ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Air India Flight: ಕ್ಯಾಬಿನ್‌ನಲ್ಲಿ ಸುಟ್ಟಿರುವ ವಾಸನೆ; ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಮುಂಬೈಗೆ ವಾಪಾಸ್‌

ಅಹಮದಾಬಾದ್‌ನಲ್ಲಿ ನಡೆದ ಏರ್‌ ಇಂಡಿಯಾ ವಿಮಾನ (Air India Flgiht) ಅಪಘಾತದ ಬಳಿಕ ಏರ್‌ ಇಂಡಿಯಾ ಮುನ್ನೆಚ್ಚರಿಕೆ ಕ್ರಮವನ್ನು ತೆಗದುಕೊಳ್ಳುತ್ತಿದೆ. ಮುಂಬೈನಿಂದ ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್‌ನಲ್ಲಿ ಸುಟ್ಟಿದ್ದ ವಾಸನೆ ಬಂದಿದೆ.

ಸುಟ್ಟಿರುವ ವಾಸನೆ;ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಾಪಾಸ್‌

Profile Vishakha Bhat Jun 28, 2025 8:42 PM

ಮುಂಬೈ: ಅಹಮದಾಬಾದ್‌ನಲ್ಲಿ ನಡೆದ ಏರ್‌ ಇಂಡಿಯಾ ವಿಮಾನ (Air India Flight) ಅಪಘಾತದ ಬಳಿಕ ಏರ್‌ ಇಂಡಿಯಾ ಮುನ್ನೆಚ್ಚರಿಕೆ ಕ್ರಮವನ್ನು ತೆಗದುಕೊಳ್ಳುತ್ತಿದೆ. ಮುಂಬೈನಿಂದ ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್‌ನಲ್ಲಿ ಸುಟ್ಟಿದ್ದ ವಾಸನೆ ಬಂದಿದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಮುಂಬೈ ವಿಮಾನ ನಿಲ್ದಾಣದ ಕಡೆಗೆ ತಿರುಗಿಸಲಾಗಿದೆ. AI 639 ಶುಕ್ರವಾರ ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ವಿಮಾನಯಾನ ವಕ್ತಾರರು ತಿಳಿಸಿದ್ದಾರೆ.

ವಿಮಾನವು ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು ಮತ್ತು ಪ್ರಯಾಣಿಕರನ್ನು ಬೇರೆ ವಿಮಾನಕ್ಕೆ ವರ್ಗಾಯಿಸಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದ ಉಂಟಾದ ಅನಾನುಕೂಲತೆಯನ್ನು ಕಡಿಮೆ ಮಾಡಲು ಮುಂಬೈನಲ್ಲಿರುವ ನಮ್ಮ ಸಿಬ್ಬಂದಿಗಳು ಪ್ರಯಾಣಿಕರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡಿದರು ಎಂದು ಏರ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ವಿಮಾನವು ರಾತ್ರಿ 11.50 ಕ್ಕೆ ಮುಂಬೈನಿಂದ ಹೊರಟಿದೆ ಮತ್ತು ಸುಮಾರು 45 ನಿಮಿಷಗಳ ಹಾರಾಟದ ಬಳಿಕ ವಿಮಾನದ ಕ್ಯಾಬಿನ್‌ನಲ್ಲಿ ಸುಟ್ಟಿರುವ ವಾಸನೆ ಕಾಣಿಸಿಕೊಂಡಿದೆ. ನಂತರ ಆ ಕೂಡಲೇ ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನವನ್ನು ಮುಂಬೈಗೆ ತಿರುಗಿಸಲಾಗುತ್ತದೆ ಎಂದು ಕ್ಯಾಪ್ಟನ್‌ ಹೇಳಿದ್ದಾರೆ ಎಂದು ಪ್ರಯಾಣಿಕರೊಬ್ಬರು ಮಾಹಿತಿ ನೀಡಿದ್ದಾರೆ.

ಜೂನ್ 25 ರಂದು ಮುಂಬೈನಿಂದ ಬ್ಯಾಂಕಾಕ್‌ಗೆ ತೆರಳುತ್ತಿದ್ದ (Air India) ವಿಮಾನದ ರೆಕ್ಕೆಗಳಲ್ಲಿ ಹುಲ್ಲು ಸಿಲುಕಿಕೊಂಡು ವಿಮಾನ ಬರೋಬ್ಬರಿ ಐದು ಗಂಟೆಗಳಿಗೂ ಹೆಚ್ಚು ಕಾಲ ವಿಳಂಬವಾದ ಘಟನೆ ನಡೆದಿದೆ. ಏರ್‌ಬಸ್ A320Neo ವಿಮಾನವಾದ AI 2354 ಮುಂಬೈ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 7.45 ಕ್ಕೆ ಹೊರಡಬೇಕಿತ್ತು. ಆದರೆ, ವಿಮಾನ ಸುಮಾರು 1 ಗಂಟೆಗೆ ಹೊರಟಿತು. ಜೂನ್ 25, 2025 ರಂದು ಮುಂಬೈನಿಂದ ಬ್ಯಾಂಕಾಕ್‌ಗೆ ಕಾರ್ಯಾಚರಣೆ ನಡೆಸಲು ನಿಗದಿಯಾಗಿದ್ದ AI2354 ವಿಮಾನವನ್ನು ವಿಮಾನದ ಎಡ ರೆಕ್ಕೆಯ ಕೆಳಗೆ ಹುಲ್ಲು ಸಿಲುಕಿಕೊಂಡಿರುವುದು ಕಂಡುಬಂದ ಕಾರಣ ವಿಮಾನ ವಿಳಂಬವಾಗಿದೆ ಎಂದು ಏರ್‌ ಇಂಡಿಯಾ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿತ್ತು.

ಈ ಸುದ್ದಿಯನ್ನೂ ಓದಿ: Flight Cancelled: 16 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಏರ್‌ ಇಂಡಿಯಾ ಕಾರ್ಯಾಚರಣೆ ಕಡಿತ; ಮಹತ್ವದ ನಿರ್ಧಾರ ಘೋಷಿಸಿದ ಸಂಸ್ಥೆ

ಜೂನ್‌ 12 ರಂದು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿರುವ ಏರ್‌ ಇಂಡಿಯಾ ವಿಮಾನ ಪತನಗೊಂಡು 270 ಕ್ಕೂ ಅಧಿಕ ಜನರು ಮೃತಪಟ್ಟಿದ್ದರು. ಅವರ ಪೈಕಿ 260 ಜನರ ಮೃತ ದೇಹವನ್ನು ಡಿಎನ್‌ಎ ಪರೀಕ್ಷೆ ಮೂಲಕ ಪತ್ತೆ ಮಾಡಲಾಗಿದೆ. ದೇಹವನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.