಸಿರುವುದು ಮಜವಾಗಿದೆ.

Aishwarya-Shishir: ಕೊನೆಗೂ ಗುಡ್ ನ್ಯೂಸ್ ಕೊಟ್ಟ ಐಶ್ವರ್ಯಾ-ಶಿಶಿರ್: ಪಾರ್ಟ್ನರ್ಸ್ ಆಗಲಿದ್ದಾರೆ ಬಿಗ್ ಬಾಸ್ ಜೋಡಿ