Messi’s Kolkata event: ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳ ಕ್ರೀಡಾ ಸಚಿವ ರಾಜೀನಾಮೆ
Chaos at football star Messi’s Kolkata event: ಫುಟ್ಬಾಲ್ ತಾರೆ ಮೆಸ್ಸಿಯ ಕೋಲ್ಕತ್ತಾ ಕಾರ್ಯಕ್ರಮದಲ್ಲಿ ಭಾರಿ ಅವ್ಯವಸ್ಥೆ ಉಂಟಾಯಿತು. ರೂ. 15,000 ತನಕ ಖರ್ಚು ಮಾಡಿದ ಪ್ರೇಕ್ಷಕರಿಗೆ ಮೆಸ್ಸಿಯನ್ನು ನೋಡಲು ಸಾಧ್ಯವಾಗಲಿಲ್ಲವೆಂದು ಸ್ಟೇಡಿಯಂ ಅನ್ನು ಧ್ವಂಸ ಮಾಡಿದ್ದಾರೆ. ಇದರ ಪರಿಣಾಮವಾಗಿ ಕ್ರೀಡಾ ಸಚಿವರು ರಾಜೀನಾಮೆ ನೀಡಿದ್ದಾರೆ.
ಕೊಲ್ಕತ್ತಾದಲ್ಲಿ ಮೆಸ್ಸಿ -
ಕೋಲ್ಕತ್ತಾ, ಡಿ.16: ಪ್ರಖ್ಯಾತ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿಯ (Lionel Messi) ಗೋಟ್ ಪ್ರವಾಸದ (GOAT Tour) ಕಾರ್ಯಕ್ರಮದಲ್ಲಿ ಕೋಲ್ಕತ್ತಾ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಅವ್ಯವಸ್ಥೆಯಿಂದಾಗಿ ಪಶ್ಚಿಮ ಬಂಗಾಳ (West Bengal) ಕ್ರೀಡಾ ಸಚಿವರ ತಲೆದಂಡವಾಗಿದೆ. ಘಟನೆ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದ ನಂತರ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ (Aroop Biswas) ಮಂಗಳವಾರ ರಾಜೀನಾಮೆ ನೀಡಿದರು. ಅವ್ಯವಸ್ಥೆಗೆ ಹೆಚ್ಚಿನ ಟೀಕೆಗಳನ್ನು ಎದುರಿಸುತ್ತಿರುವ ಬಿಸ್ವಾಸ್, ಘಟನೆಯ ಬಗ್ಗೆ ಮುಕ್ತ ಮತ್ತು ನ್ಯಾಯಯುತ ತನಿಖೆ ನಡೆಯುವುದಕ್ಕಾಗಿ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ (Mamata Banerjee) ಬರೆದ ಕೈಬರಹದ ಪತ್ರದಲ್ಲಿ ತಿಳಿಸಿದ್ದಾರೆ.
ಮಮತಾ ಅವರ ಅತ್ಯಂತ ವಿಶ್ವಾಸಾರ್ಹ ಸಹಾಯಕರಲ್ಲಿ ಒಬ್ಬರಾದ ಮತ್ತು ಟಿಎಂಸಿಯಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದ ಬಿಸ್ವಾಸ್ ಅವರ ರಾಜೀನಾಮೆಯು, ನಿರ್ಣಾಯಕ ವಿಧಾನಸಭಾ ಚುನಾವಣೆಗಳಿಗೆ ಕೆಲವೇ ತಿಂಗಳುಗಳಿದ್ದರೂ, ಆಡಳಿತ ಪಕ್ಷವು ಯಾವುದೇ ಅವಕಾಶವನ್ನು ಬಿಟ್ಟುಕೊಡುತ್ತಿಲ್ಲ ಎಂಬುದನ್ನು ತೋರಿಸುತ್ತದೆ.
ಬಂಗಾಳದ SIR ಕರಡು ಪಟ್ಟಿ ಪ್ರಕಟ; 58 ಲಕ್ಷಕ್ಕೂ ಅಧಿಕ ಮತದಾರರ ಹೆಸರು ಡಿಲಿಟ್! ಚುನಾವಣಾ ಆಯೋಗ ಹೇಳಿದ್ದೇನು?
ಅರ್ಜೆಂಟೀನಾದ ಫುಟ್ಬಾಲ್ ತಾರೆ ಮೆಸ್ಸಿ, 20 ನಿಮಿಷಗಳಲ್ಲಿ ನಿರ್ಗಮಿಸುತ್ತಿದ್ದಂತೆ ಪ್ರೇಕ್ಷಕರು ಕೋಪಗೊಂಡರು 15,000 ರೂ.ಗಳಷ್ಟು ಖರ್ಚು ಮಾಡಿದರೂ ಅವರು ಬೇಗ ಹೊರಟಿದ್ದಕ್ಕೆ ಸಿಟ್ಟಿಗೆದ್ದರು. ಗಲಭೆ ನಡೆಸಿದ ಪ್ರೇಕ್ಷಕರು ಸಾಲ್ಟ್ ಲೇಕ್ ಕ್ರೀಡಾಂಗಣವನ್ನು ಧ್ವಂಸ ಮಾಡಿದರು. ಇದರಿಂದ ಕ್ರೀಡಾಂಗಣ ಅಸ್ತವ್ಯಸ್ತಗೊಂಡಿತು. ಮೆಸ್ಸಿಯನ್ನು ರಾಜಕಾರಣಿಗಳ ಗುಂಪು ಸುತ್ತುವರೆದಿತ್ತು. ತಾವು ದುಬಾರಿ ಮೊತ್ತ ಪಾವತಿಸಿದರೂ ತಮ್ಮ ನೆಚ್ಚಿನ ತಾರೆಯನ್ನು ಸರಿಯಾಗಿ ನೋಡಲು ಸಾಧ್ಯವಾಗಲಿಲ್ಲ ಎಂದು ಪ್ರೇಕ್ಷಕರು ಆರೋಪಿಸಿದ್ದಾರೆ.
ಫುಟ್ಬಾಲ್ ಐಕಾನ್ ಅನ್ನು ನೋಡಲು ಸಾಧ್ಯವಾಗದ ಕಾರಣ ನಿರಾಶೆಗೊಂಡ ಪ್ರೇಕ್ಷಕರು ಬಾಟಲಿಗಳನ್ನು ಎಸೆದು, ಕ್ರೀಡಾಂಗಣದ ಆಸನಗಳನ್ನು ಹರಿದು ಹಾಕಿದರು. ಅಸ್ತವ್ಯಸ್ತವಾಗಿರುವ ಕಾರ್ಯಕ್ರಮದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಬೇಗನೆ ಹರಡಿತು. ಈ ಘಟನೆಯು ಚುನಾವಣೆಗೆ ಮುಂಚಿತವಾಗಿ ಟಿಎಂಸಿ ಮತ್ತು ಸರ್ಕಾರವನ್ನು ಮುಖಭಂಗಕ್ಕೆ ಒಳಪಡಿಸಿದೆ. ಬಿಜೆಪಿಯು ಈ ಘಟನೆಯನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸುತ್ತಿದ್ದು, ಸರ್ಕಾರದ ಮೇಲೆ ಆರೋಪಗಳ ಸುರಿಮಳೆಗೈದಿದೆ.
ಇಲ್ಲಿದೆ ವಿಡಿಯೊ:
Even with Messi, there was theft and a scam against the public !! What a situation, utter chaos, bottles being thrown — what a spectacular display!
— Krishanu Singha (@KrishanuOnline) December 13, 2025
Shame!
TMC Politicians surrounded Messi during the lap,blocking the crowd’s view.
He left without a word,and now the 100k crowd is… pic.twitter.com/hwSxfq8FGT
ಈ ಮಧ್ಯೆ, ನಿವೃತ್ತ ನ್ಯಾಯಮೂರ್ತಿ ಅಸಿಮ್ ಕುಮಾರ್ ರಾಯ್ ನೇತೃತ್ವದ ವಿಚಾರಣಾ ಸಮಿತಿಯು ಪ್ರಾಥಮಿಕ ವರದಿಯನ್ನು ಸಲ್ಲಿಸಿದ ನಂತರ ಸರ್ಕಾರವು ಈಗಾಗಲೇ ಹಲವಾರು ಹಿರಿಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.
ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕುಮಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ದುಷ್ಕೃತ್ಯ ಮತ್ತು ಭದ್ರತಾ ವೈಫಲ್ಯಗಳ ಹಿಂದಿನ ಕಾರಣಗಳನ್ನು 24 ಗಂಟೆಗಳ ಒಳಗೆ ವಿವರಿಸುವಂತೆ ಕೇಳಲಾಗಿದೆ.
ಬಿಧಾನ್ನಗರ ಪೊಲೀಸ್ ಮುಖ್ಯಸ್ಥರು ಹಾಗೂ ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೂ ಇದೇ ರೀತಿಯ ನೋಟಿಸ್ಗಳನ್ನು ನೀಡಲಾಗಿದೆ. ಉಪ ಪೊಲೀಸ್ ಆಯುಕ್ತ ಅನೀಶ್ ಸರ್ಕಾರ್ ಅವರನ್ನು ಸಹ ಅಮಾನತುಗೊಳಿಸಲಾಗಿದೆ.