Tamil Nadu Assembly: ಸುಪ್ರೀಂ ಕೋರ್ಟ್ ಆದೇಶ; ರಾಜ್ಯಪಾಲರು, ರಾಷ್ಟ್ರಪತಿಯ ಒಪ್ಪಿಗೆಯಿಲ್ಲದೆ ಜಾರಿ ಆದ 10 ಮಸೂದೆಗಳು
2020 ರಿಂದ ತಮಿಳುನಾಡು ವಿಧಾನಸಭೆಯು ಅಂಗೀಕರಿಸಿದ ಕನಿಷ್ಠ ಹತ್ತು ಮಸೂದೆಗಳಿಗೆ ರಾಜ್ಯಪಾಲ ಆರ್.ಎನ್. ರವಿ ಅವರು ಒಪ್ಪಿಗೆ ನಿರಾಕರಿಸಿದ್ದರು, ಆದರೆ ಈಗ ಅಧಿಕೃತವಾಗಿ ಕಾನೂನುಗಳಾಗಿ ಮಾರ್ಪಟ್ಟಿವೆ. ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಕೆಲವೇ ಗಂಟೆಗಳಲ್ಲಿ ಮಸೂದೆಗಳು ಕಾನೂನಾಗಿ ಮಾರ್ಪಾಡಾಗಿವೆ.


ಚೆನ್ನೈ: 2020 ರಿಂದ ತಮಿಳುನಾಡು ವಿಧಾನಸಭೆಯು ಅಂಗೀಕರಿಸಿದ ಕನಿಷ್ಠ ಹತ್ತು ಮಸೂದೆಗಳಿಗೆ ರಾಜ್ಯಪಾಲ ಆರ್.ಎನ್. ರವಿ ಅವರು ಒಪ್ಪಿಗೆ ನಿರಾಕರಿಸಿದ್ದರು, ಆದರೆ ಈಗ ಅಧಿಕೃತವಾಗಿ ಕಾನೂನುಗಳಾಗಿ ಮಾರ್ಪಟ್ಟಿವೆ. ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಕೆಲವೇ ಗಂಟೆಗಳಲ್ಲಿ ಮಸೂದೆಗಳು ಕಾನೂನಾಗಿ ಮಾರ್ಪಾಡಾಗಿವೆ. ಈ ವಾರದ ಆರಂಭದಲ್ಲಿ, ಸುಪ್ರೀಂ ಕೋರ್ಟ್ ತಮಿಳುನಾಡು ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡಿತು, ಹತ್ತು ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯುವ ಅವರ ನಿರ್ಧಾರವು "ಕಾನೂನುಬಾಹಿರ" ಮತ್ತು "ಅನಿಯಂತ್ರಿತ" ಎಂದು ಹೇಳಿತ್ತು.
ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು, ರಾಜ್ಯಪಾಲರು ಒಪ್ಪಿಗೆ ನೀಡದೆ ರಾಷ್ಟ್ರಪತಿಗಳಿಗೆ ಮಸೂದೆಗಳನ್ನು ಕಾಯ್ದಿರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. 10 ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಕಾಯ್ದಿರಿಸಿದ ರಾಜ್ಯಪಾಲರ ಕ್ರಮ ಕಾನೂನುಬಾಹಿರ ಮತ್ತು ಅನಿಯಂತ್ರಿತವಾಗಿದೆ. ಹೀಗಾಗಿ, ಈ ಕ್ರಮವನ್ನು ರದ್ದುಗೊಳಿಸಲಾಗಿದೆ. 10 ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರು ತೆಗೆದುಕೊಂಡ ಎಲ್ಲಾ ಕ್ರಮಗಳನ್ನು ರದ್ದುಗೊಳಿಸಲಾಗಿದೆ.
ತೀರ್ಪಿನಲ್ಲಿ ರಾಜ್ಯಪಾಲರು ಅಪ್ರಾಮಾಣಿಕವಾಗಿ ವರ್ತಿಸಿದ್ದಾರೆ ಮತ್ತು ಸುಪ್ರೀಂ ಕೋರ್ಟ್ನ ತೀರ್ಪನ್ನು ಗೌರವಿಸದೆ ಅಗೌರವ ತೋರಿಸಿದ್ದಾರೆ ಎಂದು ಹೇಳಲಾಗಿದೆ. ಅದೇ ರೀತಿ, ಸುಪ್ರೀಂ ಕೋರ್ಟ್ ತನ್ನ 415 ಪುಟಗಳ ತೀರ್ಪಿನಲ್ಲಿ, ರಾಜ್ಯಪಾಲರು ಕಳುಹಿಸುವ ಮಸೂದೆಗಳ ಬಗ್ಗೆ ರಾಷ್ಟ್ರಪತಿಗಳು 3 ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತೀರ್ಪು ನೀಡಿದೆ. ರಾಷ್ಟ್ರಪತಿಗಳಿಗೆ "ಪಾಕೆಟ್ ವೀಟೋ" ಇಲ್ಲ ಮತ್ತು ಅವರು ಒಪ್ಪಿಗೆ ನೀಡಬೇಕು ಅಥವಾ ಅದನ್ನು ತಡೆಹಿಡಿಯಬೇಕು ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ.
#BREAKING | ஆளுநருக்கு எதிரான வழக்கில் உச்ச நீதிமன்றம் அளித்த தீர்ப்பு வெளியானதை அடுத்து, தமிழ்நாடு அரசிதழில் 10 மசோதாக்களும் சட்டமானதாக அறிவிப்பு
— Sun News (@sunnewstamil) April 12, 2025
10 மசோதாக்களையும் ஆளுநர், குடியரசுத் தலைவருக்கு அனுப்பியது சட்ட விரோதம் என உச்ச நீதிமன்றம் தீர்ப்பு வழங்கியதுடன், அம்மசோதாக்களுக்கு… pic.twitter.com/4FFd1YnqkJ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು "ಐತಿಹಾಸಿಕ ತೀರ್ಪಿ"ಯನ್ನು ಶ್ಲಾಘಿಸಿದ್ದಾರೆ. ರಾಜ್ಯ ಸರ್ಕಾರೊಂದಿಗಿನ ಭಿನ್ನಭಿಪ್ರಾಯದಿಂದಾಗಿ ರಾಜ್ಯಪಾಲರು ಈ ನಿರ್ಣಯವನ್ನು ತೆಗೆದುಕೊಂಡಿದ್ದರು. ಇದೀಗ ಸುಪ್ರೀಂ ಕೋರ್ಟ್ ತೀರ್ಪು ಸಂತಸ ತಂದಿದೆ. ಡಿಎಂಕೆ ಸರ್ಕಾರವು ಆ ಕುರಿತು ಅಧಿಸೂಚನೆಗಳನ್ನು ಹೊರಡಿಸಿದ ದಿನ ಅಂದರೆ ನವೆಂಬರ್ 18, 2023 ರಿಂದ ಮಸೂದೆ ಜಾರಿಯಾಗಿದೆ ಎಂದು ಅವರು ಹೇಳಿದ್ದಾರೆ. ತಿದ್ದುಪಡಿಯಾದ ಮಸೂದೆಯಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಕ್ಕೆ ನಿಯಮಗಳನ್ನು ತಿದ್ದುಪಡಿ ಮಾಡುವ ಕಾನೂನುಗಳು ಸೇರಿವೆ, ನೇಮಕಾತಿ ಪ್ರಕ್ರಿಯೆಯಲ್ಲಿ ರಾಜ್ಯಪಾಲರ ಅಧಿಕಾರವನ್ನು ಗಮನಾರ್ಹವಾಗಿ ಮೊಟಕುಗೊಳಿಸುತ್ತವೆ.
ಈ ಸುದ್ದಿಯನ್ನೂ ಓದಿ: Droupadi Murmu: ಆರ್ಥಿಕ ಹೊರೆ ಇಳಿಕೆ: ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆಯನ್ನು ಬೆಂಬಲಿಸಿದ ರಾಷ್ಟ್ರಪತಿ ದ್ರೌಪದಿ ಮರ್ಮು
ತಮಿಳುನಾಡು ಸರ್ಕಾರವು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ್ದು, ಸುಪ್ರೀಂ ಕೋರ್ಟ್ನ ತೀರ್ಪಿನ ನಂತರ, ರಾಜ್ಯಪಾಲರು ಮಸೂದೆಗಳನ್ನು ಕಳುಹಿಸಿದಾಗ ನವೆಂಬರ್ 18, 2023 ರಂದು ಅನುಮೋದನೆ ನೀಡಿದ್ದಾರೆ ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದೆ. "ಡಿಎಂಕೆ ಎಂದರೆ ಇತಿಹಾಸ" ಎಂದು ಸ್ಟಾಲಿನ್ ಈ ಬೆಳವಣಿಗೆಗೆ ಪ್ರತಿಕ್ರಿಯಿಸುತ್ತಾ ಎಕ್ಸ್ ನಲ್ಲಿ ಬರೆದಿದ್ದಾರೆ.