ಆದಿತ್ಯ ಠಾಕ್ರೆಗೂ ಮೃತ ದಿಶಾ ಸಾಲಿಯಾನ್ಗೂ ಏನು ಸಂಬಂಧ?
Disha Salian: ದಿಶಾ ಸಾಲಿಯಾನ್ ಅವರ ತಂದೆ ತನ್ನ ಮಗಳ ಸಾವಿನ ಬಗ್ಗೆ ಮತ್ತೆ ಮರು ತನಿಖೆ ಮಾಡುವಂತೆ ಆಗ್ರಹಿಸಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ಆದಿತ್ಯ ಠಾಕ್ರೆ ಹೆಸರು ಕೇಳಿ ಬಂದಿದೆ.
ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆ ಗಾತ್ರ 2023ರಲ್ಲಿ USD 41.31 ಶತಕೋಟಿ ಮೌಲ್ಯದ್ದಾಗಿತ್ತು. ಆದರೀಗ ಬಹು ವಿಸ್ತರಣೆ ಕಂಡಿದೆ. 2032ರ ವೇಳೆಗೆ USD 77.23 ಶತಕೋಟಿ ತಲುಪುವ ನಿಟ್ಟಿನಲ್ಲಿ ಬೃಹತ್ತಾಗಿ ಬೆಳೆಯುತ್ತಿದೆ. ಇದೇ ಪ್ರಗತಿಯಲ್ಲಿ ಸಾಗಿದರೆ ಭವಿಷ್ಯದಲ್ಲಿ ಭಾರತದ ಐ ಫೋನ್, ಸ್ಮಾರ್ಟ್ ಫೋನ್ಗಳು ವಿಶ್ವವನ್ನೇ ಅವರಿಸಲಿವೆ.
Summer Travel Fashion: ಬೇಸಿಗೆಯಲ್ಲಿ ಮಾನಿನಿಯರು ಪ್ರಯಾಣ ಮಾಡಬೇಕಾದ ಸಂದರ್ಭ ಬಂದಾಗ ಆದಷ್ಟೂ ಬಿಸಿಲ ಝಳಕ್ಕೆ ಹೊಂದುವಂತಹ ಕಂಫರ್ಟಬಲ್ ಕೂಲ್ ಫ್ಯಾಷನ್ ತಮ್ಮದಾಗಿಸಿಕೊಳ್ಳಬೇಕು. ಇಲ್ಲವಾದಲ್ಲಿ ಆರಾಮದಾಯಕವಲ್ಲದ ಪ್ರಯಾಣ ನಿಮ್ಮದಾಗಬಹುದು. ಇದಕ್ಕಾಗಿ ಯಾವ ಬಗೆಯ ಫ್ಯಾಷನ್ವೇರ್ಸ್ ಚೂಸ್ ಮಾಡಬೇಕು? ಯಾವುದನ್ನು ಆವಾಯ್ಡ್ ಮಾಡಬೇಕು? ಎಂಬುದರ ಬಗ್ಗೆ ಫ್ಯಾಷನ್ ಎಕ್ಸ್ಪರ್ಟ್ಸ್ ಒಂದಿಷ್ಟು ಸಲಹೆಗಳನ್ನು ನೀಡಿದ್ದಾರೆ.
ಅನೈತಿಕ ಸಂಬಂಧದ ಬಗ್ಗೆ ಪತಿ ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು (Murder Case) ಗೋಣಿಚೀಲದಲ್ಲಿ ಶವವನ್ನು ಕಟ್ಟಿಕೊಂಡು ಬೈಕಿನಲ್ಲಿ ಸಾಗಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದು, ಪರಾರಿಯಾದ ಪ್ರಿಯಕರನಿಗಾಗಿ ಹುಡುಕಾಟ ಶುರುಮಾಡಿದ್ದಾರೆ.
BY Vijayendra: ಬೆಲೆ ಏರಿಕೆಯ ಗ್ಯಾರಂಟಿಯನ್ನು ಈ ರಾಜ್ಯ ಸರ್ಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ವಿಫಲವಾಗಿದೆ. ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, ಬಡವರು, ರೈತರು ಸೇರಿ ಎಲ್ಲರೂ ತತ್ತರಿಸಿ ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Stock Market: ಕಳೆದ ನಾಲ್ಕು ದಿನಗಳಲ್ಲಿ ಸೆನ್ಸೆಕ್ಸ್ 3.4% ಮತ್ತು ನಿಫ್ಟಿ 3.5% ಏರಿಕೆಯಾಗಿದೆ. ಮಿಡ್ ಮತ್ತು ಸ್ಮಾಲ್ ಕ್ಯಾಪ್ ಷೇರುಗಳ ದರ ಇಳಿಯಿತು. ಒಟ್ಟಾರೆಯಾಗಿ ಬಿಎಸ್ಇ ಲಿಸ್ಟೆಡ್ ಕಂಪನಿಗಳ ಮಾರುಕಟ್ಟೆ ಮೌಲ್ಯ 405 ಲಕ್ಷ ಕೋಟಿ ರುಪಾಯಿಗಳಿಂದ 408 ಲಕ್ಷ ಕೋಟಿ ರುಪಾಯಿಗೆ ಏರಿತು. ಹೂಡಿಕೆದಾರರು 4 ಲಕ್ಷ ಕೋಟಿ ರುಪಾಯಿ ಲಾಭ ಗಳಿಸಿದರು.
Atal Tunnel: ಹಿಮಾಚಲ ಪ್ರದೇಶದ ಮನಾಲಿಯ ಅಟಲ್ ಸುರಂಗದೊಳಗೆ ಇಬ್ಬರು ಬೈಕ್ ಸವಾರರು ರೀಲ್ಸ್ ತಯಾರಿಸಲು ಅಗ್ನಿಶಾಮಕವನ್ನು ದುರುಪಯೋಗಪಡಿಸಿಕೊಂಡಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಹಿಮಾಚಲ ಪ್ರದೇಶ ಪೊಲೀಸರು ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ರಂಗಪಂಚಮಿಯ ಮುನ್ನಾದಿನ ಇಂದೋರ್ನಲ್ಲಿ ಬಜರ್ಬಟ್ಟು ಸಮ್ಮೇಳನದ ಭವ್ಯ ಶೋಭಾ ಯಾತ್ರೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಚಿವ(Minister) ಕೈಲಾಶ್ ವಿಜಯವರ್ಗಿಯ( Kailash Vijayvargiya) ಅವರು ಪಿತರೇಶ್ವರ ಧಾಮದ ಫಲಹರಿ ಬಾಬಾ ವೇಷ ಧರಿಸಿ ಬೀದಿಗಳಲ್ಲಿ ರಥದ ಮೇಲೆ ಸವಾರಿ ಮಾಡಿದ್ದಾರೆ. ಆ ವಿಡೀಯೋ ಇಲ್ಲಿದೆ.
ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ತಂದಿರುವ ಹೊಸ ನಿಯಮಗಳಿಂದಾಗಿ ವಿಮಾ ಯೋಜನೆ(Insurance)ಗಳು ಬಡವರ ಕೈಗೆಟಕುತ್ತಿಲ್ಲ ಮತ್ತು ವಿಮಾ ಏಜೆಂಟ್ಗಳ(Agents) ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್(congress) ಸಂಸದ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ದೇಶದಾದ್ಯಂತ ಅತ್ಯಾಚಾರ ಪ್ರಕರಣ ಹಾಗೂ ಲೈಗಿಂಕ ದೌರ್ಜನ್ಯ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಅಲಹಾಬಾದ್ ಕೋರ್ಟ್ ಅಚ್ಚರಿಯ ಹೇಳಿಕೆ ಒಂದನ್ನು ನೀಡಿದೆ. ಮಹಿಳೆಯ ಸ್ತನಗಳನ್ನು ಹಿಡಿಯುವುದು ಹಾಗೂ ಆಕೆಯ ಪೈಜಾಮ ದಾರ ಅಥವಾ ಪ್ಯಾಂಟ್ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನ ಆಗುವುದಿಲ್ಲ ಎಂದು ಕೋರ್ಟ್ ಹೇಳಿದೆ.
Maoists Encounter: ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 7 ಗಂಟೆಗೆ ಗುಂಡಿನ ಚಕಮಕಿ ನಡೆಯಿತು. ಕಾರ್ಯಾಚರಣೆಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಎನ್ಕೌಂಟರ್ನಲ್ಲಿ ಬರೋಬ್ಬರಿ 22 ಶಂಕಿತ ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ. ಹತರಾದ ನಕ್ಸಲರಿಂದ ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ತೆಲಂಗಾಣದಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ಟಾಲಿವುಡ್ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ಮಂಚು ಲಕ್ಷ್ಮಿ, ಪ್ರಕಾಶ್ ರೈ ಸೇರಿದಂತೆ 25 ಸೆಲೆಬ್ರಿಟಿಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳ ವಿರುದ್ಧ ತೆಲಂಗಾಣ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನೇವಿ ಅಧಿಕಾರಿ ಸೌರಭ್ ರಜಪೂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮುಸ್ಕಾನ್ ರಸ್ತೋಗಿ ಮತ್ತು ಸಾಹಿಲ್ ಶುಕ್ಲಾ ಅವರನ್ನು ಕೋರ್ಟ್ ವಿಚಾರಣೆ ಮುಗಿಸಿ ಕರೆದುಕೊಂಡು ಬರುವಾಗ ಕೋರ್ಟ್ ಆವರಣದ ಹೊರಗೆ ವಕೀಲರ ಗುಂಪೊಂದು ಥಳಿಸಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಪಟ್ಟ ಹಲವು ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.
ಅತ್ಯಾಚಾರ ಪ್ರಕರಣವೊಂದರಲ್ಲಿ ಸಂತ್ರಸ್ತೆಯೊಬ್ಬರಿಗೆ ಸುಮಾರು 40 ವರ್ಷಗಳ ನಂತರ ನ್ಯಾಯ ದೊರಕಿದೆ. ಪ್ರಕರಣ ಇಷ್ಟು ವರ್ಷಗಳ ಕಾಲ ವಿಳಂಬವಾಗಿದ್ದಕ್ಕೆ ಸುಪ್ರೀಂ ಕೋರ್ಟ್ ಸಂತ್ರಸ್ತೆ ಹಾಗೂ ಆಕೆಯ ಕುಟುಂಬದವರಲ್ಲಿ ಕ್ಷಮೆ ಕೇಳಿದೆ. 1986 ರಲ್ಲಿ ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿತ್ತು.
ಕೇಂದ್ರ ಮತ್ತು ರಾಜ್ಯ ಗುಪ್ತಚರ ಅಧಿಕಾರಿಗಳು, ಮಿಲಿಟರಿ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿವೆ. ಬಿಇಎಲ್ನ ಪ್ರಾಡಕ್ಟ್ ಡೆವಲಪ್ಮೆಂಟ್ ಆ್ಯಂಡ್ ಇನ್ನೋವೇಶನ್ ಸೆಂಟರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ದೇಶದ ಗುಪ್ತ ರಕ್ಷಣಾ ಮಾಹಿತಿಗಳನ್ನು ಸಂಗ್ರಹಿಸಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎನ್ನಲಾಗಿದೆ.
ಇತ್ತೀಚೆಗೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದ ಮರ್ಚೆಂಟ್ ಅಧಿಕಾರಿಯ ಕೊಲೆಯ ನಂತರ ಸೌರಭ್ ತನ್ನ ಸಹೋದರಿಯೊಂದಿಗೆ ಮಾತನಾಡಿದ್ದ ವಾಟ್ಸ್ಪ್ ಚಾಟ್ ವೈರಲ್ ಆಗಿದೆ. ಮಾರ್ಚ್ 6 ರಂದು, ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರ ಸಹೋದರಿ ಚಿಂಕಿ ಸೌರಭ್ ಅವರಿಗೆ ವಾಟ್ಸಾಪ್ ಸಂದೇಶ ಬಂದಿದ್ದು, ಹೋಳಿಗೆ ಮೀರತ್ಗೆ ಹೋಗುತ್ತೀರಾ ಎಂದು ಕೇಳಿದ್ದಾರೆ.
ಶಂಭು ಮತ್ತು ಖಾನೌರಿ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ರೈತ ನಾಯಕರ ಗುಂಪನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಪಂಜಾಬ್-ಹರಿಯಾಣ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯನ್ನು ತಡೆದಿದ್ದಾರೆ. ರೈತರು ನಿರ್ಮಿಸಿದ್ದ ತಾತ್ಕಾಲಿಕ ವಸತಿಯನ್ನು ಕೆಡವಲಾಗಿದೆ.
ಏರ್ಪೋರ್ಟ್ನಲ್ಲಿನ ಅತ್ಯುತ್ತಮ, ವೇಗದ ಸೇವೆಗಳಿಗೆ ನೀಡುವ ಪ್ರಶಸ್ತಿ ಇದಾಗಿದೆ. ಇಮಿಗ್ರೇಷನ್, ಕಸ್ಟಮ್ಸ್, ಹೈಸ್ಪೀಡ್ ವೈಫೈ, ವೇಗದ ಬ್ಯಾಗೇಜ್, ಲಾಂಜ್, ಸುಗಮ ಮತ್ತು ತೊಂದರೆ ಮುಕ್ತ ಆಗಮನ ದ್ವಾರ ಸೇವೆ ಇತ್ಯಾದಿಗಳನ್ನು ಪರಿಗಣಿಸಿ ನೀಡಲಾಗುವ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (kempegowda international airport) ಮೂರನೇ ಬಾರಿಗೆ ಪಡೆದುಕೊಂಡಿದೆ.