ಹುಣಸೂರಿನಲ್ಲಿ ಬಸವ ಮಹಾದ್ವಾರ ಲೋಕಾರ್ಪಾಣೆಗೊಳಿಸಿದ ಸಿಎಂ
CM Siddaramaiah: ಮೈಸೂರು ಜಿಲ್ಲೆಯ ಹುಣಸೂರಿಗೆ ಸೋಮವಾರ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಜೆಸಿಬಿ ಮೂಲಕ ಹೂಮಳೆಯ ಸುರಿಸುವ ಮೂಲಕ ಸ್ವಾಗತ ಕೋರಿದರು. ಮಾದಳ್ಳಿಯ ಶ್ರೀ ಉಕ್ಕಿನಕಂತೆ ಮಠದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಸವ ಮಹಾದ್ವಾರವನ್ನು ಲೋಕಾರ್ಪಣೆಗೊಳಿಸಿದರು. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿ, ಶ್ರೀ ನಟರಾಜ ಸ್ವಾಮೀಜಿ, ಶ್ರೀ ಸಾಂಬ ಸದಾಶಿವ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.