ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು; ನಾಲ್ವರಿಗೆ ಗಾಯ
Gurugram wall collapse: ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಗೋಡೆಯು ದೊಡ್ಡ ಶಬ್ಧದೊಂದಿಗೆ ಕುಸಿದು ಬಿದ್ದಿದ್ದು, ಸುಮಾರು 12ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ. ಅಧಿಕಾರಿಗಳು ಭಾರಿ ಯಂತ್ರೋಪಕರಣಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಗುರುಗ್ರಾಮದಲ್ಲಿ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಸಾವು -
ಚಂಡೀಗಢ, ಮಾ. 10: ನಿರ್ಮಾಣ ಹಂತದ ಸ್ಥಳದಲ್ಲಿ ಗೋಡೆ ಕುಸಿದು (wall collapse) ಏಳು ಕಾರ್ಮಿಕರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ (Gurugram) ನಡೆದಿದೆ. ಹರಿಯಾಣದ ಗುರುಗ್ರಾಮದ ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ಸೋಮವಾರ (ಮಾ. 9) ಸಂಜೆ ಈ ಘಟನೆ ನಡೆದಿದೆ.
ಗೋಡೆಯು ದೊಡ್ಡ ಶಬ್ಧದೊಂದಿಗೆ ಕುಸಿದು ಬಿದ್ದಿದ್ದು, ಸುಮಾರು 12ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದರು. ಮಾಹಿತಿ ಪಡೆದ ಸ್ಥಳೀಯ ಪೊಲೀಸರು, ಆಡಳಿತ ಮತ್ತು ಎಸ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಅಧಿಕಾರಿಗಳು ಭಾರಿ ಯಂತ್ರೋಪಕರಣಗಳನ್ನು ಬಳಸಿ ಅವಶೇಷಗಳನ್ನು ತೆಗೆದುಹಾಕಿದರು ಎಂದು ಮೂಲಗಳು ತಿಳಿಸಿವೆ.
ಒಂದು ಗಂಟೆಯ ರಕ್ಷಣಾ ಕಾರ್ಯಾಚರಣೆಯ ನಂತರ, ಸಿಲುಕಿಕೊಂಡಿದ್ದ ಕಾರ್ಮಿಕರನ್ನು ಹೊರತೆಗೆದು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ಪೈಕಿ 7 ಮಂದಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ; 15 ಮಂದಿ ಸಾವು
ಮಣ್ಣು ಕುಸಿದು ಗೋಡೆ ಕುಸಿದಿದೆ ಎಂದು ಮೃತಪಟ್ಟ ಕಾರ್ಮಿಕರೊಬ್ಬರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ನಾವು ಸ್ಥಳಕ್ಕೆ ತಲುಪಿದಾಗ ಕಂಪನಿಯ ಅಧಿಕಾರಿಗಳನ್ನು ಭೇಟಿ ಮಾಡಲು ನಮಗೆ ಅವಕಾಶ ನೀಡಲಿಲ್ಲ. ಅಧಿಕೃತರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಬಯಸುತ್ತಾರೆ. ಕಾರ್ಮಿಕರು ನಿರ್ಮಾಣ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು. ನಿರ್ಮಾಣ ಸ್ಥಳದ ಅಧಿಕಾರಿಗಳು ನಮ್ಮನ್ನು ಭೇಟಿ ಮಾಡಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ. ಇಲ್ಲಿಯವರೆಗೆ ಯಾರೂ ನಮ್ಮ ಕುಂದುಕೊರತೆಗಳನ್ನು ಕೇಳಿಲ್ಲ ಎಂದು ಅವರು ಹೇಳಿದರು.
ಕಾರ್ಮಿಕರ ಶವಗಳನ್ನು ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಔಷಧ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ ಮಾದಕ ವ್ಯಸನ ರೋಗಿಯ ಕೊಲೆ
ಗುಜರಾತ್ನ ಸೂರತ್ನಲ್ಲಿ ಒಂದು ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ರೋಗಿಗೆ ಚಿಕಿತ್ಸೆ ನೀಡುವ ಬದಲು, ಸಿಬ್ಬಂದಿ ಆತನನ್ನು ಹೊಡೆದು ಕೊಲೆ ಮಾಡಿದ್ದಾರೆ. ಮಾದಕ ದ್ರವ್ಯ ಸೇವನೆ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಔಷಧಿ ತೆಗೆದುಕೊಳ್ಳಲು ನಿರಾಕರಿಸಿದ ಕಾರಣ 32 ವರ್ಷದ ರೋಗಿಯನ್ನು ನಾಲ್ವರು ಸಿಬ್ಬಂದಿ ಹೊಡೆದು ಕೊಂದಿದ್ದಾರೆ. ಇಬ್ಬರು ಸಲಹೆಗಾರರು, ವಾರ್ಡ್ ಬಾಯ್ ಮತ್ತು ಚಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಪ್ರಸ್ತುತ ಬಂಧಿಸಿದ್ದಾರೆ.
ಶಾಲಾ ಕಟ್ಟಡ ಕುಸಿತ- ಅವಶೇಷದಡಿಯಲ್ಲಿ 40ಕ್ಕೂ ಹೆಚ್ಚು ಮಕ್ಕಳು, 4 ಬಲಿ
ಈ ಘಟನೆ ಡುಮಾಸ್ ಪ್ರದೇಶದಲ್ಲಿರುವ ರೇವಾ ವ್ಯಸನಮುಕ್ತ ಮತ್ತು ಪುನರ್ವಸತಿ ಕೇಂದ್ರದಲ್ಲಿ ನಡೆದಿದೆ. ಧವಲ್ ರಾಥೋಡ್ (32) ಅವರ ಸಾವಿಗೆ ಕಾರಣರಾದ ನಾಲ್ವರು ವ್ಯಕ್ತಿಗಳಲ್ಲಿ ಇಬ್ಬರು ಸಲಹೆಗಾರರು, ಒಬ್ಬ ವಾರ್ಡ್ ಬಾಯ್ ಮತ್ತು ಒಬ್ಬ ಚಾಲಕ ಸೇರಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತೆ ಶ್ವೇತಾ ಡೇನಿಯಲ್ ಹೇಳಿದ್ದಾರೆ.
ಫೆಬ್ರವರಿ 28ರಂದು ಧವಲ್ ರಾಥೋಡ್ ಅವರನ್ನು ವ್ಯಸನಮುಕ್ತ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಯಿತು. ರಾಥೋಡ್ ಔಷಧಿ ತೆಗೆದುಕೊಳ್ಳಲು ನಿರಾಕರಿಸಿದರು. ಹೀಗಾಗಿ ಆರೋಪಿಗಳು ಅವರನ್ನು ಹಿಗ್ಗಾಮುಗ್ಗಾ ಹೊಡೆದರು. ಮಾರ್ಚ್ 1ರ ರಾತ್ರಿ ಅವರ ಸ್ಥಿತಿ ಹದಗೆಟ್ಟಾಗ, ಅವರನ್ನು ಆಂಬ್ಯುಲೆನ್ಸ್ ಸಂಖ್ಯೆ 108 ಮೂಲಕ ನ್ಯೂ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.