ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 10 ಕಾರ್ಮಿಕರು ಸಾವು, ಹಲವರಿಗೆ ಗಂಭೀರ ಗಾಯ

ಮೇಘಾಲಯದ ತಾಷ್ಖೈನ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಕಲ್ಲಿದ್ದಲು ಗಣಿಯೊಂದರೊಳಗೆ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿದ್ದ ಕಾರ್ಮಿಕರಲ್ಲಿ ಭಾರೀ ಸಾವುನೋವು ಸಂಭವಿಸಿದೆ. ನಿಖರವಾದ ಸಾವಿನ ಸಂಖ್ಯೆ ಇನ್ನೂ ತಿಳಿದು ಬಂದಿಲ್ಲ.

ಸಂಗ್ರಹ ಚಿತ್ರ

ಮೇಘಾಲಯದ ತಾಷ್ಖೈನ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಕಲ್ಲಿದ್ದಲು ಗಣಿಯೊಂದರೊಳಗೆ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿದ್ದ ಕಾರ್ಮಿಕರಲ್ಲಿ ಭಾರೀ ಸಾವುನೋವು ಸಂಭವಿಸಿದೆ. ಬಲಿಯಾದವರಲ್ಲಿ ಹೆಚ್ಚಿನವರು ಅಸ್ಸಾಂನ ಕಾರ್ಮಿಕರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ನಂತರ ಮೇಘಾಲಯ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಪ್ರದೇಶಕ್ಕೆ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ.

Vishakha Bhat Heggar

View all posts by this author