ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮೈಸೂರು

Mysuru News: ಮೈಸೂರಿನಲ್ಲಿ ಆಘಾತಕಾರಿ ಘಟನೆ; ಹೆಂಡತಿ, ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಗಂಡ ಆತ್ಮಹತ್ಯೆ!

ಮೈಸೂರಿನಲ್ಲಿ ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ಗಂಡ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಏಟ್ರಿಯಾ ರಿನ್ಯೂಎಬಲ್ ಮೈಸೂರಿಗೆ ವಿಸ್ತರಣೆ; ಕರ್ನಾಟಕದಲ್ಲಿ ರೂಫ್‌ಟಾಪ್ ಸೌರಶಕ್ತಿ ಸೇವೆ ಮತ್ತಷ್ಟು ಬಲ

ಕರ್ನಾಟಕದಲ್ಲಿ ರೂಫ್‌ಟಾಪ್ ಸೌರಶಕ್ತಿ ಸೇವೆ ಮತ್ತಷ್ಟು ಬಲ

ವಸತಿ ಹಾಗೂ ವಾಣಿಜ್ಯ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ತೊಂದರೆಯಿಲ್ಲದ ರೂಫ್‌ ಟಾಪ್ ಸೌರಶಕ್ತಿ ಪರಿಹಾರಗಳನ್ನು ಒದಗಿಸುತ್ತಿರುವ ಏಟ್ರಿಯಾ ರಿನ್ಯೂಎಬಲ್, ಹೆಚ್ಚಿನ ಸೌರ ವ್ಯವಸ್ಥೆಗಳ ಅಳವಡಿಕೆಯನ್ನು ಕೇವಲ 5 ರಿಂದ 6 ಗಂಟೆಗಳೊಳಗೆ ಪೂರ್ಣಗೊಳಿಸುತ್ತದೆ. ಪ್ರತಿಯೊಂದು ಸೌರಶಕ್ತಿ ವ್ಯವಸ್ಥೆಗೆ 30 ವರ್ಷಗಳ ವಾರಂಟಿ ಹಾಗೂ 5 ವರ್ಷಗಳ ಉಚಿತ ನಿರ್ವಹಣಾ ಸೇವೆ ಒದಗಿಸಲಾಗುತ್ತಿದ್ದು, ಗ್ರಾಹಕರು ವಿಶ್ವಾಸದಿಂದ ಸೌರಶಕ್ತಿಯನ್ನು ಅಳವಡಿಸಿಕೊಳ್ಳಲು ಇದು ನೆರವಾಗಲಿದೆ.

ರಾಜ್ಯದಲ್ಲಿ ನಿಂಜಾ ಪೆಟ್ ಫುಡ್ ಬ್ರ್ಯಾಂಡ್ ಪರಿಚಯಿಸಿದ ಗೋದ್ರೇಜ್ ಪೆಟ್ ಕೇರ್

ನಿಂಜಾ ಪೆಟ್ ಫುಡ್ ಬ್ರ್ಯಾಂಡ್ ಪರಿಚಯಿಸಿದ ಗೋದ್ರೇಜ್ ಪೆಟ್ ಕೇರ್

ಶ್ವಾನಗಳ ಕರುಳಿನ ಆರೋಗ್ಯಕ್ಕೆ ಪೂರಕವಾದ, ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ವನ್ನು ಈ ನಾಲ್ಕೂ ರಾಜ್ಯಗಳಲ್ಲಿನ ಸಾಕುಪ್ರಾಣಿಗಳ ಮಾಲೀಕರಿಗೆ ಸುಲಭವಾಗಿ ತಲುಪಿಸುವ ಉದ್ದೇಶ ದಿಂದ ಕಂಪನಿಯು ತನ್ನ ವಹಿವಾಟಿನ ವ್ಯಾಪ್ತಿಯನ್ನು ವಿಸ್ತರಿಸಿದೆ. ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಸಾಕುಪ್ರಾಣಿ ಆರೈಕೆ ಕ್ಷೇತ್ರದಲ್ಲಿ ಅಖಿಲ ಭಾರತ ಮಟ್ಟದಲ್ಲಿ ತನ್ನ ಉಪಸ್ಥಿತಿ ಯನ್ನು ವಿಸ್ತರಿಸುವ ಕಂಪನಿಯ ಗುರಿ ಸಾಧಿಸುವ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

S. Janaki's last rites: ಗಾನಕೋಗಿಲೆ ಎಸ್‌.ಜಾನಕಿ ಪಂಚಭೂತಗಳಲ್ಲಿ ಲೀನ; ಚಿತೆಗೆ ಮೊಮ್ಮಗಳು ಅಪ್ಸರಾ ಅಗ್ನಿಸ್ಪರ್ಶ

ಪಂಚಭೂತಗಳಲ್ಲಿ ಎಸ್‌.ಜಾನಕಿ ಲೀನ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದ ತೋಟದಲ್ಲಿ ಭಾನುವಾರ ಸಂಜೆ ತೆಲುಗು ಬ್ರಾಹ್ಮಣ ಸಂಪ್ರದಾಯ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್‌.ಜಾನಕಿ ಅರ ಅಂತ್ಯ ಸಂಸ್ಕಾರ ನಡೆಸಲಾಗಿದೆ. ಮೊಮ್ಮಗಳು ಅಪ್ಸರಾ ಅವರು ಅಂತಿಮ ವಿಧಿವಿಧಾನ ನೆರವೇರಿಸಿದರು.

S. Janaki: ನಾಳೆ ಸಂಜೆ ಮೈಸೂರಿನಲ್ಲಿ ಎಸ್‌. ಜಾನಕಿ ಅಂತ್ಯಸಂಸ್ಕಾರ; ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ನಾಳೆ ಸಂಜೆ ಮೈಸೂರಿನಲ್ಲಿ ಎಸ್‌. ಜಾನಕಿ ಅಂತ್ಯಸಂಸ್ಕಾರ

S Janaki's funeral: ತಮ್ಮ ಅಂತ್ಯಸಂಸ್ಕಾರವು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಯೇ ನಡೆಯಬೇಕು ಎಂಬುದು ಸ್ವತಃ ಎಸ್. ಜಾನಕಿ ಅವರ ಆಸೆಯಾಗಿತ್ತು. ಅವರ ಆ ಇಚ್ಛೆಯಂತೆಯೇ ಅವರ ಕುಟುಂಬ ಸದಸ್ಯರ ಒಪ್ಪಿಗೆಯ ಮೇರೆಗೆ ಮೈಸೂರಿನಲ್ಲಿಯೇ ಅಂತ್ಯಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ.

Mysuru Dasara 2026: ಈ ಬಾರಿ 11 ದಿನಗಳ ವಿಜೃಂಭಣೆಯ ಮೈಸೂರು ದಸರಾ; ಅ.11ಕ್ಕೆ ಉದ್ಘಾಟನೆ, ಅ.21ಕ್ಕೆ ಜಂಬೂ ಸವಾರಿ

ಈ ಬಾರಿ 11 ದಿನಗಳ ವಿಜೃಂಭಣೆಯ ದಸರಾ: ಸಿಎಂ

CM DK Shivakumar: ದಸರಾ ಆಯೋಜನೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಕಾರ್ಯಕಾರಿ ಸಮಿತಿ ರಚನೆ ಮಾಡಲಿದ್ದೇನೆ. ಈ ಬಾರಿ ಏರ್ ಶೋ ನಡೆಸಲು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಬೇಕು ಎಂದು ಸಲಹೆ ಬಂದಿದೆ. ಹೀಗಾಗಿ ಈ ವಿಚಾರವಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌; ಅ.11ಕ್ಕೆ ನಾಡಹಬ್ಬ ಉದ್ಘಾಟನೆ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್‌

ಸಿಎಂ ಡಿಕೆ ಶಿವಕುಮಾರ್ ಅವರ ​ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮೈಸೂರು ದಸರಾ ವೇಳಾಪಟ್ಟಿ ಬಗ್ಗೆ ತೀರ್ಮಾನಿಸಲಾಗಿದೆ. ನಾಡಹಬ್ಬದ ರೂಪುರೇಷೆ ಸೇರಿದಂತೆ ಗಜ ಪಯಣ, ದಸರಾ ಉದ್ಘಾಟನೆ, ಜಂಬೂ ಸವಾರಿ ಸೇರಿದಂತೆ ಈ ಬಾರಿ ದಸರಾದ ಪ್ರಮುಖ ಕಾರ್ಯಕ್ರಮಗಳ ಕುರಿತು ಸಿಎಂ ಚರ್ಚೆ ನಡೆಸಿದ್ದಾರೆ.

C.N. Muktha: ಕನ್ನಡದ ಖ್ಯಾತ ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ ಅನಾರೋಗ್ಯದಿಂದ ನಿಧನ

ಖ್ಯಾತ ಕಾದಂಬರಿಗಾರ್ತಿ ಸಿ.ಎನ್.ಮುಕ್ತಾ ಅನಾರೋಗ್ಯದಿಂದ ನಿಧನ

ಕಳ್ಳಂಬೆಳ್ಳ ನರಸಿಂಹಮೂರ್ತಿ ಮುಕ್ತಾ ಅವರು ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ 25 ವರ್ಷಕ್ಕೂ ಹೆಚ್ಚು ಕಾಲ ವಿವಿಧೆಡೆ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿದ್ದರು. ಇವರ 75ಕ್ಕೂ ಅಧಿಕ ಕಾದಂಬರಿ, 15ಕ್ಕೂ ಅಧಿಕ ಕಥಾಸಂಕಲನಗಳು ಪ್ರಕಟವಾಗಿವೆ.

ಮಹಿಳೆಯರಿಂದ ಶೋಷಣೆಗೆ ಒಳಗಾಗುವ ಪುರುಷರ ರಕ್ಷಣೆಗೆ ಪುರುಷ ಆಯೋಗ ರಚಿಸಿ; H ವಿಶ್ವನಾಥ್‌ ಆಗ್ರಹ

ಪುರುಷರ ರಕ್ಷಣೆಗೆ ಪುರುಷ ಆಯೋಗ ರಚಿಸಿ; H ವಿಶ್ವನಾಥ್‌ ಆಗ್ರಹ

ಪುರುಷರ ಮೇಲೆ ಇತ್ತೀಚಿನ ದಿನಗಳಲ್ಲಿ ದೌರ್ಜನ್ಯ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಮಹಿಳಾ ಆಯೋಗ ಇರುವ ಮಾದರಿಯಲ್ಲೇ ಪುರುಷರ ರಕ್ಷಣೆಗಾಗಿ ತಕ್ಷಣವೇ 'ಪುರುಷ ಆಯೋಗ'ವನ್ನು ರಚಿಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ತೊಂದರೆ ಆದರೆ ಪೊಲೀಸರು ಬರ್ತಾರೆ. ಹೆಣ್ಮಕ್ಕಳ ರಕ್ಷಣೆಗೆ ಕಾನೂನು ಇದೆ ಎಂದು ಹೇಳಿದ್ದಾರೆ.

Mysuru Tragedy: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಘೋರ ದುರಂತ; ಡೆತ್‌ ನೋಟ್‌ ಬರೆದು ತಂದೆ, ತಾಯಿ, ಮಗಳು ಆತ್ಮಹತ್ಯೆ!

ಮೈಸೂರಿನಲ್ಲಿ ಘೋರ ದುರಂತ; ತಂದೆ, ತಾಯಿ, ಮಗಳು ಆತ್ಮಹತ್ಯೆ!

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದೆ. ಯುವತಿಯೊಬ್ಬಳ ವಿವಾಹಕ್ಕೆ ಕೇವಲ ಎರಡು ದಿನ ಬಾಕಿ ಇತ್ತು. ಆದರೆ, ಮದುವೆ ತಯಾರಿಯ ಸಂಭ್ರಮದಲ್ಲಿದ್ದ ಕುಟುಂಬವೇ ದುರಂತ ಅಂತ್ಯ ಕಂಡಿರುವುದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಒಪ್ಪಿಗೆ

ಹುಬ್ಬಳ್ಳಿ- ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ

MB Patil: ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್‌ಗಳ ಮೂಲಕ ಓಡಿಸಲು ರೈಲ್ವೆ ಮಂಡಳಿ ಶುಕ್ರವಾರ ಒಪ್ಪಿಗೆ ನೀಡಿದ್ದು, ಇದರಿಂದ ವಿಜಯಪುರ, ಬಾಗಲಕೋಟೆ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.

4 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ; ಸಮಯ ನೋಡಿಕೊಂಡು ಕ್ರಮ ಎಂದ ಎಚ್.ಡಿ.ಕುಮಾರಸ್ವಾಮಿ

ಕ್ರಾಸ್ ವೋಟಿಂಗ್ ಮಾಡಿದವರ ವಿರುದ್ಧ ಕ್ರಮ: ಎಚ್‌ಡಿಕೆ

HD Kumaraswamy: ನನಗೆ ಎಲ್ಲವೂ ಗೊತ್ತಿದ್ದೇ ನಾನು ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಯಾರ ಯಾರ ಆತ್ಮಸಾಕ್ಷಿ ಹೇಗೆಲ್ಲ ವರ್ತನೆ ಮಾಡುತ್ತದೆ ಎಂಬುದನ್ನು ಪರೀಕ್ಷೆ ಮಾಡಲು ಪಕ್ಷದ ಅಭ್ಯರ್ಥಿಯನ್ನು ನಾನು ಕಣಕ್ಕೆ ಇಳಿಸಬೇಕಾಯಿತು. ಎಲ್ಲವೂ ನಾನು ಅಂದುಕೊಂಡಂತೆ ಆಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಹೇಗೆ ಕಟ್ಟಬೇಕು ಎಂಬುದು ನಮಗೆ ತಿಳಿದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Piriyapattana News: ಅನಿಕೇತನ ಪದವಿ ಪೂರ್ವ ಕಾಲೇಜಿನಲ್ಲಿ ಆದಿ ಕವಿ ಪಂಪ ಕನ್ನಡ ಸಾಹಿತ್ಯ ಸಂಘ ಉದ್ಘಾಟನೆ

ಆದಿ ಕವಿ ಪಂಪ ಕನ್ನಡ ಸಾಹಿತ್ಯ ಸಂಘ ಉದ್ಘಾಟನೆ

ಜಾನಪದಗಳು ಉಳಿಯ ಬೇಕು. ವಿದ್ಯಾರ್ಥಿಗಳುಜ ಕೂಡ ಜಾನಪದ ಕಲೆಯನ್ನು ಉಳಿಸಿಬೆಳೆಸಬೇಕು. ಸ್ಥಳೀಯವಾಗಿ ನಡೆಯವ ಹಬ್ಬ, ಜಾತ್ರೆಗಳಲ್ಲಿ ಪಾಲ್ಗೊಂಡು ಅಲ್ಲಿನ ಜಾನಪದ ಸೊಗಡನ್ನು ನೋಡ ಬೇಕು. ಮನೆ ಮನೆಗೆ ತೆರಳಿ ಜಾನಪದ ಹಾಡುಗಳನ್ನು ಹಾಡುವ ಕಲಾವಿದರನ್ನು ಗೌರವಿಸಬೇಕು. ಅವರ ಹಾಡುಗಳನ್ನು ನಾವು ಹಾಡುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು

Mysuru Pub Fire: ಮೈಸೂರು ಪಬ್‌ ಅಗ್ನಿ ಅವಘಡದಲ್ಲಿ ಸ್ಯಾಂಡಲ್‌ವುಡ್‌ ನಟನಿಗೆ ತೀವ್ರ ಗಾಯ; ಜಿಗಿದು ಪ್ರಾಣ ರಕ್ಷಿಸಿಕೊಳ್ಳಲು ಯತ್ನಿಸಿದ ಗ್ರಾಹಕರು! video

ಮೈಸೂರು ಪಬ್‌ ಅಗ್ನಿ ಅವಘಡದಲ್ಲಿ ಸ್ಯಾಂಡಲ್‌ವುಡ್‌ ನಟನಿಗೆ ತೀವ್ರ ಗಾಯ

ಮೈಸೂರಿನ ದಟ್ಟಗಳ್ಳಿಯಲ್ಲಿರುವ ಫಾಕ್ಸ್​ ಡೆನ್​​ ಪಬ್​​​​ ಅನ್ನು ಆಫ್ರಿಕನ್ ಸ್ಟೈಲ್​ನಲ್ಲಿ ನಿರ್ಮಾಣ ಮಾಡಲಾಗಿತ್ತು. ಹುಲ್ಲು, ಗೋಣಿ ತಾಟು, ವುಡ್ ಹೆಚ್ಚಾಗಿ ಬಳಸಿ ನಿರ್ಮಾಣವಾಗಿತ್ತು. ದಟ್ಟವಾಗಿ ಬೆಂಕಿ ಹೊತ್ತಿ ಉರಿಯಲು ಇದೇ ಕಾರಣ ಎನ್ನಲಾಗಿದೆ. ದುರಂತದಲ್ಲಿ ಇಬ್ಬರು, ಮೃತಪಟ್ಟಿದ್ದರೆ, ಆರು ಮಂದಿ ಗಾಯಗೊಂಡಿದ್ದಾರೆ.

Mysuru Fire accident: ಮೈಸೂರಿನ ಪಬ್‌ನಲ್ಲಿ ಬೆಂಕಿ ಅವಘಡ; ಇಬ್ಬರ ಸಾವು, ಏಳು ಮಂದಿಗೆ ಗಾಯ

ಮೈಸೂರಿನ ಪಬ್‌ನಲ್ಲಿ ಬೆಂಕಿ ಅವಘಡ; ಇಬ್ಬರ ಸಾವು

FoxDen Restobar Fire Accident in mysuru: ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ. ಅವಘಡದಲ್ಲಿ ಇಬ್ಬರು ಸಜೀವ ದಹನರಾಗಿದ್ದಾರೆ ಎಂದು ತಿಳಿದುಬಂದಿದೆ.

Mysuru News: ಮೈಸೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ

ಹುಣಸೂರು ಪುರಸಭೆ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪತಿಯ ಕುಟುಂಬಸ್ಥರ ವಿರುದ್ಧ ಗೃಹಿಣಿಯ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಈ ಸಂಬಂಧ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dr Yathindra Siddaramaiah: ʼಡಾ.ಯತೀಂದ್ರʼಗೆ ಒಲಿದು ಬಂದ ʼಮಂತ್ರಿʼಭಾಗ್ಯ

Dr yathindra Siddaramaiah: ʼಡಾ.ಯತೀಂದ್ರʼಗೆ ಒಲಿದು ಬಂದ ʼಮಂತ್ರಿʼಭಾಗ್ಯ

ಸಿಎಂ ಹುದ್ದೆಯಿಂದ ನಿರ್ಗಮಿಸುವ ಮುನ್ನ ಭವಿಷ್ಯದ ರಾಜಕೀಯ ಲೆಕ್ಕಾಚಾರಗಳನ್ನು ಹಾಕಿಕೊಂಡೇ ಉರುಳಿಸಿದ ಪಗಡೆ ಆಟದಲ್ಲಿ ಯಶ ಕಂಡಿರುವ ಸಿದ್ದರಾಮಯ್ಯ, ಮೈಸೂರಿನಲ್ಲಿ ತಮ್ಮ ಮಗನಿಗೆ ರಾಜಕೀಯದ ಭದ್ರ ನೆಲೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾತ್ರವಲ್ಲ, ಜಿಲ್ಲಾ ಉಸ್ತುವಾರಿ ಪಟ್ಟದ ಸನಿಹಕ್ಕೆ ತಂದು ಕೂರಿಸಿದ್ದಾರೆ.

ಸಿದ್ದರಾಮಯ್ಯ ಗೌರವಯುತವಾಗಿ ಸಿಎಂ ಕುರ್ಚಿ ಬಿಟ್ಟು ಕೊಟ್ಟಿದ್ದಾರೆ, ಅವರ ಮುಂದಿನ ಜೀವನ ಚೆನ್ನಾಗಿರಲಿ: ಪ್ರತಾಪ್‌ ಸಿಂಹ

ಸಿದ್ದರಾಮಯ್ಯ ಅವರ ಮುಂದಿನ ಜೀವನ ಚೆನ್ನಾಗಿರಲಿ: ಪ್ರತಾಪ್‌ ಸಿಂಹ

ಈವರೆಗೂ ಸಿದ್ದರಾಮಯ್ಯ ಸಾಹೇಬರ ಸರ್ಕಾರದ ಆಡಳಿತ ವೈಖರಿ ಬಗ್ಗೆ ಸಾಕಷ್ಟು ಟೀಕೆ ಟಿಪ್ಪಣಿ ಮಾಡಿದ್ದೇನೆ. ಆದರೆ, ಅವರು ರಾಜೀನಾಮೆ ನೀಡಿ, ಕುರ್ಚಿಯನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಬಿಟ್ಟುಕೊಡುತ್ತಿರುವ ಸಂದರ್ಭದಲ್ಲಿ ನಾನು ಅವರ ಬಗ್ಗೆ ಏನೂ ಟೀಕೆ ಮಾಡುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.

ನಿವೃತ್ತ ಡಿಜಿಪಿ ಡಾ.ಡಿ.ವಿ.ಗುರುಪ್ರಸಾದ್ ಅವರ ʼಪಾಕ್‌ನಲ್ಲಿ ನಮ್ಮ ಧುರಂಧರರುʼ ಪುಸ್ತಕ ಲೋಕಾರ್ಪಣೆ

ʼಪಾಕ್‌ನಲ್ಲಿ ನಮ್ಮ ಧುರಂಧರರುʼ ಪುಸ್ತಕ ಬಿಡುಗಡೆ

ಮೈಸೂರು ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸಪ್ನ ಪುಸ್ತಕ ಮಳಿಗೆಯಲ್ಲಿ ನಿವೃತ್ತ ಡಿಜಿಪಿ ಡಾ.ಡಿ.ವಿ.ಗುರುಪ್ರಸಾದ್ ಅವರ ‘ಪಾಕ್‌ನಲ್ಲಿ ನಮ್ಮ ಧುರಂಧರರು’ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು. ನಿಜ ಜೀವನದಲ್ಲಿ ಗೂಢಚಾರರಾಗಿ ಕೆಲಸ ಮಾಡುವವರ ನೈಜ ಜೀವನದ ಬಗ್ಗೆ ಈ ಪುಸ್ತಕದಲ್ಲಿ ಬರೆದಿದ್ದೇನೆ ಎಂದು ಡಾ.ಡಿ.ವಿ.ಗುರುಪ್ರಸಾದ್ ತಿಳಿಸಿದ್ದಾರೆ.

Karnataka Weather: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಗದಗ, ಕೊಪ್ಪಳ ಜಿಲ್ಲೆಗೆ ಆರೆಂಜ್‌ ಅಲರ್ಟ್‌!

ಆರೆಂಜ್‌ ಅಲರ್ಟ್‌; ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶಾಲಾ-ಕಾಲೇಜುಗಳಿಗೆ ಕೇಸರಿ ಶಾಲು ಧರಿಸಿ ಬಂದ್ರೆ ಕಾನೂನು ಕ್ರಮ: ಮಧು ಬಂಗಾರಪ್ಪ ಎಚ್ಚರಿಕೆ

ಶಾಲೆಗಳಿಗೆ ಕೇಸರಿ ಶಾಲು ಧರಿಸಿ ಬಂದ್ರೆ ಕಾನೂನು ಕ್ರಮ: ಮಧು ಬಂಗಾರಪ್ಪ

ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿ ಅವರು ಮೊದಲು ನೋಡಿಕೊಂಡು ಬರಲಿ. ಅಲ್ಲಿನ ವಿದ್ಯಾರ್ಥಿಗಳಿಗೆ ಮೊದಲು ಕೇಸರಿ ಶಾಲು ಹಾಕಿಸಿ ಕಳುಹಿಸಲಿ, ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸಾಲ ವಾಪಸ್ ಕೇಳಿದ್ದಕ್ಕೆ ದರ್ಪ; ಕಾರಿನ ಬಾನೆಟ್‌ನಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಸಾಲಗಾರ, ವಿಡಿಯೋ ವೈರಲ್‌

ಕಾರಿನ ಬಾನೆಟ್‌ನಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಸಾಲಗಾರ

drags man on car bonnet: ಹಣ ಮರುಪಾವತಿ ವಿಚಾರದಲ್ಲಿ ಸಾಲಗಾರನ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬರನ್ನು ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಸುಮಾರು 500 ಮೀಟರ್ ಎಳೆದೊಯ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ರಸ್ತೆಯಲ್ಲಿ ವಾಹನ ಚಲಾಯಿಸುತ್ತಿದ್ದ ಇತರರು ಘಟನೆಯ ದೃಶ್ಯವನ್ನು ವಿಡಿಯೊ ಮಾಡಿದ್ದಾರೆ.

ಸಾಲದ ಹಣ ವಾಪಸ್‌ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ; MLC ವಿಶ್ವನಾಥ್‌ ವಿರುದ್ಧ FIR

ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ; MLC ವಿಶ್ವನಾಥ್‌ ವಿರುದ್ಧ FIR

ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್‌ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಎಷ್ಟು ತೆರಿಗೆ ಹೇರಿಕೆ ಮಾಡಿದ್ದೀರಿ?; ರಾಜ್ಯ ಸರ್ಕಾರದ ವಿರುದ್ಧ ಎಚ್‍.ಡಿ. ಕುಮಾರಸ್ವಾಮಿ ಕಿಡಿ

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಎಷ್ಟು ತೆರಿಗೆ ಹೇರಿಕೆ ಮಾಡಿದ್ದೀರಿ?

ಕಳೆದ ಮೂರು ವರ್ಷಗಳಲ್ಲಿ ಮದ್ಯ, ಬಸ್‌, ವಿದ್ಯುತ್ ಸೇರಿ ಅನೇಕ ಬಾಬತ್ತುಗಳ ಮೇಲೆ ನಿರಂತರವಾಗಿ ತೆರಿಗೆವಿಧಿಸಿ ಬೆಲೆ ಏರಿಕೆ ಮಾಡಲಾಗಿದೆ. ಒಂದೆಡೆ ಗ್ಯಾರಂಟಿಗಳನ್ನು ಕೊಡುತ್ತೇವೆ ಎಂದು ಜನರ ಮೂಗಿಗೆ ತುಪ್ಪ ಸವದುತ್ತಿರುವ ಸರ್ಕಾರವು ಮತ್ತೊಮ್ಮೆ ಅದಕ್ಕೂ ಮೀರಿ ಬೆಲೆ ಏರಿಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Loading...