ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಕನಿಷ್ಠ 7 ಜನರು (Avalanche At Zojila Pass) ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಜೋಜಿಲಾ ಪಾಸ್ನ ಲಡಾಖ್ ಭಾಗದಲ್ಲಿ ಹಿಮಪಾತ ಸಂಭವಿಸಿದ್ದು, ಹಲವಾರು ಪ್ರಯಾಣಿಕ ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿವೆ. ಘಟನೆಯ ನಂತರ, ಹೆದ್ದಾರಿ ಸಂಪೂರ್ಣವಾಗಿ ಬಂದ್ ಆಗಿದೆ. ಹಿಮವನ್ನು ತೆಗೆದುಹಾಕಲು ಮತ್ತು ಸಂಚಾರವನ್ನು ಪುನಃಸ್ಥಾಪಿಸಲು ಅಧಿಕಾರಿಗಳು ದೊಡ್ಡ ಪ್ರಮಾಣದ ರಕ್ಷಣಾ ಮತ್ತು ತೆರವು ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ್ದಾರೆ.
ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿರುವ ಲಡಾಖ್ನ ಲೆಫ್ಟಿನೆಂಟ್ ಗವರ್ನರ್, "ಜೋಜಿ ಲಾದಲ್ಲಿ ಹಿಮಪಾತದ ದುರದೃಷ್ಟಕರ ಸುದ್ದಿ ಕೇಳಿದೆ. ಕಾರ್ಗಿಲ್ನ ಡಿಸಿ ಮತ್ತು ಎಸ್ಎಸ್ಪಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಸಜ್ಜುಗೊಳಿಸುವಂತೆ ಸೂಚಿಸಿದ್ದೇನೆ. ವಿಪತ್ತು ಪರಿಹಾರ ಪಡೆಗಳು ಮತ್ತು ಬಿಆರ್ಒ (ಗಡಿ ರಸ್ತೆ ಸಂಸ್ಥೆ) ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಹೈ ಅಲರ್ಟ್ನಲ್ಲಿ ಇರಿಸಲಾಗಿದೆ ಎಂದು ಹೇಳಿದ್ದಾರೆ.
ಲಾರಿ- ಖಾಸಗಿ ಬಸ್ ನಡುವೆ ಭೀಕರ ಅಪಘಾತ; 13 ಜನರು ಸಾವು, ಹಲವರಿಗೆ ಗಾಯ
ಗಡಿ ರಸ್ತೆಗಳ ಸಂಸ್ಥೆ (BRO) ಮತ್ತು ಪೊಲೀಸರ ತಂಡಗಳು ಅವಶೇಷಗಳನ್ನು ತೆರವುಗೊಳಿಸುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಶ್ರೀನಗರ-ಲೇಹ್ ಹೆದ್ದಾರಿ, NH-1 ಎಂದು ಕರೆಯಲ್ಪಡುತ್ತದೆ, ಇದು 434 ಕಿಮೀ ಉದ್ದದ ಒಂದು ಪ್ರಮುಖ ಮಾರ್ಗವಾಗಿದ್ದು, ಶ್ರೀನಗರ ಮತ್ತು ಲೇಹ್ ನಡುವಿನ ಪ್ರಮುಖ ಸಂಪರ್ಕವಾಗಿ ಕಾರ್ಯನಿರ್ವಹಿಸುತ್ತದೆ. 11,575 ಅಡಿ ಎತ್ತರದಲ್ಲಿರುವ ಝೋಜಿಲಾ ಪಾಸ್ ಮೂಲಕ ಹಾದುಹೋಗುವ ಈ ರಸ್ತೆಯು ತನ್ನ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಭಾರೀ ಹಿಮಪಾತ ಮತ್ತು ಅಪಾಯಕಾರಿ ಭೂಪ್ರದೇಶದಿಂದಾಗಿ, ಹೆದ್ದಾರಿಯ ಈ ಭಾಗವು ಚಳಿಗಾಲದ ತಿಂಗಳುಗಳಲ್ಲಿ ಹೆಚ್ಚಾಗಿ ಮುಚ್ಚಲ್ಪಡುತ್ತದೆ.