ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ʻಕಾನೂನು ಎಲ್ಲರಿಗೂ ಒಂದೇ ಅಂತ ನಂಬಿದ್ದೆ.. ನಾನು ಇದನ್ನು ಇಲ್ಲಿಗೆ ಬಿಡುವುದಿಲ್ಲ..ʼ; ದಿಢೀರನೇ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ವಿಜಯಲಕ್ಷ್ಮಿ ದರ್ಶನ್

Vijayalakshmi Darshan: ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರು ಗುರುವಾರ (ಡಿ.31) ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ, ಸೈಬರ್ ಕಿರುಕುಳದ ದೂರಿನ ಬಗ್ಗೆ ಏನೂ ಬೆಳವಣಿಗೆ ಇಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರು ಗುರುವಾರ (ಡಿ.31) ದಿಢೀರ್‌ ಎಂದು ನಗರ ಪೊಲೀಸ್ ಆಯುಕ್ತರ ಕಛೇರಿ ಆಗಮಿಸಿದ್ದರು. ತಮ್ಮ ವಕೀಲರ ಜೊತೆಗೆ ಆಗಮಿಸಿದ್ದ ಅವರು, ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ಬಗ್ಗೆ ಅಶ್ಲೀಲವಾಗಿ ಕಾಮೆಂಟ್‌ ಮಾಡಿದವರ ವಿರುದ್ಧ ವಿಜಯಲಕ್ಷ್ಮಿ ದೂರು ನೀಡಿದ್ದರು. ಇಷ್ಟು ದಿನಗಳಾದರೂ ಪ್ರಕರಣದಲ್ಲಿ ಯಾರ ಬಂಧನವೂ ಆಗಿಲ್ಲದೇ ಇರುವುದರ ಹಿನ್ನೆಲೆಯಲ್ಲಿ ಕಮಿಷನರ್ ಕಚೇರಿಗೆ ವಿಜಯಲಕ್ಷ್ಮಿ ಆಗಮಿಸಿದ್ದರು.

ಪೋಸ್ಟ್‌ ಹಂಚಿಕೊಂಡ ವಿಜಯಲಕ್ಷ್ಮಿ

ಕಮೀಷನರ್‌ ಕಚೇರಿಯಿಂದ ಹೊರನಡೆದ ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ವಿಜಯಲಕ್ಷ್ಮೀ, "ನಮ್ಮ ದೇಶದ ಕಾನೂನು ಮತ್ತು ವ್ಯವಸ್ಥೆ ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೆ. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈಗಿನ ಅನುಭವವು ಆ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ. ಆಶ್ಚರ್ಯವೆಂದರೆ, ನಾನು ನೀಡಿದ ದೂರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಆದರೆ ಮತ್ತೊಬ್ಬ ಮಹಿಳೆ ನೀಡಿದ ದೂರಿಗೆ ಕೇವಲ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳಲಾಗಿದೆ. ನನ್ನ ದೂರು ಅಷ್ಟು ಮುಖ್ಯವಾದುದಲ್ಲವೇ ಅಥವಾ ಅದಕ್ಕೆ ಮಾನ್ಯತೆ ಇಲ್ಲವೇ ಎಂದು ನನಗೆ ನಿಜವಾಗಿಯೂ ಆಶ್ಚರ್ಯವಾಗುತ್ತಿದೆ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಜಯಲಕ್ಷ್ಮೀ ಬಗ್ಗೆ ಕೀಳು ಪದಬಳಕೆ; ದೂರು ನೀಡಿದ ದರ್ಶನ್‌ ಪತ್ನಿ, ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಹಾಕಿದ ಕಿಡಿಗೇಡಿಗಳಿಗೆ ಸಂಕಷ್ಟ!

ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ

"ನನ್ನ ವಕೀಲರು ನಿರಂತರವಾಗಿ ಈ ಬಗ್ಗೆ ಫಾಲೋಅಪ್‌ ಮಾಡುತ್ತಲೇ ಇದ್ರೂ ಸಹ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನನ್ನ ದೂರನ್ನು ಕನಿಷ್ಠ ಪಕ್ಷ ಗಮನಿಸಿ ಎಂದು ನೆನಪಿಸಲು ಇಂದು ನಾನೇ ಖುದ್ದಾಗಿ ಅಲ್ಲಿಗೆ ಹೋಗಬೇಕಾಯಿತು. ಈ ವಿಳಂಬದ ಹಿಂದೆ ಯಾವುದೇ ಬಾಹ್ಯ ಒತ್ತಡ ಅಥವಾ ಪ್ರಭಾವ ಇಲ್ಲ ಎಂದು ನಾನು ನಂಬಿದ್ದೇನೆ. ನ್ಯಾಯವು ಅದರಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿರಬಾರದು" ಎಂದು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ ವಿಜಯಲಕ್ಷ್ಮಿ.

The Devil: ದರ್ಶನ್‌ ಅನುಪಸ್ಥಿತಿಯಲ್ಲಿ ಅಖಾಡಕ್ಕಿಳಿದ ವಿಜಯಲಕ್ಷ್ಮೀ; ʻಡೆವಿಲ್ʼ ಫ್ಯಾನ್ಸ್‌ಗೆ ನೀಡಿದ ಸಂದೇಶವೇನು?

ನಾನು ಇಲ್ಲಿಗೇ ಸುಮ್ಮನೆ ಬಿಡುವುದಿಲ್ಲ

"ಇಂತಹ ನಡವಳಿಕೆಯನ್ನು ಬೆಂಬಲಿಸುವವರಿಗೆ ಅಥವಾ ರಕ್ಷಿಸುವವರಿಗೆ ನಾನು ಹೇಳುವುದಿಷ್ಟೇ, ಕುರುಡಾಗಿ ಇಂತಹ ಕೃತ್ಯಗಳನ್ನು ಬೆಂಬಲಿಸುವ ಬದಲು, ಆ ಶಕ್ತಿಯನ್ನು ನಿಮ್ಮ ಜೀವನವನ್ನು ಸುಧಾರಿಸಿಕೊಳ್ಳಲು ಬಳಸಿ. ನಾನು ಇನ್ನೂ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ ಮತ್ತು ಇದನ್ನು ನಾನು ಇಲ್ಲಿಗೇ ಸುಮ್ಮನೆ ಬಿಡುವುದಿಲ್ಲ" ಎಂದು ವಿಜಯಲಕ್ಷ್ಮೀ ಅವರು ಖಡಕ್‌ ಆಗಿ ಹೇಳಿದ್ದಾರೆ. ಈ ಪೋಸ್ಟ್‌ನೊಂದಿಗೆ ಬೆಂಗಳೂರು ಸಿಟಿ ಪೊಲೀಸ್‌, ಗೃಹ ಸಚಿವ ಜಿ. ಪರಮೇಶ್ವರ್‌ ಹಾಗೂ ಕರ್ನಾಟಕ ಸರ್ಕಾರವನ್ನು ಟ್ಯಾಗ್‌ ಮಾಡಿದ್ದಾರೆ.

ಕಳೆದ ವಾರ ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ನೀಡಿದ್ದರು. ಸೈಬರ್ ಅಪರಾಧ ವಿಭಾಗದ ಇನ್ಸ್ಪೆಕ್ಟರ್ ದೂರನ್ನು ಸ್ವೀಕರಿಸಿದ್ದರು.