Arvind Kejriwal : ದೆಹಲಿ ಚುನಾವಣೆ ಪ್ರಚಾರ; ಬೀದಿ ಬದಿಯಲ್ಲಿ ವೆಜಿಟೇಬಲ್‌ ಮೊಮೊ ಸೇವಿಸಿದ ಕೇಜ್ರಿವಾಲ್

ದೆಹಲಿ ಚುನಾವಣಾ ಪ್ರಚಾರ ರಂಗೇರಿದ್ದು,ಎಎಪಿ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಮತದಾರರನ್ನು ಸೆಳೆಯಲು ನಾನಾ ರೀತಿಯ ಸರ್ಕಸ್ಸುಗಳನ್ನು ಮಾಡುತ್ತಿದ್ದಾರೆ. ಮೂರನೇ ಅವಧಿಗೆ ದೆಹಲಿ ಗದ್ದುಗೆ ಏರಲು ಎಎಪಿ ಚುನಾವಣಾ ಕಣದಲ್ಲಿ ಮತ ಬೇಟೆ ಶುರು ಮಾಡಿದೆ. ನಿನ್ನೆ(ಜ.19) ಎಎಪಿ ಮುಖ್ಯಸ್ಥ ಕೇಜ್ರಿವಾಲ್‌ ಚುನಾವಣಾ ಪ್ರಚಾರದ ವೇಳೆ ರಸ್ತೆ ಬದಿಯ ಅಂಗಡಿಯಲ್ಲಿ ವೆಜಿಟೇಬಲ್‌ ಮೊಮೋಸ್‌ ಸೇವಿಸಿದ್ದಾರೆ.

Arvind Kejriwal
Profile Deekshith Nair Jan 20, 2025 11:30 AM

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯು ಫೆಬ್ರವರಿ 5ರಂದು ನಡೆಯಲಿದ್ದು. ಚುನಾವಣೆ ಫಲಿತಾಂಶವು ಫೆಬ್ರವರಿ 8ಕ್ಕೆ ಪ್ರಕಟವಾಗಲಿದೆ. ಈ ಬಾರಿಯ ದೆಹಲಿ ಚುನಾವಣೆ ಕಣದಲ್ಲಿ ಭಾರೀ ಪೈಪೋಟಿಯಿದೆ. ಎಎಪಿ ಮೂರನೇ ಅವಧಿಗೆ ಗದ್ದುಗೆ ಏರಲು ಕಸರತ್ತು ನಡೆಸುತ್ತಿದೆ. ಎಎಪಿ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌(Arvind Kejriwal) ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು,ನಿನ್ನೆ(ಜ.19) ಬೀದಿ ಬದಿಯ ಅಂಗಡಿಯೊಂದರಲ್ಲಿ ವೆಜಿಟೇಬಲ್‌ ಮೊಮೊ ಸೇವಿಸಿದ್ದಾರೆ. ಇದೀಗ ಆ ಪೋಸ್ಟ್‌ ಸಾಕಷ್ಟು ವೈರಲ್‌ ಆಗಿದೆ.

ಎಎಪಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿದ್ದು, ಅರವಿಂದ್‌ ಕೇಜ್ರಿವಾಲ್‌ ರಸ್ತೆ ಬದಿಯ ಅಂಗಡಿಯಲ್ಲಿ ಮೊಮೊ ಸೇವಿಸಿದರು ಎಂದು ಬರೆಯಲಾಗಿದೆ.



ವಿಡಿಯೊದಲ್ಲಿ, ಕೇಜ್ರಿವಾಲ್ ಮಾರಾಟಗಾರನಲ್ಲಿ ಒಂದು ತುಂಡು ಮೊಮೊ ಕೇಳುವುದನ್ನು ನೋಡಬಹುದು. ನಂತರ ತಟ್ಟೆಯಿಂದ ಮೊಮೊ ಆರಿಸಿಕೊಂಡು ಉಳಿದದ್ದನ್ನು ತನ್ನೊಂದಿಗಿದ್ದವರೊಂದಿಗೆ ಹಂಚಿಕೊಂಡಿದ್ದಾರೆ. ಹಲವರು ಕೇಜ್ರಿವಾಲ್‌ ಅವರನ್ನು ಕೊಂಡಾಡಿದ್ದು,ಸರಳತೆಯ ವ್ಯಕ್ತಿ ಎಂದು ಕಾಮೆಂಟ್‌ ಮಾಡಿದ್ದಾರೆ.



ಕೇಜ್ರಿವಾಲ್ ವಿರುದ್ಧ ಹೆಚ್ಚು ಅಭ್ಯರ್ಥಿಗಳು!

ದೆಹಲಿ ವಿಧಾನಸಭೆ ಚುನಾವಣೆಯು ಸಾಕಷ್ಟು ಕುತೂಹಲ ಮೂಡಿಸಿದೆ. 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 5ರಂದು ಮತದಾನ ನಡೆಯಲಿದೆ. ಚುನಾವಣಾ ಫಲಿತಾಂಶ ಫೆಬ್ರವರಿ 8ರಂದು ಪ್ರಕಟವಾಗಲಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು 36 ಸ್ಥಾನಗಳನ್ನು ಪಕ್ಷ ಗೆಲ್ಲಬೇಕಾಗುತ್ತದೆ.

ಎಎಪಿ ಮುಖ್ಯಸ್ಥ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಅತಿ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನವದೆಹಲಿ ಕ್ಷೇತ್ರದಿಂದ ಕೇಜ್ರಿವಾಲ್ ಸ್ಪರ್ಧೆ ಮಾಡುತ್ತಿದ್ದು, ಅವರ ವಿರುದ್ಧ 23 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ:Kumbh Mela: ಕರ್ನಾಟಕದಲ್ಲೂ ಮುಂದಿನ ತಿಂಗಳು ಕುಂಭಮೇಳ, ದಿನಾಂಕ ಫಿಕ್ಸ್

ಅಚ್ಚರಿ ಎಂಬಂತೆ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಅರವಿಂದ ಕೇಜ್ರಿವಾಲ್ ವಿರುದ್ಧ ನವದೆಹಲಿ ಕ್ಷೇತ್ರದಲ್ಲಿ ಎದುರಾಳಿಗಳು. ಬಿಜೆಪಿಯಿಂದ ಪರ್ವೇಶ್ ವರ್ಮಾ ಅಭ್ಯರ್ಥಿ ಇವರು ಮಾಜಿ ಸಿಎಂ ಸಾಹಿಬ್ ಸಿಂಗ್ ವರ್ಮಾ ಪುತ್ರ. ಕಾಂಗ್ರೆಸ್‌ನಿಂದ ಮಾಜಿ ಸಿಎಂ ಶೀಲಾ ದೀಕ್ಷಿತ್ ಪುತ್ರ ಸಂದೀಪ್ ದೀಕ್ಷಿತ್ ಅಭ್ಯರ್ಥಿ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?