Tunnel Collapses: ಡ್ಯಾಮ್ ಹಿಂಬದಿ ಸುರಂಗ ಕುಸಿತ; 6ಕ್ಕೂ ಅಧಿಕ ಕಾರ್ಮಿಕರು ಟ್ರ್ಯಾಪ್
ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಕಾರ್ಮಿಕರು ಸಿಲುಕಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಶ್ರೀಶೈಲಂ ಅಣೆಕಟ್ಟಿನ ಹಿಂದಿನ ಸುರಂಗದ ಒಂದು ಭಾಗದಲ್ಲಿ ಸೋರಿಕೆಯನ್ನು ಸರಿಪಡಿಸಲು ಕೆಲವು ಕಾರ್ಮಿಕರು ಒಳಗೆ ಹೋದಾಗ ಈ ಕುಸಿತ ಸಂಭವಿಸಿದೆ. ಅವರನ್ನು ಸುರಕ್ಷಿತವಾಗಿ ಹೊರತರಲು ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

ತೆಲಂಗಾಣದಲ್ಲಿ ಸುರಂಗ ಕುಸಿತ

ಹೈದರಾಬಾದ್: ತೆಲಂಗಾಣದಲ್ಲಿ (Telangana) ಶನಿವಾರ ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಕನಿಷ್ಠ (Tunnel Collapses) 30 ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶ್ರೀಶೈಲಂ ಅಣೆಕಟ್ಟಿನ ಹಿಂದಿನ ಸುರಂಗದ ಒಂದು ಭಾಗದಲ್ಲಿ ಸೋರಿಕೆಯನ್ನು ಸರಿಪಡಿಸಲು ಕೆಲವು ಕಾರ್ಮಿಕರು ಒಳಗೆ ಹೋದಾಗ ಈ ಕುಸಿತ ಸಂಭವಿಸಿದೆ. ಅವರಲ್ಲಿ ಮೂವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಸುಮಾರು 6ಕ್ಕೂ ಹೆಚ್ಚು ಮಂದಿ ಒಳಗೆ ಸಿಲುಕಿದ್ದಾರೆ ಎನ್ನಲಾಗಿದೆ. ಅವರನ್ನು ಸುರಕ್ಷಿತವಾಗಿ ಹೊರತರಲು ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.ಈ ಸುರಂಗವು ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (SLBC) ನಿರ್ಮಾಣ ಹಂತದಲ್ಲಿರುವ ಅಮ್ರಾಬಾದ್ನಲ್ಲಿದೆ. ದೋಮಲಪೆಂಟಾ ಬಳಿಯ ಶ್ರೀಶೈಲಂ ಅಣೆಕಟ್ಟಿನ ಹಿಂದೆ ಇರುವ ಎಸ್ಎಲ್ಬಿಸಿ ಸುರಂಗದ ಒಂದು ಭಾಗ ಶನಿವಾರ ಕುಸಿದಿದೆ. ಸುರಂಗದ ಒಂದು ಭಾಗದಲ್ಲಿ ಸೋರಿಕೆಯನ್ನು ಸರಿಪಡಿಸಲು ಕೆಲವು ಕಾರ್ಮಿಕರು ಒಳಗೆ ಹೋಗಿದ್ದರು ಆಗ ಸುರಂಗ ಕುಸಿದಿದೆ.
ಘಟನೆ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪೋಸ್ಟ್ ಮಾಡಿ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಕುಸಿತದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಉಲ್ಲೇಖಿಸಿದ್ದರೂ, ಸುರಂಗದಲ್ಲಿ ಸಿಲುಕಿದ್ದವರ ಸಂಖ್ಯೆ ಹಾಗೂ ಮಾಹಿತಿಯನ್ನು ನೀಡಿಲ್ಲ. ಸುರಂಗ ಕುಸಿತ ಸಂಭವಿಸಿದ ತಕ್ಷಣವೇ ಸಿಎಂ ರಕ್ಷಣಾ ಕಾರ್ಯ ನಡೆಸಲು ಸೂಚಿಸಿದ್ದಾರೆ. ಲ್ಲಾಧಿಕಾರಿ, ಎಸ್ಪಿ, ಅಗ್ನಿಶಾಮಕ ಇಲಾಖೆ, ಹೈಡ್ರಾ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪಿ ಪರಿಹಾರ ಕ್ರಮಗಳನ್ನು ಒದಗಿಸುವಂತೆ ಅವರು ಆದೇಶಿಸಿದ್ದಾರೆ.
A Portion of Roof of the SLBC Tunnel Collapsed, many injured, few feared Trapped in Tunnel.
— Surya Reddy (@jsuryareddy) February 22, 2025
Reportedly around 3-meters roof of the #tunnel at #Srisailam Left Bank Canal (#SLBC) Project in #Nagarkurnool, collapsed at the 14th km mark, 5-7 workers feared trapped, most have safely… pic.twitter.com/DZ80NJ5lOi
ಮುಖ್ಯಮಂತ್ರಿ, ರಾಜ್ಯ ನೀರಾವರಿ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ, ನೀರಾವರಿ ಸರ್ಕಾರದ ಸಲಹೆಗಾರ ಆದಿತ್ಯನಾಥ್ ದಾಸ್ ಮತ್ತು ಇತರ ನೀರಾವರಿ ಅಧಿಕಾರಿಗಳ ನಿರ್ದೇಶನದಂತೆ ವಿಶೇಷ ಹೆಲಿಕಾಪ್ಟರ್ನಲ್ಲಿ ಸ್ಥಳಕ್ಕೆ ತೆರಳಿದ್ದಾರೆ ಎಂದು ಅದು ತಿಳಿಸಿದೆ.
ಈ ಸುದ್ದಿಯನ್ನೂ ಓದಿ: ನಿರ್ಮಾಣ ಹಂತದ ಸುರಂಗ ಕುಸಿತ: ನಾಲ್ವರ ರಕ್ಷಣೆ
ಕೇಂದ್ರ ಕಲ್ಲಿದ್ದಲು ಸಚಿವ ಜಿ ಕಿಶನ್ ರೆಡ್ಡಿ ಅವರು ಸುರಂಗ ಅಪಘಾತಕ್ಕೆ ಕಾರಣವಾದ ಕಾರಣಗಳ ಬಗ್ಗೆ ವಿಚಾರಿಸಿದ್ದಾರೆ ಮತ್ತು ಸಿಲುಕಿಕೊಂಡಿರುವ ಶಂಕಿತರನ್ನು ಸುರಕ್ಷಿತವಾಗಿ ಹೊರತರುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಗಾಯಗೊಂಡವರಿಗೆ ಚಿಕಿತ್ಸೆ ನೀಡುವಂತೆಯೂ ಅಧಿಕಾರಿಗಳನ್ನು ಕೇಳಿಕೊಂಡಿದ್ದೇನೆ ಎಂದು ಅವರು ಹೇಳಿದರು.