ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಂಗಳೂರಲ್ಲಿ ಜೂನಿಯರ್ ಎನ್‌ಟಿಆರ್ ಅಬ್ಬರ: ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರಿಂದ ಲಾಠಿ ಪ್ರಹಾರ!

Junior NTR in Bangalore: ಕೆಐಎಂಎಸ್ (KIMS) ಆಸ್ಪತ್ರೆಯ ಉದ್ಘಾಟನೆಗೆ ಆಗಮಿಸಿದ್ದ ನಟ ಜೂನಿಯರ್‌ ಎನ್‌ಟಿಆರ್‌ ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಉಂಟಾದ ಟ್ರಾಫಿಕ್ ಜಾಮ್ ಮತ್ತು ನೂಕುನುಗ್ಗಲನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಎನ್‌ಟಿಆರ್‌ ಅವರನ್ನು ಕಂಡು ಅಭಿಮಾನಿಗಳು, "ಸಿಎಂ.. ಸಿಎಂ.." ಎಂದು ಘೋಷಣೆ ಕೂಗಿದ್ದು ವಿಶೇಷವಾಗಿತ್ತು.

ಬೆಂಗಳೂರಿಗೆ ಬಂದ ಜೂ. ಎನ್‌ಟಿಆರ್; ಅಭಿಮಾನಿಗಳ ಮೇಲೆ ಲಾಠಿ ಬೀಸಿದ ಪೊಲೀಸರು

-

Avinash GR
Avinash GR Mar 8, 2026 4:28 PM

ತೆಲುಗು ಚಿತ್ರರಂಗದ ಯಂಗ್‌ ಟೈಗರ್‌ ಜೂನಿಯರ್ ಎನ್‌ಟಿಆರ್ ಅವರು ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದರು. ಬೆಂಗಳೂರಿನ ಮಹದೇವಪುರದಲ್ಲಿ ನಿರ್ಮಾಣವಾಗಿರುವ ಕಿಮ್ಸ್ (KIMS) ಆಸ್ಪತ್ರೆಯ ಉದ್ಘಾಟನಾ ಸಮಾರಂಭಕ್ಕೆ ಎನ್‌ಟಿಆರ್‌ ಅವರನ್ನು ವಿಶೇಷ ಅತಿಥಿಯನ್ನಾಗಿ ಕರೆಸಲಾಗಿತ್ತು. ಆದರೆ ಎನ್‌ಟಿಆರ್ ಬೆಂಗಳೂರಿಗೆ ಆಗಮಿಸುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ಆಗಮಿಸಿದ್ದರು.

ಎನ್‌ಟಿಆರ್‌ಗಾಗಿ ಕಾದು ನಿಂತ ಫ್ಯಾನ್ಸ್

ತಾರಕ್ ಅವರನ್ನು ನೋಡಲು ಅಭಿಮಾನಿಗಳು ಗಂಟೆಗಟ್ಟಲೇ ರಸ್ತೆ ಬದಿಯಲ್ಲಿ ಕಾದು ಕುಳಿತಿದ್ದರು. ತಾರಕ್‌ ಇದ್ದ ಕಾರು ಕಂಡ ತಕ್ಷಣ ಅಭಿಮಾನಿಗಳು "ಟೈಗರ್... ಟೈಗರ್..." ಎಂದು ಘೋಷಣೆ ಕೂಗುತ್ತಾ ಸ್ವಾಗತಿಸಿದರು. ಬಹಳ ದಿನಗಳ ನಂತರ ಎನ್‌ಟಿಆರ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರಿಂದ ಅಭಿಮಾನಿಗಳು ಮತ್ತಷ್ಟು ಉತ್ಸಾಹದಿಂದ ಕೂಗಿದರು. ಆಸ್ಪತ್ರೆಯ ಬಳಿ ಅವರನ್ನು ನೋಡಲು ಅಭಿಮಾನಿಗಳ ಸಾಗರದಂತೆ ಹರಿದುಬಂದಿದ್ದರು. ಹಾಗಾಗಿ, ಮಹದೇವಪುರದ ಸುತ್ತಮುತ್ತಲ ಪ್ರದೇಶದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.

Rukmini Vasanth: ಜೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್‌ ಚಿತ್ರಕ್ಕೆ ರುಕ್ಮಿಣಿ ವಸಂತ್‌ ನಾಯಕಿ; ನಿರ್ಮಾಪಕನಿಂದ ಘೋಷಣೆ

ಅಭಿಮಾನಿಗಳ ಮೇಲೆ ಲಾಠಿ ಚಾರ್ಜ್‌

ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ಬೆಂಗಳೂರಿನ ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಸುಮಾರು ಐದು ಕಿಲೋಮೀಟರ್‌ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರಿಗೆ ಸ್ವಲ್ಪ ತೊಂದರೆಯಾಯಿತು. ಪೊಲೀಸರ ಅಂದಾಜಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ವಿಶೇಷ ಕ್ರಮ ಕೈಗೊಳ್ಳಬೇಕಾಯಿತು. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಟ್ಟರು. ಅಲ್ಲದೇ, ಕೆಲ ಅಭಿಮಾನಿಗಳನ್ನು ನಿಯಂತ್ರಿಸಲು ಸಾಧ್ಯವಾಗದೇ ಅವರ ಮೇಲೆ ಲಾಠಿ ಬೀಸಿದ್ದಾರೆ.

NTRNeel: ಜೂ.ಎನ್‌ಟಿಆರ್‌-ಪ್ರಶಾಂತ್‌ ನೀಲ್‌ ಚಿತ್ರಕ್ಕಾಗಿ ಸಿದ್ಧವಾಗುತ್ತಿದೆ ಕಾರ್ಖಾನೆಯ ಬೃಹತ್‌ ಸೆಟ್‌

ಸಿಎಂ ಸಿಎಂ ಎಂದ ಫ್ಯಾನ್ಸ್‌

ತಾರಕ್‌ ಅವರ ವಿಡಿಯೋಗಳು ಮತ್ತು ಫೋಟೋಗಳು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಎನ್‌ಟಿಆರ್ ಅವರನ್ನು ನೋಡಲು ರಸ್ತೆಗಳಲ್ಲಿ ಜಮಾಯಿಸಿದ್ದ ಅಭಿಮಾನಿಗಳು "ಸಿಎಂ... ಸಿಎಂ..." ಎಂದು ಘೋಷಣೆ ಕೂಗುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಇನ್ನು, ಸಮಾರಂಭದಲ್ಲಿ ಕಾರ್ಯಕ್ರಮದ ಆಯೋಜಕರು, 25 ವರ್ಷಗಳ ನಂತರ ನಿಮ್ಮನ್ನು ನೀವು ಎಲ್ಲಿ ನೋಡುತ್ತೀರಿ ಎಂದು ಎನ್‌ಟಿಆರ್‌ಗೆ ಕೇಳಿದರು. ಆಗ ಅಲ್ಲಿದ್ದ ಫ್ಯಾನ್ಸ್‌ ಕೂಡ ಸಿಎಂ ಸಿಎಂ ಎಂದು ಕೂಗಿದರು. ಆದರೆ ಎನ್‌ಟಿಆರ್‌ ಮಾತ್ರ, "ಇನ್ನೂ 25 ವರ್ಷಗಳ ನಂತರ, ನನಗೆ 67 ವರ್ಷ ವಯಸ್ಸಾಗುತ್ತದೆ" ಎಂದು ಹೇಳಿದರು.

ಬೆಂಗಳೂರಿಗೆ ಭೇಟಿ ನೀಡಿದ ಎನ್‌ಟಿಆರ್‌



ಶೂಟಿಂಗ್‌ನಲ್ಲಿ ಬ್ಯುಸಿ ಆಗಿರುವ ತಾರಕ್

ಎನ್‌ಟಿಆರ್ ಪ್ರಸ್ತುತ ನಿರ್ದೇಶಕ ಪ್ರಶಾಂತ್ ನೀಲ್ ಅವರ ನಿರ್ದೇಶನದ ‌ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಭರ್ಜರಿ ಆಕ್ಷನ್ ಡ್ರಾಮಾ ಆಗಿರುವ ಈ ಚಿತ್ರವನ್ನು ಮೈತ್ರಿ ಮೂವೀ ಮೇಕರ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್ ಜಂಟಿಯಾಗಿ ನಿರ್ಮಿಸುತ್ತಿವೆ. ಈ ಸಿನಿಮಾದಲ್ಲಿ ಎನ್‌ಟಿಆರ್ ಭರ್ಜರಿ ಆಕ್ಷನ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಫ್ಯಾನ್ಸ್‌ ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.