ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ʻದಳಪತಿʼ ವಿಜಯ್‌ಗೆ ತಪ್ಪದ ಸಂಕಷ್ಟ; ಲೋಕಲ್‌ ಕೇಬಲ್‌ ಚಾನೆಲ್‌ನಲ್ಲಿ ʻಜನ ನಾಯಗನ್‌ʼ ಸಿನಿಮಾ ಪ್ರದರ್ಶಿಸಿದ ಕಿಡಿಗೇಡಿ!

Jana Nayagan Movie On Cable TV: ದಳಪತಿ ವಿಜಯ್ ಅವರ ಜನ ನಾಯಗನ್‌ ಸಿನಿಮಾವನ್ನು ಕೊಯಮತ್ತೂರು ಸಮೀಪದ 'ರಾಶಿ ಕೇಬಲ್ ಟಿವಿ' ಮಾಲೀಕ ಪಳನಿಸ್ವಾಮಿ ಎಂಬಾತ ಅಕ್ರಮವಾಗಿ ತಮ್ಮ ಕೇಬಲ್‌ ಚಾನೆಲ್‌ನಲ್ಲಿ ಪ್ರಸಾರ ಮಾಡಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಂಪ್ಯೂಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಕೇಬಲ್ ಟಿವಿಯಲ್ಲೇ 'ಜನ ನಾಯಗನ್' ಸಿನಿಮಾ ಪ್ರದರ್ಶಿಸಿದ ಕಿಡಿಗೇಡಿ ಅರೆಸ್ಟ್

-

Avinash GR
Avinash GR Apr 14, 2026 12:30 PM

ನಟ, ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ʻದಳಪತಿʼ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ಗೆ ಒಂದಾದ ಮೇಲೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಇದು ವಿಜಯ್‌ ಅವರ ಕೊನೆಯ ಚಿತ್ರವಾದ್ದರಿಂದ ಇದರ ಮೇಲೆ ಭಾರಿ ನಿರೀಕ್ಷೆಗಳಿದ್ದು, ಕಳೆದ ಕೆಲವು ಸಮಯದಿಂದ ಈ ಸಿನಿಮಾಗೆ ಒಂದಾದ ಮೇಲೊಂದರಂತೆ ಅಡ್ಡಿಗಳು ಎದುರಾಗುತ್ತಿವೆ. ಸೆನ್ಸಾರ್ ಸಮಸ್ಯೆ ಹಾಗೂ ಇತರ ತಾಂತ್ರಿಕ ಕಾರಣಗಳಿಂದಾಗಿ ಈ ಚಿತ್ರದ ಬಿಡುಗಡೆ ಮುಂದೂಡಲ್ಪಡುತ್ತಾ ಬಂದಿದೆ. ಇದೀಗ ಆನ್‌ಲೈನ್‌ ಲೀಕ್‌ ಆಗಿರುವುದು ದೊಡ್ಡ ಸಮಸ್ಯೆ ಆಗಿದೆ.

ಕೇಬಲ್‌ ಚಾನೆಲ್‌ನಲ್ಲಿ ಜನ ನಾಯಗನ್‌ ಪ್ರಸಾರ

ಆನ್‌ಲೈನ್‌ನಲ್ಲಿ ಜನ ನಾಯಗನ್‌ ಸಿನಿಮಾವು ಲೀಕ್‌ ಆಗಿರುವುದು ಗೊತ್ತೇ ಇದೆ. ಇದೀಗ ಈ ಚಿತ್ರದ 21 ನಿಮಿಷಗಳ ಫೂಟೇಜ್‌ ಅನ್ನು ನೇರವಾಗಿ ಕೇಬಲ್ ಟಿವಿಯಲ್ಲೇ ಪ್ರಸಾರ ಮಾಡಿರುವುದು ಮತ್ತೊಂದು ಸಂಚಲನಕ್ಕೆ ಕಾರಣವಾಗಿದೆ. ಕೊಯಮತ್ತೂರು ಸಮೀಪದ ಕರುಮತ್ತಂಪಟ್ಟಿಯಲ್ಲಿ ‘ರಾಶಿ ಕೇಬಲ್ ಟಿವಿ’ ನೆಟ್‌ವರ್ಕ್ ನಡೆಸುತ್ತಿರುವ ಪಳನಿಸ್ವಾಮಿ ಎಂಬ ವ್ಯಕ್ತಿ, ತನ್ನ ಲೋಕಲ್ ಚಾನೆಲ್‌ನಲ್ಲಿ ಏಪ್ರಿಲ್ 11ರ ರಾತ್ರಿ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ 21 ನಿಮಿಷಗಳ ಫುಟೇಜ್ ಅನ್ನು ಪ್ರಸಾರ ಮಾಡಿದ್ದಾನೆ. ಚಿತ್ರದ ಪ್ರಮುಖ ದೃಶ್ಯಗಳು ಪ್ರಸಾರವಾಗುತ್ತಿರುವುದನ್ನು ಗಮನಿಸಿದ ವಿಜಯ್ ಅಭಿಮಾನಿಗಳು ಮತ್ತು ಟಿಬಿಕೆ ಪಕ್ಷದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.

Thalapathy Vijay: ‘ಜನ ನಾಯಗನ್’ ದೃಶ್ಯ ಲೀಕ್: ಅಭಿಮಾನಿಗಳು ಗರಂ

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಪಳನಿಸ್ವಾಮಿಯನ್ನು ಬಂಧಿಸಿ, ಪ್ರಸಾರಕ್ಕೆ ಬಳಸಿದ್ದ ಕಂಪ್ಯೂಟರ್ ಮತ್ತು ಹಾರ್ಡ್ ಡಿಸ್ಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಕಾಪಿರೈಟ್ ಕಾಯ್ದೆ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. "ಸಾಮಾಜಿಕ ಜಾಲತಾಣದ ಗ್ರೂಪ್‌ಗಳ ಮೂಲಕ ಈ ಫುಟೇಜ್ ತನಗೆ ಸಿಕ್ಕಿತ್ತು" ಎಂದು ವಿಚಾರಣೆ ವೇಳೆ ಆರೋಪಿಯು ಬಹಿರಂಗಪಡಿಸಿದ್ದಾನೆ ಎಂದು ಪೊಲೀಸರು ಮೂಲಗಳು ಹೇಳಿವೆ.

ಆರೋಪಿಯನ್ನು ಅರೆಸ್ಟ್‌ ಮಾಡಿದ ಪೊಲೀಸರು



ಚಿತ್ರರಂಗದ ಗಣ್ಯರ ಆಕ್ರೋಶ

ಜನ ನಾಯಗನ್‌ ಸಿನಿಮಾವು ಸೋರಿಕೆ ಆಗಿರುವುದಕ್ಕೆ ರಜನಿಕಾಂತ್‌, ಕಮಲ್‌ ಹಾಸನ್‌, ಚಿರಂಜೀವಿ ಸೇರಿದಂತೆ ಭಾರತೀಯ ಚಿತ್ರರಂಗದ ಗಣ್ಯರು ಖಂಡಿಸಿದ್ದಾರೆ. ಸಾವಿರಾರು ಕಲಾವಿದರ ಶ್ರಮ ಮತ್ತು ನಿರ್ಮಾಪಕರ ಕೋಟಿಗಟ್ಟಲೆ ರೂಪಾಯಿ ಹೂಡಿಕೆಯನ್ನು ಪೈರಸಿ ಮೂಲಕ ಮಾಡುತ್ತಿರುವುದು ಅಮಾನವೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯ್ ಅವರ ಕೊನೆಯ ಚಿತ್ರವನ್ನು ಚಿತ್ರಮಂದಿರದಲ್ಲಿಯೇ ನೋಡಿ ವಿನಂತಿಸಿದ್ದಾರೆ.

Jana Nayagan: 'ಜನ ನಾಯಗನ್' ದೃಶ್ಯ ಲೀಕ್‌; ಬೆಂಬಲಕ್ಕೆ ನಿಂತ ತಾರೆಯರು

ಆರು ಮಂದಿ ಅರೆಸ್ಟ್‌

ಇನ್ನು, ಈ ಸಿನಮಾವನ್ನು ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸೈಬರ್‌ ಕ್ರೈಮ್ ಪೊಲೀಸರು ಆರು ಮಂದಿಯನ್ನು ಅರೆಸ್ಟ್‌ ಮಾಡಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣ ಮತ್ತು ಕ್ಲೌಡ್ ಸ್ಟೋರೇಜ್ ಪ್ಲಾಟ್‌ಫಾರ್ಮ್‌ಗಳಲ್ಲಿದ್ದ 300ಕ್ಕೂ ಹೆಚ್ಚು ಅಕ್ರಮ ಲಿಂಕ್‌ಗಳನ್ನು ಡಿಲೀಟ್‌ ಮಾಡಲಾಗಿದೆ.