ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

The Devil: ಯೂಟ್ಯೂಬ್‍, ಅಮೇಜಾನ್‍ ಮ್ಯೂಸಿಕ್‍ನಲ್ಲಿ ‘ದಿ ಡೆವಿಲ್‍’ ಸಾಂಗ್‌ನದೇ ಹವಾ

ಚಾಲೆಂಜಿಂಗ್‍ ಸ್ಟಾರ್ ದರ್ಶನ್‍ (Actor Darshan) ಅಭಿನಯದ ‘ದಿ ಡೆವಿಲ್‍’ ಚಿತ್ರದ ‘ಇದ್ರೇ (The Devil) ನೆಮ್ದಿಯಾಗ್‍ ಇರ್ಬೇಕ್‍ …’ ಹಾಡಿಗೆ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಕೆಲವು ದಿನಗಳ ಹಿಂದೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಿದೆ.

ಬೆಂಗಳೂರು: ಚಾಲೆಂಜಿಂಗ್‍ ಸ್ಟಾರ್ ದರ್ಶನ್‍ (Actor Darshan) ಅಭಿನಯದ ‘ದಿ ಡೆವಿಲ್‍’ ಚಿತ್ರದ ‘ಇದ್ರೇ (The Devil) ನೆಮ್ದಿಯಾಗ್‍ ಇರ್ಬೇಕ್‍ …’ ಹಾಡಿಗೆ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಕೆಲವು ದಿನಗಳ ಹಿಂದೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಿದೆ. ಈ ಹಾಡು ಯೂಟ್ಯೂಬ್‍ನಲ್ಲಿ 13 ಮಿಲಿಯನ್ ವೀಕ್ಷಣೆ ಕಂಡಿದೆ. ಈ ಸಾಂಗ್‌ಗೆ ಅನಿರುದ್ಧ್ ಶಾಸ್ತ್ರಿ ಸಾಹಿತ್ಯ ಬರೆದಿದ್ದು, ದೀಪಕ್‍ ಬ್ಲೂ ಹಾಡಿದ್ದಾರೆ. ಅಜನೀಶ್‍ ಲೋಕನಾಥ್‍ ಸಂಗೀತ ಸಂಯೋಜಿಸಿದ್ದಾರೆ. ಯೂಟ್ಯೂಬ್‍ನ ಟ್ರೆಂಡಿಂಗ್‍ ಮ್ಯೂಸಿಕ್‍ ವೀಡಿಯೋಸ್‍ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿ ಟ್ರೆಂಡಿಂಗ್‍ ಇದೆ.

ಇದಲ್ಲದೆ, ಅಮೇಜಾನ್‍ ಮ್ಯೂಸಿಕ್‍ನಲ್ಲಿ, ಫ್ರೆಶ್‍ ಕನ್ನಡ, ನ್ಯೂ ಇನ್‍ ಡ್ಯಾನ್ಸ್, ಸ್ಯಾಂಡಲ್‍ವುಡ್‍ ಡ್ಯಾನ್ಸ್ ಪಾರ್ಟಿ, ಕನ್ನಡ ವರ್ಕೌಟ್‍ ಮಿಕ್ಸ್, ಲಾಂಗ್‍ ಡ್ರೈವ್‍ ವಿಥ್‍ ಸ್ಯಾಂಡಲ್‍ವುಡ್‍, ಸ್ಯಾಂಡಲ್‍ವುಡ್‍ ಹೀರೋಸ್‍, ಬೆಸ್ಟ್ ಆಫ್‍ ಅಜನೀಶ್‍ ಲೋಕನಾಥ್‍ ವಿಭಾಗಗಳಲ್ಲಿ ಮೊದಲ ಸ್ಥಾನದಲ್ಲಿ ಟ್ರೆಂಡಿಂಗ್‍ ಇದೆ. ಸ್ಪಾಟಿಫೈನ ಲೋಕಲ್‍ ಪಲ್ಸ್ ಬೆಂಗಳೂರು ವಿಭಾಗದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಶ್ರೀ ಜೈಮಾತಾ ಕಂಬೈನ್ಸ್ ಲಾಂಛನದಲ್ಲಿ ‘ದಿ ಡೆವಿಲ್‍’ ಚಿತ್ರ ನಿರ್ಮಾಣವಾಗುತ್ತಿದ್ದು, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ‌ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ.

ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ರಚನಾ ರೈ ಅಭಿನಯಿಸಿದ್ದಾರೆ. ಮಿಕ್ಕಂತೆ ತುಳಸಿ,‌ ಅಚ್ಯುತ್ ‍ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು, ಶೋಭರಾಜ್ ಮುಂತಾದವರು ನಟಿಸಿದ್ದಾರೆ. ದಿ ಡೆವಿಲ್‍ ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಸಂಗೀತ ಸಂಯೋಜಿಸಿದ್ದು, ಸುಧಾಕರ್‍ ರಾಜ್‍ ಛಾಯಾಗ್ರಹಣವಿದೆ. ಚಿತ್ರವು ಡಿಸೆಂಬರ್‍ 12, 2025ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಚಿತ್ರದ ಚಿತ್ರೀಕರಣ‌ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ತುಳಸಿ,‌ ಅಚ್ಯುತ್ ‍ಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು, ಶೋಭರಾಜ್ ಮುಂತಾದವರು ನಟಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Actor Darshan: ನಟ ದರ್ಶನ್‌ಗೆ ಗಲ್ಲು ಶಿಕ್ಷೆ ಆಗಲೇಬೇಕು; ಕೋರ್ಟ್‌ಗೆ ಅಪರಿಚಿತ ವ್ಯಕ್ತಿ ಅರ್ಜಿ!

ಅಂದುಕೊಂಡಂತೆ ಆಗಿದ್ದರೆ, ಆಗಸ್ಟ್ 15ರಂದು ಈ ಹಾಡು ಬಿಡುಗಡೆ ಆಗಬೇಕಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ ಕಾರಣದಿಂದಾಗಿ, ಆಗಸ್ಟ್ 14ರಂದು ದರ್ಶನ್ ಮತ್ತೆ ಜೈಲುಪಾಲಾದರು.

Vishakha Bhat Heggar

View all posts by this author