ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮೈಸೂರು

Stone Pleting: ಪ್ರತಿಭಟನೆ ವೇಳೆ ಮತ್ತೆ ಕಲ್ಲು ತೂರಾಟ, ಲಾಠಿ ಚಾರ್ಜ್‌, ಮದ್ದೂರು ಉದ್ವಿಗ್ನ

ಪ್ರತಿಭಟನೆ ವೇಳೆ ಮತ್ತೆ ಕಲ್ಲು ತೂರಾಟ, ಲಾಠಿ ಚಾರ್ಜ್‌, ಮದ್ದೂರು ಉದ್ವಿಗ್ನ

ನಿನ್ನೆ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ನಡೆದಿದ್ದ ಕಲ್ಲು ತೂರಾಟದಲ್ಲಿ 8 ಮಂದಿ ಗಾಯಗೊಂಡಿದ್ದರು. ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂದು ಗಣೇಶಭಕ್ತರು ಆರೋಪಿಸಿದ್ದರು. ಇದನ್ನು ವಿರೋಧಿಸಿ ಇಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Dasara Golden Pass:  ಮೈಸೂರು ದಸರಾ ಮಹೋತ್ಸವ; ಗೋಲ್ಡನ್‌ ಪಾಸ್‌ ಪಡೆಯಲು ಈ ಕ್ರಮ ಅನುಸರಿಸಿ

ದಸರಾ ಗೋಲ್ಡನ್‌ ಪಾಸ್‌ ಪಡೆಯುವುದು ಹೇಗೆ?

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇವೆ. ದಸರಾವನ್ನು ಹತ್ತಿರದಿಂದ ನೋಡಬೇಕೆಂದವರಿಗೆ ಸುವರ್ಣ ಅವಕಾಶವಿದ್ದು, ಮೈಸೂರು ಜಿಲ್ಲಾಆಡಳಿತ ದಸರಾ ವೀಕ್ಷಣೆಗೆ ಆನ್ಲೈನ್ ಅಲ್ಲಿ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ. ದಸರಾ ಗೋಲ್ಡ್ ಕಾರ್ಡಿಗೆ 6500 ರೂ. ನಿಗದಿ ಮಾಡಲಾಗಿದೆ. ಜಂಬೂಸವಾರಿ ಟಿಕೆಟ್ 3500, ಪಂಚಿನ ಕವಾಯತುಗೆ 1500 ನಿಗದಿ ಮಾಡಲಾಗಿದೆ.

Dasara 2025: ದಸರಾ: ಹತ್ತು ದಿನ ಯುವಪಡೆಗೆ ಸಾಂಸ್ಕೃತಿಕ ಹಬ್ಬ

ದಸರಾ: ಹತ್ತು ದಿನ ಯುವಪಡೆಗೆ ಸಾಂಸ್ಕೃತಿಕ ಹಬ್ಬ

ರಾಜ್ಯದ ೨೦ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ತಂಡಗಳು, ಪಿಯು, ಐಟಿಐ, ವೈದ್ಯಕೀಯ, ಇಂಜಿ ನಿಯರಿಂಗ್, ನಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲ ವಿಶ್ವವಿದ್ಯಾಲಯಗಳು ತಲಾ ಒಂದೊಂದು ತಂಡವನ್ನು ಆಯ್ಕೆ ಮಾಡಿ ಕಳಿಸಿಕೊಡಲಿವೆ.

Pratap Simha: ಬಾಬರ್‌ ಇಲ್ಲದಿದ್ದರೂ ಬಾನು ಮುಷ್ತಾಕ್ ಅಂಥವರು ಇದ್ದಾರೆ: ಪ್ರತಾಪ್‌ ಸಿಂಹ

ಬಾಬರ್‌ ಇಲ್ಲದಿದ್ದರೂ ಬಾನು ಮುಷ್ತಾಕ್ ಅಂಥವರು ಇದ್ದಾರೆ: ಪ್ರತಾಪ್‌ ಸಿಂಹ

Banu Mushtaq: ಹಿಂದೆ ಯಾವನೋ ಘಜ್ನಿ, ಅಕ್ಬರ್, ಬಾಬರ್ ಬಂದಿದ್ದ ಅಂತ ಹೇಳಬೇಡಿ. ಇಂದು ಬಾಬರ್ ಇಲ್ಲದೆ ಇದ್ದರೂ ಮುಷ್ತಾಕ್ ಅಂಥವರು ನಮ್ಮ ಮಧ್ಯೆ ಇದ್ದಾರೆ. ಅದಕ್ಕಾಗಿ ಎಚ್ಚರಿಕೆ ನೀಡಲು ನಾನು ಬಂದಿದ್ದೇನೆ. ದೇಶ ಉಳಿಸಿಕೊಳ್ಳಲು ಹಿಂದೂಗಳು ಜಾತಿ ಬಿಟ್ಟು ಒಂದಾಗಬೇಕು ಎಂದಿದ್ದಾರೆ ಪ್ರತಾಪ್‌ ಸಿಂಹ.

Dharmasthala Chalo:  ಜೆಡಿಎಸ್‌, ಬಿಜೆಪಿ ಬಳಿಕ ಕಾಂಗ್ರೆಸ್‌ನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ; ಸಾವಿರಾರು ಜನರ ನಿರೀಕ್ಷೆ

ಕಾಂಗ್ರೆಸ್‌ನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರನ್ನು ಬೆಂಬಲಿಸಿ, ಮೈಸೂರು ಜಿಲ್ಲೆಯ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಹರೀಶ್ ಗೌಡ ಅವರು ಇಂದು ಮೈಸೂರುನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

CM Siddaramaiah: ಧರ್ಮಸ್ಥಳಕ್ಕೆ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗುವುದಿಲ್ಲ- ಸಿಎಂ ಸಿದ್ದರಾಮಯ್ಯ ಟಾಂಗ್‌

ಧರ್ಮಸ್ಥಳ ಚಲೋ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

CM Siddaramaiah: ಬಿಜೆಪಿ ರಾಜಕೀಯವಾಗಿ ಧರ್ಮಸ್ಥಳ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

President Draupadi Murmu: ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸಿಎಂ ಸಿದ್ದರಾಮಯ್ಯ ಸ್ವಾಗತ

ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸಿಎಂ ಸಿದ್ದರಾಮಯ್ಯ ಸ್ವಾಗತ

Mysuru: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಉಪಸ್ಥಿತರಿದ್ದರು.

Heart Fail: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುತ್ತಾ ಕುಸಿದು ಬಿದ್ದುಇಬ್ಬರ ಸಾವು

ಗಣೇಶ ವಿಸರ್ಜನೆಯಲ್ಲಿ ಡ್ಯಾನ್ಸ್‌ ಮಾಡುತ್ತಾ ಕುಸಿದು ಬಿದ್ದುಇಬ್ಬರ ಸಾವು

Ganesh Chaturthi: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಾ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್​​​ನಿಂದ ಬಿದ್ದು ಇನ್ನೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.

MUDA sites: ಮುಡಾದ 63 ನಿವೇಶನಗಳನ್ನು ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ ಸಿಎಂ ಆದೇಶ

ಮುಡಾದ 63 ನಿವೇಶನಗಳು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ನಿವೇಶನಗಳ ಹಂಚಿಕೆಯ ಆದೇಶ ಪ್ರತಿಯನ್ನು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಕಳೆದ 20 ವರ್ಷಗಳಿಂದ ಹಂಚಿಕೆಯಾಗದೆ ಬಾಕಿ ಉಳಿದಿದ್ದ ಮುಡಾದ 63 ಮೂಲೆ ನಿವೇಶನಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಲಾಗಿದೆ.

Actor Ram Charan: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

Peddi Movie: ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ಪೆದ್ದಿ ಸಿನಿಮಾ ಶೂಟಿಂಗ್‌ ಮೈಸೂರಿನಲ್ಲಿ ನಡೆಯುತ್ತಿದೆ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಮೈಸೂರಿನಲ್ಲಿ ಪೆದ್ದಿ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಅದ್ಧೂರಿ ಸೆಟ್ ಹಾಕಿ ಮಾಸ್ ಸಾಂಗ್ ವೊಂದನ್ನು ಶೂಟಿಂಗ್ ನಡೆಸಲಾಗಿದೆ.

Mysuru Dasara: ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್‌ ಆಯ್ಕೆ ನಿರ್ಧಾರ ಮರುಪರಿಶೀಲಿಸಿ; ಸಿಎಂಗೆ ಮನವಿ ಪತ್ರ

ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್‌ ಆಯ್ಕೆ ನಿರ್ಧಾರ ಮರುಪರಿಶೀಲಿಸಿ

Banu Mushtaq: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವನ್ನು ಮರು ಪರಿಶೀಲಿಸಿ, ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮೈಸೂರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತು.

14ರ ಪೈಕಿ ಸುಗ್ರೀವನೇ ಬಲಶಾಲಿ

14ರ ಪೈಕಿ ಸುಗ್ರೀವನೇ ಬಲಶಾಲಿ

೧೪ ಆನೆಗಳ ಪೈಕಿ ಸುಗ್ರೀವ ಈ ಕ್ಷಣಕ್ಕೆ ಹೆಚ್ಚಿಗೆ ತೂಗಿದ್ದಾನೆ. ಬರೋಬ್ಬರಿ ೫೫೪೫ ಕೆಜಿ ತೂಕ ಹೊಂದುವ ಮೂಲಕ ದಾಖಲೆ ನಿರ್ಮಿಸಿದ್ದಾನೆ. ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ ಆನೆಗಳ ಎರಡನೇ ತಂಡದ ತೂಕ ಕಾರ್ಯದ ವೇಳೆ ಐದು ಆನೆಗಳ ಪೈಕಿ ಸುಗ್ರೀವ ೫೫೪೫ ಕೆಜಿ ತೂಕ ಹೊಂದುವ ಮೂಲಕ ಅತಿ ಬಲಶಾಲಿ ಎಂಬ ಖ್ಯಾತಿಗೆ ಪಾತ್ರನಾದ.

Mysuru dasara 2025: ಚಾಮುಂಡಿ ದೇಗುಲ ಹಿಂದೂಗಳದ್ದು ಆಗಿರದಿದ್ದರೆ, ಮುಜರಾಯಿಗೆ ಸೇರುತ್ತಿರಲಿಲ್ಲ: ಪ್ರಮೋದಾದೇವಿ ಒಡೆಯರ್‌

ಚಾಮುಂಡಿ ದೇಗುಲ ಹಿಂದೂಗಳದ್ದು ಆಗಿರದಿದ್ದರೆ, ಮುಜರಾಯಿಗೆ ಸೇರುತ್ತಿರಲಿಲ್ಲ

Pramoda Devi Wadiyar: ಚಾಮುಂಡೇಶ್ವರಿ ದೇವಾಲಯವು ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಅಸಮಾಧಾನ ಹೊರಹಾಕಿರುವ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಅವರು, ಈ ರೀತಿಯ ಅಸಂವೇದನಶೀಲ, ಅನಗತ್ಯ ಹೇಳಿಕೆಗಳನ್ನು ತಪ್ಪಿಸಬಹುದಾಗಿತ್ತು ಎಂದು ಹೇಳಿದ್ದಾರೆ.

Yaduveer Wadiyar: ಚಾಮುಂಡಿ ಬೆಟ್ಟ ಎಂದೆಂದಿಗೂ ಹಿಂದೂಗಳದು: ಯದುವೀರ ಒಡೆಯರ್‌ ಗುಡುಗು

ಚಾಮುಂಡಿ ಬೆಟ್ಟ ಎಂದೆಂದಿಗೂ ಹಿಂದೂಗಳದು: ಯದುವೀರ ಒಡೆಯರ್‌ ಗುಡುಗು

Chamundi Hills: ಗೌರಿ ಹಬ್ಬದ ದಿನವೇ ಡಿಸಿಎಂ ಡಿ.ಕೆ. ಶಿವಕುಮಾರ್ ʼಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲʼ ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ. ಚಾಮುಂಡಿ ಬೆಟ್ಟ ಶಕ್ತಿಪೀಠ. ಶಾಸ್ತ್ರಸಮ್ಮತವಾಗಿ ಪವಿತ್ರಗೊಂಡು, ಕೋಟ್ಯಾಂತರ ಹಿಂದೂಗಳಿಂದ ಆರಾಧಿತವಾಗಿದೆ. ಈ ದೇವಾಲಯ ಹಿಂದೂಗಳದ್ದೇ ಆಗಿತ್ತು, ಇದೆ ಮತ್ತು ಎಂದೆಂದಿಗೂ ಇರುತ್ತದೆ ಎಂದು ಯದುವೀರ ಟ್ವೀಟ್ ಮಾಡಿದ್ದಾರೆ.

Banu Mushtaq: ದಸರಾ ಉದ್ಘಾಟನೆಗೆ ಆಹ್ವಾನ- ವಿರೋಧ, ಬಾನು ಮುಷ್ತಾಕ್ ರಿಯಾಕ್ಷನ್

ದಸರಾ ಉದ್ಘಾಟನೆಗೆ ಆಹ್ವಾನ- ವಿರೋಧ, ಬಾನು ಮುಷ್ತಾಕ್ ರಿಯಾಕ್ಷನ್

ಖಂಡಿತಾ ಇದು ನನಗೆ ಖುಷಿಯ ವಿಚಾರ. ಇದನ್ನು ನಾವು ಹಲವು ಪ್ರಭೇದಗಳಲ್ಲಿ ನೋಡಬಹುದು. ನೀವು ಚಾಮುಂಡೇಶ್ವರಿ ತಾಯಿ ಅಂತೀರಿ, ನಿಮ್ಮ ಭಾವವನ್ನು ಗೌರವಿಸುತ್ತೇನೆ. ಅನೇಕರು ಇದನ್ನ ನಾಡಹಬ್ಬ ಅಂತಾರೆ, ಅದನ್ನು ಗೌರವಿಸುತ್ತೇನೆ ಎಂದು ಸಾಹಿತಿ ಬಾನು ಮುಷ್ತಾಕ್‌ ಹೇಳಿದ್ದಾರೆ.

Dad Movie: ಶಿವರಾಜ್‍ಕುಮಾರ್ ಅಭಿನಯದ ‘ಡ್ಯಾಡ್‍ʼ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ಶಿವಣ್ಣ ಅಭಿನಯದ ‘ಡ್ಯಾಡ್‍ʼ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

Dad Movie: ಶಿವರಾಜ್‍ಕುಮಾರ್ ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ʼಡ್ಯಾಡ್ʼ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತ್ತು. ಪ್ರಸ್ತುತ ಅರಮನೆ ನಗರಿ ಮೈಸೂರಿನಲ್ಲೇ ʼಡ್ಯಾಡ್ʼ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

Murder Case: ವಿವಾಹಿತೆಯ ಬಾಯಿಗೆ ಜಿಲೆಟಿನ್‌ ಕಡ್ಡಿ ಇಟ್ಟು ಸ್ಫೋಟಿಸಿ ಬರ್ಬರವಾಗಿ ಕೊಂದ ಪ್ರಿಯಕರ

ವಿವಾಹಿತೆಯ ಬಾಯಿಗೆ ಜಿಲೆಟಿನ್‌ ಕಡ್ಡಿ ಇಟ್ಟು ಸ್ಫೋಟಿಸಿ ಕೊಂದ ಪ್ರಿಯಕರ

Gelatin Stick: ಕಪ್ಪಡಿ ಕ್ಷೇತ್ರಕ್ಕೆ ಹೋಗೋಣ ಎಂಬುದಾಗಿ ಸಿದ್ದರಾಜು ರಕ್ಷಿತಾಳನ್ನು ಕರೆತಂದಿದ್ದ. ಭೇರ್ಯ ಗ್ರಾಮದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ. ಲಾಡ್ಜ್‌ನಲ್ಲಿ ಅಕ್ಷತಾ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಪೋಟಿಸಿ ಹತ್ಯೆಗೈದಿದ್ದಾನೆ. ಆ ಬಳಿಕ ಮೊಬೈಲ್ ಬ್ಲಾಸ್ಟ್ ಅಂತ ಕೂಗಾಡಿದ್ದಾನೆ. ಆದರೆ ಸ್ಥಳದಲ್ಲಿ ಯಾವುದೇ ಮೊಬೈಲ್ ಕಂಡುಬರದ ಕಾರಣ ಅನುಮಾನ ಬಂದಿದೆ.

Mysuru News: ಕುಡಿತಕ್ಕೆ ಹಣ ನೀಡದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿರಾಯ!

ಕುಡಿತಕ್ಕೆ ಹಣ ನೀಡದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿರಾಯ!

Mysuru Murder Case: ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ಹತ್ಯೆ ಪ್ರಕರಣ ನಡೆದಿದೆ. ಜಮೀನು ಮಾರಿ ಹಣ ನೀಡುವಂತೆ ಹೆಂಡತಿಯನ್ನು ಪೀಡಿಸುತ್ತಿದ್ದ ಪತಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Mysuru Zoo: ಮೈಸೂರು ಮೃಗಾಲಯದ ಹಿರಿಯಾನೆ ಪದ್ಮಾವತಿ ಇನ್ನಿಲ್ಲ

ಮೈಸೂರು ಮೃಗಾಲಯದ ಹಿರಿಯಾನೆ ಪದ್ಮಾವತಿ ಇನ್ನಿಲ್ಲ

Padmavathi: 1973ರಲ್ಲಿ ಖೆಡ್ಡಾ ಕಾರ್ಯಾಚರಣೆಯ ಸಮಯದಲ್ಲಿ ರಕ್ಷಿಸಲ್ಪಟ್ಟ ಪದ್ಮಾವತಿ 53 ವರ್ಷಗಳ ಕಾಲ ಮೃಗಾಲಯದ ಆರೈಕೆಯಲ್ಲಿತ್ತು. ಪದ್ಮಾವತಿಯ ಜನನ ವರ್ಷ ಸುಮಾರು 1953-54 ಎಂದು ಅಂದಾಜಿಸಲಾಗಿದೆ. ಅವಳು ಮೂರು ಮಕ್ಕಳ ತಾಯಿಯಾಗಿದ್ದಳು. ಗಜಲಕ್ಷ್ಮೀ, ಕೋಮಲ ಮತ್ತು ಅಭಿಮನ್ಯು ಎಂದು ಮೂರು ಮಕ್ಕಳು.

KRS dam: ಭಾರೀ ಮಳೆ, ಕೆಆರ್‌ಎಸ್‌ ಡ್ಯಾಂನಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ

ಭಾರೀ ಮಳೆ, ಕೆಆರ್‌ಎಸ್‌ ಡ್ಯಾಂನಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Mandya: 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್‌ಎಸ್‌ ಜಲಾಶಯ (KRS dam) ಜೂನ್ ಮೊದಲ ವಾರದಲ್ಲೇ ಭರ್ತಿಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಿಂದಾಗಿ ಡ್ಯಾಂನ ಒಳಹರಿವು ಹೆಚ್ಚಾಗಿದೆ. ಕಾವೇರಿ ನದಿ (Cauvery River) ಪಾತ್ರದಲ್ಲಿ ಮತ್ತೆ ಪ್ರವಾಹ (flood) ಭೀತಿ ಎದುರಾಗಿದೆ.

Dharmasthala Case: ಮಧ್ಯಂತರ ವರದಿ ಬಿಡುಗಡೆ ಮಾಡಲು ಸಂಸದ ಯದುವೀರ್‌ ಆಗ್ರಹ

ಧರ್ಮಸ್ಥಳ ಕೇಸ್: ಮಧ್ಯಂತರ ವರದಿ ಬಿಡುಗಡೆ ಮಾಡಲು ಸಂಸದ ಯದುವೀರ್‌ ಆಗ್ರಹ

Yaduveer Wadiyar:‌ ಜನರು ಶ್ರೀ ಕ್ಷೇತ್ರದ ಪರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಪವಿತ್ರ ದೇವಾಲಯದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ವಿರೋಧಿಸುತ್ತಿದ್ದಾರೆ. ಇಂತಹ ಅಪಪ್ರಚಾರವನ್ನು ಕೊನೆಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಬಿಜೆಪಿ, ಸರ್ಕಾರದಿಂದ ಉತ್ತರವನ್ನು ಕೋರಿದೆ ಎಂದಿದ್ದಾರೆ ಯದುವೀರ್.

Payana Car Museum: ವಿಂಟೇಜ್ ಕಾರುಗಳ 'ಪಯಣ'; ಜಗತ್ತನ್ನೇ ಆಕರ್ಷಿಸುತ್ತಿದೆ ಈ ಮಾದರಿ ಮ್ಯೂಸಿಯಂ

ಜಗತ್ತನ್ನೇ ಆಕರ್ಷಿಸುತ್ತಿದೆ ವಿಂಟೇಜ್ ಕಾರುಗಳ 'ಪಯಣ' ಮ್ಯೂಸಿಯಂ

Pravasi Prapancha: ಅರಮನೆ, ಚಾಮುಂಡಿ ಬೆಟ್ಟ, ಮೃಗಾಲಯ ಸೇರಿದಂತೆ ಹತ್ತು ಹಲವು ಮಜಲುಗಳೊಂದಿಗಿನ ಸಾಂಸ್ಕೃತಿಕ ನಗರ ಮೈಸೂರಿನ ಜನತೆಯ ಬದುಕಿಗೆ ಮುಕುಟಪ್ರಾಯವೆಂಬಂತೆ “ಪಯಣ” ಜತೆಯಾಗಿದೆ. ಇದು ಕೇವಲ ಮೈಸೂರಿಗರಿಗೆ ಮಾತ್ರವಲ್ಲ, ಮೈಸೂರಿಗೆ ಬರುವ ಪ್ರತಿಯೊಬ್ಬರನ್ನೂ ತನ್ನೊಂದಿನ ಪಯಣಕ್ಕೆ ಕೈಬೀಸಿ ಕರೆಯುತ್ತಿದೆ.

Self Harming: ಮೈಸೂರಿನಲ್ಲಿ ಘೋರ ಘಟನೆ; ಮಗನಿಗೆ ನೇಣು ಹಾಕಿ, ತಾಯಿಯೂ ಆತ್ಮಹತ್ಯೆ, ಮಗಳು ಪಾರು

ಮೈಸೂರಿನಲ್ಲಿ ಘೋರ ಘಟನೆ; ಮಗನಿಗೆ ನೇಣು ಹಾಕಿ, ತಾಯಿಯೂ ಆತ್ಮಹತ್ಯೆ

Self Harming: ಮೈಸೂರಿನ ಮುರುಡನಹಳ್ಳಿಯಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಾರಣಕ್ಕೆ ಬೇಸರಗೊಂಡು ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು, ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರು ವರ್ಷದ ಮಗಳಿಗೂ ನೇಣು ಬಿಗಿಯಲು ತಾಯಿ ಯತ್ನಿಸಿದ್ದಾಳೆ. ಆದರೆ ಮಗಳು ಸಾವಿನಿಂದ ಪಾರಾಗಿದ್ದಾಳೆ.

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿಕೆಶಿ

ಸ್ಟಾರ್‌ ಸ್ಪ್ರಿಂಟರ್‌, ಕನ್ನಡತಿ ವಿಜಯಕುಮಾರಿಗೆ ಡಿಸಿಎಂ ಡಿಕೆಶಿ ಸನ್ಮಾನ

ಆರೋಗ್ಯ ಮತ್ತು ಹಣಕಾಸು ಸಮಸ್ಯೆ ಸೇರಿದಂತೆ ನಾನಾ ಕಾರಣಗಳಿಂದ ಕ್ರೀಡೆಯಲ್ಲಿ ಉತ್ಸಾಹ ಕಳೆದುಕೊಂಡಿದ್ದೆ. ಆದರೀಗ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಶಾಸಕರಾದ ದಿನೇಶ್ ಗೂಳಿಗೌಡ ಅವರ‌ ಮುಖಾಂತರ ನನ್ನನ್ನು ಸಂಪರ್ಕಿಸಿ ನನ್ನ ಸಾಧನೆಯನ್ನು ಗುರುತಿಸಿ 5 ಲಕ್ಷ ರೂ.ಗಳ ಚೆಕ್ ಅನ್ನು ನೀಡಿ ಗೌರವಿಸಿರುವುದು ನನಗೆ ಮರೆಯಲಾಗದ ಕ್ಷಣ. ಇದರಿಂದ ನನ್ನ ಹುಮ್ಮಸ್ಸು ಮತ್ತಷ್ಟು ಹೆಚ್ಚಾಗಿದೆ ಎಂದು ವಿಜಯಕುಮಾರಿ ಹೇಳಿದರು.

Loading...