ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ತರುಣ್ ಚುಗ್‌ಗೆ ಮಧ್ಯ ಪ್ರದೇಶದಿಂದ ಟಿಕೆಟ್

2026ರ ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಮಧ್ಯ ಪ್ರದೇಶದಿಂದ ತರುಣ್ ಚುಗ್ ಹಾಗೂ ರಾಜನೀಶ್ ಅಗ್ರವಾಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಅರುಣಾಚಲ ಪ್ರದೇಶ, ಮಣಿಪುರ, ಗುಜರಾತ್ ಮತ್ತು ರಾಜಸ್ಥಾನ ಸೇರಿ ಹಲವು ರಾಜ್ಯಗಳ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, ರಾಜ್ಯಸಭೆಯಲ್ಲಿ ತನ್ನ ಬಲವನ್ನು ಮತ್ತಷ್ಟು ಗಟ್ಟಿಗೊಳಿಸುವತ್ತ ಹೆಜ್ಜೆ ಇಟ್ಟಿದೆ.

ರಾಜ್ಯಸಭೆ (ಸಂಗ್ರಹ ಚಿತ್ರ)

ನವದೆಹಲಿ, ಜೂ. 4: 2026ರ ರಾಜ್ಯಸಭೆ (Rajya Sabha) ದ್ವೈವಾರ್ಷಿಕ ಚುನಾವಣೆ ಹಾಗೂ ಒಡಿಶಾ ಉಪಚುನಾವಣೆಗೆ ಭಾರತೀಯ ಬಿಜೆಪಿ ಗುರುವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ವಿವಿಧ ರಾಜ್ಯಗಳಿಂದ ಹಿರಿಯ ನಾಯಕರು ಹಾಗೂ ಪ್ರಾದೇಶಿಕ ಪ್ರತಿನಿಧಿಗಳಿಗೆ ಪಕ್ಷ ಟಿಕೆಟ್ ನೀಡಿದೆ.
ಪ್ರಮುಖ ಅಭ್ಯರ್ಥಿಗಳಲ್ಲಿ ಪಂಜಾಬ್ ಬಿಜೆಪಿ ನಾಯಕ ತರುಣ್ ಚುಗ್ (Tarun Chugh) ಅವರಿಗೆ ಮಧ್ಯ ಪ್ರದೇಶದಿಂದ (Madhya Pradesh) ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಅವರೊಂದಿಗೆ ರಾಜನೀಶ್ ಅಗ್ರವಾಲ್ (Rajneesh Agrawal) ಅವರನ್ನೂ ಮಧ್ಯ ಪ್ರದೇಶದಿಂದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಅರುಣಾಚಲ ಪ್ರದೇಶದಿಂದ ತೈ ಟಗಾಕ್ ಹಾಗೂ ಮಣಿಪುರದಿಂದ ಎ. ಶಾರದಾ ದೇವಿ ಅವರಿಗೆ ಬಿಜೆಪಿ ಅವಕಾಶ ನೀಡಿದೆ. ಗುಜರಾತ್‌ನಿಂದ ರಾಜುಭಾಯಿ ಶುಕ್ಲಾ, ಮುಖೇಶ್‌ಭಾಯಿ ರಾಥ್ವಾ, ಮಾನಸಿಂಗ್ ಪರ್ಮಾರ್ ಮತ್ತು ಜಿತೇಂದ್ರ ಮೇಘಜಿಭಾಯಿ ಕಂಝಾರಿಯಾ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ರಾಜಸ್ಥಾನದಿಂದ ಡಾ. ಅಲ್ಕಾ ಗುರ್ಜರ್ ಹಾಗೂ ಮಾಜಿ ರಾಜ್ಯ ಬಿಜೆಪಿ ಅಧ್ಯಕ್ಷ ಡಾ. ಸತೀಶ್ ಪೂನಿಯಾ ಅವರಿಗೆ ಟಿಕೆಟ್ ನೀಡಲಾಗಿದೆ.

ಈ ರಾಜ್ಯಗಳಲ್ಲಿ ಬಿಜೆಪಿ ಬಹುಮತ ಹೊಂದಿರುವುದರಿಂದ ಅಭ್ಯರ್ಥಿಗಳ ಗೆಲುವು ಬಹುತೇಕ ಖಚಿತವೆಂದು ರಾಜಕೀಯ ವಲಯದಲ್ಲಿ ಅಂದಾಜಿಸಲಾಗಿದೆ.

ಇಬ್ಬರು ಕೇಂದ್ರ ಸಚಿವರಿಗೆ ಟಿಕೆಟ್ ಇಲ್ಲ

ಈ ಬಾರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಇಬ್ಬರು ಕೇಂದ್ರ ಸಚಿವರ ಹೆಸರಿನ ಗೈರುಹಾಜರಿ ಗಮನ ಸೆಳೆದಿದೆ. ರವ್ನೀತ್ ಸಿಂಗ್ ಬಿಟ್ಟು ಹಾಗೂ ಜಾರ್ಜ್ ಕುರಿಯನ್ ಅವರಿಗೆ ಕ್ರಮವಾಗಿ ರಾಜಸ್ಥಾನ ಮತ್ತು ಮಧ್ಯ ಪ್ರದೇಶದಿಂದ ರಾಜ್ಯಸಭೆ ಟಿಕೆಟ್ ನೀಡಲಾಗಿಲ್ಲ.

ಇದರಿಂದ ಮುಂಬರುವ ದಿನಗಳಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಪುನರ್‌ರಚನೆ ನಡೆಯುವ ಸಾಧ್ಯತೆ ಇದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ.

ದೀರ್ಘಾವಧಿಯ ಇಂಧನ ಸಹಭಾಗಿತ್ವ ಕುರಿತು ಚರ್ಚೆ ನಡೆಸಿದ ಪ್ರಧಾನಿ ಮೋದಿ-ವೆನೆಜುವೆಲಾ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್

ಒಡಿಶಾ ಉಪಚುನಾವಣೆಗೆ ದೇವಾಶಿಶ್ ಸಮಂತರಾಯ್

ಒಡಿಶಾದ ರಾಜ್ಯಸಭೆ ಉಪಚುನಾವಣೆಗೆ ಬಿಜೆಪಿ ದೇವಾಶಿಶ್ ಸಮಂತರಾಯ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಅವರು ಈ ಹಿಂದೆ ಬಿಜೆು ಜನತಾ ದಳ (ಬಿಜೆಡಿ) ಪಕ್ಷದ ನಾಯಕರಾಗಿದ್ದು, ಮೇ 25ರಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಜೂನ್ 18ರಂದು ಮತದಾನ

ರಾಜ್ಯಸಭೆಯ 24 ಸ್ಥಾನಗಳಿಗೆ 10 ರಾಜ್ಯಗಳಲ್ಲಿ ಜೂನ್ 18ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಇದೇ ದಿನ ಮಹಾರಾಷ್ಟ್ರ ಹಾಗೂ ತಮಿಳುನಾಡಿನ ಎರಡು ಪ್ರಮುಖ ಸ್ಥಾನಗಳಿಗೆ ಉಪಚುನಾವಣೆಯೂ ನಡೆಯಲಿದೆ. ಜೂನ್ 1ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದೆ. ಜೂನ್ 18ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ ಮತ ಎಣಿಕೆ ಪ್ರಾರಂಭವಾಗಲಿದೆ. ಅಂತಿಮ ಫಲಿತಾಂಶ ರಾತ್ರಿ ವೇಳೆಗೆ ಪ್ರಕಟವಾಗುವ ನಿರೀಕ್ಷೆಯಿದೆ.