ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shiva Rajkumar: ಅಣ್ಣಾವ್ರ ಜನ್ಮೋತ್ಸವಕ್ಕೆ ಶಿವಣ್ಣ ನಟನೆಯ ʻಬೇಲ್ʼ ಫಸ್ಟ್ ಲುಕ್ ಔಟ್‌!

Shiva Rajkumar: ಈ ಮಹತ್ವಾಕಾಂಕ್ಷೆ ಪ್ರಾಜೆಕ್ಟ್ ನ್ನು ವೆಂಕಟ್ ಕೆ ನಾರಾಯಣ್ ಅವರು ತಮ್ಮದೇ ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಗೋವಿಂದಾಯ ನಮಃ, ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ, ರೇಮೋ ಸೇರಿದಂತೆ ಅನೇಕ‌ ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಪವನ್ ಶಿವಣ್ಣಗೆ ಆಕ್ಷನ್ ಕಟ್ ಹೇಳಬೇಕೆಂಬ ಬಹುದಿನಗಳ ಕನಸನ್ನು ಈಡೇರಿಸಿಕೊಳ್ಳುತ್ತಿದ್ದಾರೆ.

ಅಣ್ಣಾವ್ರ ಜನ್ಮೋತ್ಸವಕ್ಕೆ ಶಿವಣ್ಣ ನಟನೆಯ ʻಬೇಲ್ʼ ಫಸ್ಟ್ ಲುಕ್ ಔಟ್‌!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ -

Yashaswi Devadiga
Yashaswi Devadiga Apr 24, 2026 8:51 PM

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shiva Rajkumar) ಅವರ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ನಿರ್ದೇಶಕ ಪವನ್‌ ಒಡೆಯರ್‌ (Pawan Odeyar) ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಬಹು ನಿರೀಕ್ಷಿತ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ನ್ನು (First Look) ಇಂದು ಅಣ್ಣಾವ್ರ ಜನ್ಮೋತ್ಸವದ ಅಂಗವಾಗಿ ಅನಾವರಣ ಮಾಡಲಾಗಿದೆ.

ವೆಂಕಟ್ ಕೆ ನಾರಾಯಣ್, ಶಿವಣ್ಣ ಹಾಗೂ ಪವನ್ ಒಡೆಯರ್ ಕಾಂಬೋದ ಈ ಸಿನಿಮಾಗೆ ಬೇಲ್ ಎಂಬ ಟೈಟಲ್ ಇಡಲಾಗಿದೆ. ಮಳೆ‌ಯಲ್ಲಿ ಛತ್ರಿ ಹಿಡಿದು ಶಿವಣ್ಣ‌‌ ನಿಂತಿರುವ ಪೋಸ್ಟರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದೆ.

ಈ ಮಹತ್ವಾಕಾಂಕ್ಷೆ ಪ್ರಾಜೆಕ್ಟ್ ನ್ನು ವೆಂಕಟ್ ಕೆ ನಾರಾಯಣ್ ಅವರು ತಮ್ಮದೇ ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಗೋವಿಂದಾಯ ನಮಃ, ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ, ರೇಮೋ ಸೇರಿದಂತೆ ಅನೇಕ‌ ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಪವನ್ ಶಿವಣ್ಣಗೆ ಆಕ್ಷನ್ ಕಟ್ ಹೇಳಬೇಕೆಂಬ ಬಹುದಿನಗಳ ಕನಸನ್ನು ಈಡೇರಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Bollywood The Kerala Story 2 OTT: ‘ದಿ ಕೇರಳ ಸ್ಟೋರಿ 2’ ಸಿನಿಮಾ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌!

ದಶಕಗಳಿಂದ ಐಕಾನ್

ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಪವನ್ ಒಡೆಯರ್, "ಇದು ನನಗೂ ಮತ್ತು ನಿರ್ಮಾಣ ಸಂಸ್ಥೆಗೂ ಅತ್ಯಂತ ವಿಶೇಷವಾದ ಸಿನಿಮಾವಾಗಲಿದೆ. ನಿಮಗಾಗಿ ನಾವು ಬಹಳಷ್ಟು ಕಾಯ್ದಿರಿಸಿದ್ದೇವೆ ಮತ್ತು ಶೀಘ್ರದಲ್ಲೇ ಟೀಸರ್ ಅನ್ನು ಘೋಷಿಸುತ್ತೇವೆ. ಶಿವಣ್ಣ ಅವರೊಂದಿಗೆ ಕೆಲಸ ಮಾಡುವುದು ನನ್ನ ಕನಸು ನನಸಾಗಿದೆ. ಅವರು ದಶಕಗಳಿಂದ ಐಕಾನ್ ಆಗಿದ್ದಾರೆ ಮತ್ತು ಹಿಂದೆಂದೂ ಮಾಡದ ರೀತಿಯಲ್ಲಿ ಅವರನ್ನು ಪ್ರಸ್ತುತಪಡಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ" ಎಂದರು.



'ಬೇಲ್' ನಮಗೆ ಬಹಳ ವಿಶೇಷವಾದ ಯೋಜನೆಯಾಗಿದ್ದು, ಇದು ಬಲವಾದ ಕಥೆ ಹೇಳುವಿಕೆಯನ್ನು ವಿಶಿಷ್ಟ ಸಿನಿಮೀಯ ದೃಷ್ಟಿಕೋನದೊಂದಿಗೆ ಸಮತೋಲನಗೊಳಿಸುತ್ತದೆ. ಪವನ್ ಒಡೆಯರ್ ಅವರಂತಹ ಸಾಬೀತಾದ ಕಥೆಗಾರರೊಂದಿಗೆ ಕೈ ಜೋಡಿಸುವುದು ಮತ್ತು ಶಿವಣ್ಣ ಅವರಂತಹ ಐಕಾನ್ ಜೊತೆಗೆ ಕೆಲಸ ಮಾಡುವುದು ಸಂಪೂರ್ಣ ಗೌರವವಾಗಿದೆ ಮತ್ತು ಅರ್ಥಪೂರ್ಣ ಸಿನಿಮಾವನ್ನು ನೀಡುವ ನಮ್ಮ ಉದ್ದೇಶದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುತ್ತದೆ.

ಇದನ್ನೂ ಓದಿ: Kajol: ಕಾಜೋಲ್ ಕಿಸ್ಸಿಂಗ್ ಸೀನ್ ಒಪ್ಪಿಕೊಂಡಿದ್ದೇಕೆ? ಆ ನಿಯಮ ಮುರಿದ್ದಿದ್ದೇಕೆ?

ಪ್ರೇಕ್ಷಕರು ಇಲ್ಲಿಯವರೆಗೆ ನೋಡಿರದ ಹೊಸ ದೃಷ್ಟಿಕೋನದಲ್ಲಿ ಶಿವಣ್ಣ ಅವರನ್ನು ಪ್ರಸ್ತುತಪಡಿಸಲು ನಾವು ವಿಶೇಷವಾಗಿ ಎದುರು ನೋಡುತ್ತಿದ್ದೇವೆ' ವೆಂಕಟ್ ಕೆ‌ ಕೊನಂಕಿ ಹೇಳಿದ್ದಾರೆ.