ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bihar Assembly Election: 71 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ; ಸೀಟು ಹಂಚಿಕೆ ಲೆಕ್ಕಾಚಾರ ಹೇಗಿದೆ?

ಭಾರತೀಯ ಜನತಾ ಪಕ್ಷ (BJP) ಮಂಗಳವಾರ, ಅಕ್ಟೋಬರ್ 14 ರಂದು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ 2025 ರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರನ್ನು ಕ್ರಮವಾಗಿ ತಾರಾಪುರ ಮತ್ತು ಲಖಿಸರಾಯ್ ಸ್ಥಾನಗಳಿಂದ ಕಣಕ್ಕಿಳಿಸಿದೆ.

71 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ

-

Vishakha Bhat Vishakha Bhat Oct 14, 2025 3:56 PM

ಪಟನಾ: ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ, ಅಕ್ಟೋಬರ್ 14 ರಂದು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ 2025 ರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ (Bihar Assembly Election) ಸಿನ್ಹಾ ಅವರನ್ನು ಕ್ರಮವಾಗಿ ತಾರಾಪುರ ಮತ್ತು ಲಖಿಸರಾಯ್ ಸ್ಥಾನಗಳಿಂದ ಕಣಕ್ಕಿಳಿಸಿದೆ. ಮಾಜಿ ಉಪಮುಖ್ಯಮಂತ್ರಿ ತರ್ಕಿಶೋರ್ ಪ್ರಸಾದ್ ಮತ್ತು ರಾಜ್ಯ ಸಚಿವೆ ರೇಣು ದೇವಿ ಕ್ರಮವಾಗಿ ಕತಿಹಾರ್ ಮತ್ತು ಬೆಟ್ಟಯ್ಯದಿಂದ ಸ್ಪರ್ಧಿಸಲಿದ್ದಾರೆ. ಶ್ರೇಯಸಿ ಸಿಂಗ್ ಜಮುಯಿ ಸ್ಥಾನದಿಂದ ಕಣಕ್ಕೆ ಇಳಿಯಲಿದ್ದಾರೆ ಎಂದು ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿ ತಿಳಿಸಿದೆ.

ಅಭ್ಯರ್ಥಿಗಳಲ್ಲಿ ರಕ್ಸೌಲ್‌ನಿಂದ ಪ್ರಮೋದ್ ಸಿನ್ಹಾ, ಮೋತಿಹರಿಯಿಂದ ಪ್ರಮೋದ್ ಕುಮಾರ್, ಸೀತಾಮರ್ಹಿಯಿಂದ ಸುನಿಲ್ ಕುಮಾರ್ ಪಿಂಟು, ಸಹರ್ಸಾದಿಂದ ಅಲೋಕ್ ರಂಜನ್ ಝಾ ಸೇರಿದಂತೆ ಇತರರಿಗೆ ಅವಕಾಶ ಸಿಕ್ಕಿದೆ. ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಬಿಜೆಪಿ 101 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಕೇಂದ್ರ ಸಚಿವ ಮತ್ತು ಬಿಜೆಪಿಯ ಬಿಹಾರ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಭಾನುವಾರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಘೋಷಿಸಿದರೆ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷವು 29 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ಉಪೇಂದ್ರ ಕುಶ್ವಾಹ ನೇತೃತ್ವದ ರಾಷ್ಟ್ರೀಯ ಲೋಕ ಮೋರ್ಚಾ ತಲಾ ಆರು ಸ್ಥಾನಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜನತಾದಳ (ಯುನೈಟೆಡ್) ಗೆ ಸ್ಥಾನ ಹಂಚಿಕೆ ಸೂತ್ರ ಮತ್ತು ವಿಧಾನಸಭಾ ಸ್ಥಾನಗಳ ಹಂಚಿಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನೂ ಓದಿ: Bihar Assembly Elections: ವಿಧಾನ ಸಭಾ ಚುನಾವಣೆ: ಬಿಹಾರದಲ್ಲಿ ಮತವಲ್ಲ ಮೈತ್ರಿಯೇ ನಿರ್ಣಾಯಕ

ಪಕ್ಷದ ಹಂಗಾಮಿ ಅಧ್ಯಕ್ಷ ಸಂಜಯ್ ಝಾ ಮತ್ತು ಕೇಂದ್ರ ಸಚಿವ ಲಾಲನ್ ಸಿಂಗ್ ಅವರಿಗೆ ನಿತೀಶ್ ಕುಮಾರ್ ತಮ್ಮ ಕಳವಳಗಳನ್ನು ತಿಳಿಸಿದ್ದು, ಸೀಟು ಹಂಚಿಕೆ ವ್ಯವಸ್ಥೆ ಕುರಿತು ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆ ಮತ್ತೆ ಚರ್ಚೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಜೆಡಿಯು ಹೊಂದಿದ್ದ ಒಂಬತ್ತು ಸ್ಥಾನಗಳ ಬಗ್ಗೆ ನಿತೀಶ್ ಆಕ್ಷೇಪ ವ್ಯಕ್ತಪಡಿಸಿ, ಈ ಕ್ಷೇತ್ರಗಳು ತಮ್ಮ ಪಕ್ಷದಲ್ಲೇ ಉಳಿಯಬೇಕೆಂದು ಒತ್ತಾಯಿಸಿದರು ಎಂದು ವರದಿಯಾಗಿದೆ.